ರಾಜ್ಯದಲ್ಲಿ ಸುಮಾರು ಒಂದೂವರೆ ಲಕ್ಷ ಹೆಕ್ಟೇರ ಪ್ರದೇಶದಲ್ಲಿ ಮಾವು ಬೆಳೆಯಲಾಗುತ್ತದೆ. ಇದರಲ್ಲಿ ಕೋಲಾರ ಜಿಲ್ಲೆಯಲ್ಲಿ 54 ಸಾವಿರ ಹೆಕ್ಟೇರ ಪ್ರದೇಶದಲ್ಲಿ ಮಾವು ಬೆಳೆಯಲಾಗುತ್ತದೆ. ಈ ಪೈಕಿ ಶ್ರೀನಿವಾಸಪುರ ತಾಲೂಕಿನಲ್ಲೇ 48 ಸಾವಿರ ಹೆಕ್ಟೇರ್ ನಲ್ಲಿ ಮಾವು ಕೃಷಿ ನಡೆಯುತ್ತದೆ. ಅಂತರ್ಜಲ ಮಟ್ಟ ಪಾತಾಳಕ್ಕೆ ಕುಸಿದಿದ್ದು ಜಲಕ್ಷಾಮ ಎದುರಾಗಿದ್ದರೂ ರೈತರು ಮಾವು ಬೆಳೆದು ಯಶಸ್ವಿಯಾಗಿದ್ದರು.ಆದರೆ, ಈ ಬಾರಿ ಮಾರುಕಟ್ಟೆಯಲ್ಲಿ ಮಾವು ಬೆಳೆಯ ಧಾರಣೆ ತೀವ್ರ ಕುಸಿದಿದ್ದು ರೈತರು ಸಂಕಷ್ಟ ಎದುರಿಸುವಂತಾಗಿದೆ.
ಈ ಹಿನ್ನೆಲೆಯಲ್ಲಿ ಮಾವು ಬೆಳೆಗೆ ಮಾವು ಬೆಳೆಗೆ ಬೆಂಬಲ ಬೆಲೆಗೆ ರೈತರು ಒತ್ತಾಯಿಸುತ್ತಿದ್ದಾರೆ. ಈ ಬಾರಿ ಉತ್ತಮ ಪಸಲು ಇದ್ದರೂ ಸರಿಯಾದ ಬೆಲೆ ಇಲ್ಲದ ಕಾರಣ ಸಂಕಷ್ಟ ಎದುರಾಗಿದೆ. ಸೂಕ್ತ ಬೆಲೆ ಇಲ್ಲದಿರುವುದರಿಂದ ಮಾವು ಕೊಯ್ಲು ನಿಲ್ಲಿಸಿದ್ದೇವೆ ಎಂದು ಮಾವು ಬೆಳೆಗಾರ ಹೇಮಂತ್ ಹೇಳುತ್ತಾರೆ. ಮಾವು ಬೆಳೆಗೆ ಬೆಂಬಲ ಬೆಲೆ ನಿಗದಿ ಪಡಿಸಿ ಕೇಂದ್ರ ಸರ್ಕಾರ ರೈತರ ಪರವಾಗಿ ನಿಂತಿರುವುದು ಈ ಸಂಕಷ್ಟದ ಸಮಯದಲ್ಲಿ ಕೊಂಚ ನಿಟ್ಟುಸಿರು ಬಿಡುವಂತಾಗಿದೆ ಎನ್ನುತ್ತಾರೆ ರೈತ ರೈತ ರಾಮಚಂದ್ರಗೌಡ.
ಇದೇ ವೇಳೆ ಈ ಬಾರಿ ಮಾವಿನ ಬೆಲೆ ತೀವ್ರವಾಗಿ ಕುಸಿದಿರುವುದರಿಂದ ಉತ್ತಮ ಬೆಲೆ ಸಿಗದೆ ಬೆಳೆಗಾರರು ಮಾವು ಕೊಯ್ಲು ನಿಲ್ಲಿಸಿದ್ದಾರೆ. ಇದರಿಂದ ಕೂಲಿ ಕೆಲಸ ಸಿಗದೆ ತೊಂದರೆಯಾಗಿದೆ ಎನ್ನುತ್ತಾರೆ ಕಾರ್ಮಿಕ ರಮೇಶ್.
ಈ ಎಲ್ಲಾ ಸಂಕಷ್ಟದ ನಡುವೆ, ಕೇಂದ್ರ ಸರ್ಕಾರ ಮಾರುಕಟ್ಟೆ ಹಸ್ತಕ್ಷೇಪ ಯೋಜನೆ – ಎಂಐಎಸ್ ಅಡಿಯಲ್ಲಿ ಮಾವು ಬೆಳೆಗಾರರಿಗೆ ಬೆಂಬಲ ಬೆಲೆ ನೀಡುತ್ತಿದೆ. 2025-26ನೇ ಮಾರುಕಟ್ಟೆ ವರ್ಷಕ್ಕೆ ಕ್ವಿಂಟಲ್ ಗೆ 1 ಸಾವಿರದ ಆರು ನೂರ ಹದಿನಾರು ರೂಪಾಯಿಗಳ ಬೆಂಬಲ ಬೆಲೆಯಲ್ಲಿ ಗರಿಷ್ಠ 2,50.000 ಮೆಟ್ರಿಕ್ ಟನ್ಗಳಷ್ಟು ಮಾವು ಖರೀದಿಸಲು ನಿರ್ಧರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಎಂ.ಆರ್. ರವಿ ತಿಳಿಸಿದ್ದಾರೆ.
ಸೆ.8ರಿಂದ ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮತ್ತೆ ಮಳೆ ಚಟುವಟಿಕೆ ಹೆಚ್ಚಾಗುವ ಸಾಧ್ಯತೆಯಿದೆ.…
ಬೇರೊಬ್ಬರ ಬದುಕಿನೊಂದಿಗೆ ನಿರಂತರ ಹೋಲಿಕೆ ನಮ್ಮ ನೆಮ್ಮದಿ ಮತ್ತು ಆತ್ಮವಿಶ್ವಾಸವನ್ನು ಕಸಿದುಕೊಳ್ಳಬಹುದು. ಮತ್ತೊಬ್ಬರ…
ಶಿಕ್ಷಕರ ದಿನಾಚರಣೆ ಶಿಕ್ಷಕರನ್ನು ಸನ್ಮಾನಿಸುವ ದಿನ ಮಾತ್ರವಲ್ಲ, ಶಿಕ್ಷಕತ್ವ ಮತ್ತು ಶಿಕ್ಷಣದ ನಿಜವಾದ…
ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…
ಬಿಹಾರದ ಯುರೆನ್ನಲ್ಲಿ ಪತ್ತೆಯಾದ 5 ಲಕ್ಷಕ್ಕೂ ಹೆಚ್ಚು ಸುಟ್ಟ ಬೀಜಗಳ ಅಧ್ಯಯನವು ಭಾರತದ…
ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…