Advertisement
Election MIRROR

ಕೃಷಿ ಹಾಗೂ ಗ್ರಾಮೀಣಾಭಿವೃದ್ಧಿಯ ಕನಸು ತೆರೆದಿರಿಸಿದ ಮಂಗಳೂರು ಬಿಜೆಪಿ ಅಭ್ಯರ್ಥಿ ಬ್ರಿಜೇಶ್‌ ಚೌಟ | ಅಡಿಕೆ ಹಳದಿ ಎಲೆರೋಗದ ಬಗ್ಗೆಯೂ ಅಧ್ಯಯನ |

Share

ಮಂಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ  ಕ್ಯಾ.ಬ್ರಿಜೇಶ್‌ ಚೌಟ ಅವರು ಸುಳ್ಯ ವಿಧಾನಸಭಾ ಕ್ಷೇತ್ರದಾದ್ಯಂತ ಓಡಾಟ ಆರಂಭಿಸಿದ್ದಾರೆ. ಈ ಸಂದರ್ಭ ಕೃಷಿ ಹಾಗೂ ಗ್ರಾಮೀಣಾಭಿವೃದ್ಧಿಯ ಕನಸನ್ನು ತೆರೆದಿರಿಸಿದ್ದಾರೆ.

ಸುಳ್ಯ ಕ್ಷೇತ್ರದ ಪ್ರವಾಸದ ಸಂದರ್ಭ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಮಂಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬ್ರಿಜೇಶ್‌ ಚೌಟ, ದ ಕ ಜಿಲ್ಲೆಯು ಕೃಷಿ ಆಧಾರಿತವಾದ ಜಿಲ್ಲೆ, ಕೃಷಿಯೂ ಇಲ್ಲಿ ಪ್ರಮುಖ ಕ್ಷೇತ್ರವಾಗಿದೆ. ಸುಳ್ಯದಲ್ಲಿ ಅಡಿಕೆ ಹಾಗೂ ರಬ್ಬರ್‌ ಬೆಳೆಗಾರರು ಹೆಚ್ಚಾಗಿದ್ದಾರೆ. ಹೀಗಾಗಿ ಈ ಕ್ಷೇತ್ರದ ಸಮಸ್ಯೆ ಬಗ್ಗೆ ಅಧ್ಯಯನ ಮಾಡಿ ಅಗತ್ಯ ಕ್ರಮಗಳನ್ನು ಕೈಗೊಳ್ಳುವುದಾಗಿ ಹೇಳಿದ್ದಾರೆ. ಅಡಿಕೆ ಹಳದಿ ಎಲೆರೋಗವು ಸಾಮಾಜಿಕ ಸಮಸ್ಯೆಯಾಗಿದೆ. ಈ ರೋಗದ ಬಗ್ಗೆ ಸಮಗ್ರ ಅಧ್ಯಯನ ನಡೆಸಿ ಅದಕ್ಕೆ ಸಂಪೂರ್ಣ ಪರಿಹಾರಕ್ಕಾಗಿ ಪ್ರಯತ್ನ ಮಾಡಲಾಗುವುದು. ಸಮಸ್ಯೆ ಸ್ಪಂದಿಸುವುದು ಒಂದು ಭಾಗವಾದರೆ, ಶಾಶ್ವತ ಪರಿಹಾರ ಇನ್ನೊಂದು ಭಾಗ.  ಇದಕ್ಕಾಗಿ ಅಧ್ಯಯನ ಕೇಂದ್ರ ಸ್ಥಾಪನೆ ಹಾಗೂ ಸೂಕ್ತ ಅನುದಾನ ಒದಗಿಸುವುದು ಕೂಡಾ ಇನ್ನೊಂದು ಭಾಗವಾಗಿದೆ ಎಂದರು.

ದಕ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಆದ್ಯತೆ ನೀಡಲಾಗುತ್ತದೆ. ಇದೊಂದು ವಿಶೇಷವಾದ ಜಿಲ್ಲೆಯಾಗಿದ್ದು ಜನರ ಆಕಾಂಕ್ಷೆಗೆ ಅನುಗುಣವಾಗಿ ಸಮಗ್ರ ಅಭಿವೃದ್ಧಿಯ ಚಿಂತನೆ ಇದೆ. ವಿಕಸಿತ ಭಾರತವಾಗಲು ಏನೆಲ್ಲಾ ಅಗತ್ಯ ಇದೆ, ಅದೆಲ್ಲಾ ಮಾಡಲಾಗುವುದು ಎಂದ  ಬ್ರಿಜೇಶ್‌ ಚೌಟ, ಸುಳ್ಯ ತಾಲೂಕು ಮೂಲಭೂತಸೌಲಭ್ಯಗಳ ಅಭಿವೃದ್ಧಿಗೆ ಅಗತ್ಯ ಕ್ರಮಗಳ ಬಗ್ಗೆ ಶಾಸಕರ ಜೊತೆ ಚರ್ಚಿಸಿ ಕ್ರಮಕೈಗೊಳ್ಳಲಾಗುತ್ತದೆ ಎಂದು ಹೇಳಿದರು.

Mangalore Constituency BJP candidate Brijesh Chowta has started campain across Sullia Assembly Constituency. On this occasion, he has opened the dream of agriculture and rural development.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

3,000 ವರ್ಷಗಳ ಹಿಂದೆಯೇ ರೈತರು ಹವಾಮಾನ ಬದಲಾವಣೆಗೆ ಹೊಂದಿಕೊಂಡಿದ್ದರು..! ಬಿಹಾರದ ಪುರಾತನ ಬೀಜಗಳು ಹೇಳಿದ ಕೃಷಿ ಪಾಠ

ಬಿಹಾರದ ಯುರೆನ್‌ನಲ್ಲಿ ಪತ್ತೆಯಾದ 5 ಲಕ್ಷಕ್ಕೂ ಹೆಚ್ಚು ಸುಟ್ಟ ಬೀಜಗಳ ಅಧ್ಯಯನವು ಭಾರತದ…

1 hour ago

ಶ್ರೀಕೃಷ್ಣನನ್ನು ದೇವನಾಗಿ ಮಾತ್ರವಲ್ಲ, ಗುರುವಿನ ರೂಪದಲ್ಲೂ ಕಾಣುವ ದೃಷ್ಟಿ

ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…

7 hours ago

ಹವಾಮಾನ ವರದಿ | 04-09-2026 | ಮುಂಗಾರು ದುರ್ಬಲ… ಆದರೂ ಕರ್ನಾಟಕದಲ್ಲಿ ಗುಡುಗು ಮಳೆ ಮುಂದುವರಿಯುವ ಸಾಧ್ಯತೆ!

ಮುಂಗಾರು ದುರ್ಬಲಗೊಂಡಿದ್ದರೂ ಸ್ಥಳೀಯ ಮೋಡಗಳ ಬೆಳವಣಿಗೆಯಿಂದ ಮಲೆನಾಡು ಹಾಗೂ ಒಳನಾಡಿನಲ್ಲಿ ಗುಡುಗು ಸಹಿತ…

7 hours ago

ಕೃಷಿ ಸಂಕಷ್ಟ ಎಂದರೆ ರೈತನ ಸಾಲ ಮಾತ್ರವಲ್ಲ – ಕೃಷಿ ಕಾರ್ಮಿಕರ ರಕ್ಷಣೆಯೂ ಅಗತ್ಯ

2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…

15 hours ago

ಹಂತ ಹಂತವಾಗಿ 16 ಸಾವಿರ ಶಿಕ್ಷಕರ ನೇಮಕ – ಅನುದಾನಿತ ಶಾಲೆಗಳಿಗೂ 6 ಸಾವಿರ ಹುದ್ದೆ – ಸಚಿವ ಮಧು ಬಂಗಾರಪ್ಪ

ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…

15 hours ago

ಹವಾಮಾನ ವರದಿ | 03-09-2026 | ಕರಾವಳಿ–ಮಲೆನಾಡಿನಲ್ಲಿ ಮತ್ತೆ ಮಳೆಯ ಸಾಧ್ಯತೆ…?

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…

1 day ago