ಪಂಪ್ವೆಲ್ ಜಲಾವೃತ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಯ ಅಬ್ಬರ ಹೆಚ್ಚಾಗಿದೆ. ಜಿಲ್ಲೆಯಾದ್ಯಂತ ಮುಂಗಾರು ಮಳೆ ಚುರುಕಾಗಿದೆ. ಮಂಗಳೂರಿನಲ್ಲಿ ಮಳೆಯ ಕಾರಣದಿಂದ ನಗರದ ಹಲವೆಡೆ ಮಳೆ ನೀರು ಹರಿದಿದೆ. ಪಂಪ್ ವೆಲ್ ಬಳಿ ಜಲಾವೃತಗೊಂಡು ವಾಹನ ಚಾಲಕರು, ಪಾದಚಾರಿಗಳು ಪರದಾಟ ನಡೆಸಿದರು.
ಸೋಮವಾರ ಸುರಿದ ಮಳೆಗೆ ಮಂಗಳೂರು ಪಂಪ್ ವೆಲ್ ಫ್ಲೈಓವರ್ ನ ಅಂಡರ್ ಪಾಸ್ ಸಹಿತ ಸುತ್ತಮುತ್ತಲಿನ ಜಾಗಗಳಲ್ಲೆಲ್ಲಾ ನೀರು ತುಂಬಿತು. ಕೆಲವು ವಾಹನಗಳು ಓಡಾಟ ನಡೆಸಿ ನೀರಿನಲ್ಲಿ ಸಿಕ್ಕಿಹಾಕಿಕೊಳ್ಳಬೇಕಾದ ಸ್ಥಿತಿ ನಿರ್ಮಾಣವಾಯಿತು. ತೀರಾ ಗ್ರಾಮೀಣ ಭಾಗದಲ್ಲಿ ಹೊಳೆ ದಾಟಿದ ಅನುಭವ ಹಲವರಿಗೆ ಆಗಿದೆ…!.
ಉಳಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಮಳೆಯಾಗಿದೆ. ಕೃಷಿ ಚಟುವಟಿಕೆಗಳಿಗೆ ವೇಗ ಸಿಕ್ಕಿದೆ. ಗ್ರಾಮೀಣ ಭಾಗಗಳಲ್ಲಿ ಸಮಸ್ಯೆಗಳು ಒಂದೊಂದಾಗಿ ಆರಂಭವಾಗಲು ಶುರುವಾಗುತ್ತಿದೆ.
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…
ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…
ಗುಟ್ಕಾ ಮತ್ತು ಪಾನ್ಮಸಾಲಾ ನಿಷೇಧವನ್ನು ಅಡಿಕೆ ನಿಷೇಧದೊಂದಿಗೆ ಸಂಬಂಧಿಸಬಾರದು, ಅಡಿಕೆ ಬೆಳೆಗಾರರು ಗಾಬರಿಯಾಗಬಾರದು…