ಕರ್ನಾಟಕ ರಾಜ್ಯ ಮಾವು ಅಭಿವೃದ್ಧಿ ಮತ್ತು ಮಾರುಕಟ್ಟೆ ನಿಗಮ ನಿಯಮಿತ ಶೀಘ್ರದಲ್ಲೇ ರಾಜ್ಯದಲ್ಲಿ ಮಾವು-ಪಿಕ್ಕಿಂಗ್ ಪ್ರವಾಸೋದ್ಯಮಕ್ಕೆ ನೋಂದಣಿ ಪ್ರಾರಂಭಿಸಲಿದೆ. ಕೆಎಸ್ಎಂಡಿಎಂಸಿಎಲ್ ಕಳೆದ ಕೆಲವು ವರ್ಷಗಳಿಂದ ರಾಜ್ಯದಲ್ಲಿ ಮಾವು ಪಿಕ್ಕಿಂಗ್ ಟೂರಿಸಂ ಅನ್ನು ಆಯೋಜಿಸುತ್ತಿದ್ದು, ಮಕ್ಕಳು ಮತ್ತು ಹಿರಿಯ ನಾಗರಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ನಿಗಮದ ವೆಬ್ಸೈಟ್ನಲ್ಲಿ ಮಾವು ಪಿಕ್ಕಿಂಗ್ ಪ್ರವಾಸೋದ್ಯಮಕ್ಕೆ ನೋಂದಣಿ ಶೀಘ್ರದಲ್ಲೇ ಪ್ರಾರಂಭವಾಗಲಿದೆ. ಮುಂದಿನ ದಿನಗಳಲ್ಲಿ ಪ್ರವಾಸಗಳನ್ನು ಹೆಚ್ಚು ಜನಪ್ರಿಯಗೊಳಿಸುವ ಪ್ರಕ್ರಿಯೆಯಲ್ಲಿ ನಿಗಮವು ತೊಡಗಿದೆ. ಈ ಯೋಜನೆ ರೈತರಿಗೆ ನೆರವಾಗಲಿದೆ. ವೆಬ್ಸೈಟ್ನಲ್ಲಿ ನೋಂದಾಯಿಸಿಕೊಳ್ಳುವ ಜನರು ಮಾವಿನ ತೋಟಗಳಲ್ಲಿ ತಾಜಾ ಹಣ್ಣುಗಳನ್ನು ಕಿತ್ತು ತಿನ್ನುತ್ತಾರೆ ಮತ್ತು ಸ್ಥಳೀಯ ಪಾಕಪದ್ಧತಿಗಳನ್ನು ಸವಿಯಲು ಅವಕಾಶ ಇರುತ್ತದೆ. ಪ್ರವಾಸದ ವೇಳೆ ಮಾರುಕಟ್ಟೆಯಲ್ಲಿ ಮಾರಾಟವಾಗುವ ದರಕ್ಕಿಂತ ಕಡಿಮೆ ಬೆಲೆಗೆ ರೈತರು ಹಣ್ಣುಗಳನ್ನು ಮಾರಾಟ ಮಾಡುತ್ತಾರೆ.
ಬೆಂಗಳೂರಿನಿಂದ ರಾಮನಗರ ಅಥವಾ ಕೋಲಾರ ಜಿಲ್ಲೆಗಳ ಮಾವಿನ ತೋಟಗಳಿಗೆ ನಿಗಮವು ಸದ್ಯ ಜನರನ್ನು ಕರೆದೊಯ್ಯುವ ಮೂಲಕ ಭಾನುವಾರದಂದು ತೋಟಗಳಿಗೆ ಮಾವು ಪ್ರವಾಸ ನಡೆಯಲಿದೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…
ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…
ಅಡಿಕೆಯ ಮೈಟ್ ಬಗ್ಗೆ ಸಿಪಿಸಿಆರ್ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…