Advertisement
MIRROR FOCUS

ಮಂಗಳೂರು ಮತ್ಸ್ಯೋತ್ಸವ | ಇಲ್ಲಿ ಸಮುದ್ರ ಮೀನಗಿಂತ ಕೆರೆ ಮೀನಿಗೆ ಡಿಮ್ಯಾಂಡ್‌ | ಕೆರೆ ಮೀನಿಗಾಗಿ ಮುಗಿಬಿದ್ದ ಮತ್ಸ್ಯಪ್ರಿಯರು

Share

ಇತ್ತೀಚಿನ ದಿನಗಳಲ್ಲಿ ಸಮುದ್ರ ಮೀನು(sea Fish) ಬೆಲೆ ಗಗನಕ್ಕೇರಿದ(Price hike) ಹಿನ್ನೆಲೆ ಮತ್ಸ್ಯ ಪ್ರಿಯರು ಕೆರೆ ಮೀನುಗಳ(Lake Fish) ಮೊರೆ ಹೋಗುತ್ತಿದ್ದಾರೆ. ಹಾಗೆ ಮೀನು ಸಾಕಾಣಿಕೆ ಕೂಡ ಉದ್ಯಮವಾಗಿ(Business) ಬೆಳೆಯುತ್ತಿದೆ. ಅನೇಕ ರೈತರು ಮೀನು ಸಾಕಾಣಿಕೆಯನ್ನು(Fishery) ಉಪ ಕಸುಬನ್ನಾಗಿ ಆಯ್ಕೆ ಮಾಡಿಕೊಂಡಿದ್ದಾರೆ. ಹೀಗಾಗಿ ಹೆಚ್ಚಿನ ಕಡೆಗಳನ್ನು ಕೆರೆ ಮೀನು ಮಾರಾಟ ನಡೆಯುತ್ತದೆ. ಅಲ್ಲದೆ ಸಮುದ್ರ ಮೀನುಗಾರಿಕೆಗೆ ಜೂನ್‌ ಹಾಗೂ ಜುಲೈ ತಿಂಗಳಿನಲ್ಲಿ ಬಿಡುವ ನೀಡುವ ಕಾರಣ ತಾಜಾ ಮೀನು ಸಿಗುವುದಿಲ್ಲ. ಹಾಗಾಗಿ ಹೆಚ್ಚಿನ ಜನತೆ ಕೆರೆ ಮೀನು ಕಡೆ ಒಲವು ತೋರುತ್ತಾರೆ. ಅದರಲ್ಲೂ ಜೀವಂತವಿರುವ  ಮೀನುಗಳಿಗೆ ಸ್ವಲ್ಪ ಹೆಚ್ಚೇ ಡಿಮ್ಯಾಂಡ್‌ . ಮಳೆಗಾಲದಲ್ಲಿ ಹೀಗೆ ತಾಜಾ ಮೀನುಗಳು (Fresh Fish) ಸಿಗೋದೆ ಖುಷಿ. ಮಂಗಳೂರಿನ ಸರಕಾರಿ ಪ್ರಾಯೋಜಿತ ಮೀನು ಮಾರಾಟ ಉತ್ಸವದಲ್ಲಿ ತಾಜಾ ಮೀನುಗಳ ಭರ್ಜರಿ ಮಾರಾಟ ನಡೆಯಿತು. 

ಮತ್ಸ್ಯ ಬೇಟೆ : ಮಂಗಳೂರಿನ ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರ ಮತ್ತು ಮೀನುಗಾರಿಕಾ ಇಲಾಖೆಯ ಜಂಟಿ ಆಶ್ರಯದಲ್ಲಿ ಪಿಲಿಕುಳದ ಲೇಕ್ ಗಾರ್ಡನ್ ಕೆರೆಯಲ್ಲಿ ಮತ್ಸ್ಯಬೇಟೆ ನಡೆಯಿತು. ಹಿಡಿದ ತಾಜಾ ಮೀನುಗಳನ್ನು ಅಲ್ಲಿಯೇ ಮಾರಾಟ ಮಾಡಲಾಯಿತು. ರೋಹ್, ಕಾಟ್ಲ, ತಿಲೇಪಿಯಾ, ಮುಗುಡು ಹಾಗೂ ಗೌರಿ ಮೀನುಗಳು ಇಲ್ಲಿ ಲಭ್ಯವಿತ್ತು. ಕೆಜಿಗೆ 150ರೂಪಾಯಿನಂತೆ ಮೀನುಗಳ ಮಾರಾಟವಾದವು. ಖರೀದಿಸಿರುವ ಮೀನುಗಳನ್ನು ತುಂಡರಿಸಿಕೊಡುವ ವ್ಯವಸ್ಥೆಯನ್ನು ಕಲ್ಪಿಸಲಾಗಿತ್ತು. ಪಿಲಿಕುಳದ ಐದು ಎಕರೆಯಷ್ಟು ವಿಸ್ತಾರವಿರುವ ಈ ಲೇಕ್ ಗಾರ್ಡನ್ ಕೆರೆಗೆ ಮೀನುಗಾರಿಕಾ ಇಲಾಖೆಯ ಸಹಯೋಗದೊಂದಿಗೆ ಪ್ರತೀ ವರ್ಷ ಮೀನುಮರಿಗಳನ್ನು ಬಿಡಲಾಗುತ್ತದೆ. ಹಾಗೆಯೇ ವರ್ಷಂಪ್ರತಿ ಜುಲೈ ವೇಳೆಗೆ ಮತ್ಸ್ಯೋತ್ಸವ ನಡೆಸಲಾಗುತ್ತದೆ. ಈ ಬಾರಿ 2 ಟನ್‌ಗಳಷ್ಟು ಮೀನುಗಳು ಸಿಕ್ಕಿದೆ. ಜೊತೆಗೆ ಮೀನುಪ್ರಿಯರಿಗೆ ಅಲ್ಲೇ ಮೀನಿನ ಖಾದ್ಯವನ್ನು ತಯಾರಿಸುವ ವ್ಯವಸ್ಥೆಯನ್ನೂ ಮೀನುಗಾರಿಕೆ ಇಲಾಖೆ ಮಾಡಿತ್ತು. ಒಟ್ಟಿನಲ್ಲಿ ಮಳೆಗಾಲದಲ್ಲಿ ಪಿಲಿಕುಳದಲ್ಲಿ ನಡೆದ ಮತ್ಸ್ಯೋತ್ಸವಕ್ಕೆ ಭರ್ಜರಿ ರೆಸ್ಪಾನ್ಸ್‌ ವ್ಯಕ್ತವಾಯಿತು.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕೃಷಿಕರ ಮಿತ್ರ ಸಾಯಿಶೇಖರ್‌ ಕರಿಕಳ ಅವರಿಗೆ ರೈತ ರತ್ನ ಪ್ರಶಸ್ತಿ

ಮಳೆ ಮಾಹಿತಿ ಮೂಲಕ ಕೃಷಿಕರಿಗೆ ನೆರವಾಗುತ್ತಿರುವ ಸಾಯಿಶೇಖರ್‌ ಕರಿಕಳ ಅವರಿಗೆ ರೈತ ರತ್ನ…

59 seconds ago

ಮಂಗಳೂರಿನಲ್ಲಿ ರಾಷ್ಟ್ರೀಯ ಚೆಸ್ ಚಾಂಪಿಯನ್ ಶಿಪ್‌ಗೆ ಚಾಲನೆ – 28 ರಾಜ್ಯ–ಕೇಂದ್ರಾಡಳಿತ ಪ್ರದೇಶಗಳಿಂದ 644 ಬಾಲಕಿ-ಬಾಲಕಿಯರು

ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್‌-11 ಚೆಸ್ ಚಾಂಪಿಯನ್ಶಿಪ್‌ಗೆ ಭವ್ಯ ಚಾಲನೆ ದೊರೆತಿದ್ದು, ದೇಶದ 28…

1 hour ago

ಹವಾಮಾನ ವರದಿ | 02-08-2026 | ಕರಾವಳಿಯಲ್ಲಿ ಮಳೆ ಇಳಿಮುಖ ..? ರಾಜ್ಯದಲ್ಲಿ ಮುಂಗಾರು ಸ್ಥಿತಿ ಏನು..?

ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆಯ ತೀವ್ರತೆ ಇಳಿಮುಖವಾಗಲಿದ್ದು, ಆಗಸ್ಟ್‌ 3ರಿಂದ ತೋಟದ…

3 hours ago

ಭಾರೀ ಮಳೆಯ ಎಚ್ಚರಿಕೆ : 24 ಗಂಟೆ ಸನ್ನದ್ಧವಾಗಿರಲು ಡಿಸಿ ಸೂಚನೆ, ಭೂಕುಸಿತ ಪ್ರದೇಶಗಳ ಮೇಲೆ ಕಟ್ಟೆಚ್ಚರ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಎಲ್ಲಾ ಇಲಾಖೆಗಳನ್ನು 24…

14 hours ago

ಹುಬ್ಬಳ್ಳಿಯಲ್ಲಿ ಹಲಸು ಮೇಳಕ್ಕೆ ಚಾಲನೆ – 50ಕ್ಕೂ ಹೆಚ್ಚು ಮಳಿಗೆಗಳು, ಹಲಸಿನ ಬಿರಿಯಾನಿಯಿಂದ ಕಬಾಬ್‌ವರೆಗೆ ಸವಿಯುವ ಅವಕಾಶ

ಹುಬ್ಬಳ್ಳಿಯಲ್ಲಿ ಆರಂಭವಾದ ಮೂರು ದಿನಗಳ ಹಲಸು ಮೇಳಕ್ಕೆ ಜನರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ.…

14 hours ago

ರಾಜ್ಯಾದ್ಯಂತ ಆರ್ಭಟಿಸುತ್ತಿರುವ ವರುಣ – ಭದ್ರಾ-ನೇತ್ರಾವತಿ ಅಪಾಯದ ಮಟ್ಟ ಮೀರಿ ಪ್ರವಾಹ

ಕರಾವಳಿ ಹಾಗೂ ಮಲೆನಾಡಿನಲ್ಲಿ ಭಾರಿ ಮಳೆ ಮುಂದುವರಿದಿದ್ದು, ಭದ್ರಾ ಹಾಗೂ ನೇತ್ರಾವತಿ, ಕುಮಾರಧಾರಾ…

15 hours ago