ಮಂಗಳೂರು–ಬೆಂಗಳೂರು ರೈಲು ಮಾರ್ಗದ ಯಡಕುಮೇರಿ–ಶಿರಿಬಾಗಿಲು ನಡುವಿನ ಭೂಕುಸಿತ ಪೀಡಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ಮರುಸ್ಥಾಪನೆ ಕಾಮಗಾರಿ ಪೂರ್ಣಗೊಂಡಿದ್ದು, ಈ ಮಾರ್ಗದಲ್ಲಿ ರೈಲು ಸಂಚಾರವನ್ನು ಪುನರಾರಂಭಿಸಲಾಗಿದೆ. ಹಳಿಯ ಮೇಲಿದ್ದ ಮಣ್ಣು ಹಾಗೂ ಅವಶೇಷಗಳನ್ನು ತೆರವುಗೊಳಿಸಿದ ಬಳಿಕ, ಸಂಜೆ 7.25ಕ್ಕೆ ಹಳಿಯನ್ನು ಸುರಕ್ಷಿತ ಎಂದು ಪ್ರಮಾಣೀಕರಿಸಿ ರೈಲು ಸಂಚಾರಕ್ಕೆ ಅನುಮತಿ ನೀಡಲಾಗಿದೆ.
ಭಾರೀ ಮಳೆಯಿಂದ ಗುಡ್ಡ ಕುಸಿದು ಹಳಿಯ ಮೇಲೆ ಮಣ್ಣು, ಕಲ್ಲು ಮತ್ತು ಮರಗಳು ಬಿದ್ದ ಪರಿಣಾಮ ಹಲವು ರೈಲುಗಳ ಸಂಚಾರ ರದ್ದಾಗಿದ್ದರೆ, ಕೆಲವು ರೈಲುಗಳನ್ನು ಮಾರ್ಗ ಬದಲಿಸಿ ಸಂಚರಿಸಲಾಗುತ್ತಿತ್ತು.
ದಕ್ಷಿಣ ಪಶ್ಚಿಮ ರೈಲ್ವೆಯ ಸಿಬ್ಬಂದಿ ನಿರಂತರವಾಗಿ ಮಣ್ಣು ಹಾಗೂ ಅವಶೇಷ ತೆರವುಗೊಳಿಸಿ, ಹಳಿ ಸುರಕ್ಷತೆಯನ್ನು ಪರಿಶೀಲಿಸಿದ ಬಳಿಕ ರೈಲುಗಳ ಸಂಚಾರಕ್ಕೆ ಅನುಮತಿ ನೀಡಲಾಗಿದೆ. ಮಂಗಳೂರು–ಬೆಂಗಳೂರು ನಡುವಿನ ಪ್ರಯಾಣಿಕರಿಗೆ ಇದರಿಂದ ಬಹಳಷ್ಟು ನಿರಾಳತೆ ಸಿಕ್ಕಿದೆ.
ದಕ್ಷಿಣ ಪಶ್ಚಿಮ ರೈಲ್ವೆ ಪ್ರಕಟಿಸಿರುವ ಬುಲೆಟಿನ್ ಪ್ರಕಾರ, ಯಡಕುಮೇರಿ ಸಮೀಪ ಕಿ.ಮೀ. 73/700–500 ಭಾಗದಲ್ಲಿ ಮಣ್ಣು ತೆರವು ಹಾಗೂ ಹಳಿ ಮರುಸ್ಥಾಪನೆ ಕಾರ್ಯ ಪೂರ್ಣಗೊಂಡಿದೆ. ಆದರೆ ಸುರಕ್ಷತಾ ಕ್ರಮವಾಗಿ ಈ ಪ್ರದೇಶದಲ್ಲಿ ತಾತ್ಕಾಲಿಕವಾಗಿ ಗಂಟೆಗೆ 10 ಕಿ.ಮೀ. ವೇಗ ಮಿತಿ ವಿಧಿಸಲಾಗಿದೆ. ಹೀಗಾಗಿ ಕೆಲ ರೈಲುಗಳ ವೇಳಾಪಟ್ಟಿಯಲ್ಲಿ ಸಣ್ಣ ಪ್ರಮಾಣದ ಬದಲಾವಣೆ ಅಥವಾ ವಿಳಂಬ ಉಂಟಾಗುವ ಸಾಧ್ಯತೆ ಇದೆ ಎಂದು ರೈಲ್ವೆ ಮೂಲಗಳು ತಿಳಿಸಿವೆ.
ಕಳೆದ ಕೆಲ ದಿನಗಳಿಂದ ಸುರಿದ ಭಾರೀ ಮಳೆಯಿಂದ ಯಡಕುಮೇರಿ ಭಾಗದಲ್ಲಿ ಗುಡ್ಡ ಕುಸಿದು ರೈಲು ಹಳಿ ಮುಚ್ಚಲ್ಪಟ್ಟಿತ್ತು. ಇದರ ಪರಿಣಾಮವಾಗಿ ಮಂಗಳೂರು–ಬೆಂಗಳೂರು ಮಾರ್ಗದ ಹಲವು ಎಕ್ಸ್ಪ್ರೆಸ್ ರೈಲುಗಳು ರದ್ದಾಗಿದ್ದರೆ, ಕೆಲವು ರೈಲುಗಳನ್ನು ಪರ್ಯಾಯ ಮಾರ್ಗದ ಮೂಲಕ ಓಡಿಸಲಾಗಿತ್ತು. ಈಗ ಕಾಮಗಾರಿ ಪೂರ್ಣಗೊಂಡಿರುವುದರಿಂದ ಸಾಮಾನ್ಯ ರೈಲು ಸಂಚಾರ ಮತ್ತೆ ಆರಂಭವಾಗಿದೆ.
ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಫಾಲೋಮಾಡಲು ಇಲ್ಲಿ ಕ್ಲಿಕ್ ಮಾಡಿ
Train services on the Mangaluru–Bengaluru route have resumed after South Western Railway completed mud clearance and track restoration between Yedakumeri and Shiribagilu. The route had been disrupted by landslides triggered by heavy rainfall.

