Advertisement
ಸುದ್ದಿಗಳು

ಸಂಚಾರ ನಿಯಮ ಉಲ್ಲಂಘನೆ | 222 ವಾಹನ ಸವಾರರ ಚಾಲನಾ ಪರವಾನಗಿ ಅಮಾನತಿಗೆ ಶಿಫಾರಸು

Share

ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಒಟ್ಟು 222 ವಾಹನ ಸವಾರರ ಚಾಲನಾ ಪರವಾನಗಿಯನ್ನು ಅಮಾನತುಪಡಿಸುವಂತೆ ಮಂಗಳೂರು ನಗರ ಪೊಲೀಸರು ಸಂಬಂಧಿಸಿದ ಆರ್ ಟಿಒಗಳಿಗೆ ಶಿಫಾರಸು  ಮಾಡಿದ್ದಾರೆ.

ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ನ ಸಂಚಾರ ಉಪ ವಿಭಾಗದ ಅಧೀನ ಠಾಣಾ ವ್ಯಾಪ್ತಿಯ ರಸ್ತೆಗಳಲ್ಲಿ ಅಜಾಗರೂಕತೆ ಹಾಗೂ ನಿರ್ಲಕ್ಷತದಿಂದ ಚಾಲನೆ ಹಾಗೂ ಸಂಚಾರ ನಿಯಮ ಪಾಲನೆ ಮಾಡದಿರುವ ಸವಾರರ ಮೇಲೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವ ಮೂಲಕ ರಸ್ತೆ ಸುರಕ್ಷತೆ ಬಗ್ಗೆ ಅರಿವು ಮೂಡಿಸಲಾಗುತ್ತಿದೆ. ಹಾಗಿದ್ದರೂ ನಿಯಮ ಉಲ್ಲಂಘನೆ ಮಾಡಿದ ಪ್ರಕರಣದಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುತ್ತಿದೆ.

ಜುಲೈ 13 ರಿಂದ 26ರವರೆಗೂ ಅತಿ ವೇಗದ, ನಿರ್ಲಕ್ಷ್ಯದ ಚಾಲನೆಗಾಗಿ 113 ಸೇರಿದಂತೆ ಒಟ್ಟಾರೇ 222 ಚಾಲಕರ ಚಾಲನಾ ಪರವಾನಗಿ ಅಮಾನತುಗೊಳಿಸುವಂತೆ ಪ್ರಾದೇಶಿಕ ಸಾರಿಗೆ ಕಚೇರಿಗಳಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ನಗರ ಪೊಲೀಸರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅವುಗಳಲ್ಲಿ, 113 ಅತಿವೇಗ ಮತ್ತು ನಿರ್ಲಕ್ಷ್ಯದ ಚಾಲನೆ ಪ್ರಕರಣಗಳು, ಒಂದು ಪಾನಮತ್ತ ಚಾಲನೆ ಪ್ರಕರಣ, ಪ್ರಯಾಣಿಕರನ್ನು ಸಾಗಿಸುವ 16 ಸರಕು ವಾಹನ, ಚಾಲನೆ ಮಾಡುವಾಗ ಮೊಬೈಲ್ ಫೋನ್ ಬಳಸಿದ 4,  ಸಿಗ್ನಲ್ ಜಂಪಿಂಗ್ ಪ್ರಕರಣಗಳು 5, 4 ವಾಣಿಜ್ಯ ವಾಹನಗಳಲ್ಲಿ ಪ್ರಯಾಣಿಕರನ್ನು ಹೆಚ್ಚು ಲೋಡ್ ಮಾಡಿದ ಪ್ರಕರಣಗಳನ್ನು ರದ್ದುಗೊಳಿಸಲಾಗಿದೆ. 3 ಟ್ರಿಪಲ್ ರೈಡಿಂಗ್ ಪ್ರಕರಣಗಳು, 59 ಹೆಲ್ಮೆಟ್ ಇಲ್ಲದೆ ಸವಾರಿ ಮತ್ತು 17 ಸೀಟ್ ಬೆಲ್ಟ್ ಇಲ್ಲದೆ ವಾಹನ ಚಲಾಯಿಸಿದ ಪ್ರಕರಣಗಳು, ಎಂದು ಪೊಲೀಸರು ತಿಳಿಸಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಉದ್ಯೋಗಾಕಾಂಕ್ಷಿಗಳಿಗೆ ಅವಕಾಶ | ಜುಲೈ 21ರಂದು ಕ್ರೆಡಿಟ್ ಕಾರ್ಡ್ ಸೇಲ್ಸ್ ಟೀಮ್ ಲೀಡರ್ ಹುದ್ದೆಗೆ ನೇರ ಸಂದರ್ಶನ

ಕ್ಯಾಲಿಬರ್ ಕಂಪೆನಿ ವತಿಯಿಂದ ಕ್ರೆಡಿಟ್ ಕಾರ್ಡ್ ಸೇಲ್ಸ್ ಟೀಮ್ ಲೀಡರ್ ಹುದ್ದೆಗಳಿಗೆ ಜುಲೈ…

9 hours ago

ಜುಲೈ 31 ರೊಳಗೆ ಬೆಳೆವಿಮೆ ನೋಂದಣಿ ಮಾಡಿಸಿಕೊಳ್ಳಿ – ಅಡಿಕೆ, ಕಾಳುಮೆಣಸು ಬೆಳೆಗಾರರಿಗೆ ಅವಕಾಶ

ದಕ್ಷಿಣ ಕನ್ನಡ ಜಿಲ್ಲೆಯ ಅಡಿಕೆ ಹಾಗೂ ಕಾಳುಮೆಣಸು ಬೆಳೆಗಾರರಿಗೆ ಹವಾಮಾನ ಆಧಾರಿತ ಬೆಳೆವಿಮೆ…

10 hours ago

ಕರಾವಳಿ–ಹವಾಮಾನ ವರದಿ | 18-07-2026 | ಮಲೆನಾಡಿನಲ್ಲಿ ಇನ್ನೂ 10 ದಿನ ಮಳೆ ಮುಂದುವರಿಕೆ…! ಉತ್ತರ ಒಳನಾಡಿನಲ್ಲಿ ಜುಲೈ 19 ರಿಂದ ಮಳೆ ಇಳಿಮುಖ

ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಮಳೆ ಮುಂದುವರಿಯುವ…

17 hours ago

ಮಳೆ ಎಚ್ಚರಿಕೆ – ಉಡುಪಿ, ದಕ್ಷಿಣ ಕನ್ನಡ ಸೇರಿ ನಾಲ್ಕು ಜಿಲ್ಲೆಗಳಲ್ಲಿ ಭಾರೀ ಮಳೆ, ಗಂಟೆಗೆ 50 ಕಿ.ಮೀ. ವೇಗದ ಗಾಳಿ ಸಾಧ್ಯತೆ

ಮುಂದಿನ 3 ಗಂಟೆಗಳ ಕಾಲ ಉಡುಪಿ, ದಕ್ಷಿಣ ಕನ್ನಡ ಸೇರಿದಂತೆ ನಾಲ್ಕು ಜಿಲ್ಲೆಗಳಲ್ಲಿ…

21 hours ago

ಯುವಕರ ಮೊದಲ ಆದ್ಯತೆ ಏನಿರಬೇಕು? ರಾಜಕೀಯವಲ್ಲ, ಆರ್ಥಿಕ ಸ್ವಾವಲಂಬನೆ!

ಯುವಕರ ಮೊದಲ ಆದ್ಯತೆ ರಾಜಕೀಯವಲ್ಲ, ಕೌಶಲ್ಯ ಮತ್ತು ಆರ್ಥಿಕ ಸ್ವಾವಲಂಬನೆ ಆಗಿರಬೇಕು ಎಂಬುದು…

3 days ago

ಹವಾಮಾನ ವರದಿ | 15-07-2026 | ರಾಜ್ಯದಲ್ಲಿ ಮಳೆ ಯಾಕೆ ಕಡಿಮೆಯಾಗಿದೆ ? ಜುಲೈ 16 ರಿಂದ ಎಲ್ಲೆಲ್ಲಿ ಮಳೆ ಆರಂಭವಾಗಲಿದೆ?

ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…

4 days ago