Advertisement
MIRROR FOCUS

ಮಂಗಳೂರು ವಿಮಾನ ನಿಲ್ದಾಣಕ್ಕೆ ಅಗರ್ತಲಾದಿಂದ ಬಂದ ಅಡಿಕೆ…! |

Share

ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಅಗರ್ತಲಾದಿಂದ ಕೆಂಪಡಿಕೆ ಬಂದಿದೆ. 1519 ಕೆಜಿ ತೂಕದ ಕೆಂಪಡಿಕೆ  ಅಗರ್ತಲಾದಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದು ಶಿವಮೊಗ್ಗಕ್ಕೆ ರಸ್ತೆಯ ಮೂಲಕ ಸಾಗಿದೆ. ದೇಶೀಯ ಸರಕು ಕಾರ್ಯಾಚರಣೆಯನ್ನು ವಿಮಾನ ಯಾನದ ಮೂಲಕ ಪ್ರಾರಂಭಿಸಿದ ನಂತರ ಇಂಟಿಗ್ರೇಟೆಡ್ ಕಾರ್ಗೋ ಟರ್ಮಿನಲ್ ನಿರ್ವಹಿಸಿದ ಬೆಳೆಗಳ ಅತ್ಯಧಿಕ ಪ್ರಮಾಣ ಸಾಗಾಟ ಇದಾಗಿದೆ.ಮುಂದೆ ಓದಿ

ಕರಾವಳಿ ಹಾಗೂ ಮಲೆನಾಡು ಅಡಿಕೆ ಬೆಳೆಯುವ ಪ್ರದೇಶ. ಅಡಿಕೆ ಇಲ್ಲಿಂದಲೇ ರವಾನೆಯಾಗುವುದು ಬಹುಪಾಲು ನಡೆದುಕೊಂಡು ಬಂದಿರುವುದು. ಈಗ ಅಗರ್ತಲಾದಿಂದ ಅಡಿಕೆ ಬಂದಿರುವ ಬಗ್ಗೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಪ್ರಕಟಣೆ ತಿಳಿಸಿದೆ. ಶಿವಮೊಗ್ಗ ಮೂಲದ ಅಡಿಕೆ ಟ್ರೇಡಿಂಗ್ ಕಂಪನಿಯಾದ ಶ್ರೀನಿವಾಸ ಸುಪಾರಿ ಟ್ರೇಡರ್ಸ್ ಈ ಅಡಿಕೆ ಸಾಗಾಟ ಮಾಡಿದೆ. ಇದುವರೆಗೆ ಕಡಿಮೆ ಪ್ರಮಾಣದಲ್ಲಿ ಅಡಿಕೆ ಸಾಗಾಟ ಇದ್ದರೂ ಇಷ್ಟು ದೊಡ್ಡ ಸರಕನ್ನು ಮೊದಲ ಬಾರಿಗೆ ಸಾಗಾಟ ಮಾಡಿದೆ ಎಂದು ಮಂಗಳೂರು ವಿಮಾನ ನಿಲ್ದಾಣ ಪ್ರಕಟಣೆ ತಿಳಿಸಿದೆ. ಅಲ್ಲದೆ, ಸರಕುಗಳನ್ನು ಸ್ವೀಕರಿಸಿದ ಕಂಪನಿಯ ಪ್ರತಿನಿಧಿಗಳು ನಂತರ ಹೆಚ್ಚಿನ ಸಂಸ್ಕರಣೆಗಾಗಿ ಬೆಳೆಯನ್ನು ಶಿವಮೊಗ್ಗಕ್ಕೆ ರಸ್ತೆ ಮೂಲಕ ಸಾಗಿಸಿದರು ಎಂದೂ ಹೇಳಿದೆ.ಮುಂದೆ ಓದಿ

ಅಗರ್ತಲಾ ಸೇರಿದಂತೆ ದೇಶದ ವಿವಿಧ ಭಾಗಗಳಿಂದ ನಿಯಮಿತವಾಗಿ ಅಡಿಕೆಯನ್ನು ರಸ್ತೆಯ ಮೂಲಕ ಪಡೆಯುವ ಕಂಪನಿಗೆ ಅಡಿಕೆಯನ್ನು ಏರ್‌ಲಿಫ್ಟಿಂಗ್ ಮಾಡುವುದು ಮೊದಲನೆಯದು ಎಂದು ವಿಮಾನ ನಿಲ್ದಾಣದ ವಕ್ತಾರರು ತಿಳಿಸಿದ್ದಾರೆ.

Mangaluru International Airport (MIA) facilitated the inbound handling of areca nut (areca catechu), a tropical crop at its integrated cargo terminal (ICT) earlier in January 2024. The red variety of areca nut weighing 1519 kgs in 60 bags was ferried as belly air cargo from Agartala to this coastal city.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

1 hour ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

1 hour ago

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುತ್ತಿದೆಯೇ? – ಹೊಸ ಅಧ್ಯಯನದ ಎಚ್ಚರಿಕೆ

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…

2 hours ago

ಹವಾಮಾನ ಬದಲಾವಣೆಯಿಂದ ರೈತರ ರಕ್ಷಣೆಗೆ ಸರ್ಕಾರದ ತಂತ್ರ – 310 ಜಿಲ್ಲೆಗಳು ಅಪಾಯದಲ್ಲಿ, 2,661 ಸಹಿಷ್ಣು ತಳಿಗಳ ಅಭಿವೃದ್ಧಿ

ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…

12 hours ago

ಗುಟ್ಕಾ ನಿಷೇಧದ ಹೆಸರಿನಲ್ಲಿ ಅಡಿಕೆ ಬೆಳೆಗಾರರಿಗೆ ತೊಂದರೆ ಆಗದಂತೆ ಸರ್ಕಾರ ಸ್ಪಷ್ಟ ಮಾರ್ಗಸೂಚಿ ನೀಡಲಿ

ಗುಟ್ಕಾ ಮತ್ತು ಪಾನ್‌ಮಸಾಲಾ ನಿಷೇಧವನ್ನು ಅಡಿಕೆ ನಿಷೇಧದೊಂದಿಗೆ ಸಂಬಂಧಿಸಬಾರದು, ಅಡಿಕೆ ಬೆಳೆಗಾರರು ಗಾಬರಿಯಾಗಬಾರದು…

12 hours ago

ತಂಬಾಕು ನಿಷೇಧ ಜಾರಿ: ಅಡಿಕೆ ಬೆಳೆಗಾರರ ಹಿತ ಕಾಪಾಡಲು ಸ್ಪಷ್ಟ ಚೌಕಟ್ಟು ರೂಪಿಸಿ – ಕ್ಯಾಂಪ್ಕೊ

ತಂಬಾಕು ಮತ್ತು ನಿಕೋಟಿನ್ ಅಂಶವುಳ್ಳ ಉತ್ಪನ್ನಗಳ ನಿಷೇಧ ಜಾರಿಯಲ್ಲಿ ಅಡಿಕೆ ಬೆಳೆಗಾರರು ಹಾಗೂ…

12 hours ago