Advertisement
ಕಿಟಕಿ

ಮನ ಗೆಲ್ಲುವ ಮಾವಿನ ಹಣ್ಣುಗಳು

Share

ಮಾವಿನ ಹಣ್ಣಿನ ಕಾಲದಲ್ಲಿ ನಿತ್ಯ ಏನಾದರೊಂದು ಬಗೆ ಮಾಡಿ ಉಣಬಡಿಸದಿದ್ದರೆ ಮನೆಯಾಕೆಗೆ ಖಂಡಿತಾ ಹಿತವೆನಿಸದು. ತೋಟದ ಮೂಲೆಯ ಮರದಲ್ಲಿ ಬಿದ್ದ ಕಾಡು ಮಾವಿನ ಹಣ್ಣುಗಳನ್ನು ನಸುಕಿನಲ್ಲೇ ಹೆಕ್ಕಿ ಸ್ವಚ್ಛ ಮಾಡಿ ಹಾಳೆಯಲ್ಲಿ ಹರಡಿ ಇಟ್ಟಲ್ಲಿಗೆ ಸಮಾಧಾನ. ಅಂದಿನದ್ದೇನೋ ಮಹಾ ಕೆಲಸವನ್ನು ಸಾಧಿಸಿದಂತೆ.

ಕಾಡು ಮಾವಿನ ಹಣ್ಣು ಇಂದು ಬಹಳ ಅಪರೂಪ. ಎಲ್ಲೆಂದರಲ್ಲಿ ಸಿಗದು. ಬೇಕೆಂದಾಗ ಸಿಗದು . ಎಲ್ಲೊ ಕೆಲವು ಕಡೆಗಳಲ್ಲಿ ಮಾತ್ರ ಇವೆ. ಅದು ಬೆರಳೆಣಿಕೆಯ ತಳಿಗಳು. ಹೆಚ್ಚಾಗಿ ಹುಳಿಯೇ. ಅದರಲ್ಲೂ ವೆರೈಟಿ ಹುಳಿ ಎಂದರೆ ನೀವು ನಂಬಲೇ ಬೇಕು. ಒಂದೊಂದು ಮಾವಿನ ಹಣ್ಣಿನ ಪರಿಮಳ, ರುಚಿ , ಸೊನೆ , ಬಣ್ಣ , ಗಾತ್ರ ಎಲ್ಲವೂ ಬೇರೆ ಬೇರೆ. ಒಂದರಂತೆ ಇನ್ನೊಂದಿಲ್ಲ. ಕೆಲವು ಸಕ್ಕರೆಯಷ್ಟು ಸಿಹಿಯಾದರೆ ಇನ್ನು ಕೆಲವು ಕಡಕ್ ಹುಳಿ ಬಾಯಿಗೆ ಇಡಲು ಸಾಧ್ಯವಿಲ್ಲ. ಅದರಂತೆ ಇದು ಎನ್ನುವಂತೆಯೂ ಇಲ್ಲ. ಮಾವಿನ ಗೊರಟಿನಿಂದ ಹುಟ್ಟಿದ ಗಿಡವಾದರೂ ಬೇರೆಯೇ ರೀತಿಯ ಹಣ್ಣುಗಳು ಆಗುವುದು ಮಾವಿನ ಮರದ ವಿಶೇಷ . ಕಸಿಕಟ್ಟಿ ಮಾಡಿದ ಗಿಡಗಳಿಂದ ಮಾತ್ರ ಮಾತೃ ಗಿಡದ ರೀತಿಯ ಹಣ್ಣುಗಳು ದೊರೆಯುವುದು.

ಒಂದು ಕಾಲದಲ್ಲಿ ಊರ ತುಂಬ ಇದ್ದ ನಮೂನೆವಾರು ಮಾವಿನಹಣ್ಣುಗಳು ಇಂದಿಲ್ಲ. ಹಲವು ವೈವಿಧ್ಯ ತಳಿಗಳು ಹಿರಿಯರ ನೆನಪಿನ ಬುತ್ತಿಯೊಳಗೆ ಮಾತ್ರ ಬೆಚ್ಚಗೆ ಕುಳಿತಿವೆ. ನಮ್ಮ ದುರಾಸೆಗೋ, ಅಥವಾ ಬದುಕಿನ ಏರಿಳಿತದ ಓಗದಲ್ಲಿ , ಕಾಲನ ಹೊಡೆತಕ್ಕೆ ಬಲಿಯಾದ ಮಾವಿನ ಮರಗಳೆಷ್ಟೋ?! ಒಂದೊಮ್ಮೆ ತೋಟದ ತುಂಬಾ ಓಡಾಡಿ ಹೆಕ್ಕಿ ಕೊಂಡು ಬರುತ್ತಿದ್ದ ಮಾವಿನ ಹಣ್ಣುಗಳು ಇಂದು ಸಾವಿರ ಸಾವಿರ ದುಡ್ಡು ಕೊಟ್ಟರು ಸಿಗದು. ಇದ್ದರಲ್ಲವೇ ಸಿಗುವುದು. ತಳಿ ಸಂರಕ್ಷಣೆಯ ಮಹತ್ವ ಅರಿಯದೆ ಕಳೆದು ಕೊಂಡ ಅಪೂರ್ವ ಪ್ರಕೃತಿಯ ಕೊಡುಗೆಗಳೆಷ್ಟೋ!

ಹಾಗೆ ಅಳಿದುಳಿದ ಮರಗಳಿಂದ ಹೆಕ್ಕಿ ಕೊಂಡು ಬಂದ ಮಾವಿನ ಹಣ್ಣು ಅಮ್ಮನ ಸಾಂಪ್ರದಾಯಿಕ ಪಾಕಕ್ಕೆ ಸುಲಭ ತುತ್ತು. ಹಸಿಯಾದರೂ ಸರಿ ಬೇಯಿಸಿದರೂ ರುಚಿಯೇ,ಸ್ವಲ್ಪ ಉಪ್ಪು ,ಗಾಂಧಾರಿ ಮೆಣಸು, ಬೆಲ್ಲ( ಹಣ್ಣಿನ ಹುಳಿ, ನಿಮ್ಮ ನಾಲಗೆಯ ರುಚಿಗೆ ಅನುಸರಿಸಿ) ಬಳಸಿ ಮಾಡಿದ ಗೊಜ್ಜು ಬಾಳೆಯ ಬದಿಯಲ್ಲಿ ಇದ್ದರೆ ನಾಲ್ಕು ತುತ್ತು ಊಟ ಜಾಸ್ತಿಯೇ. ಸಾರು, ಸಾಸಮೆ, ಮೆಣಸ್ಕಾಯಿ, ಸಾಂಬಾರು, ಮಾವಿನಕಾಯಿಯ ಮೇಲಾರ ಹೀಗೆ ಏನಾದರೊಂದು ಇದ್ದರೆ ಹೊಟ್ಟೆ ತುಂಬ ಊಟ ಮಾಡಿದ್ದು ಅರಿವಿಗೇ ಬಾರದು. ಎಷ್ಟು ಹೊತ್ತಾದರೂ ಊಟವೇ ಮುಗಿಯದು. ನಿತ್ಯಕ್ಕಿಂತ ಅರ್ಧ ಗಂಟೆ ಜಾಸ್ತಿ ಸಮಯ ಖಂಡಿತಾ ಬೇಕು ಮಾವಿನ ಹಣ್ಣಿನ ಕಾಲದಲ್ಲಿ.

ಕಾಡು ಮಾವಿನ ಹಣ್ಣಿನ ಪಾಯಸ ಒಮ್ಮೆ ಮಾಡಿ ನೋಡಿ ಎಷ್ಟು ರುಚಿ ಗೊತ್ತುಂಟಾ( ಬೇಯಿಸಿದಾಗ ಹಿಟ್ಟು ಹಿಟ್ಟು ಆಗುವ ಮಾವಿನ ಹಣ್ಣು ಪಾಯಸಕ್ಕೆ ಸೂಕ್ತ) ಹದಾ ಹುಳಿ ಸಿಹಿ ಪಾಯಸ ತಣ್ಣಗೆ ತಿನ್ನಲು ರುಚಿ. ಪಾಯಸ ಮಾಡಿ ಸ್ವಲ್ಪ ತಣ್ಣಗಾದ ಮೇಲೆ ಸವಿಯಲು ತುಂಬಾ ಖುಷಿ(ಪ್ರಿಜ್ ನಲ್ಲಿಟ್ಟು ತಿಂದರೆ ಸೂಪರ್ ರುಚಿ). ಮಾವಿನ ಹಣ್ಣಿನ ರಸ ತೆಗೆದು ಸಕ್ಕರೆ ಮಿಶ್ರ ಮಾಡಿ ತೆಗೆದಿಟ್ಟರೆ ಅಕಾಲದಲ್ಲೂ ಜ್ಯೂಸ್ ಮಾಡಿ ಮಾವಿನ ಹಣ್ಣನ್ನು ಸವಿಯ ಬಹುದು. ಅಪಾರ ಪೋಷಕಾಂಶಗಳನ್ನು ಹೊಂದಿರುವ ಮಾವಿನ ಹಣ್ಣುಗಳು ಪ್ರಕೃತಿ ನಮಗೆ ಕೊಟ್ಟ ಅಪೂರ್ವ ಉಡುಗೊರೆಯಲ್ಲವೇ. ಮಾವಿನ ಹಣ್ಣುಗಳ ತಳಿಗಳನ್ನು ಉಳಿಸೋಣ, ನಮ್ಮ ಮುಂದಿನ ಪೀಳಿಗೆಗೆ ವರ್ಗಾಯಿಸೋಣ………………

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

Published by
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

Recent Posts

ವಯನಾಡಿನಲ್ಲಿ ಮತ್ತೆ ಭೂಕುಸಿತ ಭೀತಿ- ಸುರಂಗ ಯೋಜನಾ ಸ್ಥಳದಲ್ಲಿ ಮಣ್ಣು ಕುಸಿತ, ಹಲವರು ಸಿಲುಕಿರುವ ಶಂಕೆ

ವಯನಾಡಿನ ಮೆಪ್ಪಾಡಿ ಸಮೀಪ ಸುರಂಗ ಯೋಜನಾ ಪ್ರದೇಶದಲ್ಲಿ ಭೂಕುಸಿತ ಸಂಭವಿಸಿದ್ದು, ಹಲವರು ಸಿಲುಕಿರುವ…

2 hours ago

ಹವಾಮಾನ ವರದಿ | 07-07-2026 | ಕರ್ನಾಟಕದಲ್ಲಿ ಇನ್ನೂ ಮೂರು ದಿನ ಮಳೆ – ಜುಲೈ 11 ರಿಂದ ಮಳೆ ತೀವ್ರ ಇಳಿಕೆ ಸಾಧ್ಯತೆ

ಕರ್ನಾಟಕದಲ್ಲಿ ಇನ್ನೂ ಕೆಲ ದಿನ ಮಳೆ ಮುಂದುವರಿಯಲಿದ್ದು, ಜುಲೈ 11ರಿಂದ ರಾಜ್ಯಾದ್ಯಂತ ಮಳೆಯ…

3 hours ago

ತೂಗುಸೇತುವೆಗಳ ಸರದಾರ ಡಾ. ಗಿರೀಶ್‌ ಭಾರದ್ವಾಜ್‌ ಅವರಿಗೆ ಗ್ರಾಮೀಣ ಭಾರತದ ಭಾವಪೂರ್ಣ ನಮನ

ತೂಗುಸೇತುವೆಗಳ ಮೂಲಕ ಸಾವಿರಾರು ಗ್ರಾಮಗಳ ಬದುಕನ್ನು ಜೋಡಿಸಿದ ಪದ್ಮಶ್ರೀ ಡಾ. ಗಿರೀಶ್‌ ಭಾರದ್ವಾಜ್‌ಗೆ…

3 hours ago

ಪದ್ಮಶ್ರೀ ಡಾ. ಗಿರೀಶ್‌ ಭಾರದ್ವಾಜ್‌ ನಿಧನ – ‘ತೂಗುಸೇತುವೆಗಳ ಸರದಾರ’ ಇನ್ನಿಲ್ಲ

ಪದ್ಮಶ್ರೀ ಪುರಸ್ಕೃತ ಡಾ. ಗಿರೀಶ್‌ ಭಾರದ್ವಾಜ್‌ ಅವರು ನಿಧನರಾಗಿದ್ದಾರೆ. ಕಡಿಮೆ ವೆಚ್ಚದ ತೂಗುಸೇತುವೆಗಳ…

7 hours ago

ಸಂಕಷ್ಟದಿಂದ ರೈತರನ್ನು ರಕ್ಷಿಸುವ ಶಕ್ತಿ ಗೋ ಆಧಾರಿತ ಆರ್ಥಿಕತೆಗಿದೆ – ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡಣವೀಸ್

ಗೋ ಆಧಾರಿತ ಆರ್ಥಿಕ ವ್ಯವಸ್ಥೆ ರೈತರ ಸಂಕಷ್ಟಕ್ಕೆ ಶಾಶ್ವತ ಪರಿಹಾರ ನೀಡಬಲ್ಲದು ಎಂದು…

7 hours ago

ಜೂನ್‌ನಲ್ಲಿ 40% ಮಳೆ ಕೊರತೆ – ಜುಲೈನಲ್ಲಿ ಮುಂಗಾರು ಭರ್ಜರಿ..! ದೇಶಾದ್ಯಂತ ಮಳೆ ಚುರುಕು

ಜೂನ್‌ನಲ್ಲಿ ದಾಖಲಾಗಿದ್ದ ಮಳೆ ಕೊರತೆ ಜುಲೈ ಆರಂಭದ ಭಾರೀ ಮಳೆಯಿಂದ ವೇಗವಾಗಿ ಕಡಿಮೆಯಾಗುತ್ತಿದೆ.…

18 hours ago