ಮಳೆಗಾಲ ಆರಂಭ- ಜೂನ್‌ 1ರಿಂದ ರಸ್ತೆ, ಗುಡ್ಡ, ಮಣ್ಣು ಅಗೆತ ಕಾಮಗಾರಿಗೆ ನಿರ್ಬಂಧ – ನಗರಪಾಲಿಕೆ ಎಚ್ಚರಿಕೆ

May 23, 2026
6:45 AM
ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್‌ 1ರಿಂದ ಸೆಪ್ಟೆಂಬರ್‌ 30ರವರೆಗೆ ರಸ್ತೆ, ಗುಡ್ಡ ಹಾಗೂ ಮಣ್ಣು ಅಗೆತ ಕಾಮಗಾರಿಗಳಿಗೆ ನಗರಪಾಲಿಕೆ ನಿರ್ಬಂಧ ವಿಧಿಸಿದೆ. ಮಣ್ಣು ಸಾಗಾಟಕ್ಕೂ ಸಂಪೂರ್ಣ ನಿಷೇಧ ಹೇರಲಾಗಿದೆ.

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಮಳೆಗಾಲ ಆರಂಭವಾಗುತ್ತಿರುವ ಹಿನ್ನೆಲೆ ಜೂನ್‌ 1ರಿಂದ ಸೆಪ್ಟೆಂಬರ್‌ 30ರವರೆಗೆ ರಸ್ತೆ ಅಗೆತ, ಗುಡ್ಡ ಅಗೆತ ಹಾಗೂ ಮಣ್ಣು ಅಗೆತ ಕಾಮಗಾರಿಗಳನ್ನು ಕೈಗೊಳ್ಳದಂತೆ ಸೂಚನೆ ನೀಡಲಾಗಿದೆ.

ನಗರದಲ್ಲಿ ಈಗಾಗಲೇ ಮಳೆಯ ಪ್ರಮಾಣ ಹೆಚ್ಚಾಗುತ್ತಿದ್ದು, ಮುಂದಿನ ದಿನಗಳಲ್ಲಿ ಮುಂಗಾರು ಮತ್ತಷ್ಟು ತೀವ್ರಗೊಳ್ಳುವ ಸಾಧ್ಯತೆ ಇರುವುದರಿಂದ ಮಣ್ಣು ಕುಸಿತ, ಗುಡ್ಡ ಕುಸಿತ ಹಾಗೂ ಸಾರ್ವಜನಿಕ ಆಸ್ತಿ-ಪಾಸ್ತಿ ಮತ್ತು ಪ್ರಾಣ ಹಾನಿ ಸಂಭವಿಸದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಈ ಆದೇಶ ಜಾರಿಗೊಳಿಸಲಾಗಿದೆ.

ಈ ಅವಧಿಯಲ್ಲಿ ಮಣ್ಣು ಸಾಗಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಮಹಾನಗರಪಾಲಿಕೆ ತಿಳಿಸಿದೆ.

ಈಗಾಗಲೇ ಪರವಾನಿಗೆ ಪಡೆದು ಕಟ್ಟಡ ನಿರ್ಮಾಣ ಕಾಮಗಾರಿ ಆರಂಭಿಸಿರುವವರು ಕಾಮಗಾರಿ ಪ್ರದೇಶದಲ್ಲಿ ಅಕ್ಕಪಕ್ಕದ ಆಸ್ತಿಗಳಿಗೆ ಹಾನಿಯಾಗದಂತೆ ಅಗತ್ಯ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕು. ವಿಶೇಷವಾಗಿ ಬ್ಯಾಕ್‌ ಫಿಲ್ಲಿಂಗ್‌ ಕಾಮಗಾರಿಯನ್ನು ಕಡ್ಡಾಯವಾಗಿ ಸಮರ್ಪಕವಾಗಿ ನಿರ್ವಹಿಸಿ, ಮಳೆಗಾಲದ ಅಪಾಯಗಳನ್ನು ತಡೆಯಲು ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸಬೇಕು ಎಂದು ಸೂಚಿಸಲಾಗಿದೆ.

ಯಾವುದೇ ಅನಾಹುತ ಸಂಭವಿಸಿ ಆಸ್ತಿಪಾಸ್ತಿ ಹಾನಿ ಅಥವಾ ಪ್ರಾಣಹಾನಿ ಉಂಟಾದಲ್ಲಿ ಕಟ್ಟಡ ಮಾಲೀಕರು ಹಾಗೂ ಸಂಬಂಧಪಟ್ಟ ಇಂಜಿನಿಯರ್‌ರನ್ನು ನೇರ ಹೊಣೆಗಾರರನ್ನಾಗಿ ಪರಿಗಣಿಸಲಾಗುವುದು ಎಂದು ಪಾಲಿಕೆ ಆಯುಕ್ತರು ಪ್ರಕಟಣೆಯಲ್ಲಿ ಎಚ್ಚರಿಕೆ ನೀಡಿದ್ದಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

Mangaluru City Corporation has banned road excavation, hill cutting, soil excavation, and soil transportation from June 1 to September 30 due to the onset of monsoon. The move aims to prevent landslides, property damage, and loss of life during heavy rains.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್

the rural mirror news

ಇದನ್ನೂ ಓದಿ

ಕೃಷಿಗೆ ಸಾಲ ಹೆಚ್ಚಿಸಿ – ಅಲ್ಪಾವಧಿ ಮಾತ್ರವಲ್ಲ, ದೀರ್ಘಾವಧಿ ಸಾಲವೂ ಬೇಕು – ಬ್ಯಾಂಕ್‌ಗಳಿಗೆ ನಿರ್ಮಲಾ ಸೀತಾರಾಮನ್ ಸೂಚನೆ
September 2, 2026
7:49 AM
by: ದ ರೂರಲ್ ಮಿರರ್.ಕಾಂ
E20 ಎಫೆಕ್ಟ್‌ – ಪಶು ಆಹಾರದ ಬೆಲೆ ಏರಿಕೆ, ಹೈನುಗಾರರ ಲೆಕ್ಕಾಚಾರವೇ ಬದಲು..!
September 1, 2026
10:37 PM
by: ದ ರೂರಲ್ ಮಿರರ್.ಕಾಂ
ಬರದ ನಡುವೆ ರೈತರ ಜಮೀನಿಗೆ ಸಿಎಂ ಭೇಟಿ – ಬೆಳೆ ಹಾನಿ ಪರಿಶೀಲನೆ
September 1, 2026
3:16 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 01-09-2026 | ಯಾವ ಜಿಲ್ಲೆಗಳಲ್ಲಿ ಇನ್ನೂ ಮಳೆಯ ಸಾಧ್ಯತೆ…?
September 1, 2026
3:10 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror