ಕರ್ನಾಟಕ ರಾಜ್ಯ ಮಾವು ಅಭಿವೃದ್ಧಿ ಮತ್ತು ಮಾರುಕಟ್ಟೆ ನಿಗಮ ನಿಯಮಿತ ಶೀಘ್ರದಲ್ಲೇ ರಾಜ್ಯದಲ್ಲಿ ಮಾವು-ಪಿಕ್ಕಿಂಗ್ ಪ್ರವಾಸೋದ್ಯಮಕ್ಕೆ ನೋಂದಣಿ ಪ್ರಾರಂಭಿಸಲಿದೆ. ಕೆಎಸ್ಎಂಡಿಎಂಸಿಎಲ್ ಕಳೆದ ಕೆಲವು ವರ್ಷಗಳಿಂದ ರಾಜ್ಯದಲ್ಲಿ ಮಾವು ಪಿಕ್ಕಿಂಗ್ ಟೂರಿಸಂ ಅನ್ನು ಆಯೋಜಿಸುತ್ತಿದ್ದು, ಮಕ್ಕಳು ಮತ್ತು ಹಿರಿಯ ನಾಗರಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ನಿಗಮದ ವೆಬ್ಸೈಟ್ನಲ್ಲಿ ಮಾವು ಪಿಕ್ಕಿಂಗ್ ಪ್ರವಾಸೋದ್ಯಮಕ್ಕೆ ನೋಂದಣಿ ಶೀಘ್ರದಲ್ಲೇ ಪ್ರಾರಂಭವಾಗಲಿದೆ. ಮುಂದಿನ ದಿನಗಳಲ್ಲಿ ಪ್ರವಾಸಗಳನ್ನು ಹೆಚ್ಚು ಜನಪ್ರಿಯಗೊಳಿಸುವ ಪ್ರಕ್ರಿಯೆಯಲ್ಲಿ ನಿಗಮವು ತೊಡಗಿದೆ. ಈ ಯೋಜನೆ ರೈತರಿಗೆ ನೆರವಾಗಲಿದೆ. ವೆಬ್ಸೈಟ್ನಲ್ಲಿ ನೋಂದಾಯಿಸಿಕೊಳ್ಳುವ ಜನರು ಮಾವಿನ ತೋಟಗಳಲ್ಲಿ ತಾಜಾ ಹಣ್ಣುಗಳನ್ನು ಕಿತ್ತು ತಿನ್ನುತ್ತಾರೆ ಮತ್ತು ಸ್ಥಳೀಯ ಪಾಕಪದ್ಧತಿಗಳನ್ನು ಸವಿಯಲು ಅವಕಾಶ ಇರುತ್ತದೆ. ಪ್ರವಾಸದ ವೇಳೆ ಮಾರುಕಟ್ಟೆಯಲ್ಲಿ ಮಾರಾಟವಾಗುವ ದರಕ್ಕಿಂತ ಕಡಿಮೆ ಬೆಲೆಗೆ ರೈತರು ಹಣ್ಣುಗಳನ್ನು ಮಾರಾಟ ಮಾಡುತ್ತಾರೆ.
ಬೆಂಗಳೂರಿನಿಂದ ರಾಮನಗರ ಅಥವಾ ಕೋಲಾರ ಜಿಲ್ಲೆಗಳ ಮಾವಿನ ತೋಟಗಳಿಗೆ ನಿಗಮವು ಸದ್ಯ ಜನರನ್ನು ಕರೆದೊಯ್ಯುವ ಮೂಲಕ ಭಾನುವಾರದಂದು ತೋಟಗಳಿಗೆ ಮಾವು ಪ್ರವಾಸ ನಡೆಯಲಿದೆ.
ಹಲಸಿನ ಹಾಲು, ದಾಳಿಂಬೆ ಸಿಪ್ಪೆಯ ಸಾರ ಮತ್ತು ಸಿಮ್ವಾಸ್ಟಾಟಿನ್ ಬಳಸಿ ವಿಜ್ಞಾನಿಗಳು ವಸಡು…
ಅಡಿಕೆ ನಿಷೇಧಿಸುವ ಬದಲು ಕಲಬೆರಕೆ ಅಡಿಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ…
ರಂಬುಟಾನ್ ಬೆಲೆ ಕುಸಿದಾಗ ಹಣ್ಣನ್ನು ಫ್ರೀಜ್ ಮಾಡಿ ನಂತರ ಮಾರಾಟ ಮಾಡಿದರೆ ಉತ್ತಮ…
ಕಾಪುವಿನಲ್ಲಿ ನಡೆಯುತ್ತಿರುವ ಕರ್ನಾಟಕ ಸ್ಟೇಟ್ ಸ್ಕೂಲ್ ಚೆಸ್ ಚಾಂಪಿಯನ್ಶಿಪ್ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…
ಕಾಪುವಿನಲ್ಲಿ ಆರಂಭವಾದ ಕರ್ನಾಟಕ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್ಶಿಪ್ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…
ಅಸ್ಸಾಂನ ಇಬ್ಬರು ಅಡಿಕೆ ವ್ಯಾಪಾರಿಗಳಿಗೆ ಸೇರಿದ ₹1.12 ಕೋಟಿ ಮೌಲ್ಯದ 34 ಟನ್…