ರಾಜ್ಯದಲ್ಲಿ ಸುಮಾರು ಒಂದೂವರೆ ಲಕ್ಷ ಹೆಕ್ಟೇರ ಪ್ರದೇಶದಲ್ಲಿ ಮಾವು ಬೆಳೆಯಲಾಗುತ್ತದೆ. ಇದರಲ್ಲಿ ಕೋಲಾರ ಜಿಲ್ಲೆಯಲ್ಲಿ 54 ಸಾವಿರ ಹೆಕ್ಟೇರ ಪ್ರದೇಶದಲ್ಲಿ ಮಾವು ಬೆಳೆಯಲಾಗುತ್ತದೆ. ಈ ಪೈಕಿ ಶ್ರೀನಿವಾಸಪುರ ತಾಲೂಕಿನಲ್ಲೇ 48 ಸಾವಿರ ಹೆಕ್ಟೇರ್ ನಲ್ಲಿ ಮಾವು ಕೃಷಿ ನಡೆಯುತ್ತದೆ. ಅಂತರ್ಜಲ ಮಟ್ಟ ಪಾತಾಳಕ್ಕೆ ಕುಸಿದಿದ್ದು ಜಲಕ್ಷಾಮ ಎದುರಾಗಿದ್ದರೂ ರೈತರು ಮಾವು ಬೆಳೆದು ಯಶಸ್ವಿಯಾಗಿದ್ದರು.ಆದರೆ, ಈ ಬಾರಿ ಮಾರುಕಟ್ಟೆಯಲ್ಲಿ ಮಾವು ಬೆಳೆಯ ಧಾರಣೆ ತೀವ್ರ ಕುಸಿದಿದ್ದು ರೈತರು ಸಂಕಷ್ಟ ಎದುರಿಸುವಂತಾಗಿದೆ.
ಈ ಹಿನ್ನೆಲೆಯಲ್ಲಿ ಮಾವು ಬೆಳೆಗೆ ಮಾವು ಬೆಳೆಗೆ ಬೆಂಬಲ ಬೆಲೆಗೆ ರೈತರು ಒತ್ತಾಯಿಸುತ್ತಿದ್ದಾರೆ. ಈ ಬಾರಿ ಉತ್ತಮ ಪಸಲು ಇದ್ದರೂ ಸರಿಯಾದ ಬೆಲೆ ಇಲ್ಲದ ಕಾರಣ ಸಂಕಷ್ಟ ಎದುರಾಗಿದೆ. ಸೂಕ್ತ ಬೆಲೆ ಇಲ್ಲದಿರುವುದರಿಂದ ಮಾವು ಕೊಯ್ಲು ನಿಲ್ಲಿಸಿದ್ದೇವೆ ಎಂದು ಮಾವು ಬೆಳೆಗಾರ ಹೇಮಂತ್ ಹೇಳುತ್ತಾರೆ. ಮಾವು ಬೆಳೆಗೆ ಬೆಂಬಲ ಬೆಲೆ ನಿಗದಿ ಪಡಿಸಿ ಕೇಂದ್ರ ಸರ್ಕಾರ ರೈತರ ಪರವಾಗಿ ನಿಂತಿರುವುದು ಈ ಸಂಕಷ್ಟದ ಸಮಯದಲ್ಲಿ ಕೊಂಚ ನಿಟ್ಟುಸಿರು ಬಿಡುವಂತಾಗಿದೆ ಎನ್ನುತ್ತಾರೆ ರೈತ ರೈತ ರಾಮಚಂದ್ರಗೌಡ.
ಇದೇ ವೇಳೆ ಈ ಬಾರಿ ಮಾವಿನ ಬೆಲೆ ತೀವ್ರವಾಗಿ ಕುಸಿದಿರುವುದರಿಂದ ಉತ್ತಮ ಬೆಲೆ ಸಿಗದೆ ಬೆಳೆಗಾರರು ಮಾವು ಕೊಯ್ಲು ನಿಲ್ಲಿಸಿದ್ದಾರೆ. ಇದರಿಂದ ಕೂಲಿ ಕೆಲಸ ಸಿಗದೆ ತೊಂದರೆಯಾಗಿದೆ ಎನ್ನುತ್ತಾರೆ ಕಾರ್ಮಿಕ ರಮೇಶ್.
ಈ ಎಲ್ಲಾ ಸಂಕಷ್ಟದ ನಡುವೆ, ಕೇಂದ್ರ ಸರ್ಕಾರ ಮಾರುಕಟ್ಟೆ ಹಸ್ತಕ್ಷೇಪ ಯೋಜನೆ – ಎಂಐಎಸ್ ಅಡಿಯಲ್ಲಿ ಮಾವು ಬೆಳೆಗಾರರಿಗೆ ಬೆಂಬಲ ಬೆಲೆ ನೀಡುತ್ತಿದೆ. 2025-26ನೇ ಮಾರುಕಟ್ಟೆ ವರ್ಷಕ್ಕೆ ಕ್ವಿಂಟಲ್ ಗೆ 1 ಸಾವಿರದ ಆರು ನೂರ ಹದಿನಾರು ರೂಪಾಯಿಗಳ ಬೆಂಬಲ ಬೆಲೆಯಲ್ಲಿ ಗರಿಷ್ಠ 2,50.000 ಮೆಟ್ರಿಕ್ ಟನ್ಗಳಷ್ಟು ಮಾವು ಖರೀದಿಸಲು ನಿರ್ಧರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಎಂ.ಆರ್. ರವಿ ತಿಳಿಸಿದ್ದಾರೆ.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…