ಕರ್ನಾಟಕ ರಾಜ್ಯ ಮಾವು ಅಭಿವೃದ್ಧಿ ಮತ್ತು ಮಾರುಕಟ್ಟೆ ನಿಗಮ ನಿಯಮಿತ ಶೀಘ್ರದಲ್ಲೇ ರಾಜ್ಯದಲ್ಲಿ ಮಾವು-ಪಿಕ್ಕಿಂಗ್ ಪ್ರವಾಸೋದ್ಯಮಕ್ಕೆ ನೋಂದಣಿ ಪ್ರಾರಂಭಿಸಲಿದೆ. ಕೆಎಸ್ಎಂಡಿಎಂಸಿಎಲ್ ಕಳೆದ ಕೆಲವು ವರ್ಷಗಳಿಂದ ರಾಜ್ಯದಲ್ಲಿ ಮಾವು ಪಿಕ್ಕಿಂಗ್ ಟೂರಿಸಂ ಅನ್ನು ಆಯೋಜಿಸುತ್ತಿದ್ದು, ಮಕ್ಕಳು ಮತ್ತು ಹಿರಿಯ ನಾಗರಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ನಿಗಮದ ವೆಬ್ಸೈಟ್ನಲ್ಲಿ ಮಾವು ಪಿಕ್ಕಿಂಗ್ ಪ್ರವಾಸೋದ್ಯಮಕ್ಕೆ ನೋಂದಣಿ ಶೀಘ್ರದಲ್ಲೇ ಪ್ರಾರಂಭವಾಗಲಿದೆ. ಮುಂದಿನ ದಿನಗಳಲ್ಲಿ ಪ್ರವಾಸಗಳನ್ನು ಹೆಚ್ಚು ಜನಪ್ರಿಯಗೊಳಿಸುವ ಪ್ರಕ್ರಿಯೆಯಲ್ಲಿ ನಿಗಮವು ತೊಡಗಿದೆ. ಈ ಯೋಜನೆ ರೈತರಿಗೆ ನೆರವಾಗಲಿದೆ. ವೆಬ್ಸೈಟ್ನಲ್ಲಿ ನೋಂದಾಯಿಸಿಕೊಳ್ಳುವ ಜನರು ಮಾವಿನ ತೋಟಗಳಲ್ಲಿ ತಾಜಾ ಹಣ್ಣುಗಳನ್ನು ಕಿತ್ತು ತಿನ್ನುತ್ತಾರೆ ಮತ್ತು ಸ್ಥಳೀಯ ಪಾಕಪದ್ಧತಿಗಳನ್ನು ಸವಿಯಲು ಅವಕಾಶ ಇರುತ್ತದೆ. ಪ್ರವಾಸದ ವೇಳೆ ಮಾರುಕಟ್ಟೆಯಲ್ಲಿ ಮಾರಾಟವಾಗುವ ದರಕ್ಕಿಂತ ಕಡಿಮೆ ಬೆಲೆಗೆ ರೈತರು ಹಣ್ಣುಗಳನ್ನು ಮಾರಾಟ ಮಾಡುತ್ತಾರೆ.
ಬೆಂಗಳೂರಿನಿಂದ ರಾಮನಗರ ಅಥವಾ ಕೋಲಾರ ಜಿಲ್ಲೆಗಳ ಮಾವಿನ ತೋಟಗಳಿಗೆ ನಿಗಮವು ಸದ್ಯ ಜನರನ್ನು ಕರೆದೊಯ್ಯುವ ಮೂಲಕ ಭಾನುವಾರದಂದು ತೋಟಗಳಿಗೆ ಮಾವು ಪ್ರವಾಸ ನಡೆಯಲಿದೆ.
ಜೀವನವೆಂದರೆ ಕೇವಲ ಉಸಿರಾಟವಲ್ಲ; ಅದು ಅನುಭವಗಳ ಹೂಗುಚ್ಛ, ಭಾವನೆಗಳ ಹಬ್ಬ, ತತ್ತ್ವದ ಹಾದಿ.…
ಗೋವಾದಲ್ಲಿ ಗೇರು ತೋಟಗಳ ಮೇಲೆ ಕೋತಿಗಳ ದಾಳಿ ಆರಂಭವಾಗಿದೆ. ಇದು ಕರಾವಳಿ ಕರ್ನಾಟಕದ…
ಗ್ರಾಮೀಣ ಮಕ್ಕಳಿಗೆ ಮಣ್ಣಿನ ಪಾಠ, ಬದುಕಿನ ಶಿಕ್ಷಣ ಮತ್ತು ಅಂಕದ ಶಿಕ್ಷಣದ ನಡುವಿನ…
ಜಾಗತಿಕ ಕೋಕೋ ಬೆಲೆಗಳು ಒಂದು ವರ್ಷದ ಅವಧಿಯಲ್ಲಿ ಅರ್ಧದಷ್ಟು ಕುಸಿದಿರುವ ಹಿನ್ನೆಲೆಯಲ್ಲಿ ಪಶ್ಚಿಮ…
ಭಾರತ ಮತ್ತು ಬಾಂಗ್ಲಾದೇಶದಲ್ಲಿ ಮೂರು ನಿಪಾ ಪ್ರಕರಣಗಳು ದೃಢಪಟ್ಟಿದ್ದರೂ, ಜಾಗತಿಕ ಹಾಗೂ ಪ್ರಾದೇಶಿಕ…
ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಾವಳದಲ್ಲಿ ಕಡಲಾಮೆ ಮೊಟ್ಟೆಯಿಂದ ಹೊರ ಬಂದ…