Advertisement
ಕಿಟಕಿ

ಮನ ಗೆಲ್ಲುವ ಮಾವಿನ ಹಣ್ಣುಗಳು

Share

ಮಾವಿನ ಹಣ್ಣಿನ ಕಾಲದಲ್ಲಿ ನಿತ್ಯ ಏನಾದರೊಂದು ಬಗೆ ಮಾಡಿ ಉಣಬಡಿಸದಿದ್ದರೆ ಮನೆಯಾಕೆಗೆ ಖಂಡಿತಾ ಹಿತವೆನಿಸದು. ತೋಟದ ಮೂಲೆಯ ಮರದಲ್ಲಿ ಬಿದ್ದ ಕಾಡು ಮಾವಿನ ಹಣ್ಣುಗಳನ್ನು ನಸುಕಿನಲ್ಲೇ ಹೆಕ್ಕಿ ಸ್ವಚ್ಛ ಮಾಡಿ ಹಾಳೆಯಲ್ಲಿ ಹರಡಿ ಇಟ್ಟಲ್ಲಿಗೆ ಸಮಾಧಾನ. ಅಂದಿನದ್ದೇನೋ ಮಹಾ ಕೆಲಸವನ್ನು ಸಾಧಿಸಿದಂತೆ.

ಕಾಡು ಮಾವಿನ ಹಣ್ಣು ಇಂದು ಬಹಳ ಅಪರೂಪ. ಎಲ್ಲೆಂದರಲ್ಲಿ ಸಿಗದು. ಬೇಕೆಂದಾಗ ಸಿಗದು . ಎಲ್ಲೊ ಕೆಲವು ಕಡೆಗಳಲ್ಲಿ ಮಾತ್ರ ಇವೆ. ಅದು ಬೆರಳೆಣಿಕೆಯ ತಳಿಗಳು. ಹೆಚ್ಚಾಗಿ ಹುಳಿಯೇ. ಅದರಲ್ಲೂ ವೆರೈಟಿ ಹುಳಿ ಎಂದರೆ ನೀವು ನಂಬಲೇ ಬೇಕು. ಒಂದೊಂದು ಮಾವಿನ ಹಣ್ಣಿನ ಪರಿಮಳ, ರುಚಿ , ಸೊನೆ , ಬಣ್ಣ , ಗಾತ್ರ ಎಲ್ಲವೂ ಬೇರೆ ಬೇರೆ. ಒಂದರಂತೆ ಇನ್ನೊಂದಿಲ್ಲ. ಕೆಲವು ಸಕ್ಕರೆಯಷ್ಟು ಸಿಹಿಯಾದರೆ ಇನ್ನು ಕೆಲವು ಕಡಕ್ ಹುಳಿ ಬಾಯಿಗೆ ಇಡಲು ಸಾಧ್ಯವಿಲ್ಲ. ಅದರಂತೆ ಇದು ಎನ್ನುವಂತೆಯೂ ಇಲ್ಲ. ಮಾವಿನ ಗೊರಟಿನಿಂದ ಹುಟ್ಟಿದ ಗಿಡವಾದರೂ ಬೇರೆಯೇ ರೀತಿಯ ಹಣ್ಣುಗಳು ಆಗುವುದು ಮಾವಿನ ಮರದ ವಿಶೇಷ . ಕಸಿಕಟ್ಟಿ ಮಾಡಿದ ಗಿಡಗಳಿಂದ ಮಾತ್ರ ಮಾತೃ ಗಿಡದ ರೀತಿಯ ಹಣ್ಣುಗಳು ದೊರೆಯುವುದು.

ಒಂದು ಕಾಲದಲ್ಲಿ ಊರ ತುಂಬ ಇದ್ದ ನಮೂನೆವಾರು ಮಾವಿನಹಣ್ಣುಗಳು ಇಂದಿಲ್ಲ. ಹಲವು ವೈವಿಧ್ಯ ತಳಿಗಳು ಹಿರಿಯರ ನೆನಪಿನ ಬುತ್ತಿಯೊಳಗೆ ಮಾತ್ರ ಬೆಚ್ಚಗೆ ಕುಳಿತಿವೆ. ನಮ್ಮ ದುರಾಸೆಗೋ, ಅಥವಾ ಬದುಕಿನ ಏರಿಳಿತದ ಓಗದಲ್ಲಿ , ಕಾಲನ ಹೊಡೆತಕ್ಕೆ ಬಲಿಯಾದ ಮಾವಿನ ಮರಗಳೆಷ್ಟೋ?! ಒಂದೊಮ್ಮೆ ತೋಟದ ತುಂಬಾ ಓಡಾಡಿ ಹೆಕ್ಕಿ ಕೊಂಡು ಬರುತ್ತಿದ್ದ ಮಾವಿನ ಹಣ್ಣುಗಳು ಇಂದು ಸಾವಿರ ಸಾವಿರ ದುಡ್ಡು ಕೊಟ್ಟರು ಸಿಗದು. ಇದ್ದರಲ್ಲವೇ ಸಿಗುವುದು. ತಳಿ ಸಂರಕ್ಷಣೆಯ ಮಹತ್ವ ಅರಿಯದೆ ಕಳೆದು ಕೊಂಡ ಅಪೂರ್ವ ಪ್ರಕೃತಿಯ ಕೊಡುಗೆಗಳೆಷ್ಟೋ!

ಹಾಗೆ ಅಳಿದುಳಿದ ಮರಗಳಿಂದ ಹೆಕ್ಕಿ ಕೊಂಡು ಬಂದ ಮಾವಿನ ಹಣ್ಣು ಅಮ್ಮನ ಸಾಂಪ್ರದಾಯಿಕ ಪಾಕಕ್ಕೆ ಸುಲಭ ತುತ್ತು. ಹಸಿಯಾದರೂ ಸರಿ ಬೇಯಿಸಿದರೂ ರುಚಿಯೇ,ಸ್ವಲ್ಪ ಉಪ್ಪು ,ಗಾಂಧಾರಿ ಮೆಣಸು, ಬೆಲ್ಲ( ಹಣ್ಣಿನ ಹುಳಿ, ನಿಮ್ಮ ನಾಲಗೆಯ ರುಚಿಗೆ ಅನುಸರಿಸಿ) ಬಳಸಿ ಮಾಡಿದ ಗೊಜ್ಜು ಬಾಳೆಯ ಬದಿಯಲ್ಲಿ ಇದ್ದರೆ ನಾಲ್ಕು ತುತ್ತು ಊಟ ಜಾಸ್ತಿಯೇ. ಸಾರು, ಸಾಸಮೆ, ಮೆಣಸ್ಕಾಯಿ, ಸಾಂಬಾರು, ಮಾವಿನಕಾಯಿಯ ಮೇಲಾರ ಹೀಗೆ ಏನಾದರೊಂದು ಇದ್ದರೆ ಹೊಟ್ಟೆ ತುಂಬ ಊಟ ಮಾಡಿದ್ದು ಅರಿವಿಗೇ ಬಾರದು. ಎಷ್ಟು ಹೊತ್ತಾದರೂ ಊಟವೇ ಮುಗಿಯದು. ನಿತ್ಯಕ್ಕಿಂತ ಅರ್ಧ ಗಂಟೆ ಜಾಸ್ತಿ ಸಮಯ ಖಂಡಿತಾ ಬೇಕು ಮಾವಿನ ಹಣ್ಣಿನ ಕಾಲದಲ್ಲಿ.

ಕಾಡು ಮಾವಿನ ಹಣ್ಣಿನ ಪಾಯಸ ಒಮ್ಮೆ ಮಾಡಿ ನೋಡಿ ಎಷ್ಟು ರುಚಿ ಗೊತ್ತುಂಟಾ( ಬೇಯಿಸಿದಾಗ ಹಿಟ್ಟು ಹಿಟ್ಟು ಆಗುವ ಮಾವಿನ ಹಣ್ಣು ಪಾಯಸಕ್ಕೆ ಸೂಕ್ತ) ಹದಾ ಹುಳಿ ಸಿಹಿ ಪಾಯಸ ತಣ್ಣಗೆ ತಿನ್ನಲು ರುಚಿ. ಪಾಯಸ ಮಾಡಿ ಸ್ವಲ್ಪ ತಣ್ಣಗಾದ ಮೇಲೆ ಸವಿಯಲು ತುಂಬಾ ಖುಷಿ(ಪ್ರಿಜ್ ನಲ್ಲಿಟ್ಟು ತಿಂದರೆ ಸೂಪರ್ ರುಚಿ). ಮಾವಿನ ಹಣ್ಣಿನ ರಸ ತೆಗೆದು ಸಕ್ಕರೆ ಮಿಶ್ರ ಮಾಡಿ ತೆಗೆದಿಟ್ಟರೆ ಅಕಾಲದಲ್ಲೂ ಜ್ಯೂಸ್ ಮಾಡಿ ಮಾವಿನ ಹಣ್ಣನ್ನು ಸವಿಯ ಬಹುದು. ಅಪಾರ ಪೋಷಕಾಂಶಗಳನ್ನು ಹೊಂದಿರುವ ಮಾವಿನ ಹಣ್ಣುಗಳು ಪ್ರಕೃತಿ ನಮಗೆ ಕೊಟ್ಟ ಅಪೂರ್ವ ಉಡುಗೊರೆಯಲ್ಲವೇ. ಮಾವಿನ ಹಣ್ಣುಗಳ ತಳಿಗಳನ್ನು ಉಳಿಸೋಣ, ನಮ್ಮ ಮುಂದಿನ ಪೀಳಿಗೆಗೆ ವರ್ಗಾಯಿಸೋಣ………………

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

Published by
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

Recent Posts

ಹವಾಮಾನ ವರದಿ | 05-03-2026 | ಕರ್ನಾಟಕದಲ್ಲಿ ಬಿಸಿಲಿನ ಅಬ್ಬರ ಶುರು..! ಇನ್ನು 10 ದಿನ ಮಳೆಯ ಲಕ್ಷಣ ಇಲ್ಲ

ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…

8 hours ago

ಅಡಿಕೆ ಮಾರುಕಟ್ಟೆ | ಕೆಲವು ಮಾರುಕಟ್ಟೆಗಳಲ್ಲಿ ಏರಿಕೆ, ಕೆಲವು ಸ್ಥಿರ – ಸಿಂಗಲ್‌ ಚೋಲ್‌ ಗೆ ಬೇಡಿಕೆ..! | ರಬ್ಬರ್ ದರದಲ್ಲಿ ಸ್ವಲ್ಪ ಕುಸಿತ

ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್‌, ಟಿಎಸ್‌ಎಸ್‌, ತುಮ್ಕೋಸ್‌, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…

9 hours ago

ಕಾಡಾನೆ ನಿಯಂತ್ರಣಕ್ಕೆ ರಾಜ್ಯದ ಕ್ರಮ : ಎಲಿಫೆಂಟ್ ಟಾಸ್ಕ್ ಫೋರ್ಸ್ ರಚನೆ

ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…

11 hours ago

ಕಾಡಾನೆ ಹಾವಳಿ ತಡೆಗೆ ಸರ್ಕಾರದ ಕ್ರಮ : ಕೊಪ್ಪ ಅರಣ್ಯ ವಿಭಾಗಕ್ಕೆ ₹12.77 ಕೋಟಿ, ರೈಲ್ವೆ ಬ್ಯಾರಿಕೇಡ್ ಅಳವಡಿಕೆ

ಕೊಪ್ಪ ಅರಣ್ಯ ವಿಭಾಗದಲ್ಲಿ ಕಾಡಾನೆಗಳು ನಾಡಿಗೆ ಪ್ರವೇಶಿಸದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ಅಳವಡಿಕೆಗೆ…

11 hours ago

ಭವಿಷ್ಯದ ಬಾಳೆ ಬೆಳೆ ಉಳಿಸುವ ಗುಟ್ಟು ಕಾಡು ಬಾಳೆ ಜಾತಿಯಲ್ಲಿ!

ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…

22 hours ago

ಕೃಷಿ ಮಾರುಕಟ್ಟೆ ವರದಿ | ಅಡಿಕೆ ಮಾರುಕಟ್ಟೆಯಲ್ಲಿ ಮಿಶ್ರ ಫಲ…!

ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…

1 day ago