ಪಂಪ್ವೆಲ್ ಜಲಾವೃತ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಯ ಅಬ್ಬರ ಹೆಚ್ಚಾಗಿದೆ. ಜಿಲ್ಲೆಯಾದ್ಯಂತ ಮುಂಗಾರು ಮಳೆ ಚುರುಕಾಗಿದೆ. ಮಂಗಳೂರಿನಲ್ಲಿ ಮಳೆಯ ಕಾರಣದಿಂದ ನಗರದ ಹಲವೆಡೆ ಮಳೆ ನೀರು ಹರಿದಿದೆ. ಪಂಪ್ ವೆಲ್ ಬಳಿ ಜಲಾವೃತಗೊಂಡು ವಾಹನ ಚಾಲಕರು, ಪಾದಚಾರಿಗಳು ಪರದಾಟ ನಡೆಸಿದರು.
ಸೋಮವಾರ ಸುರಿದ ಮಳೆಗೆ ಮಂಗಳೂರು ಪಂಪ್ ವೆಲ್ ಫ್ಲೈಓವರ್ ನ ಅಂಡರ್ ಪಾಸ್ ಸಹಿತ ಸುತ್ತಮುತ್ತಲಿನ ಜಾಗಗಳಲ್ಲೆಲ್ಲಾ ನೀರು ತುಂಬಿತು. ಕೆಲವು ವಾಹನಗಳು ಓಡಾಟ ನಡೆಸಿ ನೀರಿನಲ್ಲಿ ಸಿಕ್ಕಿಹಾಕಿಕೊಳ್ಳಬೇಕಾದ ಸ್ಥಿತಿ ನಿರ್ಮಾಣವಾಯಿತು. ತೀರಾ ಗ್ರಾಮೀಣ ಭಾಗದಲ್ಲಿ ಹೊಳೆ ದಾಟಿದ ಅನುಭವ ಹಲವರಿಗೆ ಆಗಿದೆ…!.
ಉಳಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಮಳೆಯಾಗಿದೆ. ಕೃಷಿ ಚಟುವಟಿಕೆಗಳಿಗೆ ವೇಗ ಸಿಕ್ಕಿದೆ. ಗ್ರಾಮೀಣ ಭಾಗಗಳಲ್ಲಿ ಸಮಸ್ಯೆಗಳು ಒಂದೊಂದಾಗಿ ಆರಂಭವಾಗಲು ಶುರುವಾಗುತ್ತಿದೆ.
ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…
ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…
E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…
ಕರ್ನಾಟಕದಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳಿದ್ದು, ಸೆಪ್ಟೆಂಬರ್ 4ರಿಂದ ಕರಾವಳಿ ಮತ್ತು…
ಭಾರತದ ಅತಿದೊಡ್ಡ ಕಾಫಿ ಉತ್ಸವ 2027 ಫೆಬ್ರವರಿ 26ರಿಂದ 28ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು,…