Advertisement
MIRROR FOCUS

ಮಂಗಳೂರು ಮತ್ಸ್ಯೋತ್ಸವ | ಇಲ್ಲಿ ಸಮುದ್ರ ಮೀನಗಿಂತ ಕೆರೆ ಮೀನಿಗೆ ಡಿಮ್ಯಾಂಡ್‌ | ಕೆರೆ ಮೀನಿಗಾಗಿ ಮುಗಿಬಿದ್ದ ಮತ್ಸ್ಯಪ್ರಿಯರು

Share

ಇತ್ತೀಚಿನ ದಿನಗಳಲ್ಲಿ ಸಮುದ್ರ ಮೀನು(sea Fish) ಬೆಲೆ ಗಗನಕ್ಕೇರಿದ(Price hike) ಹಿನ್ನೆಲೆ ಮತ್ಸ್ಯ ಪ್ರಿಯರು ಕೆರೆ ಮೀನುಗಳ(Lake Fish) ಮೊರೆ ಹೋಗುತ್ತಿದ್ದಾರೆ. ಹಾಗೆ ಮೀನು ಸಾಕಾಣಿಕೆ ಕೂಡ ಉದ್ಯಮವಾಗಿ(Business) ಬೆಳೆಯುತ್ತಿದೆ. ಅನೇಕ ರೈತರು ಮೀನು ಸಾಕಾಣಿಕೆಯನ್ನು(Fishery) ಉಪ ಕಸುಬನ್ನಾಗಿ ಆಯ್ಕೆ ಮಾಡಿಕೊಂಡಿದ್ದಾರೆ. ಹೀಗಾಗಿ ಹೆಚ್ಚಿನ ಕಡೆಗಳನ್ನು ಕೆರೆ ಮೀನು ಮಾರಾಟ ನಡೆಯುತ್ತದೆ. ಅಲ್ಲದೆ ಸಮುದ್ರ ಮೀನುಗಾರಿಕೆಗೆ ಜೂನ್‌ ಹಾಗೂ ಜುಲೈ ತಿಂಗಳಿನಲ್ಲಿ ಬಿಡುವ ನೀಡುವ ಕಾರಣ ತಾಜಾ ಮೀನು ಸಿಗುವುದಿಲ್ಲ. ಹಾಗಾಗಿ ಹೆಚ್ಚಿನ ಜನತೆ ಕೆರೆ ಮೀನು ಕಡೆ ಒಲವು ತೋರುತ್ತಾರೆ. ಅದರಲ್ಲೂ ಜೀವಂತವಿರುವ  ಮೀನುಗಳಿಗೆ ಸ್ವಲ್ಪ ಹೆಚ್ಚೇ ಡಿಮ್ಯಾಂಡ್‌ . ಮಳೆಗಾಲದಲ್ಲಿ ಹೀಗೆ ತಾಜಾ ಮೀನುಗಳು (Fresh Fish) ಸಿಗೋದೆ ಖುಷಿ. ಮಂಗಳೂರಿನ ಸರಕಾರಿ ಪ್ರಾಯೋಜಿತ ಮೀನು ಮಾರಾಟ ಉತ್ಸವದಲ್ಲಿ ತಾಜಾ ಮೀನುಗಳ ಭರ್ಜರಿ ಮಾರಾಟ ನಡೆಯಿತು. 

ಮತ್ಸ್ಯ ಬೇಟೆ : ಮಂಗಳೂರಿನ ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರ ಮತ್ತು ಮೀನುಗಾರಿಕಾ ಇಲಾಖೆಯ ಜಂಟಿ ಆಶ್ರಯದಲ್ಲಿ ಪಿಲಿಕುಳದ ಲೇಕ್ ಗಾರ್ಡನ್ ಕೆರೆಯಲ್ಲಿ ಮತ್ಸ್ಯಬೇಟೆ ನಡೆಯಿತು. ಹಿಡಿದ ತಾಜಾ ಮೀನುಗಳನ್ನು ಅಲ್ಲಿಯೇ ಮಾರಾಟ ಮಾಡಲಾಯಿತು. ರೋಹ್, ಕಾಟ್ಲ, ತಿಲೇಪಿಯಾ, ಮುಗುಡು ಹಾಗೂ ಗೌರಿ ಮೀನುಗಳು ಇಲ್ಲಿ ಲಭ್ಯವಿತ್ತು. ಕೆಜಿಗೆ 150ರೂಪಾಯಿನಂತೆ ಮೀನುಗಳ ಮಾರಾಟವಾದವು. ಖರೀದಿಸಿರುವ ಮೀನುಗಳನ್ನು ತುಂಡರಿಸಿಕೊಡುವ ವ್ಯವಸ್ಥೆಯನ್ನು ಕಲ್ಪಿಸಲಾಗಿತ್ತು. ಪಿಲಿಕುಳದ ಐದು ಎಕರೆಯಷ್ಟು ವಿಸ್ತಾರವಿರುವ ಈ ಲೇಕ್ ಗಾರ್ಡನ್ ಕೆರೆಗೆ ಮೀನುಗಾರಿಕಾ ಇಲಾಖೆಯ ಸಹಯೋಗದೊಂದಿಗೆ ಪ್ರತೀ ವರ್ಷ ಮೀನುಮರಿಗಳನ್ನು ಬಿಡಲಾಗುತ್ತದೆ. ಹಾಗೆಯೇ ವರ್ಷಂಪ್ರತಿ ಜುಲೈ ವೇಳೆಗೆ ಮತ್ಸ್ಯೋತ್ಸವ ನಡೆಸಲಾಗುತ್ತದೆ. ಈ ಬಾರಿ 2 ಟನ್‌ಗಳಷ್ಟು ಮೀನುಗಳು ಸಿಕ್ಕಿದೆ. ಜೊತೆಗೆ ಮೀನುಪ್ರಿಯರಿಗೆ ಅಲ್ಲೇ ಮೀನಿನ ಖಾದ್ಯವನ್ನು ತಯಾರಿಸುವ ವ್ಯವಸ್ಥೆಯನ್ನೂ ಮೀನುಗಾರಿಕೆ ಇಲಾಖೆ ಮಾಡಿತ್ತು. ಒಟ್ಟಿನಲ್ಲಿ ಮಳೆಗಾಲದಲ್ಲಿ ಪಿಲಿಕುಳದಲ್ಲಿ ನಡೆದ ಮತ್ಸ್ಯೋತ್ಸವಕ್ಕೆ ಭರ್ಜರಿ ರೆಸ್ಪಾನ್ಸ್‌ ವ್ಯಕ್ತವಾಯಿತು.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮಳೆ ಆರಂಭವಾಗುತ್ತಿದ್ದಂತೆಯೇ ಗಿಡಗಳ ನಾಟಿಗೆ ಸಿದ್ಧತೆ – ಅಡಿಕೆ ಗಿಡಗಳಿಗೆ ಬೇಡಿಕೆ ಹೆಚ್ಚಾಗುತ್ತಿದೆ…!

ರಾಜ್ಯಾದ್ಯಂತ ಅಡಿಕೆ ಗಿಡಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗಿದ್ದು,ಕೆಲವು ಕಡೆ ಸಸಿಯ ಬೆಲೆ ₹100ಕ್ಕೆ…

9 hours ago

ಕೇಂದ್ರ ಸರ್ಕಾರದ ಸೌಲಭ್ಯಗಳಿಗೆ ‘ಕೇಂದ್ರ ರೈತ ಐಡಿ’ ಕಡ್ಡಾಯ – ಮಂಗಳೂರು ತಾಲೂಕಿನ 14,520 ರೈತರು ಇನ್ನೂ ನೋಂದಣಿ ಬಾಕಿ

ಕೇಂದ್ರ ಸರ್ಕಾರದ ವಿವಿಧ ಕೃಷಿ ಸೌಲಭ್ಯಗಳನ್ನು ಪಡೆಯಲು ‘ಕೇಂದ್ರ ರೈತ ಐಡಿ’ ಕಡ್ಡಾಯವಾಗುತ್ತಿದೆ.…

10 hours ago

ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಧಾರಣೆ ಏರಿಕೆ | ಮತ್ತೆ ಚೇತರಿಕೆಯ ಸಂಕೇತ ನೀಡಿದ ಅಡಿಕೆ ಧಾರಣೆ

ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಕೆಜಿಗೆ ₹5 ಏರಿಕೆ ದಾಖಲಾಗಿದ್ದು, ಹೊಸ ಅಡಿಕೆ…

19 hours ago

ಒಂದು ದಿನದ ತೀವ್ರ ಬಿಸಿಲು 3,400 ಹೆಚ್ಚುವರಿ ಸಾವುಗಳಿಗೆ ಕಾರಣ…? ಭಾರತದ ಬಗ್ಗೆ ಬೆಚ್ಚಿಬೀಳಿಸುವ ಅಧ್ಯಯನ

ಭಾರತದಲ್ಲಿ ಕೇವಲ ಒಂದು ದಿನದ ತೀವ್ರ ಬಿಸಿಲು ಸುಮಾರು 3,400 ಹೆಚ್ಚುವರಿ ಸಾವುಗಳಿಗೆ…

23 hours ago

ಹವಾಮಾನ ಬಿಕ್ಕಟ್ಟಿನ ನಡುವೆಯೂ ಕೃಷಿ ಉಳಿಸುವ ದಾರಿ ಕಂಡುಕೊಂಡ ದಕ್ಷಿಣ ಏಷ್ಯಾ ದೇಶಗಳು – ಸ್ಥಳೀಯ ಆವಿಷ್ಕಾರಗಳಿಗೆ ಹೆಚ್ಚಿದ ಮಹತ್ವ

ದಕ್ಷಿಣ ಪೂರ್ವ ಏಷ್ಯಾ ರಾಷ್ಟ್ರಗಳು ಹವಾಮಾನ ಬದಲಾವಣೆ ಮತ್ತು ಆಹಾರ ಭದ್ರತೆ ಸವಾಲುಗಳನ್ನು…

23 hours ago

ಮುಂಗಾರು ಅಧಿಕೃತ ದಿನಾಂಕ ತಪ್ಪಿತು..! ಜೂನ್ ಮೊದಲ ವಾರದ ಬಳಿಕವೇ ಭಾರೀ ಮಳೆ ಸಾಧ್ಯತೆ ಎಂದ ಸ್ಕೈಮೆಟ್

ಈ ಬಾರಿ ಮುಂಗಾರು ತನ್ನ ಸಾಮಾನ್ಯ ಪ್ರವೇಶ ದಿನಾಂಕವನ್ನು ತಪ್ಪಿಸಿದೆ ಎಂದು ಸ್ಕೈಮೆಟ್…

1 day ago