Advertisement
ಸುದ್ದಿಗಳು

ಕೋಲಾರದ 54 ಸಾವಿರ ಹೆಕ್ಟೇರ್‌ನಲ್ಲಿ ಮಾವು ಬೆಳೆ | ಈ ಬಾರಿ ಮಾವು ಬೆಳೆ ಧಾರಣೆ ತೀವ್ರ ಕುಸಿತ

Share

ರಾಜ್ಯದಲ್ಲಿ ಸುಮಾರು ಒಂದೂವರೆ ಲಕ್ಷ ಹೆಕ್ಟೇರ ಪ್ರದೇಶದಲ್ಲಿ ಮಾವು ಬೆಳೆಯಲಾಗುತ್ತದೆ. ಇದರಲ್ಲಿ ಕೋಲಾರ ಜಿಲ್ಲೆಯಲ್ಲಿ 54 ಸಾವಿರ ಹೆಕ್ಟೇರ ಪ್ರದೇಶದಲ್ಲಿ ಮಾವು ಬೆಳೆಯಲಾಗುತ್ತದೆ. ಈ ಪೈಕಿ ಶ್ರೀನಿವಾಸಪುರ ತಾಲೂಕಿನಲ್ಲೇ 48 ಸಾವಿರ ಹೆಕ್ಟೇರ್ ನಲ್ಲಿ ಮಾವು ಕೃಷಿ ನಡೆಯುತ್ತದೆ. ಅಂತರ್ಜಲ ಮಟ್ಟ ಪಾತಾಳಕ್ಕೆ ಕುಸಿದಿದ್ದು ಜಲಕ್ಷಾಮ ಎದುರಾಗಿದ್ದರೂ ರೈತರು ಮಾವು ಬೆಳೆದು ಯಶಸ್ವಿಯಾಗಿದ್ದರು.ಆದರೆ, ಈ ಬಾರಿ ಮಾರುಕಟ್ಟೆಯಲ್ಲಿ ಮಾವು ಬೆಳೆಯ ಧಾರಣೆ ತೀವ್ರ ಕುಸಿದಿದ್ದು ರೈತರು ಸಂಕಷ್ಟ ಎದುರಿಸುವಂತಾಗಿದೆ.

ಈ ಹಿನ್ನೆಲೆಯಲ್ಲಿ ಮಾವು ಬೆಳೆಗೆ ಮಾವು ಬೆಳೆಗೆ ಬೆಂಬಲ ಬೆಲೆಗೆ ರೈತರು ಒತ್ತಾಯಿಸುತ್ತಿದ್ದಾರೆ.  ಈ ಬಾರಿ ಉತ್ತಮ ಪಸಲು ಇದ್ದರೂ ಸರಿಯಾದ ಬೆಲೆ ಇಲ್ಲದ ಕಾರಣ ಸಂಕಷ್ಟ ಎದುರಾಗಿದೆ. ಸೂಕ್ತ ಬೆಲೆ ಇಲ್ಲದಿರುವುದರಿಂದ ಮಾವು ಕೊಯ್ಲು ನಿಲ್ಲಿಸಿದ್ದೇವೆ ಎಂದು ಮಾವು ಬೆಳೆಗಾರ ಹೇಮಂತ್ ಹೇಳುತ್ತಾರೆ. ಮಾವು ಬೆಳೆಗೆ ಬೆಂಬಲ ಬೆಲೆ ನಿಗದಿ ಪಡಿಸಿ ಕೇಂದ್ರ ಸರ್ಕಾರ ರೈತರ ಪರವಾಗಿ ನಿಂತಿರುವುದು ಈ ಸಂಕಷ್ಟದ ಸಮಯದಲ್ಲಿ ಕೊಂಚ ನಿಟ್ಟುಸಿರು ಬಿಡುವಂತಾಗಿದೆ ಎನ್ನುತ್ತಾರೆ ರೈತ ರೈತ ರಾಮಚಂದ್ರಗೌಡ.

ಇದೇ ವೇಳೆ ಈ ಬಾರಿ ಮಾವಿನ ಬೆಲೆ ತೀವ್ರವಾಗಿ ಕುಸಿದಿರುವುದರಿಂದ ಉತ್ತಮ ಬೆಲೆ ಸಿಗದೆ ಬೆಳೆಗಾರರು ಮಾವು ಕೊಯ್ಲು ನಿಲ್ಲಿಸಿದ್ದಾರೆ. ಇದರಿಂದ ಕೂಲಿ ಕೆಲಸ ಸಿಗದೆ ತೊಂದರೆಯಾಗಿದೆ ಎನ್ನುತ್ತಾರೆ ಕಾರ್ಮಿಕ ರಮೇಶ್.

ಈ ಎಲ್ಲಾ ಸಂಕಷ್ಟದ ನಡುವೆ, ಕೇಂದ್ರ ಸರ್ಕಾರ ಮಾರುಕಟ್ಟೆ ಹಸ್ತಕ್ಷೇಪ ಯೋಜನೆ – ಎಂಐಎಸ್ ಅಡಿಯಲ್ಲಿ ಮಾವು ಬೆಳೆಗಾರರಿಗೆ ಬೆಂಬಲ ಬೆಲೆ ನೀಡುತ್ತಿದೆ. 2025-26ನೇ ಮಾರುಕಟ್ಟೆ ವರ್ಷಕ್ಕೆ ಕ್ವಿಂಟಲ್ ಗೆ 1 ಸಾವಿರದ ಆರು ನೂರ ಹದಿನಾರು ರೂಪಾಯಿಗಳ ಬೆಂಬಲ ಬೆಲೆಯಲ್ಲಿ ಗರಿಷ್ಠ 2,50.000 ಮೆಟ್ರಿಕ್ ಟನ್ಗಳಷ್ಟು ಮಾವು ಖರೀದಿಸಲು ನಿರ್ಧರಿಸಲಾಗಿದೆ  ಎಂದು ಜಿಲ್ಲಾಧಿಕಾರಿ ಡಾ.ಎಂ.ಆರ್. ರವಿ ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

E20 ಪೆಟ್ರೋಲ್‌ನಿಂದ ಮೈಲೇಜ್ ಕಡಿಮೆಯಾಗುತ್ತದೆಯೇ? ಹಳೆಯ ವಾಹನಗಳಿಗೆ ಅಪಾಯ ಇದೆಯೇ?

E20 ಪೆಟ್ರೋಲ್ ಬಳಕೆಯಿಂದ ಸುಮಾರು 3–5% ಮೈಲೇಜ್ ಕುಸಿಯುವ ಸಾಧ್ಯತೆ ಇದೆ. ಆದರೆ…

5 minutes ago

ಹವಾಮಾನ ವರದಿ | 06-07-2026 | ಕರ್ನಾಟಕದಲ್ಲಿ ಮಳೆ ಮತ್ತಷ್ಟು ಕಡಿಮೆಯಾಗುವ ಸೂಚನೆ | ಜುಲೈ 10ರಿಂದ ಬಹುತೇಕ ಜಿಲ್ಲೆಗಳಲ್ಲಿ ಬಿಸಿಲಿನ ವಾತಾವರಣ ಸಾಧ್ಯತೆ

ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳು ಗೋಚರಿಸುತ್ತಿವೆ. ಜುಲೈ…

56 minutes ago

ಅಡಿಕೆಯಿಂದ ಹಲಸಿನತ್ತ “ಸಂತೋಷ” ಪಯಣ – ನೀರಿನ ಕೊರತೆಯ ಸವಾಲನ್ನು ಅವಕಾಶವಾಗಿಸಿದ ಕೃಷಿಕ

ನೀರಿನ ಕೊರತೆಯಿಂದ ಅಡಿಕೆ ತೋಟದ ಒಂದು ಭಾಗವನ್ನು ಹಲಸು ತೋಟವನ್ನಾಗಿ ಪರಿವರ್ತಿಸಿದ ಪುತ್ತೂರಿನ…

22 hours ago

ಬಾಳ ಮಧ್ಯಾಹ್ನದ ಲಹರಿ

"ಜೀವನ ಎಷ್ಟು ದೀರ್ಘ ಎಂಬುದಲ್ಲ, ಅದು ಎಷ್ಟು ಅರ್ಥಪೂರ್ಣ ಎಂಬುದೇ ನಿಜವಾದ ಲೆಕ್ಕ.…

1 day ago

ಹವಾಮಾನ ವರದಿ | 05-07-2026 | ರಾಜ್ಯದಲ್ಲಿ ಮಳೆ ಇಳಿಮುಖದತ್ತ? ಜುಲೈ 8–10 ರಿಂದ ಹವಾಮಾನದಲ್ಲಿ ಬದಲಾವಣೆ ಸಾಧ್ಯತೆ

ಜುಲೈ 8ರಿಂದ ರಾಜ್ಯದಲ್ಲಿ ಮಳೆಯ ಪ್ರಮಾಣ ತೀವ್ರವಾಗಿ ಕುಸಿಯುವ ಸಾಧ್ಯತೆ ಇದೆ. ಕರಾವಳಿ…

1 day ago