Advertisement
ರಾಷ್ಟ್ರೀಯ

Mann Ki Baat | ದೇಶದ 130 ಕೋಟಿ ಜನರಿಗೂ ಕೃತಜ್ಞತೆ | ಕೊರೊನಾ ವೈರಸ್ ಓಡಿಸಲು ಪ್ರತಿಯೊಬ್ಬನೂ ಸೈನಿಕ | ದೇಶವಾಸಿಗಳಿಗೆ ಪ್ರಧಾನಿ ನರೇಂದ್ರ ಮೋದಿ ಕರೆ |

Share

ನವದೆಹಲಿ:ಕೊರೊನಾ ವೈರಸ್ ವಿರುದ್ಧದ ದೇಶದ ಹೋರಾಟದಲ್ಲಿ ಪ್ರತಿಯೊಬ್ಬ ನಾಗರಿಕನೂ ಸೈನಿಕನೇ ಆಗಿದ್ದಾನೆ. ಇದುವರೆಗೆ ದೇಶದ ಎಲ್ಲರೂ ಸಹಕರಿಸಿದ್ದಾರೆ. ಇದಕ್ಕಾಗಿ ದೇಶದ 130 ಕೋಟಿ ಜನರಿಗೆ ಕೃತಜ್ಞತೆ ಸಲ್ಲಿಸುತ್ತೇನೆ. ಮುಂದೆಯೂ  ತಮ್ಮ ಜಿಲ್ಲೆ, ತಾಲೂಕು, ಗ್ರಾಮಗಳಲ್ಲಿ ಕೊರೊನಾ ವೈರಸ್ ವಿರುದ್ಧದ  ಹೋರಾಟ ಮುಂದುವರಿಸೋಣ ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು 64ನೇ ಮನ್​ ಕಿ ಬಾತ್​ ಕಾರ್ಯಕ್ರಮದಲ್ಲಿ ಮಾತನಾಡಿದರು. ಕೊರೊನಾ ವಿರುದ್ಧ ದೇಶದ ಹೋರಾಟವು  ಭಾರತದಲ್ಲಿ ಸರಿಯಾದ ದಿಕ್ಕಿನಲ್ಲಿ ಸಾಗಿದೆ. ಬಡತನದ ವಿರುದ್ಧ ಹೋರಾಡುತ್ತಲೇ ನಾವು ಮಾರಕ ರೋಗದ ವಿರುದ್ಧವೂ ಹೋರಾಟ ನಡೆಸುತ್ತಿದ್ದೇವೆ ಎಂದ ಅವರು ದೇಶದಲ್ಲಿನ ಯಾವ ಜನರು ಸಹ ಹಸಿವಿನಿಂದ ಬಳಲಬಾರದು ಎಂದು ರೈತರು ಹೊಲಗಳಲ್ಲಿ ಹಗಲು-ರಾತ್ರಿ ಕಷ್ಟಪಡುತ್ತಿದ್ದಾರೆ, ರೈಲ್ವೆ, ವಿಮಾನ ಸಂಸ್ಥೆಗಳು ಔಷಧಗಳನ್ನು ದೇಶದ ಮೂಲೆ ಮೂಲೆಗೆ ತಲುಪಿಸುವ ಕೆಲಸ ಮಾಡುತ್ತಿವೆ ಇದು ನಮ್ಮೆಲ್ಲರಿಗಾಗಿ ಎಂದರು.

ಇಂದು ವಿವಿಧ ದೇಶಗಳ ರಾಜಕೀಯ ನಾಯಕರೊಡನೆ ಮಾತುಕತೆ ನಡೆಸುವಾಗ ಭಾರತಕ್ಕೆ ವಂದನೆ ಸಲ್ಲಿಸುತ್ತಾರೆ. ಭಾರತೀಯರಿಗೆ ಅಭಿನಂದನೆ ಸಲ್ಲಿಸುತ್ತಾರೆ ಆಗ ನಮಗೆ ಹೆಮ್ಮೆ ಆಗುತ್ತದೆ ಎಂದು ಮೋದಿ ಹೇಳಿದರು. ಇದು ದೇಶದ ಎಲ್ಲಾ ಜನರ ಪ್ರಯತ್ನದಿಂದ ಸಾಧ್ಯವಾಗಿದೆ ಎಂದರು.

ಲಾಕ್ಡೌನ್​ ಸಮಯದಲ್ಲಿ ಚಪ್ಪಾಳೆ ತಟ್ಟವಂತೆ ಹಾಗೂ ದೀಪ ಬೆಳಗುವಂತೆ   ಹೇಳಲಾಗಿತ್ತು, ಜನರು ಇದನ್ನು  ಪಾಲಿಸಿದ್ದರು.  ಈ ರೀತಿಯ ಆಂದೋಲನಗಳು ಪ್ರತಿಯೊಬ್ಬರಲ್ಲೂ ಸ್ಫೂರ್ತಿ ತುಂಬಿವೆ ಎಂದರು. ಕೊರೊನಾ ವಿರುದ್ಧ ಹೋರಾಡುತ್ತಿರುವ ಕೊರೊನಾ ವಾರಿಯರ್ಸ್ ರನ್ನುಕೇಂದ್ರ ಸರಕಾರದ ಪೋರ್ಟಲ್ ಮೂಲಕ ಸಂಪರ್ಕಿಸುವಂತೆ ಸೂಚಿಸಿದರು.  ಇತ್ತೀಚೆಗೆ ಆರಂಭಗೊಂಡ ಈ ಪೋರ್ಟಲ್ ನಲ್ಲಿ ಈಗಾಗಲೇ 1.25 ಕೋಟಿ ಜನರು ಸಂಪರ್ಕ ಹೊಂದಿದ್ದಾರೆ ಎಂದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ

ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…

23 hours ago

ರಾಜ್ಯದಲ್ಲಿ ಬರದ ಛಾಯೆ- ರೈತರಿಗೆ ಎಕರೆಗೆ ₹50 ಸಾವಿರ ಪರಿಹಾರ ನೀಡಿ

ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…

24 hours ago

ಹುಲಿ-ಚಿರತೆ ಹಾವಳಿ ನಿಯಂತ್ರಣಕ್ಕೆ ಆಗ್ರಹ – ಚಾಮರಾಜನಗರದಲ್ಲಿ ಅರಣ್ಯ ಇಲಾಖೆ ವಿರುದ್ಧ ರೈತ ಸಂಘಟನೆಗಳ ಪ್ರತಿಭಟನೆ

ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…

24 hours ago

ಮುಂಗಾರು ದುರ್ಬಲ: ಯಾದಗಿರಿ ರೈತರಿಗೆ ಕೃಷಿ ಇಲಾಖೆಯ ಮಹತ್ವದ ಸಲಹೆ

ಯಾದಗಿರಿ ಜಿಲ್ಲೆಯಲ್ಲಿ ಮುಂಗಾರು ದುರ್ಬಲವಾಗಿರುವ ಹಿನ್ನೆಲೆಯಲ್ಲಿ ತೇವಾಂಶ ಸಂರಕ್ಷಣೆ, ಬೀಜೋಪಚಾರ ಹಾಗೂ ಕಡಿಮೆ…

24 hours ago

ಬ್ರಿಟನ್‌ನಲ್ಲಿ ಉರಿ ಬಿಸಿಲು – ಎರಡು ತಿಂಗಳಲ್ಲಿ 2,700ಕ್ಕೂ ಹೆಚ್ಚು ಸಾವು..! ಹವಾಮಾನ ಬದಲಾವಣೆಯಿಂದ ಶೇ.40ಕ್ಕೂ ಹೆಚ್ಚು ಜೀವಹಾನಿ ಎಂದ ಅಧ್ಯಯನ

ಬ್ರಿಟನ್‌ನಲ್ಲಿ ಮೇ–ಜೂನ್ ಉಷ್ಣ ಅಲೆಗಳಿಂದ 2,700ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಈ ಸಾವುಗಳಲ್ಲಿ…

24 hours ago

ನೈಸರ್ಗಿಕ ಕೃಷಿಗೆ ರಾಜಸ್ಥಾನದ ದೊಡ್ಡ ಹೆಜ್ಜೆ : 32 ಸಂಸ್ಥೆಗಳೊಂದಿಗೆ ಒಪ್ಪಂದ, ರೈತರಿಗೆ ತಂತ್ರಜ್ಞಾನ – ಮಾರುಕಟ್ಟೆ ಬೆಂಬಲ

ನೈಸರ್ಗಿಕ ಕೃಷಿ ಮತ್ತು ಕೃಷಿ ತಂತ್ರಜ್ಞಾನ ಅಭಿವೃದ್ಧಿಗೆ ರಾಜಸ್ಥಾನ ಸರ್ಕಾರ 32 ಸಂಸ್ಥೆಗಳೊಂದಿಗೆ…

1 day ago