Advertisement
MIRROR FOCUS

ಕಳಪೆ ಮಟ್ಟದ ಅಡಿಕೆ ಆಮದಿಗೆ ಕಡಿವಾಣಕ್ಕೆ ಸಂಸದ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ | ಅಡಿಕೆ ಬೆಳೆಗಾರರ ಪರ ಸದನದಲ್ಲಿ ಧ್ವನಿಯೆತ್ತಿದ ಸಂಸದ

Share

ಭೂತಾನ್, ಮ್ಯಾನ್ಮಾರ್  ಮತ್ತು ಶ್ರೀಲಂಕಾದಂತಹ ದೇಶಗಳಿಂದ ಭಾರತಕ್ಕೆ ದೊಡ್ಡ ಪ್ರಮಾಣದಲ್ಲಿ ಅಡಿಕೆ ಆಮದು ಆಗುತ್ತಿರುವುದರಿಂದ ದೇಶದ ಅಡಿಕೆ ಬೆಳೆಗಾರರಿಗೆ ಸಮಸ್ಯೆಯಾಗುತ್ತಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ  ಅವರು ಸಂಸತ್ತಿನಲ್ಲಿ ಧ್ವನಿಯೆತ್ತಿದ್ದಾರೆ.

ಲೋಕಸಭೆಯಲ್ಲಿ ನಿಯಮ 377ರ ಅಡಿಯಲ್ಲಿ ಈ ತುರ್ತು ವಿಚಾರವನ್ನು ಪ್ರಸ್ತಾಪಿಸಿದ ಸಂಸದ ಕ್ಯಾ. ಚೌಟ ಅವರು ನೆರೆಯ ಸಣ್ಣ ದೇಶಗಳಿಂದ ಸುಂಕ ಮುಕ್ತ ಅಡಿಕೆ ಆಮದಿನಿಂದಾಗಿ ಕರ್ನಾಟಕವು ಸೇರಿ ನಮ್ಮ ದೇಶದ ಅಡಿಕೆ ಬೆಳೆಗಾರರಿಗೆ ದೊಡ್ಡ ಮಟ್ಟದ ಹೊಡೆತ ನೀಡುತ್ತಿರುವುದಾಗಿ ಚಳಿಗಾಲ ಅಧಿವೇಶನದ ಮೊದಲ ದಿನವೇ ಲೋಕಸಭೆಯಲ್ಲಿ ಸದನದ  ಗಮನಸೆಳೆದಿದ್ದಾರೆ.

ವ್ಯವಹಾರಕ್ಕೆ ಅನುಕೂಲ ಕಲ್ಪಿಸುವ ಸದುದ್ದೇಶದಿಂದ ಭಾರತ ಸರ್ಕಾರವು ಸುಂಕ ಮುಕ್ತ(ಡಿಎಫ್‌ಕ್ಯೂಎಫ್‌) ವ್ಯವಸ್ಥೆಯಡಿ ಶೂನ್ಯ ಸುಂಕ ವಿಧಿಸುತ್ತಿದೆ. ಆದರೆ, ಈ ಸುಂಕ ಮುಕ್ತ ವ್ಯವಸ್ಥೆಯನ್ನು ಈ ದೇಶಗಳು ದುರುಪಯೋಗಪಡಿಸಿಕೊಳ್ಳುತ್ತಿದ್ದು, ಅದರಿಂದ ನಮ್ಮ ದಕ್ಷಿಣ ಕನ್ನಡ ಜಿಲ್ಲೆಯೂ ಸೇರಿ ದೇಶದ ಅಡಿಕೆ ಬೆಳೆಗಾರರಿಗೆ ದೊಡ್ಡ ಅಪಾಯವುಂಟು ಮಾಡುತ್ತಿದೆ. ಅಷ್ಟೇ ಅಲ್ಲ, ಈ ಶೂನ್ಯ ಸುಂಕ ವ್ಯವಸ್ಥೆಯಿಂದಾಗಿ ಶ್ರೀಲಂಕಾ, ಭೂತಾನ್‌ , ಮ್ಯಾನ್ಮಾರ್ ದೇಶಗಳಿಂದ ಕಡಿಮೆ ಬೆಲೆಯ ಕಳಪೆ ಗುಣಮಟ್ಟದ ಅಡಿಕೆ ಭಾರತಕ್ಕೆ ದೊಡ್ಡ ಪ್ರಮಾಣದಲ್ಲಿ ಹರಿದುಬರುತ್ತಿದೆ. ಇದು ಸಹಜವಾಗಿಯೇ ನಮ್ಮ ದೇಶದ ಅಡಿಕೆ ದರ ಕುಸಿತವಾಗಿ ಬೆಳೆಗಾರರನ್ನು ತೀವ್ರ ಸಂಕಷ್ಟಕ್ಕೆ ತಳ್ಳುತ್ತಿದೆ. ‌ ಉದಾಹರಣೆಗೆ 2023 ರ ಸೆಪ್ಟಂಬರ್‌ನಿಂದ 2024 ರ ಆಗಸ್ಟ್‌ ವರೆಗಿನ ಅವಧಿಯಲ್ಲಿ ಭೂತಾನ್‌ನಿಂದ ಶೇ.57 ರಷ್ಟು, ಮಾಯನ್ಮಾರ್‌ನಿಂದ ಶೇ.39ರಷ್ಟು ಹಾಗೂ ಶ್ರೀಲಂಕಾದಿಂದ ಶೇ.2ರಷ್ಟು ಕಳಪೆ ಅಡಿಕೆ ಆಮದು ಮಾಡಿಕೊಳ್ಳಲಾಗಿದೆ ಎಂದು ಕ್ಯಾ. ಚೌಟ ಕಳವಳ ವ್ಯಕ್ತಪಡಿಸಿದ್ದಾರೆ.

ಭಾರತವು ಅಡಿಕೆ ಉತ್ಪಾದನೆಯಲ್ಲಿ ಸ್ವಾವಲಂಬಿಯಾಗಿದ್ದು, 2023- 24ರ ಅವಧಿಯಲ್ಲಿ ಸುಮಾರು 14 ಲಕ್ಷ ಟನ್‌ ಅಡಿಕೆ ಉತ್ಪಾದಿಸಿದೆ. ಕರ್ನಾಟಕ ಒಂದೇ ಸುಮಾರು 10 ಲಕ್ಷ ಟನ್‌ ಅಡಿಕೆ ಉತ್ಪಾದಿಸಿದೆ. ನಮ್ಮ ದೇಶದಲ್ಲೇ ಇಷ್ಟೊಂದು ದೊಡ್ಡ ಪ್ರಮಾಣದ ಅಡಿಕೆ ಉತ್ಪಾದನೆಯಾಗುತ್ತಿರುವಾಗ, ನೆರೆಯ ಕಡಿಮೆ ಹಿಂದುಳಿದ ದೇಶಗಳಿಂದ ಕಳಪೆ ಗುಣಮಟ್ಟದ ಅಡಿಕೆಯನ್ನು ಶೂನ್ಯ ಸುಂಕ ಪಾವತಿ ವ್ಯವಸ್ಥೆಯಡಿ ಆಮದು ಮಾಡುವ ಅಗತ್ಯವಿಲ್ಲ. ಇದರಿಂದ ನಮ್ಮ ಅಡಿಕೆಯ ದರ ಹಾಗೂ ಬೇಡಿಕೆ ಕುಸಿದು ಬೆಳೆಗಾರರು ತೀವ್ರ ಆರ್ಥಿಕ ನಷ್ಟ ಅನುಭವಿಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಇದು ಹೆಚ್ಚು ಅಡಿಕೆ ಬೆಳೆಯುವ ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಯ ಬೆಳೆಗಾರರನ್ನು ತೀವ್ರವಾಗಿ ಬಾಧಿಸಿದೆ ಎಂದು ಕ್ಯಾ. ಚೌಟ ಅವರು ಈ ಗಂಭೀರ ಸಮಸ್ಯೆ ಪರಿಣಾಮವನ್ನು ಸದನದ ಗಮನಕ್ಕೆ ತಂದಿದ್ದಾರೆ.

ಸಾಮಾನ್ಯವಾಗಿ ಹೊರ ದೇಶಗಳಿಂದ ಅಡಿಕೆ ಆಮದು ಮಾಡಿಕೊಳ್ಳುವಾಗ ಶೇ.100 ರಷ್ಟು ಮೂಲ ಸುಂಕ ವಿಧಿಸಲಾಗುತ್ತದೆ. ಆದರೆ, ಈ ಸುಂಕ ಮುಕ್ತ ವ್ಯವಸ್ಥೆಯು ನೆರೆದೇಶಗಳಿಂದ ಅಡಿಕೆಯಂಥ ಉತ್ಪನ್ನ ಸುಲಭವಾಗಿ ಭಾರತವನ್ನು ಪ್ರವೇಶಿಸಿ ನಮ್ಮ ರೈತರಿಗೆ ದೊಡ್ಡ ಅಪಾಯವುಂಟು ಮಾಡಿದೆ. ಈ ಸುಂಕ ಮುಕ್ತ ವಿನಾಯಿತಿಯು ಬೆಲೆ ಕುಸಿತ, ಮಾರುಕಟ್ಟೆ ಅಸ್ಥಿರತೆ ಮತ್ತು ಈ ಅಡಿಕೆ ಬೆಳೆಯನ್ನು ಅವಲಂಬಿಸಿ ಜೀವನೋಪಾಯ ನಡೆಸುತ್ತಿರುವ ಲಕ್ಷಾಂತರ ಕೃಷಿಕರನ್ನು ಆರ್ಥಿಕ ಮುಗ್ಗಟ್ಟಿಗೆ ದೂಡುತ್ತಿದೆ ಎಂದು ಸಂಸದರು ಮನವರಿಕೆ ಮಾಡಿದ್ದಾರೆ.

ನೆರೆ ದೇಶಗಳಿಂದ ಕಡಿಮೆ ಗುಣಮಟ್ಟದ ಸುಂಕ ಮುಕ್ತ ಅಡಿಕೆ ಆಮದಿನಿಂದಾಗುತ್ತಿರುವ ಈ ಸಮಸ್ಯೆಯನ್ನು ಸಂಸತ್ತಿನಲ್ಲಿ ಪ್ರಸ್ತಾಪಿಸಿರುವ ಸಂಸದ ಕ್ಯಾ. ಚೌಟ ಅವರು, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯಲ್ ಅವರಿಗೂ ಮನವಿ ಸಲ್ಲಿಸಿದ್ದಾರೆ.  ಸುಂಕ ಮುಕ್ತ ಉತ್ಪನ್ನ ಆಮದು ಪಟ್ಟಿಯಿಂದ ಅಡಿಕೆಯನ್ನು ಹೊರಗಿಡಬೇಕು ಹಾಗೂ ಕಡಿಮೆ ಅಭಿವೃದ್ಧಿ ಹೊಂದಿರುವ ದೇಶಗಳಿಂದ ಆಮದಾಗುವ ಉತ್ಪನ್ನಗಳಿಗೆ ಸಾಮಾನ್ಯ ಸುಂಕ ವಿಧಿಸುವ ವ್ಯವಸ್ಥೆ ಮರುಸ್ಥಾಪಿಸಬೇಕು. ಆ ಮೂಲಕ ದಕ್ಷಿಣ ಕನ್ನಡ ಸೇರಿದಂತೆ ಅಡಿಕೆ ಬೆಳೆಯುವ ಭಾಗದ ಲಕ್ಷಾಂತರ ರೈತರ ಹಿತಕಾಪಾಡುವಂತೆ  ಮನವಿಯಲ್ಲಿ ಸಂಸದರು ಒತ್ತಾಯಿಸಿದ್ದಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 15-04-2026 | ಕರ್ನಾಟಕದಲ್ಲಿ ಬಿಸಿಗಾಳಿಯ ನಡುವೆ ಮಳೆಯ ಸುಳಿವು – ಏಪ್ರಿಲ್ 18 ರಿಂದ ಮಳೆ…!

ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…

5 hours ago

ವಿಷು ಹಬ್ಬದ ಅರ್ಥವೇನು ಗೊತ್ತಾ..? ಸೂರ್ಯ ಸಂಕ್ರಮಣದ ಈ ರಹಸ್ಯ ನಿಮ್ಮ ಜೀವನವೇ ಬದಲಾಯಿಸಬಹುದು..!

ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…

11 hours ago

ಬೇಸಿಗೆ ಬಿತ್ತನೆ ಭರ್ಜರಿ ಏರಿಕೆ..! 64 ಲಕ್ಷ ಹೆಕ್ಟೇರ್ ದಾಟಿದ ಕೃಷಿ ವ್ಯಾಪ್ತಿ, 0.77 ಲಕ್ಷ ಹೆಕ್ಟೇರ್ ಹೆಚ್ಚಳ

ಈ ವರ್ಷ ಬೇಸಿಗೆ ಬಿತ್ತನೆ 64 ಲಕ್ಷ ಹೆಕ್ಟೇರ್ ದಾಟಿದ್ದು, ಕಳೆದ ವರ್ಷಕ್ಕಿಂತ…

11 hours ago

ಮುಂದಿನ 5 ದಿನ ತಾಪಮಾನ ಏರಿಕೆ ಎಚ್ಚರಿಕೆ ! ಉತ್ತರ-ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಬಿಸಿಗಾಳಿ ತೀವ್ರ

ಮುಂದಿನ ಐದು ದಿನಗಳಲ್ಲಿ ಉತ್ತರ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ತಾಪಮಾನ ಹೆಚ್ಚಾಗಲಿದೆ…

1 day ago

ಹವಾಮಾನ ವರದಿ | 14-04-2026 | ಕರ್ನಾಟಕದಲ್ಲಿ ಉರಿಬಿಸಿಲು…! ಆದರೆ ಮಳೆಯೂ ಬರುತ್ತಿದೆ ! ಯಾವಾಗ ಗೊತ್ತಾ? – ಸದ್ಯ ರೈತರಿಗೆ ಸಲಹೆ ಏನು..?

ರಾಜ್ಯದಲ್ಲಿ ಬಿಸಿಲಿನ ತೀವ್ರತೆ ಮುಂದುವರಿದಿದ್ದು, ಏಪ್ರಿಲ್ 18ರಿಂದ ಮಳೆ ಆರಂಭವಾಗುವ ಸಾಧ್ಯತೆ ಇದೆ.…

1 day ago

ಇರಾನ್-ಇಸ್ರೇಲ್ ಯುದ್ಧದ ಪರಿಣಾಮ – ಮಾವಿನ ರಫ್ತು ಕುಸಿತ, ರೈತರಿಗೆ ಹೊಡೆತ | ಅಲ್ಫೋನ್ಸೊ ಬೆಲೆ ಅರ್ಧಕ್ಕೆ ಇಳಿಕೆ

ಇರಾನ್-ಇಸ್ರೇಲ್ ಯುದ್ಧದಿಂದ ಮಾವಿನ ರಫ್ತು ಕುಸಿತಗೊಂಡು ಬೆಲೆ ತೀವ್ರವಾಗಿ ಇಳಿಕೆಯಾಗಿದೆ. ರೈತರು ನಷ್ಟದಲ್ಲಿ…

1 day ago