Advertisement
MIRROR FOCUS

ಮಂಗಳೂರು ಮತ್ಸ್ಯೋತ್ಸವ | ಇಲ್ಲಿ ಸಮುದ್ರ ಮೀನಗಿಂತ ಕೆರೆ ಮೀನಿಗೆ ಡಿಮ್ಯಾಂಡ್‌ | ಕೆರೆ ಮೀನಿಗಾಗಿ ಮುಗಿಬಿದ್ದ ಮತ್ಸ್ಯಪ್ರಿಯರು

Share

ಇತ್ತೀಚಿನ ದಿನಗಳಲ್ಲಿ ಸಮುದ್ರ ಮೀನು(sea Fish) ಬೆಲೆ ಗಗನಕ್ಕೇರಿದ(Price hike) ಹಿನ್ನೆಲೆ ಮತ್ಸ್ಯ ಪ್ರಿಯರು ಕೆರೆ ಮೀನುಗಳ(Lake Fish) ಮೊರೆ ಹೋಗುತ್ತಿದ್ದಾರೆ. ಹಾಗೆ ಮೀನು ಸಾಕಾಣಿಕೆ ಕೂಡ ಉದ್ಯಮವಾಗಿ(Business) ಬೆಳೆಯುತ್ತಿದೆ. ಅನೇಕ ರೈತರು ಮೀನು ಸಾಕಾಣಿಕೆಯನ್ನು(Fishery) ಉಪ ಕಸುಬನ್ನಾಗಿ ಆಯ್ಕೆ ಮಾಡಿಕೊಂಡಿದ್ದಾರೆ. ಹೀಗಾಗಿ ಹೆಚ್ಚಿನ ಕಡೆಗಳನ್ನು ಕೆರೆ ಮೀನು ಮಾರಾಟ ನಡೆಯುತ್ತದೆ. ಅಲ್ಲದೆ ಸಮುದ್ರ ಮೀನುಗಾರಿಕೆಗೆ ಜೂನ್‌ ಹಾಗೂ ಜುಲೈ ತಿಂಗಳಿನಲ್ಲಿ ಬಿಡುವ ನೀಡುವ ಕಾರಣ ತಾಜಾ ಮೀನು ಸಿಗುವುದಿಲ್ಲ. ಹಾಗಾಗಿ ಹೆಚ್ಚಿನ ಜನತೆ ಕೆರೆ ಮೀನು ಕಡೆ ಒಲವು ತೋರುತ್ತಾರೆ. ಅದರಲ್ಲೂ ಜೀವಂತವಿರುವ  ಮೀನುಗಳಿಗೆ ಸ್ವಲ್ಪ ಹೆಚ್ಚೇ ಡಿಮ್ಯಾಂಡ್‌ . ಮಳೆಗಾಲದಲ್ಲಿ ಹೀಗೆ ತಾಜಾ ಮೀನುಗಳು (Fresh Fish) ಸಿಗೋದೆ ಖುಷಿ. ಮಂಗಳೂರಿನ ಸರಕಾರಿ ಪ್ರಾಯೋಜಿತ ಮೀನು ಮಾರಾಟ ಉತ್ಸವದಲ್ಲಿ ತಾಜಾ ಮೀನುಗಳ ಭರ್ಜರಿ ಮಾರಾಟ ನಡೆಯಿತು. 

ಮತ್ಸ್ಯ ಬೇಟೆ : ಮಂಗಳೂರಿನ ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರ ಮತ್ತು ಮೀನುಗಾರಿಕಾ ಇಲಾಖೆಯ ಜಂಟಿ ಆಶ್ರಯದಲ್ಲಿ ಪಿಲಿಕುಳದ ಲೇಕ್ ಗಾರ್ಡನ್ ಕೆರೆಯಲ್ಲಿ ಮತ್ಸ್ಯಬೇಟೆ ನಡೆಯಿತು. ಹಿಡಿದ ತಾಜಾ ಮೀನುಗಳನ್ನು ಅಲ್ಲಿಯೇ ಮಾರಾಟ ಮಾಡಲಾಯಿತು. ರೋಹ್, ಕಾಟ್ಲ, ತಿಲೇಪಿಯಾ, ಮುಗುಡು ಹಾಗೂ ಗೌರಿ ಮೀನುಗಳು ಇಲ್ಲಿ ಲಭ್ಯವಿತ್ತು. ಕೆಜಿಗೆ 150ರೂಪಾಯಿನಂತೆ ಮೀನುಗಳ ಮಾರಾಟವಾದವು. ಖರೀದಿಸಿರುವ ಮೀನುಗಳನ್ನು ತುಂಡರಿಸಿಕೊಡುವ ವ್ಯವಸ್ಥೆಯನ್ನು ಕಲ್ಪಿಸಲಾಗಿತ್ತು. ಪಿಲಿಕುಳದ ಐದು ಎಕರೆಯಷ್ಟು ವಿಸ್ತಾರವಿರುವ ಈ ಲೇಕ್ ಗಾರ್ಡನ್ ಕೆರೆಗೆ ಮೀನುಗಾರಿಕಾ ಇಲಾಖೆಯ ಸಹಯೋಗದೊಂದಿಗೆ ಪ್ರತೀ ವರ್ಷ ಮೀನುಮರಿಗಳನ್ನು ಬಿಡಲಾಗುತ್ತದೆ. ಹಾಗೆಯೇ ವರ್ಷಂಪ್ರತಿ ಜುಲೈ ವೇಳೆಗೆ ಮತ್ಸ್ಯೋತ್ಸವ ನಡೆಸಲಾಗುತ್ತದೆ. ಈ ಬಾರಿ 2 ಟನ್‌ಗಳಷ್ಟು ಮೀನುಗಳು ಸಿಕ್ಕಿದೆ. ಜೊತೆಗೆ ಮೀನುಪ್ರಿಯರಿಗೆ ಅಲ್ಲೇ ಮೀನಿನ ಖಾದ್ಯವನ್ನು ತಯಾರಿಸುವ ವ್ಯವಸ್ಥೆಯನ್ನೂ ಮೀನುಗಾರಿಕೆ ಇಲಾಖೆ ಮಾಡಿತ್ತು. ಒಟ್ಟಿನಲ್ಲಿ ಮಳೆಗಾಲದಲ್ಲಿ ಪಿಲಿಕುಳದಲ್ಲಿ ನಡೆದ ಮತ್ಸ್ಯೋತ್ಸವಕ್ಕೆ ಭರ್ಜರಿ ರೆಸ್ಪಾನ್ಸ್‌ ವ್ಯಕ್ತವಾಯಿತು.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ |13-07-2026 | ಕರ್ನಾಟಕದಲ್ಲಿ ಮುಂಗಾರು ದುರ್ಬಲ – ಮುಂದಿನ 10 ದಿನ ಜೋರು ಮಳೆ ಇಲ್ಲ

ರಾಜ್ಯದಲ್ಲಿ ಮುಂದಿನ 10 ದಿನಗಳವರೆಗೆ ಜೋರು ಮಳೆಯ ಸಾಧ್ಯತೆಗಳು ಕಾಣುತ್ತಿಲ್ಲ. ಕರಾವಳಿಯಲ್ಲಿ ಜುಲೈ…

1 hour ago

ಅಮರನಾಥದ ಹಿಮ ಶಿವಲಿಂಗ 90% ಕರಗಿತು…! ಹವಾಮಾನ ಬದಲಾವಣೆಯೇ ಕಾರಣವೇ?

ಅಮರನಾಥ ಯಾತ್ರೆ ಆರಂಭವಾದ ಕೆಲವೇ ದಿನಗಳಲ್ಲಿ ಹಿಮ ಶಿವಲಿಂಗವು 90%ಕ್ಕೂ ಹೆಚ್ಚು ಕರಗಿರುವುದಾಗಿ…

9 hours ago

16 ವರ್ಷದೊಳಗಿನ ಮಕ್ಕಳಿಗೆ ಸೋಷಿಯಲ್ ಮೀಡಿಯಾ ನಿರ್ಬಂಧ – ಆಸ್ಟ್ರೇಲಿಯಾದ ಕ್ರಮಕ್ಕೆ ಪ್ರಧಾನಿ ಮೋದಿ ಮೆಚ್ಚುಗೆ

16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ನಿರ್ಬಂಧ ವಿಧಿಸಿರುವ ಆಸ್ಟ್ರೇಲಿಯಾದ ಕ್ರಮವನ್ನು ಪ್ರಧಾನಿ…

19 hours ago

ಎಲ್‌ ನಿನೊ ಎಫೆಕ್ಟ್‌ – ಮುಂದಿನ ವರ್ಷ ಮತ್ಸ್ಯೋದ್ಯಮಕ್ಕೆ ಸಂಕಷ್ಟ?

ಎಲ್‌ ನಿನೊ ಪರಿಣಾಮದಿಂದ 2027ರಲ್ಲಿ ಎಣ್ಣೆ ಸಾರ್ಡಿನ್ ಮೀನುಗಳ ಉತ್ಪಾದನೆ ಕುಸಿಯುವ ಸಾಧ್ಯತೆ…

19 hours ago

ಮುಂಗಾರು ಇದ್ದಕ್ಕಿದ್ದಂತೆ ದುರ್ಬಲವಾಗಿದ್ದೇಕೆ..? ಇಲ್ಲಿದೆ ವೈಜ್ಞಾನಿಕ ಕಾರಣ

ದೇಶದ ಬಹುತೇಕ ಭಾಗಗಳಿಂದ ಮಳೆ ಮೋಡಗಳು ಕಡಿಮೆಯಾಗಲು ಪಶ್ಚಿಮ ಪೆಸಿಫಿಕ್‌ನ ಪ್ರಬಲ ಚಂಡಮಾರುತ…

1 day ago

ಮತ್ತೆ ಹೆಚ್ಚಿದ ದೇಶದ ಮಳೆ ಕೊರತೆ – ಜುಲೈ ಆರಂಭದ ಚೇತರಿಕೆ ಕುಂಠಿತ, ಮುಂಗಾರು ಮತ್ತೆ ದುರ್ಬಲ

ಜುಲೈ ಮೊದಲ ವಾರದ ಚೇತರಿಕೆಯ ಬಳಿಕ ದೇಶದ ಮುಂಗಾರು ಮತ್ತೆ ದುರ್ಬಲಗೊಂಡಿದ್ದು, ಮಳೆ…

1 day ago