ಪಂಪ್ವೆಲ್ ಜಲಾವೃತ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಯ ಅಬ್ಬರ ಹೆಚ್ಚಾಗಿದೆ. ಜಿಲ್ಲೆಯಾದ್ಯಂತ ಮುಂಗಾರು ಮಳೆ ಚುರುಕಾಗಿದೆ. ಮಂಗಳೂರಿನಲ್ಲಿ ಮಳೆಯ ಕಾರಣದಿಂದ ನಗರದ ಹಲವೆಡೆ ಮಳೆ ನೀರು ಹರಿದಿದೆ. ಪಂಪ್ ವೆಲ್ ಬಳಿ ಜಲಾವೃತಗೊಂಡು ವಾಹನ ಚಾಲಕರು, ಪಾದಚಾರಿಗಳು ಪರದಾಟ ನಡೆಸಿದರು.
ಸೋಮವಾರ ಸುರಿದ ಮಳೆಗೆ ಮಂಗಳೂರು ಪಂಪ್ ವೆಲ್ ಫ್ಲೈಓವರ್ ನ ಅಂಡರ್ ಪಾಸ್ ಸಹಿತ ಸುತ್ತಮುತ್ತಲಿನ ಜಾಗಗಳಲ್ಲೆಲ್ಲಾ ನೀರು ತುಂಬಿತು. ಕೆಲವು ವಾಹನಗಳು ಓಡಾಟ ನಡೆಸಿ ನೀರಿನಲ್ಲಿ ಸಿಕ್ಕಿಹಾಕಿಕೊಳ್ಳಬೇಕಾದ ಸ್ಥಿತಿ ನಿರ್ಮಾಣವಾಯಿತು. ತೀರಾ ಗ್ರಾಮೀಣ ಭಾಗದಲ್ಲಿ ಹೊಳೆ ದಾಟಿದ ಅನುಭವ ಹಲವರಿಗೆ ಆಗಿದೆ…!.
ಉಳಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಮಳೆಯಾಗಿದೆ. ಕೃಷಿ ಚಟುವಟಿಕೆಗಳಿಗೆ ವೇಗ ಸಿಕ್ಕಿದೆ. ಗ್ರಾಮೀಣ ಭಾಗಗಳಲ್ಲಿ ಸಮಸ್ಯೆಗಳು ಒಂದೊಂದಾಗಿ ಆರಂಭವಾಗಲು ಶುರುವಾಗುತ್ತಿದೆ.
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…
ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…