Advertisement
MIRROR FOCUS

ಮಂಗಳೂರು ವಿಮಾನ ನಿಲ್ದಾಣಕ್ಕೆ ಅಗರ್ತಲಾದಿಂದ ಬಂದ ಅಡಿಕೆ…! |

Share

ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಅಗರ್ತಲಾದಿಂದ ಕೆಂಪಡಿಕೆ ಬಂದಿದೆ. 1519 ಕೆಜಿ ತೂಕದ ಕೆಂಪಡಿಕೆ  ಅಗರ್ತಲಾದಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದು ಶಿವಮೊಗ್ಗಕ್ಕೆ ರಸ್ತೆಯ ಮೂಲಕ ಸಾಗಿದೆ. ದೇಶೀಯ ಸರಕು ಕಾರ್ಯಾಚರಣೆಯನ್ನು ವಿಮಾನ ಯಾನದ ಮೂಲಕ ಪ್ರಾರಂಭಿಸಿದ ನಂತರ ಇಂಟಿಗ್ರೇಟೆಡ್ ಕಾರ್ಗೋ ಟರ್ಮಿನಲ್ ನಿರ್ವಹಿಸಿದ ಬೆಳೆಗಳ ಅತ್ಯಧಿಕ ಪ್ರಮಾಣ ಸಾಗಾಟ ಇದಾಗಿದೆ.ಮುಂದೆ ಓದಿ

ಕರಾವಳಿ ಹಾಗೂ ಮಲೆನಾಡು ಅಡಿಕೆ ಬೆಳೆಯುವ ಪ್ರದೇಶ. ಅಡಿಕೆ ಇಲ್ಲಿಂದಲೇ ರವಾನೆಯಾಗುವುದು ಬಹುಪಾಲು ನಡೆದುಕೊಂಡು ಬಂದಿರುವುದು. ಈಗ ಅಗರ್ತಲಾದಿಂದ ಅಡಿಕೆ ಬಂದಿರುವ ಬಗ್ಗೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಪ್ರಕಟಣೆ ತಿಳಿಸಿದೆ. ಶಿವಮೊಗ್ಗ ಮೂಲದ ಅಡಿಕೆ ಟ್ರೇಡಿಂಗ್ ಕಂಪನಿಯಾದ ಶ್ರೀನಿವಾಸ ಸುಪಾರಿ ಟ್ರೇಡರ್ಸ್ ಈ ಅಡಿಕೆ ಸಾಗಾಟ ಮಾಡಿದೆ. ಇದುವರೆಗೆ ಕಡಿಮೆ ಪ್ರಮಾಣದಲ್ಲಿ ಅಡಿಕೆ ಸಾಗಾಟ ಇದ್ದರೂ ಇಷ್ಟು ದೊಡ್ಡ ಸರಕನ್ನು ಮೊದಲ ಬಾರಿಗೆ ಸಾಗಾಟ ಮಾಡಿದೆ ಎಂದು ಮಂಗಳೂರು ವಿಮಾನ ನಿಲ್ದಾಣ ಪ್ರಕಟಣೆ ತಿಳಿಸಿದೆ. ಅಲ್ಲದೆ, ಸರಕುಗಳನ್ನು ಸ್ವೀಕರಿಸಿದ ಕಂಪನಿಯ ಪ್ರತಿನಿಧಿಗಳು ನಂತರ ಹೆಚ್ಚಿನ ಸಂಸ್ಕರಣೆಗಾಗಿ ಬೆಳೆಯನ್ನು ಶಿವಮೊಗ್ಗಕ್ಕೆ ರಸ್ತೆ ಮೂಲಕ ಸಾಗಿಸಿದರು ಎಂದೂ ಹೇಳಿದೆ.ಮುಂದೆ ಓದಿ

ಅಗರ್ತಲಾ ಸೇರಿದಂತೆ ದೇಶದ ವಿವಿಧ ಭಾಗಗಳಿಂದ ನಿಯಮಿತವಾಗಿ ಅಡಿಕೆಯನ್ನು ರಸ್ತೆಯ ಮೂಲಕ ಪಡೆಯುವ ಕಂಪನಿಗೆ ಅಡಿಕೆಯನ್ನು ಏರ್‌ಲಿಫ್ಟಿಂಗ್ ಮಾಡುವುದು ಮೊದಲನೆಯದು ಎಂದು ವಿಮಾನ ನಿಲ್ದಾಣದ ವಕ್ತಾರರು ತಿಳಿಸಿದ್ದಾರೆ.

Mangaluru International Airport (MIA) facilitated the inbound handling of areca nut (areca catechu), a tropical crop at its integrated cargo terminal (ICT) earlier in January 2024. The red variety of areca nut weighing 1519 kgs in 60 bags was ferried as belly air cargo from Agartala to this coastal city.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಭಾರೀ ಮಳೆ ಹಿನ್ನೆಲೆ – ದಕ್ಷಿಣ ಕನ್ನಡದಲ್ಲಿ ಇಂದು ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಡಳಿತ ಆದೇಶ

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಜುಲೈ 23ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ…

14 hours ago

ಹವಾಮಾನ ವರದಿ | 22.07.2026 | ಉತ್ತರ ಕನ್ನಡ, ಉಡುಪಿಯಲ್ಲಿ ಉತ್ತಮ ಮಳೆಯ ಸಾಧ್ಯತೆ; ರಾಜ್ಯದಲ್ಲಿ ಮಳೆ ಚಟುವಟಿಕೆ ಮುಂದುವರಿಕೆ

23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…

1 day ago

ಆಮದು ಕಳಪೆ ಅಡಿಕೆ ಮಿಶ್ರಣದ ಎಚ್ಚರಿಕೆ- ಬೆಳೆಗಾರರಿಗೆ ಕ್ಯಾಂಪ್ಕೊ ಮನವಿ

ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…

2 days ago

ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…

2 days ago

ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ

ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…

3 days ago

ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್

ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…

3 days ago