Advertisement
ಸುದ್ದಿಗಳು

ಬೆಳವಣಿಗೆಗೆ ಕಾಲೇಜು ಯೂನಿಯನ್ ಪೂರಕ | ಕಾಲೇಜು ಯುನಿಯನ್ ಉದ್ಘಾಟಿಸಿ ಗಾಯಕ ರತೀಶ್ ಕಂಡಡುಕ್ಕಂ

Share

ಕಾಲೇಜು ಯೂನಿಯನ್ ವಿದ್ಯಾರ್ಥಿಗಳಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆಯ ಅರಿವನ್ನು ಪಸರಿಸುವುದರೊಂದಿಗೆ ಪ್ರತಿಯೊಬ್ಬರ ಸಮಸ್ಯೆ ಇಚ್ಛೆಗಳನ್ನು ಗಣನೆಗೆ ತೆಗೆದುಕೊಂಡು ಮುನ್ನಡೆಯುವ ಉತ್ತಮ ನಾಯಕತ್ವ ಗುಣ ಮಾತ್ರವಲ್ಲದೇ ವಿದ್ಯಾರ್ಥಿಗಳ ಸಾರ್ವತೋಮುಖ ಬೆಳವಣಿಗೆಗೆ, ಕಾಲೇಜಿನ ಅಭಿವೃದ್ಧಿಗೂ ಪೂರಕವಾಗಿಯೂ ಪ್ರವರ್ತಿಸುತ್ತದೆ ಎಂದು ಕಾಲೇಜು ಯೂನಿಯನ್ ಉದ್ಘಾಟಿಸಿ ಪ್ಲವರ್ಸ್ ಟಿವಿ ಕಾಮಿಡಿ ಉಲ್ಸವಂ ಖ್ಯಾತಿಯ ಗಾಯಕ ರತೀಶ್ ಕಂಡಡುಕ್ಕಂ ಹೇಳಿದರು.

ಕಾಲೇಜ್ ಆಫ್ ಅಪ್ಲೈಡ್ ಸಯನ್ಸ್, ಮಂಜೇಶ್ವರ ಕಾಲೇಜು ಆವರಣದಲ್ಲಿ ನಡೆದ 2022 – 23ನೇ ಸಾಲಿನ ಕಾಲೇಜು ಯೂನಿಯನ್ ಉದ್ಘಾಟನಾ ಸಮಾರಂಭ “ಧ್ವನಿ 2ಕೆ23” ಯಲ್ಲಿ ಕಾಲೇಜು ಯೂನಿಯನ್ ಉದ್ಘಾಟಿಸಿ ಅವರು ಮಾತನಾಡಿದರು. ಕಾಲೇಜು ವಿದ್ಯಾರ್ಥಿಗಳ ಧ್ವನಿಯಾಗುವ ಕಾಲೇಜು ಯೂನಿಯನ್ ಮತ್ತೊಂದೆಡೆ ಭವಿಷ್ಯದ ತಿಳಿವಳಿಕೆ ಹೊಂದಿದ ಜಾಗೃತ ಪೌರರ ಸೃಷ್ಟಿಗೂ ನಾಂದಿ ಹಾಡುತ್ತದೆ. ಮಾತ್ರವಲ್ಲದೆ ಅನ್ಯಾಯದ ವಿರುದ್ಧ ಧ್ವನಿ ಎತ್ತುವ, ಇತರರ ಸಮಸ್ಯೆಗೆ ಸ್ವಂದಿಸುವ, ಒಳಿತನ್ನು ಪ್ರಶಂಸಿಸುವ ಗುಣವನ್ನು ಬೆಳೆಸುತ್ತದೆ.

Advertisement

ಮುಖ್ಯ ಅತಿಥಿ ಪದ್ಮಶ್ರೀ ಅಮೈ ಮಹಾಲಿಂಗ ನಾಯ್ಕ್ ಮಾತನಾಡಿ, ಛಲವಿದ್ದರೆ ಸಾಧನೆ ಅಸಾಧ್ಯವಲ್ಲ. ಸೋಲನ್ನೇ ಗೆಲುವಿನ ಮೆಟ್ಟಿಳನ್ನಾಗಿಸಿ, ಹೀಯಾಳಿಕೆಗಳನ್ನೇ ಪ್ರೇರಣೆಯಾಗಿ ಸ್ವೀಕರಿಸಿ, ಯುವ ಜನಾಂಗ ಛಲ ಬಿಡದೆ ಮುನ್ನುಗಬೇಕಿದೆ, ತಮ್ಮ ವೈಯಕ್ತಿಕ ಬೆಳವಣಿಗೆಯೊಂದಿಗೆ ರಾಜ್ಯ, ರಾಷ್ಟ್ರದ ಬೆಳವಣಿಗೆಗೆಗೂ ಶ್ರಮಿಸಬೇಕಿದೆ.ನಿರುದ್ಯೋಗ ಸಮಸ್ಯೆಯ ಬಗ್ಗೆ ಚಿಂತಿಸುವ ಯುವಜನಾಂಗ ಇತರ ಕ್ಷೇತ್ರಗಳ ಮೇಲೆ ನೀಡುವ ಸಮಾನ ಆಸಕ್ತಿ, ಸ್ಥಾನಮಾನಗಳನ್ನು ಕೃಷಿ ಕ್ಷೇತ್ರಕ್ಕೂ ನೀಡಿದಲ್ಲಿ ಒಂದು ಮಟ್ಟಿಗೆ ನಿರುದ್ಯೋಗದ ಚಿಂತೆಯೂ ನಿವಾರಣೆಯಾಗುವ ಸಾಧ್ಯತೆಯಿದೆ. ಕೃಷಿ ಕ್ಷೇತ್ರದಲ್ಲೂ ಹಲವಾರು ಅವಕಾಶಗಳು ಅಡಕವಾಗಿದ್ದು ಅವುಗಳನ್ನು ಸರಿಯಾದ ರೀತಿಯಲ್ಲಿ ಬಳಸಿಕೊಂಡಲ್ಲಿ ಸಫಲತೆ ನಮ್ಮದಾಗಲಿದೆ ಎಂದರು.

ಕಾಲೇಜು ಪ್ರಿನ್ಸಿಪಾಲ್ ನಳಿನಿ ಕೆ. ವಿ. ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಕಾಮರ್ಸ್ ವಿಭಾಗದ ಮುಖ್ಯಸ್ಥ ಪ್ರದೀಪ್ ಕುಮಾರ್ ಸಿ. ಎಚ್., ಸ್ಟಾಫ್ ಅಡ್ವೈಸರ್ ಸೌಮಿನಿ, ಸ್ಟಾಫ್ ಸೆಕ್ರೆಟರಿ ಸ್ವಾತಿ ದೇವರಾಜ್, ಕಾಲೇಜ್ ಸುಪೆರಿಂಡೆಂಟ್ ನಾಗವೇಣಿ ಮತ್ತಿತರರು ಉಪಸ್ಥಿತರಿದ್ದರು.

Advertisement

ಕಾಲೇಜು ಯೂನಿಯನ್ ಅಧ್ಯಕ್ಷೆ ಸೀತಾರ ಪಿ. ಸ್ವಾಗತಿಸಿ ಕಾರ್ಯದರ್ಶಿ ಹರ್ಷಿಣಿ ಎಸ್. ವಂದಿಸಿದರು. ಕಂಪ್ಯೂಟರ್ ಅಸೋಸಿಯೇಷನ್ ಕಾರ್ಯದರ್ಶಿ ನಿಶಾ ನಿರೂಪಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹಲಸಿನ ಹಾಲಿನಿಂದ ವಸಡು ರೋಗಕ್ಕೆ ಚಿಕಿತ್ಸೆ…? ಬ್ರೆಜಿಲ್‌ ವಿಜ್ಞಾನಿಗಳ ಹೊಸ ಸಂಶೋಧನೆ ಆಶಾಭರವಸೆ ಮೂಡಿಸಿದೆ

ಹಲಸಿನ ಹಾಲು, ದಾಳಿಂಬೆ ಸಿಪ್ಪೆಯ ಸಾರ ಮತ್ತು ಸಿಮ್ವಾಸ್ಟಾಟಿನ್‌ ಬಳಸಿ ವಿಜ್ಞಾನಿಗಳು ವಸಡು…

15 hours ago

ಅಡಿಕೆಗೆ ಬ್ಯಾನ್ ಅಲ್ಲ… ಕಲಬೆರಕೆ ಅಡಿಕೆಗೆ ಬ್ಯಾನ್ ಆಗಬೇಕು..! – ಮಲೆನಾಡಿನ ಅಡಿಕೆಗೆ ಪ್ರತ್ಯೇಕ ಮಾರುಕಟ್ಟೆ ಅಗತ್ಯ

ಅಡಿಕೆ ನಿಷೇಧಿಸುವ ಬದಲು ಕಲಬೆರಕೆ ಅಡಿಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ…

18 hours ago

ಬೆಲೆ ಕುಸಿದಾಗ ನಷ್ಟ ಬೇಡ – ರಂಬುಟಾನ್‌ ಫ್ರೀಜ್‌ ಮಾಡಿ, ನಂತರ ಮಾರಾಟ ಮಾಡಿ..! ಕೃಷಿಕನ ಹೊಸ ಪ್ರಯೋಗ

ರಂಬುಟಾನ್‌ ಬೆಲೆ ಕುಸಿದಾಗ ಹಣ್ಣನ್ನು ಫ್ರೀಜ್‌ ಮಾಡಿ ನಂತರ ಮಾರಾಟ ಮಾಡಿದರೆ ಉತ್ತಮ…

18 hours ago

ಚೆಸ್‌ ಬೋರ್ಡ್‌ನ ಆಚೆಗೂ ಗೆಲುವು – ಕಾಪುವಿನಲ್ಲಿ ಚೆಸ್ ಹಬ್ಬ, ವಿದ್ಯಾರ್ಥಿಗಳ ಕನಸುಗಳಿಗೆ ವೇದಿಕೆ | ಗ್ರಾಮೀಣ ಕರ್ನಾಟಕದಲ್ಲಿಯೂ ಬೆಳೆಯುತ್ತಿರುವ ಹೊಸ ಕ್ರೀಡಾ ಸಂಸ್ಕೃತಿ

ಕಾಪುವಿನಲ್ಲಿ ನಡೆಯುತ್ತಿರುವ ಕರ್ನಾಟಕ ಸ್ಟೇಟ್ ಸ್ಕೂಲ್ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…

1 day ago

ಕಾಪುವಿನಲ್ಲಿ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್‌ಶಿಪ್‌ಗೆ ಚಾಲನೆ – 400ಕ್ಕೂ ಅಧಿಕ ಪ್ರತಿಭೆಗಳು ಭಾಗಿ, 24 ಮಂದಿಗೆ ರಾಷ್ಟ್ರಮಟ್ಟದ ಅವಕಾಶ

ಕಾಪುವಿನಲ್ಲಿ ಆರಂಭವಾದ ಕರ್ನಾಟಕ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…

1 day ago

34 ಟನ್ ಅಡಿಕೆ ವಂಚನೆ – ಅಸ್ಸಾಂ ವ್ಯಾಪಾರಿಗಳಿಗೆ ಹರಿಯಾಣದಲ್ಲಿ ವಂಚನೆ..!

ಅಸ್ಸಾಂನ ಇಬ್ಬರು ಅಡಿಕೆ ವ್ಯಾಪಾರಿಗಳಿಗೆ ಸೇರಿದ ₹1.12 ಕೋಟಿ ಮೌಲ್ಯದ 34 ಟನ್…

1 day ago