Advertisement
MIRROR FOCUS

ಯಡಕುಮೇರಿ ಹಳಿ ದುರಸ್ತಿ ಪೂರ್ಣ : ಮಂಗಳೂರು–ಬೆಂಗಳೂರು ರೈಲು ರೈಲು ಸಂಚಾರ ಪುನರಾರಂಭ

Share

ಮಂಗಳೂರು–ಬೆಂಗಳೂರು ರೈಲು ಮಾರ್ಗದ ಯಡಕುಮೇರಿ–ಶಿರಿಬಾಗಿಲು ನಡುವಿನ ಭೂಕುಸಿತ ಪೀಡಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ಮರುಸ್ಥಾಪನೆ ಕಾಮಗಾರಿ ಪೂರ್ಣಗೊಂಡಿದ್ದು, ಈ ಮಾರ್ಗದಲ್ಲಿ ರೈಲು ಸಂಚಾರವನ್ನು ಪುನರಾರಂಭಿಸಲಾಗಿದೆ. ಹಳಿಯ ಮೇಲಿದ್ದ ಮಣ್ಣು ಹಾಗೂ ಅವಶೇಷಗಳನ್ನು  ತೆರವುಗೊಳಿಸಿದ ಬಳಿಕ, ಸಂಜೆ 7.25ಕ್ಕೆ ಹಳಿಯನ್ನು ಸುರಕ್ಷಿತ ಎಂದು ಪ್ರಮಾಣೀಕರಿಸಿ ರೈಲು ಸಂಚಾರಕ್ಕೆ ಅನುಮತಿ ನೀಡಲಾಗಿದೆ.

ಭಾರೀ ಮಳೆಯಿಂದ ಗುಡ್ಡ ಕುಸಿದು ಹಳಿಯ ಮೇಲೆ ಮಣ್ಣು, ಕಲ್ಲು ಮತ್ತು ಮರಗಳು ಬಿದ್ದ ಪರಿಣಾಮ ಹಲವು ರೈಲುಗಳ ಸಂಚಾರ ರದ್ದಾಗಿದ್ದರೆ, ಕೆಲವು ರೈಲುಗಳನ್ನು ಮಾರ್ಗ ಬದಲಿಸಿ ಸಂಚರಿಸಲಾಗುತ್ತಿತ್ತು.

ದಕ್ಷಿಣ ಪಶ್ಚಿಮ ರೈಲ್ವೆಯ ಸಿಬ್ಬಂದಿ ನಿರಂತರವಾಗಿ ಮಣ್ಣು ಹಾಗೂ ಅವಶೇಷ ತೆರವುಗೊಳಿಸಿ, ಹಳಿ ಸುರಕ್ಷತೆಯನ್ನು ಪರಿಶೀಲಿಸಿದ ಬಳಿಕ ರೈಲುಗಳ ಸಂಚಾರಕ್ಕೆ ಅನುಮತಿ ನೀಡಲಾಗಿದೆ. ಮಂಗಳೂರು–ಬೆಂಗಳೂರು ನಡುವಿನ ಪ್ರಯಾಣಿಕರಿಗೆ ಇದರಿಂದ ಬಹಳಷ್ಟು ನಿರಾಳತೆ ಸಿಕ್ಕಿದೆ.

ದಕ್ಷಿಣ ಪಶ್ಚಿಮ ರೈಲ್ವೆ ಪ್ರಕಟಿಸಿರುವ ಬುಲೆಟಿನ್‌ ಪ್ರಕಾರ, ಯಡಕುಮೇರಿ ಸಮೀಪ ಕಿ.ಮೀ. 73/700–500 ಭಾಗದಲ್ಲಿ ಮಣ್ಣು ತೆರವು ಹಾಗೂ ಹಳಿ ಮರುಸ್ಥಾಪನೆ ಕಾರ್ಯ ಪೂರ್ಣಗೊಂಡಿದೆ. ಆದರೆ ಸುರಕ್ಷತಾ ಕ್ರಮವಾಗಿ ಈ ಪ್ರದೇಶದಲ್ಲಿ ತಾತ್ಕಾಲಿಕವಾಗಿ ಗಂಟೆಗೆ 10 ಕಿ.ಮೀ. ವೇಗ ಮಿತಿ ವಿಧಿಸಲಾಗಿದೆ. ಹೀಗಾಗಿ ಕೆಲ ರೈಲುಗಳ ವೇಳಾಪಟ್ಟಿಯಲ್ಲಿ ಸಣ್ಣ ಪ್ರಮಾಣದ ಬದಲಾವಣೆ ಅಥವಾ ವಿಳಂಬ ಉಂಟಾಗುವ ಸಾಧ್ಯತೆ ಇದೆ ಎಂದು ರೈಲ್ವೆ ಮೂಲಗಳು ತಿಳಿಸಿವೆ.

ಕಳೆದ ಕೆಲ ದಿನಗಳಿಂದ ಸುರಿದ ಭಾರೀ ಮಳೆಯಿಂದ ಯಡಕುಮೇರಿ ಭಾಗದಲ್ಲಿ ಗುಡ್ಡ ಕುಸಿದು ರೈಲು ಹಳಿ ಮುಚ್ಚಲ್ಪಟ್ಟಿತ್ತು. ಇದರ ಪರಿಣಾಮವಾಗಿ ಮಂಗಳೂರು–ಬೆಂಗಳೂರು ಮಾರ್ಗದ ಹಲವು ಎಕ್ಸ್‌ಪ್ರೆಸ್ ರೈಲುಗಳು ರದ್ದಾಗಿದ್ದರೆ, ಕೆಲವು ರೈಲುಗಳನ್ನು ಪರ್ಯಾಯ ಮಾರ್ಗದ ಮೂಲಕ ಓಡಿಸಲಾಗಿತ್ತು. ಈಗ ಕಾಮಗಾರಿ ಪೂರ್ಣಗೊಂಡಿರುವುದರಿಂದ ಸಾಮಾನ್ಯ ರೈಲು ಸಂಚಾರ ಮತ್ತೆ ಆರಂಭವಾಗಿದೆ.

ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಫಾಲೋಮಾಡಲು ಇಲ್ಲಿ ಕ್ಲಿಕ್‌ ಮಾಡಿ

Train services on the Mangaluru–Bengaluru route have resumed after South Western Railway completed mud clearance and track restoration between Yedakumeri and Shiribagilu. The route had been disrupted by landslides triggered by heavy rainfall.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ರೋಗ ನಿಯಂತ್ರಣಕ್ಕೆ ಕೇಂದ್ರದ ಬೆಂಬಲ – ಕ್ಯಾ. ಚೌಟಗೆ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್ ಭರವಸೆ

ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…

8 hours ago

ಹವಾಮಾನ ವರದಿ | 23-08-2026 | ಆಗಸ್ಟ್ 25 ರವರೆಗೆ ಮಳೆ – ಕರಾವಳಿ-ಮಲೆನಾಡಿನಲ್ಲಿ ಉತ್ತಮ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…

13 hours ago

ಅಳಿವಿನಂಚಿನಲ್ಲಿದ್ದ ಪೆರಿಯಾರ್ ಹಸುವಿಗೆ ರಾಷ್ಟ್ರೀಯ ತಳಿ ಮಾನ್ಯತೆ – ಕೇರಳದ ಎರಡನೇ ದೇಶಿ ಗೋತಳಿ

ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…

14 hours ago

ಪಿಒಪಿ ಗಣಪತಿಗೆ ಬ್ರೇಕ್..? ಕರಾವಳಿಯ 90–95% ಪರಿಸರ ಸ್ನೇಹಿ ಮಾದರಿ ರಾಜ್ಯಕ್ಕೆ ಪಾಠ

ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಪರಿಸರ ಸ್ನೇಹಿ ಗಣಪತಿ ಮೂರ್ತಿಗಳನ್ನೇ ಪ್ರತಿಷ್ಠಾಪಿಸಿ ಗಣೇಶೋತ್ಸವ ಆಚರಿಸುವಂತೆ…

16 hours ago

ಪಶ್ಚಿಮ ಘಟ್ಟ ಸಂರಕ್ಷಣೆ ಹೆಸರಿನಲ್ಲಿ ಕೃಷಿಕರಿಗೆ ನಿರ್ಬಂಧ ಬೇಡ – ಕಸ್ತೂರಿ ರಂಗನ್ ವರದಿ ಸಂಪೂರ್ಣ ತಿರಸ್ಕರಿಸಲು ಆಗ್ರಹ

ಪಶ್ಚಿಮ ಘಟ್ಟ ಸಂರಕ್ಷಣೆಯ ಹೆಸರಿನಲ್ಲಿ ಕೃಷಿಕರ ಜೀವನೋಪಾಯಕ್ಕೆ ನಿರ್ಬಂಧ ಹೇರಬಾರದು, ಕಸ್ತೂರಿ ರಂಗನ್…

17 hours ago

ಮುಂಗಾರು ಬೇಗನೆ ವಿದಾಯ ಹೇಳುತ್ತಿದೆಯೇ..? ಸೆಪ್ಟೆಂಬರ್‌ನಲ್ಲಿ ಮಳೆ ಕಡಿಮೆಯಾಗುವ ಮುನ್ಸೂಚನೆ..?

ಸೆಪ್ಟೆಂಬರ್ 5–10ರ ನಂತರ ದೇಶದ ಹಲವು ಭಾಗಗಳಲ್ಲಿ ಮುಂಗಾರು ಮಳೆ ಗಣನೀಯವಾಗಿ ಕಡಿಮೆಯಾಗುವ…

1 day ago