Advertisement
MIRROR FOCUS

ಬೆಂಗಳೂರು-ಮೈಸೂರಿನಲ್ಲಿ ವಿವಿಧ  ತಳಿಗಳ ಮಾವು, ಹಲಸು ಪ್ರದರ್ಶನ ಮತ್ತು ಮಾರಾಟ

Share

ಬೆಂಗಳೂರಿನ ಲಾಲ್ ಬಾಗ್ ನಲ್ಲಿರುವ ಡಾ. ಎಂ.ಎಚ್ ಮರೀಗೌಡ ಸಭಾಂಗಣದಲ್ಲಿ  ಮೂರು ದಿನಗಳ ಕಾಲ ಸಾವಯವ ಮಾವು ಮತ್ತು ಹಲಸು ಮೇಳವನ್ನು ಹಮ್ಮಿಕೊಳ್ಳಲಾಗಿದೆ.

ತೋಟಗಾರಿಕ ಇಲಾಖೆ ಹಾಗೂ ಜೈವಿಕ ಕೃಷಿ ಸೊಸೈಟಿ ಗಳ ಸಹಯೋಗದಲ್ಲಿ ನಡೆಯುತ್ತಿರುವ ಈ ಮೇಳದಲ್ಲಿ ಮಾವು ಹಾಗೂ ಹಲಸಿನ ವಿಶೇಷ ತಳಿಗಳನ್ನು ಪ್ರದರ್ಶನಕ್ಕೀಡಲಾಗಿದೆ, ರಾಜ್ಯದ ವಿವಿಧ ಭಾಗಗಳಲ್ಲಿ ಬೆಳೆದ ಸಾವಯವ ಮಾವು ಹಾಗೂ ಹಲಸಿನ ಹಣ್ಣುಗಳು ರೈತರಿಂದ ನೇರವಾಗಿ ಗ್ರಾಹಕ ಕೈ ಸೇರುತ್ತಿವೆ.ರಸಪೂರಿ, ಬಾದಾಮಿ, ತೋತಾಪುರಿ, ಮಲ್ಲಿಕ ಸೇರಿದಂತೆ ಸ್ವಾದಭರಿತ ಮಾವಿನ ಹಣ್ಣುಗಳು ಪ್ರದರ್ಶನಕ್ಕೆ ಆಗಮಿಸಿದ ಜನರ ಗಮನಸೆಳೆಯುತ್ತಿವೆ. ಮಾವು ಹಲಸು ಸೇರಿದಂತೆ ಸಿರಿಧ್ಯಾನ ಮತ್ತು ಸಾವಯವ ತರಕಾರಿಗಳನ್ನು ಪ್ರದರ್ಶನದಲ್ಲಿ ಇರಿಸಲಾಗಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಖರೀದಿಸುತ್ತಿದ್ದಾರೆ.

ಪ್ರದರ್ಶನದಲ್ಲಿ ಮಾತನಾಡಿದ ತೋಟಗಾರಿಕ ಹಾಗೂ ರೇಷ್ಮೆ ಇಲಾಖೆ ಕಾರ್ಯದರ್ಶಿ ಡಾ. ಶಮ್ಲಾ ಇಕ್ಬಾಲ್, ಬೆಂಗಳೂರಿನ ಗ್ರಾಹಕರಿಗಾಗಿ ವಿಶೇಷವಾಗಿ ಹಳ್ಳಿಗಳಿಂದ ಸಾವಯವ ಉತ್ಪನ್ನಗಳನ್ನು ತಂದು ಪ್ರದರ್ಶನದಲ್ಲಿ ಇರಿಸಲಾಗಿದೆ, ಜನರಿಂದ ಉತ್ತಮ ಸ್ಪಂದನೆ ದೊರೆತಿದೆ ಎಂದರು.

ಇಂದಿನಿಂದ ಮೂರು ದಿನಗಳ ಕಾಲ ಮಾವು-ಹಲಸು ಮೇಳ : ಮೈಸೂರಿನಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಮಾವು-ಹಲಸು ಮೇಳ ಪ್ರಾರಂಭಗೊಂಡಿದೆ. ತೋಟಗಾರಿಕೆ ಇಲಾಖೆ ವತಿಯಿಂದ ಮೈಸೂರಿನ ಕುಪ್ಪಣ್ಣ ಪಾರ್ಕ್‌ನಲ್ಲಿ ಆಯೋಜಿಸಿರುವ ಮಾವು-ಹಲಸು ಮೇಳಕ್ಕೆ ಶಾಸಕ ಕೆ.ಹರೀಶ್ ಗೌಡ ಚಾಲನೆ ನೀಡಿದರು. ಇಲ್ಲಿ ಒಟ್ಟು 49 ಮಳಿಗೆಗಳನ್ನು ತೆರೆಯಲಾಗಿದೆ. ಈ ಮಳಿಗೆಯಲ್ಲಿ ರಾಜ್ಯದ ವಿವಿಧ ಜಿಲ್ಲೆಗಳ ಮಾವು ಬೆಳೆದಿರುವ ರೈತರು, ಮಾವು-ಹಲಸಿನ ಹಣ್ಣುಗಳನ್ನು ಮಾರಾಟ ಮಾಡುತ್ತಿದ್ದಾರೆ. ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಧಾರವಾಡ ಜಿಲ್ಲೆಗಳ ರೈತರು ಮೇಳದಲ್ಲಿ ಭಾಗವಹಿಸಿದ್ದಾರೆ. ಮೇಳದಲ್ಲಿ ರಸಪೂರಿ, ಮಲ್ಲಿಕಾ, ಮಲ್ಗೋವಾ, ಬಾದಾಮಿ ಸೇರಿದಂತೆ ಹತ್ತಾರು ಬಗೆಯ ಮಾವುಗಳು ಲಭ್ಯವಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!

ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…

8 hours ago

ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!

ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…

9 hours ago

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

1 day ago

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…

2 days ago

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

2 days ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

2 days ago