ಅಡಿಕೆ ನಾಡಿನಲ್ಲಿ ಅಡಿಕೆ ಧಾರಣೆ ಏರಿಕೆಯ ಸಿಹಿ ಸುದ್ದಿಯ ಜೊತೆಗೇ ಈಗ ಬರ್ಮಾ ಅಡಿಕೆ ವ್ಯಾಪಕವಾಗಿ ಕಳ್ಳಸಾಗಾಣಿಕೆಗೆ ಪ್ರಯತ್ನ ನಡೆಯುತ್ತಿದೆ. ಇಲಾಖೆಗಳು ಕಟ್ಟುನಿಟ್ಟಿನ ಕ್ರಮಗಳನ್ನು ಈಗಾಗಲೇ ಕೈಗೊಂಡಿದ್ದಾರೆ. ಇದೀಗ ಮತ್ತೊಂದು ಅಡಿಕೆ ಕಳ್ಳಸಾಗಾಣಿಕೆ ಪ್ರಕರಣ ಬೆಳಕಿಗೆ ಬಂದಿದೆ. ಮಣಿಪುರ ಪೊಲೀಸರ ಸಹಯೋಗದೊಂದಿಗೆ ಇಂಫಾಲದ ಕಸ್ಟಮ್ಸ್ ವಿಭಾಗವು ನಡೆಸಿದ ಮಹತ್ವದ ಕಾರ್ಯಾಚರಣೆಯಲ್ಲಿ ಪತ್ತೆಯಾಗಿದೆ. ಸುಮಾರು 8 ಸಾವಿರ ಕೆಜಿ ಬರ್ಮಾ ಅಡಿಕೆಯನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.
ತಪ್ಪಾದ ಮಾಹಿತಿ ನೀಡಿ ಅಡಿಕೆ ಕಳ್ಳಸಾಗಾಣಿಕೆ ನಡೆಯುತ್ತಿತ್ತು. ಮ್ಯಾನ್ಮಾರ್ನಿಂದ ಅಡಿಕೆಯನ್ನು ಮಣಿಪುರಕ್ಕೆ ಕಳ್ಳಸಾಗಣೆ ಮಾಡಲಾಗಿತ್ತು ಎಂದು ಅಧಿಕಾರಿಗಳು ವರದಿ ಮಾಡಿದ್ದಾರೆ. ಕಳೆದ ಕೆಲವು ದಿನಗಳಿಂದ ಅಸ್ಸಾಂ, ಮೇಘಾಲಯ ಸೇರಿದಂತೆ ವಿವಿದಡೆಯಿಂದ ಸಣ್ಣ ಪ್ರಮಾಣದಲ್ಲಿ ಅಡಿಕೆ ಕಳ್ಳಸಾಗಾಣಿಕೆ ಪ್ರಕರಣ ನಡೆಯುತ್ತಿದೆ. ಆದರೆ, ಇಲಾಖೆಗಳು ತಪಾಸಣೆ ಬಿಗುಗೊಳಿಸಿದ ಹಿನ್ನೆಲೆಯಲ್ಲಿ ಅಕ್ರಮ ಸಾಗಾಟಕ್ಕೆ ತಡೆಯಾಗುತ್ತಿದೆ.
ಈ ನಡುವೆಯೇ ಅಡಿಕೆ ಧಾರಣೆ ಏರಿಕೆಯಾಗುತ್ತಿದೆ. ಬೇಡಿಕೆ ಹೆಚ್ಚಾಗುತ್ತಿದೆ. ಪೂರೈಕೆ ಕಡಿಮೆಯಾಗುತ್ತಿದ್ದಂತೆಯೇ ಧಾರಣೆ ಏರಿಕೆಯಾಗುತ್ತಿದೆ, ಈ ಸಂದರ್ಭ ಬರ್ಮಾ ಅಡಿಕೆ ಕಳ್ಳಸಾಗಾಣಿಕೆ ಕೂಡಾ ಜೋರಾಗಿ ನಡೆಯುತ್ತಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ.
ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…
ಹಸು ಕರು ಹಾಕಿದ ಬಳಿಕ ಸಿಗುವ ಪ್ಲಾಸೆಂಟಾ ಅಥವಾ ‘ಮಾಸ’ವನ್ನು ತ್ಯಾಜ್ಯವಾಗಿ ಬಿಸಾಡದೆ,…
ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…
ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…
ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…