Mann Ki Baat | ದೇಶದ 130 ಕೋಟಿ ಜನರಿಗೂ ಕೃತಜ್ಞತೆ | ಕೊರೊನಾ ವೈರಸ್ ಓಡಿಸಲು ಪ್ರತಿಯೊಬ್ಬನೂ ಸೈನಿಕ | ದೇಶವಾಸಿಗಳಿಗೆ ಪ್ರಧಾನಿ ನರೇಂದ್ರ ಮೋದಿ ಕರೆ |

April 26, 2020
11:50 AM

ನವದೆಹಲಿ:ಕೊರೊನಾ ವೈರಸ್ ವಿರುದ್ಧದ ದೇಶದ ಹೋರಾಟದಲ್ಲಿ ಪ್ರತಿಯೊಬ್ಬ ನಾಗರಿಕನೂ ಸೈನಿಕನೇ ಆಗಿದ್ದಾನೆ. ಇದುವರೆಗೆ ದೇಶದ ಎಲ್ಲರೂ ಸಹಕರಿಸಿದ್ದಾರೆ. ಇದಕ್ಕಾಗಿ ದೇಶದ 130 ಕೋಟಿ ಜನರಿಗೆ ಕೃತಜ್ಞತೆ ಸಲ್ಲಿಸುತ್ತೇನೆ. ಮುಂದೆಯೂ  ತಮ್ಮ ಜಿಲ್ಲೆ, ತಾಲೂಕು, ಗ್ರಾಮಗಳಲ್ಲಿ ಕೊರೊನಾ ವೈರಸ್ ವಿರುದ್ಧದ  ಹೋರಾಟ ಮುಂದುವರಿಸೋಣ ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ.

Advertisement

ಪ್ರಧಾನಿ ನರೇಂದ್ರ ಮೋದಿ ಅವರು 64ನೇ ಮನ್​ ಕಿ ಬಾತ್​ ಕಾರ್ಯಕ್ರಮದಲ್ಲಿ ಮಾತನಾಡಿದರು. ಕೊರೊನಾ ವಿರುದ್ಧ ದೇಶದ ಹೋರಾಟವು  ಭಾರತದಲ್ಲಿ ಸರಿಯಾದ ದಿಕ್ಕಿನಲ್ಲಿ ಸಾಗಿದೆ. ಬಡತನದ ವಿರುದ್ಧ ಹೋರಾಡುತ್ತಲೇ ನಾವು ಮಾರಕ ರೋಗದ ವಿರುದ್ಧವೂ ಹೋರಾಟ ನಡೆಸುತ್ತಿದ್ದೇವೆ ಎಂದ ಅವರು ದೇಶದಲ್ಲಿನ ಯಾವ ಜನರು ಸಹ ಹಸಿವಿನಿಂದ ಬಳಲಬಾರದು ಎಂದು ರೈತರು ಹೊಲಗಳಲ್ಲಿ ಹಗಲು-ರಾತ್ರಿ ಕಷ್ಟಪಡುತ್ತಿದ್ದಾರೆ, ರೈಲ್ವೆ, ವಿಮಾನ ಸಂಸ್ಥೆಗಳು ಔಷಧಗಳನ್ನು ದೇಶದ ಮೂಲೆ ಮೂಲೆಗೆ ತಲುಪಿಸುವ ಕೆಲಸ ಮಾಡುತ್ತಿವೆ ಇದು ನಮ್ಮೆಲ್ಲರಿಗಾಗಿ ಎಂದರು.

ಇಂದು ವಿವಿಧ ದೇಶಗಳ ರಾಜಕೀಯ ನಾಯಕರೊಡನೆ ಮಾತುಕತೆ ನಡೆಸುವಾಗ ಭಾರತಕ್ಕೆ ವಂದನೆ ಸಲ್ಲಿಸುತ್ತಾರೆ. ಭಾರತೀಯರಿಗೆ ಅಭಿನಂದನೆ ಸಲ್ಲಿಸುತ್ತಾರೆ ಆಗ ನಮಗೆ ಹೆಮ್ಮೆ ಆಗುತ್ತದೆ ಎಂದು ಮೋದಿ ಹೇಳಿದರು. ಇದು ದೇಶದ ಎಲ್ಲಾ ಜನರ ಪ್ರಯತ್ನದಿಂದ ಸಾಧ್ಯವಾಗಿದೆ ಎಂದರು.

ಲಾಕ್ಡೌನ್​ ಸಮಯದಲ್ಲಿ ಚಪ್ಪಾಳೆ ತಟ್ಟವಂತೆ ಹಾಗೂ ದೀಪ ಬೆಳಗುವಂತೆ   ಹೇಳಲಾಗಿತ್ತು, ಜನರು ಇದನ್ನು  ಪಾಲಿಸಿದ್ದರು.  ಈ ರೀತಿಯ ಆಂದೋಲನಗಳು ಪ್ರತಿಯೊಬ್ಬರಲ್ಲೂ ಸ್ಫೂರ್ತಿ ತುಂಬಿವೆ ಎಂದರು. ಕೊರೊನಾ ವಿರುದ್ಧ ಹೋರಾಡುತ್ತಿರುವ ಕೊರೊನಾ ವಾರಿಯರ್ಸ್ ರನ್ನುಕೇಂದ್ರ ಸರಕಾರದ ಪೋರ್ಟಲ್ ಮೂಲಕ ಸಂಪರ್ಕಿಸುವಂತೆ ಸೂಚಿಸಿದರು.  ಇತ್ತೀಚೆಗೆ ಆರಂಭಗೊಂಡ ಈ ಪೋರ್ಟಲ್ ನಲ್ಲಿ ಈಗಾಗಲೇ 1.25 ಕೋಟಿ ಜನರು ಸಂಪರ್ಕ ಹೊಂದಿದ್ದಾರೆ ಎಂದರು.

Advertisement

 

Advertisement
Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 11-08-2025 | ಇಂದು ಸಾಮಾನ್ಯ ಮಳೆ | ಆ-12 ರಿಂದ ಆ-20 ರವರಗೆ ರಾಜ್ಯದ ವಿವಿದೆಡೆ ಮಳೆ |
August 11, 2025
1:47 PM
by: ಸಾಯಿಶೇಖರ್ ಕರಿಕಳ
ವೈಜ್ಞಾನಿಕ ಶಿಫಾರಸ್ಸಿನಂತೆ ರಸಗೊಬ್ಬರದ ಬಳಕೆ ಸೂಕ್ತ – ರೈತರಿಗೆ ಸಲಹೆ
August 11, 2025
8:43 AM
by: The Rural Mirror ಸುದ್ದಿಜಾಲ
ರಾಜ್ಯದ ಹಲವೆಡೆ ಮುಂದಿನ 7 ದಿನಗಳ ಕಾಲ ವ್ಯಾಪಕ ಮಳೆ | ಬೆಂಗಳೂರಿಗೆ ಎಲ್ಲೋ ಅಲರ್ಟ್
August 11, 2025
7:27 AM
by: ದ ರೂರಲ್ ಮಿರರ್.ಕಾಂ
ಬದುಕು ಪುರಾಣ | ಜ್ಞಾನದ ಪ್ರತಿನಿಧಿ ಗಂಗಾಪುತ್ರ
August 10, 2025
7:00 AM
by: ನಾ.ಕಾರಂತ ಪೆರಾಜೆ

You cannot copy content of this page - Copyright -The Rural Mirror

Join Our Group