Advertisement
ಸುದ್ದಿಗಳು

ಹಲವು ದಿನಗಳ ನಂತರ ವರುಣನ ಕೃಪೆ : ನೇತ್ರಾವತಿಯಲ್ಲಿ ಮತ್ತೆ ಕಾಣಿಸಿಕೊಂಡ ನೀರಿನ ಹರಿವು

Share

ಮಂಗಳೂರು ಮಹಾನಗರ ಪಾಲಿಕೆಗೆ ನೀರು ಪೂರೈಸುವ ತುಂಬೆ ಡ್ಯಾಂ ನಲ್ಲಿ ನೀರಿನ ಮಟ್ಟ ಕೊಂಚ ಏರಿಕೆ ಕಂಡಿದೆ. ಏಪ್ರಿಲ್ ತಿಂಗಳಿನಿಂದ ಬತ್ತಿ ಹೋಗಿದ್ದ ನೇತ್ರಾವತಿ ನದಿಯಲ್ಲಿ ಒಳಹರಿವು ಗುರುವಾರ ಸುರಿದ ಭಾರೀ ಮಳೆಯಿಂದ ಮತ್ತೆ ಆರಂಭಗೊಂಡಿದೆ ಎಂದು ಖಾಸಗಿ ಪತ್ರಿಕೆಯೊಂದು ವರದಿ ಮಾಡಿದೆ.

ನೇತ್ರಾವತಿಯಲ್ಲಿ ನೀರಿನ ಹರಿವು
ಗುರುವಾರ ಸಾಯಂಕಾಲದಿಂದ ತಡರಾತ್ರಿಯವರೆಗೂ ಜಿಲ್ಲೆಯಾದ್ಯಂತ ಸುರಿದ ಭಾರೀ ಮಳೆಯಿಂದ ದಕ್ಷಿಣ ಕನ್ನಡ ಜಿಲ್ಲೆಯ ಜೀವನದಿಯಾದ ನೇತ್ರಾವತಿಯಲ್ಲಿ ನೀರಿನ ಹರಿವು ಆರಂಭಗೊಂಡಿದೆ. ಏಪ್ರಿಲ್ 6 ರಿಂದ ಸಂಪೂರ್ಣ ಬತ್ತಿ ಹೋಗಿದ್ದ ನೇತ್ರಾವತಿ ನದಿಯು ಹರಿವು ಆರಂಭಿಸಿದೆ.

ತುಂಬೆ ಡ್ಯಾಂ ನಲ್ಲಿ ಹೆಚ್ಚಿದ ನೀರು
ನೇತ್ರಾವತಿ ಹರಿವು ಹೆಚ್ಚಿದ್ದರಿಂದ ತುಂಬೆ ಡ್ಯಾಂನಲ್ಲಿ ನೀರಿನ ಮಟ್ಟ ಸ್ವಲ್ಪ ಏರಿಕೆ ಕಂಡಿದೆ. ಈ ವಾರದ ಆರಂಭದಲ್ಲಿ 4.03 ಮೀಟರ್​ಗೆ ನೀರು ಇಳಿಕೆ ಆಗಿತ್ತು. ಈ ಕಾರಣದಿಂದ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ನೀರಿಗೆ ಹಾಹಾಕಾರ ಆರಂಭವಾಗಿತ್ತು. ರೇಷನಿಂಗ್ ಮೂಲಕ ಎರಡು ದಿನಗಳಿಗೊಮ್ಮೆ ನೀರು ಪೂರೈಸಲಾಗುತ್ತಿದೆ.

4.03 ಮೀಟರ್​ಗೆ ಇಳಿದ ನೀರಿನ ಪ್ರಮಾಣ
ತುಂಬೆ ಡ್ಯಾಂನಲ್ಲಿ ಈ ವಾರದ ಆರಂಭಕ್ಕೆ 4.03 ಮೀಟರ್​ಗೆ ನೀರು ಇಳಿಕೆ ಆಗಿದೆ. ಪಶ್ಚಿಮ ಘಟ್ಟಗಳಲ್ಲೂ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿರುವುದು ನೀರಿನ ಒಳ ಹರಿವು ಇಲ್ಲದಂತೆ ಆಗಿದೆ. ಹೀಗಾಗಿ ಮಂಗಳೂರಿನಲ್ಲಿ ಸದ್ಯ ಎರಡು ದಿನಕ್ಕೊಮ್ಮೆ ನೀರು ಕೊಡಲಾಗುತ್ತಿದೆ. ಪರಿಸ್ಥಿತಿ ಹೀಗೆಯೇ ಮುಂದುವರೆದರೆ, ಈ ನಿಯಮದಲ್ಲೂ ಬದಲಾವಣೆ ಆಗುವ ಸಾಧ್ಯತೆ ಇದೆ.

ಈ ಹಿಂದೆ ತುಂಬೆ ಡ್ಯಾಂನಿಂದ ನೀರು ಪೂರೈಕೆ ವ್ಯತ್ಯಯವಾದಾಗ, ಬೇಸಿಗೆಯಲ್ಲಿ ಮಂಗಳೂರು ಮಹಾನಗರ ಪಾಲಿಕೆಯು ಟ್ಯಾಂಕರ್‌ ನೀರಿನ ಮೊರೆ ಹೋಗುತ್ತಿತ್ತು. ಪಾಲಿಕೆ ವ್ಯಾಪ್ತಿಯ 60 ವಾರ್ಡ್​ಗಳಲ್ಲಿ ಹಲವು ಟ್ಯಾಂಕರ್​ಗಳ ಮೂಲಕ ಅಗತ್ಯವಿದ್ದಲ್ಲಿಗೆ ನೀರು ಪೂರೈಸುತ್ತಿತ್ತು.

ಆದರೆ, ಈ ಬಾರಿ ಪರಿಸ್ಥಿತಿ ತೀರಾ ಹದಗೆಟ್ಟಿದ್ದು, ಬಾವಿಗಳಲ್ಲೂ ನೀರು ಇಲ್ಲವಾಗಿದೆ. ಇರುವ ಬಾವಿಗಳ ನೀರು ಕೆಸರಿನಿಂದ ತುಂಬಿದ್ದು, ನೀರು ಇನ್ನೇನು ಬತ್ತಿ ಹೋಗುವುದರಲ್ಲಿದೆ. ಹೀಗಾಗಿ ಹಣ ಕೊಡ್ತೀವಿ ಅಂದ್ರೂ ಕುಡಿಯುವ ನೀರಿನ ಪೂರೈಕೆ ಜಟಿಲವಾಗುತ್ತಿದೆ.

ಕೆರೆಗಳಲ್ಲಿ ನೀರು ಇದ್ರೂ ನೋ ಯೂಸ್!‌
ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಗುಜ್ಜರಕೆರೆ, ಕಾವೂರು ಕೆರೆ ಹೀಗೆ ಹಲವು ಕೆರೆಗಳಿದ್ರೂ ಅದರ ನೀರು ಕುಡಿಯಲು ಯೋಗ್ಯವಾಗಿಲ್ಲ. ಶುದ್ಧೀಕರಣ ವ್ಯವಸ್ಥೆ ಇಲ್ಲಿದಿರುವುದರಿಂದ ಅದನ್ನು ಪೂರೈಸುವಂತಿಲ್ಲ.

ಹೀಗಾಗಿ ವಸತಿ ಸಮುಚ್ಚಯ, ವಾಣಿಜ್ಯ ಮಳಿಗೆಗಳು ಸಮರ್ಪಕ ನೀರು ಇಲ್ಲದೇ ಸಂಕಷ್ಟಪಡುವಂತಾಗಿದೆ. ಒಟ್ಟಿನಲ್ಲಿ ಮಹಾನಗರ ಪಾಲಿಕೆ ಇಕ್ಕಟ್ಟಿನಲ್ಲಿ ಸಿಲುಕಿದ್ದು, ಮಳೆ ಸುರಿಯುವುದನ್ನೇ ಮುಂದೆ ನೋಡ್ತಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಬೇಸಿಗೆಯಲ್ಲಿ ನಿಮ್ಮ ಕಿಡ್ನಿಯನ್ನು ಕಾಪಾಡಿ..! ಮೂತ್ರಪಿಂಡದ ಕಲ್ಲು ಸಮಸ್ಯೆ ಏಕೆ ಹೆಚ್ಚುತ್ತಿದೆ?

ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…

7 hours ago

ಮಳೆಗಾಲ ಆರಂಭ- ಜೂನ್‌ 1ರಿಂದ ರಸ್ತೆ, ಗುಡ್ಡ, ಮಣ್ಣು ಅಗೆತ ಕಾಮಗಾರಿಗೆ ನಿರ್ಬಂಧ – ನಗರಪಾಲಿಕೆ ಎಚ್ಚರಿಕೆ

ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್‌ 1ರಿಂದ ಸೆಪ್ಟೆಂಬರ್‌ 30ರವರೆಗೆ ರಸ್ತೆ, ಗುಡ್ಡ…

7 hours ago

ಅಸ್ಸಾಂನಲ್ಲಿ ಭಾರೀ ಅಕ್ರಮ ಅಡಿಕೆ ವಶ : ಡಿಆರ್‌ಐ ದಾಳಿ, 60 ಸಾವಿರ ಕೆಜಿ ವಿದೇಶಿ ಅಡಿಕೆ ಜಪ್ತಿ

ಈಶಾನ್ಯ ಭಾರತದಲ್ಲಿ ಡಿಆರ್‌ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…

18 hours ago

“ಒಂದು ದಿನ ಅಡಿಕೆ ಮಾರುಕಟ್ಟೆಗೆ ‘ಏಲಿಯನ್ಸ್’ ಬಂದರೆ?” ರೈತನ ಭವಿಷ್ಯದ ಬಗ್ಗೆ ಎಚ್ಚರಿಸುವ ಕಲ್ಪಿತ ಕಥೆ

ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…

2 days ago

“ಕಾಕ್ರೋಚ್‌ ಜನತಾ ಪಾರ್ಟಿ”ಗೆ ಹೊಸ ಎದುರಾಳಿ..! ವೈರಲ್‌ ಆಗುತ್ತಿದೆ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌”

“ಕಾಕ್‌ರೋಚ್‌ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌” ಎಂಬ ಹೊಸ…

2 days ago