Advertisement
MIRROR FOCUS

ಬೆಂಗಳೂರು-ಮೈಸೂರಿನಲ್ಲಿ ವಿವಿಧ  ತಳಿಗಳ ಮಾವು, ಹಲಸು ಪ್ರದರ್ಶನ ಮತ್ತು ಮಾರಾಟ

Share

ಬೆಂಗಳೂರಿನ ಲಾಲ್ ಬಾಗ್ ನಲ್ಲಿರುವ ಡಾ. ಎಂ.ಎಚ್ ಮರೀಗೌಡ ಸಭಾಂಗಣದಲ್ಲಿ  ಮೂರು ದಿನಗಳ ಕಾಲ ಸಾವಯವ ಮಾವು ಮತ್ತು ಹಲಸು ಮೇಳವನ್ನು ಹಮ್ಮಿಕೊಳ್ಳಲಾಗಿದೆ.

ತೋಟಗಾರಿಕ ಇಲಾಖೆ ಹಾಗೂ ಜೈವಿಕ ಕೃಷಿ ಸೊಸೈಟಿ ಗಳ ಸಹಯೋಗದಲ್ಲಿ ನಡೆಯುತ್ತಿರುವ ಈ ಮೇಳದಲ್ಲಿ ಮಾವು ಹಾಗೂ ಹಲಸಿನ ವಿಶೇಷ ತಳಿಗಳನ್ನು ಪ್ರದರ್ಶನಕ್ಕೀಡಲಾಗಿದೆ, ರಾಜ್ಯದ ವಿವಿಧ ಭಾಗಗಳಲ್ಲಿ ಬೆಳೆದ ಸಾವಯವ ಮಾವು ಹಾಗೂ ಹಲಸಿನ ಹಣ್ಣುಗಳು ರೈತರಿಂದ ನೇರವಾಗಿ ಗ್ರಾಹಕ ಕೈ ಸೇರುತ್ತಿವೆ.ರಸಪೂರಿ, ಬಾದಾಮಿ, ತೋತಾಪುರಿ, ಮಲ್ಲಿಕ ಸೇರಿದಂತೆ ಸ್ವಾದಭರಿತ ಮಾವಿನ ಹಣ್ಣುಗಳು ಪ್ರದರ್ಶನಕ್ಕೆ ಆಗಮಿಸಿದ ಜನರ ಗಮನಸೆಳೆಯುತ್ತಿವೆ. ಮಾವು ಹಲಸು ಸೇರಿದಂತೆ ಸಿರಿಧ್ಯಾನ ಮತ್ತು ಸಾವಯವ ತರಕಾರಿಗಳನ್ನು ಪ್ರದರ್ಶನದಲ್ಲಿ ಇರಿಸಲಾಗಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಖರೀದಿಸುತ್ತಿದ್ದಾರೆ.

ಪ್ರದರ್ಶನದಲ್ಲಿ ಮಾತನಾಡಿದ ತೋಟಗಾರಿಕ ಹಾಗೂ ರೇಷ್ಮೆ ಇಲಾಖೆ ಕಾರ್ಯದರ್ಶಿ ಡಾ. ಶಮ್ಲಾ ಇಕ್ಬಾಲ್, ಬೆಂಗಳೂರಿನ ಗ್ರಾಹಕರಿಗಾಗಿ ವಿಶೇಷವಾಗಿ ಹಳ್ಳಿಗಳಿಂದ ಸಾವಯವ ಉತ್ಪನ್ನಗಳನ್ನು ತಂದು ಪ್ರದರ್ಶನದಲ್ಲಿ ಇರಿಸಲಾಗಿದೆ, ಜನರಿಂದ ಉತ್ತಮ ಸ್ಪಂದನೆ ದೊರೆತಿದೆ ಎಂದರು.

ಇಂದಿನಿಂದ ಮೂರು ದಿನಗಳ ಕಾಲ ಮಾವು-ಹಲಸು ಮೇಳ : ಮೈಸೂರಿನಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಮಾವು-ಹಲಸು ಮೇಳ ಪ್ರಾರಂಭಗೊಂಡಿದೆ. ತೋಟಗಾರಿಕೆ ಇಲಾಖೆ ವತಿಯಿಂದ ಮೈಸೂರಿನ ಕುಪ್ಪಣ್ಣ ಪಾರ್ಕ್‌ನಲ್ಲಿ ಆಯೋಜಿಸಿರುವ ಮಾವು-ಹಲಸು ಮೇಳಕ್ಕೆ ಶಾಸಕ ಕೆ.ಹರೀಶ್ ಗೌಡ ಚಾಲನೆ ನೀಡಿದರು. ಇಲ್ಲಿ ಒಟ್ಟು 49 ಮಳಿಗೆಗಳನ್ನು ತೆರೆಯಲಾಗಿದೆ. ಈ ಮಳಿಗೆಯಲ್ಲಿ ರಾಜ್ಯದ ವಿವಿಧ ಜಿಲ್ಲೆಗಳ ಮಾವು ಬೆಳೆದಿರುವ ರೈತರು, ಮಾವು-ಹಲಸಿನ ಹಣ್ಣುಗಳನ್ನು ಮಾರಾಟ ಮಾಡುತ್ತಿದ್ದಾರೆ. ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಧಾರವಾಡ ಜಿಲ್ಲೆಗಳ ರೈತರು ಮೇಳದಲ್ಲಿ ಭಾಗವಹಿಸಿದ್ದಾರೆ. ಮೇಳದಲ್ಲಿ ರಸಪೂರಿ, ಮಲ್ಲಿಕಾ, ಮಲ್ಗೋವಾ, ಬಾದಾಮಿ ಸೇರಿದಂತೆ ಹತ್ತಾರು ಬಗೆಯ ಮಾವುಗಳು ಲಭ್ಯವಿದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಡಿಕೆ ಸಿಂಗಾರ ಒಣಗುತ್ತಿದೆಯೇ..? ನಿಮ್ಮ ತೋಟದ ಶತ್ರು ನೀವು ಬಳಸುವ ಬೇವಿನ ಎಣ್ಣೆಯೇ ಇರಬಹುದು…!

ಅಡಿಕೆ ತೋಟಗಳಲ್ಲಿ ಹೂಗೊಂಚಲುಗಳು ಅರಳಿದರೂ ಕಾಯಿ ಕಟ್ಟದಿರುವುದಕ್ಕೆ ರೈತರು ಬಳಸುವ ಬೇವಿನ ಎಣ್ಣೆಯೇ…

6 hours ago

ಕಳಪೆ ಅಡಿಕೆ ಪತ್ತೆ | 15.5 ಲಕ್ಷ ದಂಡ ವಿಧಿಸಿದ ನ್ಯಾಯಾಲಯ

ಕಳಪೆ ಗುಣಮಟ್ಟದ ಅಡಿಕೆ ಸಾಗಣೆ ಪ್ರಕರಣ ಪತ್ತೆಯಾಗಿದ್ದು, ಆಹಾರ ಸುರಕ್ಷತೆ ಮತ್ತು ಮಾನದಂಡಗಳ…

6 hours ago

ತೆಂಗಿನಕಾಯಿಯಿಂದ Gen-Z ಫೇವರಿಟ್ ಫುಡ್‌…! ವೆಗನ್ ಕುಲ್ಫಿ ಮತ್ತು ಚಾಕೊಲೇಟ್ ಬಿಡುಗಡೆ

ಕಾಸರಗೋಡು CPCRI ತನ್ನ 110ನೇ ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ ಜನರೇಷನ್‌ Z ಗಾಗಿ…

15 hours ago

ತೆಂಗು ರೈತರಿಗೆ ಹೊಸ ದಾರಿ | ಮೌಲ್ಯವರ್ಧನೆ ಮತ್ತು ಬಹುಬೆಳೆ ಪದ್ಧತಿಗೆ ಉತ್ತೇಜನ

ಮಹಿಳಾ ಉದ್ಯಮಶೀಲತೆ, ತೆಂಗು ಮೌಲ್ಯವರ್ಧನೆ ಹಾಗೂ ರೈತರ ಆದಾಯ ವೃದ್ಧಿಯಲ್ಲಿ ತೆಂಗು ಅಭಿವೃದ್ಧಿ…

15 hours ago

ತೆಂಗಿನಕಾಯಿ ಬೆಲೆ ಏಕೆ ಇಳಿಯುತ್ತಿದೆ? ರೈತರಿಗೆ ಮುಂದೇನು?

ತೆಂಗಿನಕಾಯಿ ಬೆಲೆ ಇಳಿಕೆ ಆತಂಕ ಹೆಚ್ಚಾಗಿದೆ. ಉತ್ಪಾದನೆ ಏರಿಕೆ ನಡುವೆಯೇ ರಫ್ತು ಮತ್ತು…

15 hours ago

ಡಿಜಿಟಲ್ ಕೃಷಿ, ಹವಾಮಾನ ಸಹಿಷ್ಣು ಬೆಳೆಗಳಿಗೆ ಬೆಂಬಲ -ಕೃಷಿ ಸಚಿವರಿಂದ ಸಭೆ

ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವ ಶಿವರಾಜ್‌ ಸಿಂಗ್‌ ಚೌಹಾನ್‌ ಅವರು…

15 hours ago