Advertisement
ಮಾಹಿತಿ

ಸ್ವಾವಲಂಬನೆಯ ಸಂಭ್ರಮ | ಮಂಗಳೂರಲ್ಲಿ ರಾಷ್ಟ್ರಮಟ್ಟದ ಮಹಿಳಾ ಉತ್ಪನ್ನಗಳ ಬೃಹತ್ ಮೇಳ

Share

ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ರಾಜ್ಯ ಜೀವನೋಪಾಯ ಅಭಿಯಾನ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಮಹಾನಗರ ಪಾಲಿಕೆಯ ಸಹಭಾಗಿತ್ವದಲ್ಲಿ ಮಂಗಳೂರು ನಗರದಲ್ಲಿ ಫೆಬ್ರವರಿ 20 ರಿಂದ 28 ರವರೆಗೆ ಕರಾವಳಿ ಮೈದಾನದಲ್ಲಿ ರಾಷ್ಟ್ರಮಟ್ಟದ ಮಹಿಳಾ ಸ್ವ-ಸಹಾಯ ಗುಂಪುಗಳ ಉತ್ಪನ್ನಗಳ ಬೃಹತ್ ವಸ್ತುಪ್ರದರ್ಶನ ಹಾಗೂ ಮಾರಾಟ ಮೇಳ ‘ನಮ್ಮ ಸರಸ್ ಮೇಳ–2026’ ಆಯೋಜಿಸಲಾಗುತ್ತಿದೆ.

ಸಾರ್ವಜನಿಕರಿಗೆ ಉಚಿತ ಪ್ರವೇಶ ಕಲ್ಪಿಸಲಾಗಿದ್ದು, ಪ್ರತಿದಿನ ಬೆಳಿಗ್ಗೆ 10.30ರಿಂದ ರಾತ್ರಿ 9.30ರವರೆಗೆ ಮೇಳ ವೀಕ್ಷಣೆ ಮತ್ತು ಖರೀದಿಗೆ ಅವಕಾಶ ನೀಡಲಾಗಿದೆ.

ರಾಜ್ಯ ಜೀವನೋಪಾಯ ಅಭಿಯಾನದಡಿ ಗ್ರಾಮೀಣ ಪ್ರದೇಶಗಳಲ್ಲಿ 3.05 ಲಕ್ಷ ಸ್ವ-ಸಹಾಯ ಗುಂಪುಗಳ ಮೂಲಕ 32 ಲಕ್ಷ ಕುಟುಂಬಗಳು, ನಗರ ಜೀವನೋಪಾಯ ಅಭಿಯಾನದಡಿ 39 ಸಾವಿರ ಸ್ವ-ಸಹಾಯ ಗುಂಪುಗಳ ಮೂಲಕ 3.90 ಲಕ್ಷ ಕುಟುಂಬಗಳು ಸಂಘಟಿಸಲ್ಪಟ್ಟಿವೆ. ಸ್ವ-ಸಹಾಯ ಗುಂಪಿನ ಮಹಿಳೆಯರು ಸ್ವಾವಲಂಬಿ ಜೀವನ ನಡೆಸಲು ಅಗತ್ಯವಾದ ಕೌಶಲ್ಯಾಭಿವೃದ್ಧಿ ತರಬೇತಿ, ಉತ್ಪನ್ನಗಳ ಬ್ರ್ಯಾಂಡಿಂಗ್, ಪ್ಯಾಕಿಂಗ್, ಮೌಲ್ಯವರ್ಧನೆ ಹಾಗೂ ಮಾರುಕಟ್ಟೆ ವ್ಯವಸ್ಥೆಗಳನ್ನು ಒದಗಿಸಲಾಗುತ್ತಿದೆ.

ಸ್ವ-ಸಹಾಯ ಗುಂಪುಗಳ ಉತ್ಪನ್ನಗಳಿಗೆ ಮಾರುಕಟ್ಟೆ ಒದಗಿಸುವ ಉದ್ದೇಶದಿಂದ ಹಳ್ಳಿಸಂತೆ, ತಾಲ್ಲೂಕು ಮಟ್ಟದ ಮಾಸಿಕ ಸಂತೆ, ಜಿಲ್ಲಾ ವಸ್ತುಪ್ರದರ್ಶನಗಳ ಜೊತೆಗೆ ಇತರೆ ರಾಜ್ಯ ಹಾಗೂ ರಾಷ್ಟ್ರಮಟ್ಟದ ಮೇಳಗಳಲ್ಲಿ ಮಹಿಳೆಯರಿಗೆ ಭಾಗವಹಿಸುವ ಅವಕಾಶ ಕಲ್ಪಿಸಲಾಗುತ್ತಿದೆ. ಈ ಬಾರಿ ನಡೆಯುವ ‘ನಮ್ಮ ಸರಸ್ ಮೇಳ–2026’ನಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳು ಹಾಗೂ ಹೊರರಾಜ್ಯಗಳಿಂದ ಸ್ವ-ಸಹಾಯ ಗುಂಪಿನ ಮಹಿಳೆಯರು ತಮ್ಮ ಜಿಲ್ಲೆಯ ವಿಶಿಷ್ಟ ಉತ್ಪನ್ನಗಳೊಂದಿಗೆ ಭಾಗವಹಿಸಲಿದ್ದಾರೆ.

ಮೇಳದಲ್ಲಿ 100ಕ್ಕೂ ಹೆಚ್ಚು ಮಳಿಗೆಗಳು ಸ್ಥಾಪನೆಯಾಗಲಿದ್ದು, ಗ್ರಾಮೀಣ ಹಾಗೂ ನಗರ ಸ್ವ-ಸಹಾಯ ಗುಂಪಿನ ಮಹಿಳೆಯರು ತಯಾರಿಸಿದ ಚನ್ನಪಟ್ಟಣದ ಮರದ ಗೊಂಬೆಗಳು, ಕಿನ್ನಾಳ ಆಟಿಕೆಗಳು, ಮೊಳಕಾಲ್ಮೂರು ಮತ್ತು ಇಳಕಲ್ ಸೀರೆಗಳು, ರೇಷ್ಮೆ ಸೀರೆಗಳು, ನಾರಿನ ಬ್ಯಾಗ್‌ಗಳು, ಗೃಹಾಲಂಕಾರಿಕ ವಸ್ತುಗಳು, ಮಸಾಲೆ ಪದಾರ್ಥಗಳು, ಸಿರಿಧಾನ್ಯ ಉತ್ಪನ್ನಗಳು, ಮೌಲ್ಯವರ್ಧಿತ ಕರಾವಳಿ ಉತ್ಪನ್ನಗಳು, ಖಾದಿ, ಆಯುರ್ವೇದ, ಪಾರಂಪರಿಕ ಹಾಗೂ ಗೃಹೋಪಯೋಗಿ ವಸ್ತುಗಳು, ನವೀನ ವಿನ್ಯಾಸದ ಆಭರಣಗಳು ಮತ್ತು ಆಹಾರ ಉತ್ಪನ್ನಗಳು ಕೈಗೆಟುಕುವ ಬೆಲೆಯಲ್ಲಿ ಲಭ್ಯವಾಗಲಿವೆ.

ಸರ್ಕಾರದ ‘ಅಕ್ಕ-ಕೆಫೆ’ ಯೋಜನೆಯಡಿ, ಮೇಳದ ಆವರಣದಲ್ಲಿ ವಿಶೇಷವಾಗಿ ‘ಅಕ್ಕ ಫುಡ್ ಕೋರ್ಟ್’ ಆಯೋಜಿಸಲಾಗಿದ್ದು, ಇಲ್ಲಿ ಗಿರಮಿಟ್, ಚುರುಮರಿ ಮಂಡಕ್ಕಿ, ಜೋಳದ ರೊಟ್ಟಿ, ಹೋಳಿಗೆ, ಬೆಳಗಾವಿ ಕುಂದಾ, ಧಾರವಾಡ ಪೇಡ, ಮೈಸೂರ್‌ಪಾಕ್, ನೀರ್‌ದೋಸೆ, ಖಾರಬಾತ್, ಕಡಬು ಸೇರಿದಂತೆ ವಿವಿಧ ಸಸ್ಯಾಹಾರ ಮತ್ತು ಮಾಂಸಾಹಾರ ತಿನಿಸುಗಳು, ಬಿರಿಯಾನಿ, ಫ್ರೆಶ್ ಜ್ಯೂಸ್ ಹಾಗೂ ಹೊರರಾಜ್ಯದ ತಿನಿಸುಗಳು ಸ್ಥಳದಲ್ಲೇ ತಯಾರಾಗಿ ಲಭ್ಯವಾಗಲಿವೆ.

ಮೇಳದ ಆವರಣದಲ್ಲಿ ಪ್ರತಿದಿನ ಸಂಜೆ 6.30ರಿಂದ 9ರವರೆಗೆ ಕನ್ನಡ ಮತ್ತು ಸಂಸ್ಕೃತಿಕ ಇಲಾಖೆಯ ಸಹಯೋಗದಲ್ಲಿ ಸಂಗೀತ, ನೃತ್ಯ ಹಾಗೂ ರಾಜ್ಯದ ಖ್ಯಾತ ಕಲಾವಿದರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಜೊತೆಗೆ, ಮಹಿಳೆಯರು ಉದ್ಯಮ ಚಟುವಟಿಕೆ ಆರಂಭಿಸಲು ಸಹಕಾರಿಯಾಗುವ ತರಬೇತಿ ಹಾಗೂ ಉಪನ್ಯಾಸಗಳು ಪ್ರತಿದಿನ ಬೆಳಿಗ್ಗೆ 11.30ರಿಂದ 1.30ರವರೆಗೆ ಆಯೋಜಿಸಲಾಗಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ಮಂಗಳೂರಿನಲ್ಲಿ ಮೊದಲ ಬಾರಿಗೆ ಈ ಮಟ್ಟದಲ್ಲಿ ಆಯೋಜಿಸಲಾಗುತ್ತಿರುವ ‘ನಮ್ಮ ಸರಸ್ ಮೇಳ–2026’ ಮೂಲಕ ನಗರ ಹಾಗೂ ಗ್ರಾಮೀಣ ಮಹಿಳಾ ಸ್ವ-ಸಹಾಯ ಗುಂಪುಗಳ ಉತ್ಪನ್ನಗಳಿಗೆ ನೇರ ಮಾರುಕಟ್ಟೆ ಸಿಗಲಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಮೇಳಕ್ಕೆ ಭೇಟಿ ನೀಡಿ ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ಕೈಜೋಡಿಸಬೇಕು ಎಂದು ಪ್ರಕಟಣೆಯಲ್ಲಿ ಮನವಿ ಮಾಡಲಾಗಿದೆ.

ಇದನ್ನೂ ಓದಿ…

ನಿಮ್ಮ ಅಭಿಪ್ರಾಯಗಳಿಗೆ…

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ಕಾಡಾನೆ ನಿಯಂತ್ರಣಕ್ಕೆ ರಾಜ್ಯದ ಕ್ರಮ : ಎಲಿಫೆಂಟ್ ಟಾಸ್ಕ್ ಫೋರ್ಸ್ ರಚನೆ

ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…

2 hours ago

ಕಾಡಾನೆ ಹಾವಳಿ ತಡೆಗೆ ಸರ್ಕಾರದ ಕ್ರಮ : ಕೊಪ್ಪ ಅರಣ್ಯ ವಿಭಾಗಕ್ಕೆ ₹12.77 ಕೋಟಿ, ರೈಲ್ವೆ ಬ್ಯಾರಿಕೇಡ್ ಅಳವಡಿಕೆ

ಕೊಪ್ಪ ಅರಣ್ಯ ವಿಭಾಗದಲ್ಲಿ ಕಾಡಾನೆಗಳು ನಾಡಿಗೆ ಪ್ರವೇಶಿಸದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ಅಳವಡಿಕೆಗೆ…

2 hours ago

ಭವಿಷ್ಯದ ಬಾಳೆ ಬೆಳೆ ಉಳಿಸುವ ಗುಟ್ಟು ಕಾಡು ಬಾಳೆ ಜಾತಿಯಲ್ಲಿ!

ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…

13 hours ago

ಕೃಷಿ ಮಾರುಕಟ್ಟೆ ವರದಿ | ಅಡಿಕೆ ಮಾರುಕಟ್ಟೆಯಲ್ಲಿ ಮಿಶ್ರ ಫಲ…!

ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…

24 hours ago

ನೈಸರ್ಗಿಕ ಕೃಷಿಯಿಂದ ರೈತರ ಆದಾಯ ಹೆಚ್ಚಳ

ಅಸ್ಸಾಂನಲ್ಲಿ ಐಸಿಎಆರ್–ಐಎಆರ್‌ಐ ಸಂಸ್ಥೆ “ನೈಸರ್ಗಿಕ ಕೃಷಿ” ವಿಷಯದಡಿ ಕಿಸಾನ್ ಮೇಳ 2026 ಆಯೋಜಿಸಿತು.…

1 day ago

ಭಾರತದಲ್ಲಿ ಮಳೆಗಾಲದ ತೀವ್ರತೆ ಹೆಚ್ಚಳ | ತಾಪಮಾನ ಏರಿಕೆಯಿಂದ ‘ಸೂಪರ್ ಚಾರ್ಜ್’ ಆಗುತ್ತಿರುವ ಮಾರುತ

ಜಾಗತಿಕ ತಾಪಮಾನ ಏರಿಕೆಯಿಂದ ಭಾರತದಲ್ಲಿ ಮಾರುತ ಮಳೆಯ ತೀವ್ರತೆ ಹೆಚ್ಚುತ್ತಿರುವುದು ಹೊಸ ಅಧ್ಯಯನದಲ್ಲಿ…

1 day ago