ಕೋಲಾರ ಜಿಲ್ಲೆಯ ಶ್ರೀನಿವಾಸಪುರ ಎ.ಪಿ.ಎಂ.ಸಿ ಮಾರುಕಟ್ಟೆಯಲ್ಲಿ ಪ್ರತಿನಿತ್ಯ ಅಂದಾಜು 800 ರಿಂದ 900 ಟನ್ ಮಾವು ವಹಿವಾಟು ನಡೆಯುತ್ತಿದೆ. ನಾಳೆ ಮಾವು ಬೆಳೆಗಾರರು ಕರೆ ಕೊಟ್ಟಿರುವ ಬಂದ್ ನಿಂದಾಗಿ ಈಗಾಗಲೇ ಸಂಕಷ್ಟದಲ್ಲಿರುವ ಮಾವು ಬೆಳೆಗಾರರಿಗೆ ಮತ್ತಷ್ಟು ಸಂಕಷ್ಟ ತಂದೊಡ್ಡುವ ಸಾಧ್ಯತೆ ಇದೆ. ಜಿಲ್ಲೆಯ ರೈತರ ಹಿತದೃಷ್ಟಿಯಿಂದ ಮಾವು ಬೆಳೆಗಾರರು ತಮ್ಮ ನಿರ್ಧಾರವನ್ನು ಮರುಪರಿಶೀಲಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಮನವಿ ಮಾಡಿದ್ದಾರೆ.
ಕೋಲಾರದಲ್ಲಿ ಮಾವು ಬೆಳೆಗಾರರಿಗೆ ಈ ಬಾರಿ ನಷ್ಟ ಉಂಟಾಗಿದೆ. ಮಾವಿನ ಹಂಗಾಮಿನ ಆರಂಭದಲ್ಲೇ ಧಾರಣೆ ಕುಸಿತಉಂಟಾಗಿದ್ದು, ಇಳುವರಿ ಕುಸಿತದ ನಡುವೆ ಕಂಗಾಲಾಗಿರುವ ಬೆಳೆಗಾರರಿಗೆ ಈಗ ಧಾರಣೆ ಕುಸಿತವೂ ಸಂಕಷ್ಟ ತಂದಿದೆ. ಹೀಗಾಗಿ ತಕ್ಷಣವೇ ಮಾವಿಗೂ ಬೆಂಬಲ ಬೆಲೆ ಘೋಷಣೆಗೆ ಒತ್ತಾಯ ಕೇಳಿಬಂದಿದೆ.
ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…
ಆದಿಚುಂಚನಗಿರಿಯಲ್ಲಿ ಭೈರವೈಕ್ಯ ಮಂದಿರವನ್ನು ಪ್ರಧಾನಿ ಮೋದಿ ಲೋಕಾರ್ಪಣೆಗೊಳಿಸಿದರು. ರಾಸಾಯನಿಕ ಮುಕ್ತ ಕೃಷಿಗೆ ಆದ್ಯತೆ…
ಸುಳ್ಯದ ವಳಲಂಬೆಯಲ್ಲಿ ಏಪ್ರಿಲ್ 19ರಂದು ‘ಸಂಗೀತ ಸಂಭ್ರಮ’ ಕಾರ್ಯಕ್ರಮ ನಡೆಯಲಿದೆ. ಖ್ಯಾತ ಕಲಾವಿದರಿಂದ…
ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…
ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…
ಈ ವರ್ಷ ಬೇಸಿಗೆ ಬಿತ್ತನೆ 64 ಲಕ್ಷ ಹೆಕ್ಟೇರ್ ದಾಟಿದ್ದು, ಕಳೆದ ವರ್ಷಕ್ಕಿಂತ…