Advertisement
ರಾಷ್ಟ್ರೀಯ

Mann Ki Baat | ದೇಶದ 130 ಕೋಟಿ ಜನರಿಗೂ ಕೃತಜ್ಞತೆ | ಕೊರೊನಾ ವೈರಸ್ ಓಡಿಸಲು ಪ್ರತಿಯೊಬ್ಬನೂ ಸೈನಿಕ | ದೇಶವಾಸಿಗಳಿಗೆ ಪ್ರಧಾನಿ ನರೇಂದ್ರ ಮೋದಿ ಕರೆ |

Share

ನವದೆಹಲಿ:ಕೊರೊನಾ ವೈರಸ್ ವಿರುದ್ಧದ ದೇಶದ ಹೋರಾಟದಲ್ಲಿ ಪ್ರತಿಯೊಬ್ಬ ನಾಗರಿಕನೂ ಸೈನಿಕನೇ ಆಗಿದ್ದಾನೆ. ಇದುವರೆಗೆ ದೇಶದ ಎಲ್ಲರೂ ಸಹಕರಿಸಿದ್ದಾರೆ. ಇದಕ್ಕಾಗಿ ದೇಶದ 130 ಕೋಟಿ ಜನರಿಗೆ ಕೃತಜ್ಞತೆ ಸಲ್ಲಿಸುತ್ತೇನೆ. ಮುಂದೆಯೂ  ತಮ್ಮ ಜಿಲ್ಲೆ, ತಾಲೂಕು, ಗ್ರಾಮಗಳಲ್ಲಿ ಕೊರೊನಾ ವೈರಸ್ ವಿರುದ್ಧದ  ಹೋರಾಟ ಮುಂದುವರಿಸೋಣ ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು 64ನೇ ಮನ್​ ಕಿ ಬಾತ್​ ಕಾರ್ಯಕ್ರಮದಲ್ಲಿ ಮಾತನಾಡಿದರು. ಕೊರೊನಾ ವಿರುದ್ಧ ದೇಶದ ಹೋರಾಟವು  ಭಾರತದಲ್ಲಿ ಸರಿಯಾದ ದಿಕ್ಕಿನಲ್ಲಿ ಸಾಗಿದೆ. ಬಡತನದ ವಿರುದ್ಧ ಹೋರಾಡುತ್ತಲೇ ನಾವು ಮಾರಕ ರೋಗದ ವಿರುದ್ಧವೂ ಹೋರಾಟ ನಡೆಸುತ್ತಿದ್ದೇವೆ ಎಂದ ಅವರು ದೇಶದಲ್ಲಿನ ಯಾವ ಜನರು ಸಹ ಹಸಿವಿನಿಂದ ಬಳಲಬಾರದು ಎಂದು ರೈತರು ಹೊಲಗಳಲ್ಲಿ ಹಗಲು-ರಾತ್ರಿ ಕಷ್ಟಪಡುತ್ತಿದ್ದಾರೆ, ರೈಲ್ವೆ, ವಿಮಾನ ಸಂಸ್ಥೆಗಳು ಔಷಧಗಳನ್ನು ದೇಶದ ಮೂಲೆ ಮೂಲೆಗೆ ತಲುಪಿಸುವ ಕೆಲಸ ಮಾಡುತ್ತಿವೆ ಇದು ನಮ್ಮೆಲ್ಲರಿಗಾಗಿ ಎಂದರು.

ಇಂದು ವಿವಿಧ ದೇಶಗಳ ರಾಜಕೀಯ ನಾಯಕರೊಡನೆ ಮಾತುಕತೆ ನಡೆಸುವಾಗ ಭಾರತಕ್ಕೆ ವಂದನೆ ಸಲ್ಲಿಸುತ್ತಾರೆ. ಭಾರತೀಯರಿಗೆ ಅಭಿನಂದನೆ ಸಲ್ಲಿಸುತ್ತಾರೆ ಆಗ ನಮಗೆ ಹೆಮ್ಮೆ ಆಗುತ್ತದೆ ಎಂದು ಮೋದಿ ಹೇಳಿದರು. ಇದು ದೇಶದ ಎಲ್ಲಾ ಜನರ ಪ್ರಯತ್ನದಿಂದ ಸಾಧ್ಯವಾಗಿದೆ ಎಂದರು.

ಲಾಕ್ಡೌನ್​ ಸಮಯದಲ್ಲಿ ಚಪ್ಪಾಳೆ ತಟ್ಟವಂತೆ ಹಾಗೂ ದೀಪ ಬೆಳಗುವಂತೆ   ಹೇಳಲಾಗಿತ್ತು, ಜನರು ಇದನ್ನು  ಪಾಲಿಸಿದ್ದರು.  ಈ ರೀತಿಯ ಆಂದೋಲನಗಳು ಪ್ರತಿಯೊಬ್ಬರಲ್ಲೂ ಸ್ಫೂರ್ತಿ ತುಂಬಿವೆ ಎಂದರು. ಕೊರೊನಾ ವಿರುದ್ಧ ಹೋರಾಡುತ್ತಿರುವ ಕೊರೊನಾ ವಾರಿಯರ್ಸ್ ರನ್ನುಕೇಂದ್ರ ಸರಕಾರದ ಪೋರ್ಟಲ್ ಮೂಲಕ ಸಂಪರ್ಕಿಸುವಂತೆ ಸೂಚಿಸಿದರು.  ಇತ್ತೀಚೆಗೆ ಆರಂಭಗೊಂಡ ಈ ಪೋರ್ಟಲ್ ನಲ್ಲಿ ಈಗಾಗಲೇ 1.25 ಕೋಟಿ ಜನರು ಸಂಪರ್ಕ ಹೊಂದಿದ್ದಾರೆ ಎಂದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಸೌದೆ ಬೇಡಿಕೆ ಏರಿಕೆ ಹಿನ್ನೆಲೆ | ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ ಖಂಡ್ರೆ ಕಟ್ಟುನಿಟ್ಟಿನ ಸೂಚನೆ

ಸೌದೆ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆ ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ…

3 minutes ago

ಕೃಷಿ ಗುರಿ ಕೇವಲ ‘ಆಹಾರ ಭದ್ರತೆ’ ಅಲ್ಲ, ಅದನ್ನೂ ಮೀರಿದ ಕೃಷಿ ಚಿಂತನೆ ಅಗತ್ಯ

ಕೃಷಿಯ ಮೂಲಕ ಕೇವಲ ಆಹಾರ ಉತ್ಪಾದನೆ ಹೆಚ್ಚಿಸುವುದಕ್ಕಿಂತ ಸಮಾನ ವಿತರಣೆ, ಪರಿಸರ ಸಂರಕ್ಷಣೆ…

25 minutes ago

ಪಶ್ಚಿಮ ಏಷ್ಯಾ ಯುದ್ಧದ ಪರಿಣಾಮ | ಭಾರತೀಯ ಟಯರ್ ಉದ್ಯಮಕ್ಕೆ ತುರ್ತು ನೆರವಿನ ಬೇಡಿಕೆ

ಪಶ್ಚಿಮ ಏಷ್ಯಾ ಯುದ್ಧದ ಪರಿಣಾಮದಿಂದ ಭಾರತೀಯ ಟೈರ್ ಉದ್ಯಮಕ್ಕೆ ರಫ್ತು ಮತ್ತು ವೆಚ್ಚದ…

2 hours ago

ಗೃಹ ಬಳಕೆ ಗ್ಯಾಸ್ ಕೊರತೆ ಇಲ್ಲ : ವದಂತಿಗಳಿಗೆ ಕಿವಿಗೊಡಬೇಡಿ — ಸಮಸ್ಯೆ ಇದ್ದರೆ ಈ ಸಹಾಯವಾಣಿ ಸಂಪರ್ಕಿಸಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗೃಹ ಬಳಕೆ ಗ್ಯಾಸ್ ಸಿಲಿಂಡರ್ ಕೊರತೆ ಇಲ್ಲ ಎಂದು…

2 hours ago

ಪಿಎಂ ಕಿಸಾನ್‌ 22ನೇ ಕಂತು ಬಿಡುಗಡೆಗೆ ಸಿದ್ಧತೆ | 9.32 ಕೋಟಿ ರೈತರಿಗೆ ₹18,640 ಕೋಟಿ ನೇರ ನಗದು

ಪಿಎಂ ಕಿಸಾನ್ ಯೋಜನೆಯ 22ನೇ ಕಂತಿನ ಹಣವನ್ನು ಪ್ರಧಾನಿ ಮೋದಿ ಬಿಡುಗಡೆ ಮಾಡಲಿದ್ದಾರೆ.…

15 hours ago