ಮಂಗಳೂರಿನಲ್ಲಿ ರಾಷ್ಟ್ರೀಯ ಕಿರಿಯರ ಚೆಸ್ ಚಾಂಪಿಯನ್‌ಶಿಪ್‌ಗೆ ತೆರೆ – ಮಣಿ ಸರ್ಬರ್‌ತೋ ಚಾಂಪಿಯನ್

August 8, 2026
8:40 PM
ಮಂಗಳೂರಿನಲ್ಲಿ ನಡೆದ ರಾಷ್ಟ್ರೀಯ 11 ವರ್ಷದೊಳಗಿನ ಮುಕ್ತ ಹಾಗೂ ಬಾಲಕಿಯರ ಚೆಸ್ ಚಾಂಪಿಯನ್‌ಶಿಪ್–2026ಕ್ಕೆ ತೆರೆ ಬಿದ್ದಿದ್ದು, ಪಶ್ಚಿಮ ಬಂಗಾಳದ ಎಫ್‌ಎಂ ಮಣಿ ಸರ್ಬರ್‌ತೋ 10.5 ಅಂಕಗಳೊಂದಿಗೆ ಮುಕ್ತ ವಿಭಾಗದ ಚಾಂಪಿಯನ್ ಆಗಿದ್ದಾರೆ. ದೇಶದ 28 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಂದ 644 ಸ್ಪರ್ಧಾಳುಗಳು ಚಾಂಪಿಯನ್‌ಶಿಪ್‌ನಲ್ಲಿ ಭಾಗವಹಿಸಿದ್ದರು.

ಮಂಗಳೂರಿನಲ್ಲಿ ನಡೆದ ರಾಷ್ಟ್ರೀಯ 11 ವರ್ಷದೊಳಗಿನ ಮುಕ್ತ ಹಾಗೂ ಬಾಲಕಿಯರ ಚೆಸ್ ಚಾಂಪಿಯನ್‌ಶಿಪ್–2026ಕ್ಕೆ ಸಮಾರೋಪಗೊಂಡಿದ್ದು, ಮುಕ್ತ ವಿಭಾಗದಲ್ಲಿ ಪಶ್ಚಿಮ ಬಂಗಾಳದ FM ಮಣಿ ಸರ್ಬರ್‌ತೋ ಅವರು 11 ಸುತ್ತಿನಲ್ಲಿ 10.5 ಅಂಕ ಗಳಿಸಿ ಚಾಂಪಿಯನ್ ಆಗಿದ್ದಾರೆ.

ದಕ್ಷಿಣ ಕನ್ನಡ ಚೆಸ್ ಅಸೋಸಿಯೇಷನ್‌ ವತಿಯಿಂದ ಮಂಗಳೂರಿನ ಉರ್ವ ಒಳಾಂಗಣ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಈ ರಾಷ್ಟ್ರೀಯ ಮಟ್ಟದ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ ದೇಶದ 28 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಂದ ಒಟ್ಟು 644 ಸ್ಪರ್ಧಾಳುಗಳು ಭಾಗವಹಿಸಿದ್ದರು.

ಮುಕ್ತ ವಿಭಾಗದಲ್ಲಿ ಮಣಿ ಸರ್ಬರ್‌ತೋ ಮೇಲುಗೈ : ಮುಕ್ತ ವಿಭಾಗದಲ್ಲಿ ಪಶ್ಚಿಮ ಬಂಗಾಳದ FM ಮಣಿ ಸರ್ಬರ್‌ತೋ ಅವರು 11 ಸುತ್ತುಗಳಲ್ಲಿ 10.5 ಅಂಕ ಗಳಿಸಿ ಅಗ್ರಸ್ಥಾನ ಪಡೆದರು.

Mani Sarbarto

ಒಡಿಶಾದ CM ಸಾತ್ವಿಕ್ ಸ್ವಯಿನ್ ಅವರು 9.5 ಅಂಕಗಳೊಂದಿಗೆ ದ್ವಿತೀಯ ಸ್ಥಾನ ಪಡೆದರೆ, ಮಹಾರಾಷ್ಟ್ರದ FM ಅದ್ವಿತ್ ಅಮಿತ್ ಅಗರ್ವಾಲ್ 9 ಅಂಕಗಳೊಂದಿಗೆ ತೃತೀಯ ಸ್ಥಾನ ಗಳಿಸಿದರು.

ಮಹಾರಾಷ್ಟ್ರದ ಪರ್ವ ಎಚ್. ಹಕನಿ 9 ಅಂಕಗಳೊಂದಿಗೆ ನಾಲ್ಕನೇ ಸ್ಥಾನ ಪಡೆದರೆ, ಕರ್ನಾಟಕದ ಸ್ರಗ್ವಿಧ ಎಸ್. 8.5 ಅಂಕ ಗಳಿಸಿ ಐದನೇ ಸ್ಥಾನ ಪಡೆದರು.

ಪ್ರಮುಖ ಫಲಿತಾಂಶ

ಸ್ಥಾನ ಸ್ಪರ್ಧಾಳುಗಳು ರಾಜ್ಯ ಅಂಕ
1 FM  ಮಣಿ ಸರ್ಬರ್‌ತೋ ಪಶ್ಚಿಮ ಬಂಗಾಳ 10.5
2 CM ಸಾತ್ವಿಕ್ ಸ್ವಯಿನ್ ಒಡಿಶಾ 9.5
3 FM ಅದ್ವಿತ್ ಅಮಿತ್ ಅಗರ್ವಾಲ್ ಮಹಾರಾಷ್ಟ್ರ 9
4 ಪರ್ವ ಎಚ್. ಹಕನಿ ಮಹಾರಾಷ್ಟ್ರ 9
5 ಸ್ರಗ್ವಿಧ ಎಸ್. ಕರ್ನಾಟಕ 8.5

ಬಾಲಕಿಯರ ವಿಭಾಗದಲ್ಲಿ ಕೇರಳದ WCM ದಿವಿ ಬಿಜೇಶ್‌  11 ಸುತ್ತಿನಲ್ಲಿ 9.5 ಅಂಕ ಪಡೆದು ಚಾಂಪಿಯನ್‌ ಆಗಿದ್ದಾರೆ. ದೆಹಲಿಯ ವಂಶಿಕಾ ರಾವತ್‌ 11 ಸುತ್ತಿನಲ್ಲಿ ಅಂಕ ಪಡೆದು ದ್ವಿತೀಯ ಹಾಗೂ ಮಹಾರಾಷ್ಟ್ರದ ಘೋಲಾಪ್‌ ಪೃಶಾ 11 ಸುತ್ತಿನಲ್ಲಿ8.5 ಅಂಕ ಪಡೆದು ತೃತೀಯ ಸ್ಥಾನ ಪಡೆದಿದ್ದಾರೆ. ಕರ್ನಾಟಕದ ನಕ್ಷತ್ರ ಕುಮುಡವಿಲ್ಲಿ 11 ಸುತ್ತಿನಲ್ಲಿ 8.5 ಅಂಕ ಪಡೆದು ಚತುರ್ಥ ಸ್ಥಾನ ಮತ್ತು ಕೇರಳದ ಸಹ್ಯಾ ಕೈಲಾಶ್‌ 11 ಸುತ್ತಿನಲ್ಲಿ8.5 ಪಡೆದು ಚತುರ್ಥ ಸ್ಥಾನ ಪಡೆದಿದ್ದಾರೆ.

644 ಕಿರಿಯ ಚೆಸ್ ಪ್ರತಿಭೆಗಳ ಸಮಾಗಮ :  ದೇಶದ ವಿವಿಧ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಂದ 644 ಕಿರಿಯ ಚೆಸ್ ಪ್ರತಿಭೆಗಳು ಒಂದೇ ವೇದಿಕೆಯಲ್ಲಿ ಸ್ಪರ್ಧಿಸಿದ್ದು, ಮಂಗಳೂರಿನಲ್ಲಿ ನಡೆದ ಈ ಚಾಂಪಿಯನ್‌ಶಿಪ್‌ಗೆ ರಾಷ್ಟ್ರೀಯ ಮಟ್ಟದ ಮಹತ್ವ ದೊರಕಿದೆ.

ಕಿರಿಯ ವಯಸ್ಸಿನಲ್ಲೇ ಚೆಸ್‌ನಲ್ಲಿ ರಾಷ್ಟ್ರೀಯ ಮಟ್ಟದ ಸ್ಪರ್ಧಾತ್ಮಕ ಅನುಭವ ಪಡೆಯಲು ಈ ಚಾಂಪಿಯನ್‌ಶಿಪ್ ಅವಕಾಶ ಕಲ್ಪಿಸಿದೆ. ದಕ್ಷಿಣ ಕನ್ನಡದಲ್ಲಿ ಚೆಸ್ ಕ್ರೀಡೆಯ ಬೆಳವಣಿಗೆ ಹಾಗೂ ಕಿರಿಯ ಪ್ರತಿಭೆಗಳಿಗೆ ವೇದಿಕೆ ಕಲ್ಪಿಸುವ ನಿಟ್ಟಿನಲ್ಲಿಯೂ ಈ ಆಯೋಜನೆ ಗಮನ ಸೆಳೆದಿದೆ.

ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಚೆಸ್ ಅಸೋಸಿಯೇಷನ್‌ ಗೌರವಾಧ್ಯಕ್ಷ ಸುನಿಲ್ ಆಚಾರ್, ಅಧ್ಯಕ್ಷ ಡಾ. ಅಮರಶ್ರೀ ಅಮರನಾಥ ಶೆಟ್ಟಿ, ಕರ್ನಾಟಕ ರಾಜ್ಯ ಚೆಸ್ ಅಸೋಸಿಯೇಷನ್‌ ಉಪಾಧ್ಯಕ್ಷ ರಮೇಶ್ ಕೋಟೆ, ದಕ್ಷಿಣ ಕನ್ನಡ ಚೆಸ್ ಅಸೋಸಿಯೇಷನ್‌ ಕಾರ್ಯದರ್ಶಿ ರಮ್ಯ ರೈ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಫಾಲೋಮಾಡಲು ಇಲ್ಲಿ ಕ್ಲಿಕ್‌ ಮಾಡಿ

The National Under-11 Open and Girls Chess Championship–2026, hosted by the Dakshina Kannada Chess Association at the Urwa Indoor Stadium in Mangaluru, concluded with West Bengal’s FM Mani Sarbarto emerging as the Open champion with 10.5 points from 11 rounds. A total of 644 young chess players from 28 states and Union Territories participated in the national-level championship.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮ್ಯಾನ್ಮಾರ್‌ನಿಂದ ರೈಲಿನಲ್ಲಿ ಸಾಗಿಸುತ್ತಿದ್ದ 10 ಟನ್ ಅಡಿಕೆ ವಶ
August 8, 2026
7:54 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 08-08-2026 | ಕರಾವಳಿಯಲ್ಲಿ ಮಳೆ ಇಳಿಕೆ – ರಾಜ್ಯದಲ್ಲಿ ಹೇಗೆ..?
August 8, 2026
11:50 AM
by: ಸಾಯಿಶೇಖರ್ ಕರಿಕಳ
ಸಿರಿಧಾನ್ಯಗಳಿಗೆ ಬೇಡಿಕೆ ಹೆಚ್ಚಿದೆ… ಆದರೆ ರೈತರಿಗೆ ಲಾಭ ಹೆಚ್ಚಿದೆಯೇ?
August 8, 2026
7:12 AM
by: ದ ರೂರಲ್ ಮಿರರ್.ಕಾಂ
ಚಂಡಮಾರುತದ ಗಾಳಿಗೂ ಬಗ್ಗಿ ಉಳಿಯುವ ಅಡಿಕೆ ತಳಿ..! ಮೊಹಿತ್‌ನಗರ ತಳಿಗೆ ಹಲವು ರಾಜ್ಯಗಳಲ್ಲಿ ಬೇಡಿಕೆ
August 8, 2026
6:48 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror