Advertisement
MIRROR FOCUS

ಮಂಗಳೂರು ಮತ್ಸ್ಯೋತ್ಸವ | ಇಲ್ಲಿ ಸಮುದ್ರ ಮೀನಗಿಂತ ಕೆರೆ ಮೀನಿಗೆ ಡಿಮ್ಯಾಂಡ್‌ | ಕೆರೆ ಮೀನಿಗಾಗಿ ಮುಗಿಬಿದ್ದ ಮತ್ಸ್ಯಪ್ರಿಯರು

Share

ಇತ್ತೀಚಿನ ದಿನಗಳಲ್ಲಿ ಸಮುದ್ರ ಮೀನು(sea Fish) ಬೆಲೆ ಗಗನಕ್ಕೇರಿದ(Price hike) ಹಿನ್ನೆಲೆ ಮತ್ಸ್ಯ ಪ್ರಿಯರು ಕೆರೆ ಮೀನುಗಳ(Lake Fish) ಮೊರೆ ಹೋಗುತ್ತಿದ್ದಾರೆ. ಹಾಗೆ ಮೀನು ಸಾಕಾಣಿಕೆ ಕೂಡ ಉದ್ಯಮವಾಗಿ(Business) ಬೆಳೆಯುತ್ತಿದೆ. ಅನೇಕ ರೈತರು ಮೀನು ಸಾಕಾಣಿಕೆಯನ್ನು(Fishery) ಉಪ ಕಸುಬನ್ನಾಗಿ ಆಯ್ಕೆ ಮಾಡಿಕೊಂಡಿದ್ದಾರೆ. ಹೀಗಾಗಿ ಹೆಚ್ಚಿನ ಕಡೆಗಳನ್ನು ಕೆರೆ ಮೀನು ಮಾರಾಟ ನಡೆಯುತ್ತದೆ. ಅಲ್ಲದೆ ಸಮುದ್ರ ಮೀನುಗಾರಿಕೆಗೆ ಜೂನ್‌ ಹಾಗೂ ಜುಲೈ ತಿಂಗಳಿನಲ್ಲಿ ಬಿಡುವ ನೀಡುವ ಕಾರಣ ತಾಜಾ ಮೀನು ಸಿಗುವುದಿಲ್ಲ. ಹಾಗಾಗಿ ಹೆಚ್ಚಿನ ಜನತೆ ಕೆರೆ ಮೀನು ಕಡೆ ಒಲವು ತೋರುತ್ತಾರೆ. ಅದರಲ್ಲೂ ಜೀವಂತವಿರುವ  ಮೀನುಗಳಿಗೆ ಸ್ವಲ್ಪ ಹೆಚ್ಚೇ ಡಿಮ್ಯಾಂಡ್‌ . ಮಳೆಗಾಲದಲ್ಲಿ ಹೀಗೆ ತಾಜಾ ಮೀನುಗಳು (Fresh Fish) ಸಿಗೋದೆ ಖುಷಿ. ಮಂಗಳೂರಿನ ಸರಕಾರಿ ಪ್ರಾಯೋಜಿತ ಮೀನು ಮಾರಾಟ ಉತ್ಸವದಲ್ಲಿ ತಾಜಾ ಮೀನುಗಳ ಭರ್ಜರಿ ಮಾರಾಟ ನಡೆಯಿತು. 

ಮತ್ಸ್ಯ ಬೇಟೆ : ಮಂಗಳೂರಿನ ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರ ಮತ್ತು ಮೀನುಗಾರಿಕಾ ಇಲಾಖೆಯ ಜಂಟಿ ಆಶ್ರಯದಲ್ಲಿ ಪಿಲಿಕುಳದ ಲೇಕ್ ಗಾರ್ಡನ್ ಕೆರೆಯಲ್ಲಿ ಮತ್ಸ್ಯಬೇಟೆ ನಡೆಯಿತು. ಹಿಡಿದ ತಾಜಾ ಮೀನುಗಳನ್ನು ಅಲ್ಲಿಯೇ ಮಾರಾಟ ಮಾಡಲಾಯಿತು. ರೋಹ್, ಕಾಟ್ಲ, ತಿಲೇಪಿಯಾ, ಮುಗುಡು ಹಾಗೂ ಗೌರಿ ಮೀನುಗಳು ಇಲ್ಲಿ ಲಭ್ಯವಿತ್ತು. ಕೆಜಿಗೆ 150ರೂಪಾಯಿನಂತೆ ಮೀನುಗಳ ಮಾರಾಟವಾದವು. ಖರೀದಿಸಿರುವ ಮೀನುಗಳನ್ನು ತುಂಡರಿಸಿಕೊಡುವ ವ್ಯವಸ್ಥೆಯನ್ನು ಕಲ್ಪಿಸಲಾಗಿತ್ತು. ಪಿಲಿಕುಳದ ಐದು ಎಕರೆಯಷ್ಟು ವಿಸ್ತಾರವಿರುವ ಈ ಲೇಕ್ ಗಾರ್ಡನ್ ಕೆರೆಗೆ ಮೀನುಗಾರಿಕಾ ಇಲಾಖೆಯ ಸಹಯೋಗದೊಂದಿಗೆ ಪ್ರತೀ ವರ್ಷ ಮೀನುಮರಿಗಳನ್ನು ಬಿಡಲಾಗುತ್ತದೆ. ಹಾಗೆಯೇ ವರ್ಷಂಪ್ರತಿ ಜುಲೈ ವೇಳೆಗೆ ಮತ್ಸ್ಯೋತ್ಸವ ನಡೆಸಲಾಗುತ್ತದೆ. ಈ ಬಾರಿ 2 ಟನ್‌ಗಳಷ್ಟು ಮೀನುಗಳು ಸಿಕ್ಕಿದೆ. ಜೊತೆಗೆ ಮೀನುಪ್ರಿಯರಿಗೆ ಅಲ್ಲೇ ಮೀನಿನ ಖಾದ್ಯವನ್ನು ತಯಾರಿಸುವ ವ್ಯವಸ್ಥೆಯನ್ನೂ ಮೀನುಗಾರಿಕೆ ಇಲಾಖೆ ಮಾಡಿತ್ತು. ಒಟ್ಟಿನಲ್ಲಿ ಮಳೆಗಾಲದಲ್ಲಿ ಪಿಲಿಕುಳದಲ್ಲಿ ನಡೆದ ಮತ್ಸ್ಯೋತ್ಸವಕ್ಕೆ ಭರ್ಜರಿ ರೆಸ್ಪಾನ್ಸ್‌ ವ್ಯಕ್ತವಾಯಿತು.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮುಂಗಾರು ಬೇಗನೆ ವಿದಾಯ ಹೇಳುತ್ತಿದೆಯೇ..? ಸೆಪ್ಟೆಂಬರ್‌ನಲ್ಲಿ ಮಳೆ ಕಡಿಮೆಯಾಗುವ ಮುನ್ಸೂಚನೆ..?

ಸೆಪ್ಟೆಂಬರ್ 5–10ರ ನಂತರ ದೇಶದ ಹಲವು ಭಾಗಗಳಲ್ಲಿ ಮುಂಗಾರು ಮಳೆ ಗಣನೀಯವಾಗಿ ಕಡಿಮೆಯಾಗುವ…

9 hours ago

ಹವಾಮಾನ ವರದಿ | 22-08-2026 | ಕರಾವಳಿಯಲ್ಲಿ ಮಳೆ ಇಳಿಕೆ, 26ರಿಂದ ಮತ್ತಷ್ಟು ದುರ್ಬಲವಾಗುವ ಸಾಧ್ಯತೆ

ಕರ್ನಾಟಕದಲ್ಲಿ ಆಗಸ್ಟ್ 23ರಿಂದ 25ರವರೆಗೆ ಹಲವೆಡೆ ಅಲ್ಲಲ್ಲಿ ಸಾಮಾನ್ಯ ಮಳೆಯಷ್ಟೇ ನಿರೀಕ್ಷಿಸಲಾಗಿದ್ದು, ಕರಾವಳಿ…

17 hours ago

ಸೆಪ್ಟೆಂಬರ್‌ನಲ್ಲಿ ಪಿಎಂ ಕಿಸಾನ್ ಹಣ ಬರಬೇಕೇ? ರೈತರು ಈಗಲೇ e-KYC ಪೂರ್ಣಗೊಳಿಸಿ

PM-Kisan ಯೋಜನೆಯ 24ನೇ ಕಂತಿನ ಹಣ ಪಡೆಯಲು ಅರ್ಹ ರೈತರು ಬಯೋಮೆಟ್ರಿಕ್ ಅಥವಾ…

1 day ago

ಬೆಳೆ ವಿಮೆಗೆ ರೈತರಿಗೆ ಮತ್ತೊಂದು ಅವಕಾಶ : ಆಗಸ್ಟ್ 31ರವರೆಗೆ ನೋಂದಣಿ ಅವಧಿ ವಿಸ್ತರಣೆ

ಮುಂಗಾರು ಹಂಗಾಮಿನ ಭತ್ತ ಸೇರಿದಂತೆ ಬೆಳೆಗಳಿಗೆ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ…

1 day ago

ಹವಾಮಾನ ವರದಿ | 21-08-2026 | ಕರಾವಳಿಯಲ್ಲಿ ಆ.23–25 ರಂದು ಮಳೆ ಹೆಚ್ಚಳ ಸಾಧ್ಯತೆ – ಆ.26ರವರೆಗೆ ಮೋಡ–ಮಳೆ

ಕರಾವಳಿ ಕರ್ನಾಟಕದಲ್ಲಿ ಆ.23ರಿಂದ 25ರವರೆಗೆ ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಾಗುವ ಸಾಧ್ಯತೆಯಿದ್ದು, ಆ.26ರವರೆಗೂ…

2 days ago

ನಿಮ್ಮ ಹೆಸರಲ್ಲಿ 9 ಸಿಮ್‌ಗಳಿವೆಯೇ? ಆಗಸ್ಟ್ 24ರಿಂದ ಹೊಸ ನಿಯಮ – ಹೆಚ್ಚುವರಿ ನಂಬರ್‌ಗೆ ಬ್ರೇಕ್

ಆಗಸ್ಟ್ 24ರಿಂದ ಒಬ್ಬ ವ್ಯಕ್ತಿಯ ಹೆಸರಿನಲ್ಲಿ 9 ಮೊಬೈಲ್ ಸಂಪರ್ಕಗಳ ಮಿತಿಯನ್ನು ಮೀರಿ…

2 days ago