ಕರ್ನಾಟಕ ರಾಜ್ಯ ಮಾವು ಅಭಿವೃದ್ಧಿ ಮತ್ತು ಮಾರುಕಟ್ಟೆ ನಿಗಮ ನಿಯಮಿತ ಶೀಘ್ರದಲ್ಲೇ ರಾಜ್ಯದಲ್ಲಿ ಮಾವು-ಪಿಕ್ಕಿಂಗ್ ಪ್ರವಾಸೋದ್ಯಮಕ್ಕೆ ನೋಂದಣಿ ಪ್ರಾರಂಭಿಸಲಿದೆ. ಕೆಎಸ್ಎಂಡಿಎಂಸಿಎಲ್ ಕಳೆದ ಕೆಲವು ವರ್ಷಗಳಿಂದ ರಾಜ್ಯದಲ್ಲಿ ಮಾವು ಪಿಕ್ಕಿಂಗ್ ಟೂರಿಸಂ ಅನ್ನು ಆಯೋಜಿಸುತ್ತಿದ್ದು, ಮಕ್ಕಳು ಮತ್ತು ಹಿರಿಯ ನಾಗರಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ನಿಗಮದ ವೆಬ್ಸೈಟ್ನಲ್ಲಿ ಮಾವು ಪಿಕ್ಕಿಂಗ್ ಪ್ರವಾಸೋದ್ಯಮಕ್ಕೆ ನೋಂದಣಿ ಶೀಘ್ರದಲ್ಲೇ ಪ್ರಾರಂಭವಾಗಲಿದೆ. ಮುಂದಿನ ದಿನಗಳಲ್ಲಿ ಪ್ರವಾಸಗಳನ್ನು ಹೆಚ್ಚು ಜನಪ್ರಿಯಗೊಳಿಸುವ ಪ್ರಕ್ರಿಯೆಯಲ್ಲಿ ನಿಗಮವು ತೊಡಗಿದೆ. ಈ ಯೋಜನೆ ರೈತರಿಗೆ ನೆರವಾಗಲಿದೆ. ವೆಬ್ಸೈಟ್ನಲ್ಲಿ ನೋಂದಾಯಿಸಿಕೊಳ್ಳುವ ಜನರು ಮಾವಿನ ತೋಟಗಳಲ್ಲಿ ತಾಜಾ ಹಣ್ಣುಗಳನ್ನು ಕಿತ್ತು ತಿನ್ನುತ್ತಾರೆ ಮತ್ತು ಸ್ಥಳೀಯ ಪಾಕಪದ್ಧತಿಗಳನ್ನು ಸವಿಯಲು ಅವಕಾಶ ಇರುತ್ತದೆ. ಪ್ರವಾಸದ ವೇಳೆ ಮಾರುಕಟ್ಟೆಯಲ್ಲಿ ಮಾರಾಟವಾಗುವ ದರಕ್ಕಿಂತ ಕಡಿಮೆ ಬೆಲೆಗೆ ರೈತರು ಹಣ್ಣುಗಳನ್ನು ಮಾರಾಟ ಮಾಡುತ್ತಾರೆ.
ಬೆಂಗಳೂರಿನಿಂದ ರಾಮನಗರ ಅಥವಾ ಕೋಲಾರ ಜಿಲ್ಲೆಗಳ ಮಾವಿನ ತೋಟಗಳಿಗೆ ನಿಗಮವು ಸದ್ಯ ಜನರನ್ನು ಕರೆದೊಯ್ಯುವ ಮೂಲಕ ಭಾನುವಾರದಂದು ತೋಟಗಳಿಗೆ ಮಾವು ಪ್ರವಾಸ ನಡೆಯಲಿದೆ.
ಹಲಸಿನ ಹಣ್ಣಿನ ಗುಳಿ ಅಪ್ಪಕ್ಕೆ ಬೇಕಾಗುವ ಸಾಮಗ್ರಿಗಳು : ಹಲಸಿನ ಹಣ್ಣು 2.1/2…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತಾರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಸಾಮನ್ಯವಾಗಿ ಒಂದು ಉತ್ಪನ್ನದ ಉತ್ಪಾದನೆ ಕುಸಿದಾಗ ಅದರ ಬೆಲೆ ಏರಿಕೆ ಆಗುವುದು ಸಹಜ.ಇಲ್ಲಿ…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಪರಾಧ ನಿಯಂತ್ರಣ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡಲು ಮೊದಲ…
ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಹಲವು ಕಡೆ…
ದಾವಣಗೆರೆಯಲ್ಲಿ ವಿಕಸಿತ ಕೃಷಿ ಸಂಕಲ್ಪ ಅಭಿಯಾನವನ್ನು ರಾಷ್ಟ್ರೀಯ ಕೃಷಿ ಕೀಟಬಾಧೆ, ಸಂಶೋಧನಾ ಮಂಡಳಿಯ…