ಶೀಘ್ರದಲ್ಲೇ ಮಾವು ಕೃಷಿ ಪ್ರವಾಸಗಳನ್ನು ಪ್ರಾರಂಭಿಸಲಿರುವ ಕರ್ನಾಟಕ ಸರ್ಕಾರ

May 20, 2022
9:12 PM

ಕರ್ನಾಟಕ ರಾಜ್ಯ ಮಾವು ಅಭಿವೃದ್ಧಿ ಮತ್ತು ಮಾರುಕಟ್ಟೆ ನಿಗಮ ನಿಯಮಿತ  ಶೀಘ್ರದಲ್ಲೇ ರಾಜ್ಯದಲ್ಲಿ ಮಾವು-ಪಿಕ್ಕಿಂಗ್ ಪ್ರವಾಸೋದ್ಯಮಕ್ಕೆ ನೋಂದಣಿ ಪ್ರಾರಂಭಿಸಲಿದೆ. ಕೆಎಸ್‌ಎಂಡಿಎಂಸಿಎಲ್ ಕಳೆದ ಕೆಲವು ವರ್ಷಗಳಿಂದ ರಾಜ್ಯದಲ್ಲಿ ಮಾವು ಪಿಕ್ಕಿಂಗ್ ಟೂರಿಸಂ ಅನ್ನು ಆಯೋಜಿಸುತ್ತಿದ್ದು, ಮಕ್ಕಳು ಮತ್ತು ಹಿರಿಯ ನಾಗರಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ನಿಗಮದ ವೆಬ್‌ಸೈಟ್‌ನಲ್ಲಿ ಮಾವು ಪಿಕ್ಕಿಂಗ್ ಪ್ರವಾಸೋದ್ಯಮಕ್ಕೆ ನೋಂದಣಿ ಶೀಘ್ರದಲ್ಲೇ ಪ್ರಾರಂಭವಾಗಲಿದೆ. ಮುಂದಿನ ದಿನಗಳಲ್ಲಿ ಪ್ರವಾಸಗಳನ್ನು ಹೆಚ್ಚು ಜನಪ್ರಿಯಗೊಳಿಸುವ ಪ್ರಕ್ರಿಯೆಯಲ್ಲಿ ನಿಗಮವು ತೊಡಗಿದೆ. ಈ ಯೋಜನೆ ರೈತರಿಗೆ ನೆರವಾಗಲಿದೆ. ವೆಬ್‌ಸೈಟ್‌ನಲ್ಲಿ ನೋಂದಾಯಿಸಿಕೊಳ್ಳುವ ಜನರು ಮಾವಿನ ತೋಟಗಳಲ್ಲಿ ತಾಜಾ ಹಣ್ಣುಗಳನ್ನು ಕಿತ್ತು ತಿನ್ನುತ್ತಾರೆ ಮತ್ತು ಸ್ಥಳೀಯ ಪಾಕಪದ್ಧತಿಗಳನ್ನು ಸವಿಯಲು ಅವಕಾಶ ಇರುತ್ತದೆ. ಪ್ರವಾಸದ ವೇಳೆ ಮಾರುಕಟ್ಟೆಯಲ್ಲಿ ಮಾರಾಟವಾಗುವ ದರಕ್ಕಿಂತ ಕಡಿಮೆ ಬೆಲೆಗೆ ರೈತರು ಹಣ್ಣುಗಳನ್ನು ಮಾರಾಟ ಮಾಡುತ್ತಾರೆ.

ಬೆಂಗಳೂರಿನಿಂದ ರಾಮನಗರ ಅಥವಾ ಕೋಲಾರ ಜಿಲ್ಲೆಗಳ ಮಾವಿನ ತೋಟಗಳಿಗೆ ನಿಗಮವು ಸದ್ಯ ಜನರನ್ನು ಕರೆದೊಯ್ಯುವ ಮೂಲಕ ಭಾನುವಾರದಂದು ತೋಟಗಳಿಗೆ ಮಾವು ಪ್ರವಾಸ ನಡೆಯಲಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ
July 21, 2026
4:32 PM
by: ಸಾಯಿಶೇಖರ್ ಕರಿಕಳ
ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ
July 20, 2026
10:59 PM
by: ದ ರೂರಲ್ ಮಿರರ್.ಕಾಂ
ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್
July 20, 2026
10:18 AM
by: ದ ರೂರಲ್ ಮಿರರ್.ಕಾಂ
ರಾಜ್ಯದಲ್ಲಿ ಬರದ ಛಾಯೆ | 178 ತಾಲ್ಲೂಕುಗಳಲ್ಲಿ ತೀವ್ರ ಮಳೆ ಕೊರತೆ, ಜಲಾಶಯಗಳ ನೀರಿನ ಮಟ್ಟ ಶೇ.40ಕ್ಕೆ ಕುಸಿತ
July 19, 2026
10:17 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror