Advertisement
Election MIRROR

ಕೃಷಿ ಹಾಗೂ ಗ್ರಾಮೀಣಾಭಿವೃದ್ಧಿಯ ಕನಸು ತೆರೆದಿರಿಸಿದ ಮಂಗಳೂರು ಬಿಜೆಪಿ ಅಭ್ಯರ್ಥಿ ಬ್ರಿಜೇಶ್‌ ಚೌಟ | ಅಡಿಕೆ ಹಳದಿ ಎಲೆರೋಗದ ಬಗ್ಗೆಯೂ ಅಧ್ಯಯನ |

Share

ಮಂಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ  ಕ್ಯಾ.ಬ್ರಿಜೇಶ್‌ ಚೌಟ ಅವರು ಸುಳ್ಯ ವಿಧಾನಸಭಾ ಕ್ಷೇತ್ರದಾದ್ಯಂತ ಓಡಾಟ ಆರಂಭಿಸಿದ್ದಾರೆ. ಈ ಸಂದರ್ಭ ಕೃಷಿ ಹಾಗೂ ಗ್ರಾಮೀಣಾಭಿವೃದ್ಧಿಯ ಕನಸನ್ನು ತೆರೆದಿರಿಸಿದ್ದಾರೆ.

Advertisement
Advertisement

ಸುಳ್ಯ ಕ್ಷೇತ್ರದ ಪ್ರವಾಸದ ಸಂದರ್ಭ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಮಂಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬ್ರಿಜೇಶ್‌ ಚೌಟ, ದ ಕ ಜಿಲ್ಲೆಯು ಕೃಷಿ ಆಧಾರಿತವಾದ ಜಿಲ್ಲೆ, ಕೃಷಿಯೂ ಇಲ್ಲಿ ಪ್ರಮುಖ ಕ್ಷೇತ್ರವಾಗಿದೆ. ಸುಳ್ಯದಲ್ಲಿ ಅಡಿಕೆ ಹಾಗೂ ರಬ್ಬರ್‌ ಬೆಳೆಗಾರರು ಹೆಚ್ಚಾಗಿದ್ದಾರೆ. ಹೀಗಾಗಿ ಈ ಕ್ಷೇತ್ರದ ಸಮಸ್ಯೆ ಬಗ್ಗೆ ಅಧ್ಯಯನ ಮಾಡಿ ಅಗತ್ಯ ಕ್ರಮಗಳನ್ನು ಕೈಗೊಳ್ಳುವುದಾಗಿ ಹೇಳಿದ್ದಾರೆ. ಅಡಿಕೆ ಹಳದಿ ಎಲೆರೋಗವು ಸಾಮಾಜಿಕ ಸಮಸ್ಯೆಯಾಗಿದೆ. ಈ ರೋಗದ ಬಗ್ಗೆ ಸಮಗ್ರ ಅಧ್ಯಯನ ನಡೆಸಿ ಅದಕ್ಕೆ ಸಂಪೂರ್ಣ ಪರಿಹಾರಕ್ಕಾಗಿ ಪ್ರಯತ್ನ ಮಾಡಲಾಗುವುದು. ಸಮಸ್ಯೆ ಸ್ಪಂದಿಸುವುದು ಒಂದು ಭಾಗವಾದರೆ, ಶಾಶ್ವತ ಪರಿಹಾರ ಇನ್ನೊಂದು ಭಾಗ.  ಇದಕ್ಕಾಗಿ ಅಧ್ಯಯನ ಕೇಂದ್ರ ಸ್ಥಾಪನೆ ಹಾಗೂ ಸೂಕ್ತ ಅನುದಾನ ಒದಗಿಸುವುದು ಕೂಡಾ ಇನ್ನೊಂದು ಭಾಗವಾಗಿದೆ ಎಂದರು.

Advertisement

ದಕ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಆದ್ಯತೆ ನೀಡಲಾಗುತ್ತದೆ. ಇದೊಂದು ವಿಶೇಷವಾದ ಜಿಲ್ಲೆಯಾಗಿದ್ದು ಜನರ ಆಕಾಂಕ್ಷೆಗೆ ಅನುಗುಣವಾಗಿ ಸಮಗ್ರ ಅಭಿವೃದ್ಧಿಯ ಚಿಂತನೆ ಇದೆ. ವಿಕಸಿತ ಭಾರತವಾಗಲು ಏನೆಲ್ಲಾ ಅಗತ್ಯ ಇದೆ, ಅದೆಲ್ಲಾ ಮಾಡಲಾಗುವುದು ಎಂದ  ಬ್ರಿಜೇಶ್‌ ಚೌಟ, ಸುಳ್ಯ ತಾಲೂಕು ಮೂಲಭೂತಸೌಲಭ್ಯಗಳ ಅಭಿವೃದ್ಧಿಗೆ ಅಗತ್ಯ ಕ್ರಮಗಳ ಬಗ್ಗೆ ಶಾಸಕರ ಜೊತೆ ಚರ್ಚಿಸಿ ಕ್ರಮಕೈಗೊಳ್ಳಲಾಗುತ್ತದೆ ಎಂದು ಹೇಳಿದರು.

Advertisement

Mangalore Constituency BJP candidate Brijesh Chowta has started campain across Sullia Assembly Constituency. On this occasion, he has opened the dream of agriculture and rural development.

 

Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

Karnataka Weather | 15-05-2024 | ಸದ್ಯ ಮಳೆ ಇದೆ | ಮೇ.21 ರಿಂದ ಮಳೆ ತೀವ್ರತೆ ಕಡಿಮೆ | ಅವಧಿಗೆ ಮುಂಗಾರು ಪ್ರಾರಂಭವಾದೀತೇ..?

ಈಗಿನ ಪ್ರಕಾರ ಮೇ 21 ರಿಂದ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿದೆ. ಮುಂಗಾರು…

2 hours ago

ಶಂಕರರ ಆಕ್ರೋಶಕ್ಕೆ ಹೊರಹೊಮ್ಮಿದ ಭಜಗೋವಿಂದಂ

ಸನಾತನ ಭಾರತದ ಆಧ್ಯಾತ್ಮಕ ಸಾಧನೆಯ ಪುನರುತ್ಥಾನದ ಅಧ್ವರ್ಯುಗಳಲ್ಲಿ ಶಂಕರಾಚಾರ್ಯರು ಮೊದಲಿಗರು. ಹಾಗಾಗಿಯೇ ಅವರು…

2 hours ago

ಶಿಶಿಲದಲ್ಲಿರುವ ಈ ದೈವದ ವಿಶೇಷತೆ..! | ಜೋಡಿ ದೈವಗಳಿಗೆ ಜೀವಂತ ಕೋಳಿ ಅರ್ಪಣೆ |

ಗ್ರಾಮೀಣ ಭಾಗದ ನಂಬಿಕೆಗಳು ಮಾನಸಿಕವಾಗಿ ಹೆಚ್ಚು ಶಕ್ತಿ ನೀಡುತ್ತವೆ. ಅಂತಹದೊಂದು ನಂಬಿಕೆ ಶಿಶಿಲದಲ್ಲಿ…

16 hours ago

ಕೋವಿ ಡಿಪಾಸಿಟ್‌ ಪ್ರಕರಣ | ಮಹತ್ವದ ತೀರ್ಪು | ಚುನಾವಣಾ ಕಾಲದಲ್ಲಿ ಕೋವಿ ಡಿಪಾಸಿಟ್‌ಗೆ ಪರಿಹಾರ |

ಚುನಾವಣೆಯ ಸಮಯದಲ್ಲಿ ಕೋವಿ ಠೇವಣಾತಿಯ ಬಗ್ಗೆ ಕೃಷಿಕರ ಸಂಕಷ್ಟಕ್ಕೆ ನ್ಯಾಯಾಲಯವು ಪರಿಹಾರ ನೀಡಿದೆ.

17 hours ago

ಬಹುಬೆಳೆ ಬೆಳೆದು ಉತ್ತಮ ಫಸಲು ಪಡೆದ ರೈತ | ಕೃಷಿಗೆ ರೈತ ಅನುಸರಿಸಿದ ಕ್ರಮಗಳಾವುವು..?

ಮಿಶ್ರ ಬೆಳೆ, ಪರ್ಯಾಯ ಬೆಳೆ, ಬಹು ಬೆಳೆ(Mixed cropping, alternating cropping, multiple…

1 day ago