Advertisement
ಸುದ್ದಿಗಳು

ಮಂಗಳೂರಿನಲ್ಲಿ ರಾಷ್ಟ್ರೀಯ ಕಿರಿಯರ ಚೆಸ್ ಚಾಂಪಿಯನ್‌ಶಿಪ್‌ಗೆ ತೆರೆ – ಮಣಿ ಸರ್ಬರ್‌ತೋ ಚಾಂಪಿಯನ್

Share

ಮಂಗಳೂರಿನಲ್ಲಿ ನಡೆದ ರಾಷ್ಟ್ರೀಯ 11 ವರ್ಷದೊಳಗಿನ ಮುಕ್ತ ಹಾಗೂ ಬಾಲಕಿಯರ ಚೆಸ್ ಚಾಂಪಿಯನ್‌ಶಿಪ್–2026ಕ್ಕೆ ಸಮಾರೋಪಗೊಂಡಿದ್ದು, ಮುಕ್ತ ವಿಭಾಗದಲ್ಲಿ ಪಶ್ಚಿಮ ಬಂಗಾಳದ FM ಮಣಿ ಸರ್ಬರ್‌ತೋ ಅವರು 11 ಸುತ್ತಿನಲ್ಲಿ 10.5 ಅಂಕ ಗಳಿಸಿ ಚಾಂಪಿಯನ್ ಆಗಿದ್ದಾರೆ.

ದಕ್ಷಿಣ ಕನ್ನಡ ಚೆಸ್ ಅಸೋಸಿಯೇಷನ್‌ ವತಿಯಿಂದ ಮಂಗಳೂರಿನ ಉರ್ವ ಒಳಾಂಗಣ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಈ ರಾಷ್ಟ್ರೀಯ ಮಟ್ಟದ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ ದೇಶದ 28 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಂದ ಒಟ್ಟು 644 ಸ್ಪರ್ಧಾಳುಗಳು ಭಾಗವಹಿಸಿದ್ದರು.

ಮುಕ್ತ ವಿಭಾಗದಲ್ಲಿ ಮಣಿ ಸರ್ಬರ್‌ತೋ ಮೇಲುಗೈ : ಮುಕ್ತ ವಿಭಾಗದಲ್ಲಿ ಪಶ್ಚಿಮ ಬಂಗಾಳದ FM ಮಣಿ ಸರ್ಬರ್‌ತೋ ಅವರು 11 ಸುತ್ತುಗಳಲ್ಲಿ 10.5 ಅಂಕ ಗಳಿಸಿ ಅಗ್ರಸ್ಥಾನ ಪಡೆದರು.

Mani Sarbarto

ಒಡಿಶಾದ CM ಸಾತ್ವಿಕ್ ಸ್ವಯಿನ್ ಅವರು 9.5 ಅಂಕಗಳೊಂದಿಗೆ ದ್ವಿತೀಯ ಸ್ಥಾನ ಪಡೆದರೆ, ಮಹಾರಾಷ್ಟ್ರದ FM ಅದ್ವಿತ್ ಅಮಿತ್ ಅಗರ್ವಾಲ್ 9 ಅಂಕಗಳೊಂದಿಗೆ ತೃತೀಯ ಸ್ಥಾನ ಗಳಿಸಿದರು.

ಮಹಾರಾಷ್ಟ್ರದ ಪರ್ವ ಎಚ್. ಹಕನಿ 9 ಅಂಕಗಳೊಂದಿಗೆ ನಾಲ್ಕನೇ ಸ್ಥಾನ ಪಡೆದರೆ, ಕರ್ನಾಟಕದ ಸ್ರಗ್ವಿಧ ಎಸ್. 8.5 ಅಂಕ ಗಳಿಸಿ ಐದನೇ ಸ್ಥಾನ ಪಡೆದರು.

ಪ್ರಮುಖ ಫಲಿತಾಂಶ

ಸ್ಥಾನ ಸ್ಪರ್ಧಾಳುಗಳು ರಾಜ್ಯ ಅಂಕ
1 FM  ಮಣಿ ಸರ್ಬರ್‌ತೋ ಪಶ್ಚಿಮ ಬಂಗಾಳ 10.5
2 CM ಸಾತ್ವಿಕ್ ಸ್ವಯಿನ್ ಒಡಿಶಾ 9.5
3 FM ಅದ್ವಿತ್ ಅಮಿತ್ ಅಗರ್ವಾಲ್ ಮಹಾರಾಷ್ಟ್ರ 9
4 ಪರ್ವ ಎಚ್. ಹಕನಿ ಮಹಾರಾಷ್ಟ್ರ 9
5 ಸ್ರಗ್ವಿಧ ಎಸ್. ಕರ್ನಾಟಕ 8.5

ಬಾಲಕಿಯರ ವಿಭಾಗದಲ್ಲಿ ಕೇರಳದ WCM ದಿವಿ ಬಿಜೇಶ್‌  11 ಸುತ್ತಿನಲ್ಲಿ 9.5 ಅಂಕ ಪಡೆದು ಚಾಂಪಿಯನ್‌ ಆಗಿದ್ದಾರೆ. ದೆಹಲಿಯ ವಂಶಿಕಾ ರಾವತ್‌ 11 ಸುತ್ತಿನಲ್ಲಿ ಅಂಕ ಪಡೆದು ದ್ವಿತೀಯ ಹಾಗೂ ಮಹಾರಾಷ್ಟ್ರದ ಘೋಲಾಪ್‌ ಪೃಶಾ 11 ಸುತ್ತಿನಲ್ಲಿ8.5 ಅಂಕ ಪಡೆದು ತೃತೀಯ ಸ್ಥಾನ ಪಡೆದಿದ್ದಾರೆ. ಕರ್ನಾಟಕದ ನಕ್ಷತ್ರ ಕುಮುಡವಿಲ್ಲಿ 11 ಸುತ್ತಿನಲ್ಲಿ 8.5 ಅಂಕ ಪಡೆದು ಚತುರ್ಥ ಸ್ಥಾನ ಮತ್ತು ಕೇರಳದ ಸಹ್ಯಾ ಕೈಲಾಶ್‌ 11 ಸುತ್ತಿನಲ್ಲಿ8.5 ಪಡೆದು ಚತುರ್ಥ ಸ್ಥಾನ ಪಡೆದಿದ್ದಾರೆ.

644 ಕಿರಿಯ ಚೆಸ್ ಪ್ರತಿಭೆಗಳ ಸಮಾಗಮ :  ದೇಶದ ವಿವಿಧ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಂದ 644 ಕಿರಿಯ ಚೆಸ್ ಪ್ರತಿಭೆಗಳು ಒಂದೇ ವೇದಿಕೆಯಲ್ಲಿ ಸ್ಪರ್ಧಿಸಿದ್ದು, ಮಂಗಳೂರಿನಲ್ಲಿ ನಡೆದ ಈ ಚಾಂಪಿಯನ್‌ಶಿಪ್‌ಗೆ ರಾಷ್ಟ್ರೀಯ ಮಟ್ಟದ ಮಹತ್ವ ದೊರಕಿದೆ.

ಕಿರಿಯ ವಯಸ್ಸಿನಲ್ಲೇ ಚೆಸ್‌ನಲ್ಲಿ ರಾಷ್ಟ್ರೀಯ ಮಟ್ಟದ ಸ್ಪರ್ಧಾತ್ಮಕ ಅನುಭವ ಪಡೆಯಲು ಈ ಚಾಂಪಿಯನ್‌ಶಿಪ್ ಅವಕಾಶ ಕಲ್ಪಿಸಿದೆ. ದಕ್ಷಿಣ ಕನ್ನಡದಲ್ಲಿ ಚೆಸ್ ಕ್ರೀಡೆಯ ಬೆಳವಣಿಗೆ ಹಾಗೂ ಕಿರಿಯ ಪ್ರತಿಭೆಗಳಿಗೆ ವೇದಿಕೆ ಕಲ್ಪಿಸುವ ನಿಟ್ಟಿನಲ್ಲಿಯೂ ಈ ಆಯೋಜನೆ ಗಮನ ಸೆಳೆದಿದೆ.

ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಚೆಸ್ ಅಸೋಸಿಯೇಷನ್‌ ಗೌರವಾಧ್ಯಕ್ಷ ಸುನಿಲ್ ಆಚಾರ್, ಅಧ್ಯಕ್ಷ ಡಾ. ಅಮರಶ್ರೀ ಅಮರನಾಥ ಶೆಟ್ಟಿ, ಕರ್ನಾಟಕ ರಾಜ್ಯ ಚೆಸ್ ಅಸೋಸಿಯೇಷನ್‌ ಉಪಾಧ್ಯಕ್ಷ ರಮೇಶ್ ಕೋಟೆ, ದಕ್ಷಿಣ ಕನ್ನಡ ಚೆಸ್ ಅಸೋಸಿಯೇಷನ್‌ ಕಾರ್ಯದರ್ಶಿ ರಮ್ಯ ರೈ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಫಾಲೋಮಾಡಲು ಇಲ್ಲಿ ಕ್ಲಿಕ್‌ ಮಾಡಿ

The National Under-11 Open and Girls Chess Championship–2026, hosted by the Dakshina Kannada Chess Association at the Urwa Indoor Stadium in Mangaluru, concluded with West Bengal’s FM Mani Sarbarto emerging as the Open champion with 10.5 points from 11 rounds. A total of 644 young chess players from 28 states and Union Territories participated in the national-level championship.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮ್ಯಾನ್ಮಾರ್‌ನಿಂದ ರೈಲಿನಲ್ಲಿ ಸಾಗಿಸುತ್ತಿದ್ದ 10 ಟನ್ ಅಡಿಕೆ ವಶ

ಮ್ಯಾನ್ಮಾರ್‌ನಿಂದ ಕಳ್ಳಸಾಗಣೆ ಮಾಡಲಾಗಿದ್ದ ಸುಮಾರು 10 ಟನ್ ವಿದೇಶಿ ಅಡಿಕೆಯನ್ನು ಅಸ್ಸಾಂನ ರಂಗಿಯಾ…

54 minutes ago

ಹವಾಮಾನ ವರದಿ | 08-08-2026 | ಕರಾವಳಿಯಲ್ಲಿ ಮಳೆ ಇಳಿಕೆ – ರಾಜ್ಯದಲ್ಲಿ ಹೇಗೆ..?

ಆಗಸ್ಟ್‌ 8ರಿಂದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆಯ ಪ್ರಮಾಣ ಇಳಿಕೆಯಾಗುವ ಸಾಧ್ಯತೆ ಇದ್ದು,…

9 hours ago

ಸಿರಿಧಾನ್ಯಗಳಿಗೆ ಬೇಡಿಕೆ ಹೆಚ್ಚಿದೆ… ಆದರೆ ರೈತರಿಗೆ ಲಾಭ ಹೆಚ್ಚಿದೆಯೇ?

ಸಿರಿಧಾನ್ಯಗಳ ಬೇಡಿಕೆ ಹೆಚ್ಚಿದರೂ, ರೈತರಿಗೆ ಅದರ ಸಂಪೂರ್ಣ ಆರ್ಥಿಕ ಲಾಭ ಇನ್ನೂ ತಲುಪಿಲ್ಲ…

14 hours ago

ಚಂಡಮಾರುತದ ಗಾಳಿಗೂ ಬಗ್ಗಿ ಉಳಿಯುವ ಅಡಿಕೆ ತಳಿ..! ಮೊಹಿತ್‌ನಗರ ತಳಿಗೆ ಹಲವು ರಾಜ್ಯಗಳಲ್ಲಿ ಬೇಡಿಕೆ

ಚಂಡಮಾರುತದ ಗಾಳಿಗೆ ಮುರಿಯದೆ ಬಾಗಿಕೊಂಡು ಉಳಿಯುವ ಮೊಹಿತ್‌ನಗರ ಅಡಿಕೆ ತಳಿಗೆ ಒಡಿಶಾ ಸೇರಿದಂತೆ…

14 hours ago

ದಕ್ಷಿಣ ಕನ್ನಡದಲ್ಲಿ ಮಳೆ | 4 ತಾಲೂಕುಗಳ ಶಾಲಾ-ಕಾಲೇಜುಗಳಿಗೆ ಇಂದು ರಜೆ – ಕಾಸರಗೋಡಿನಲ್ಲೂ ಶಾಲೆಗಳಿಗೆ ರಜೆ

ಭಾರೀ ಮಳೆಯ ಹಿನ್ನೆಲೆಯಲ್ಲಿ ಪುತ್ತೂರು, ಬೆಳ್ತಂಗಡಿ, ಸುಳ್ಯ ಹಾಗೂ ಕಡಬ ತಾಲೂಕುಗಳ ಶಾಲಾ-ಕಾಲೇಜುಗಳಿಗೆ…

14 hours ago

ಸ್ವಾತಂತ್ರ್ಯ ದಿನಾಚರಣೆ : ಪ್ಲಾಸ್ಟಿಕ್ ಧ್ವಜ ಬಳಸದಂತೆ ಸೂಚನೆ

ಸ್ವಾತಂತ್ರ್ಯ ದಿನಾಚರಣೆ ಸೇರಿದಂತೆ ಪ್ರಮುಖ ರಾಷ್ಟ್ರೀಯ ಕಾರ್ಯಕ್ರಮಗಳಲ್ಲಿ ಪ್ಲಾಸ್ಟಿಕ್‌ನಿಂದ ತಯಾರಿಸಿದ ರಾಷ್ಟ್ರಧ್ವಜಗಳನ್ನು ಬಳಸದಂತೆ…

15 hours ago