Advertisement
ರಾಷ್ಟ್ರೀಯ

Mann Ki Baat | ದೇಶದ 130 ಕೋಟಿ ಜನರಿಗೂ ಕೃತಜ್ಞತೆ | ಕೊರೊನಾ ವೈರಸ್ ಓಡಿಸಲು ಪ್ರತಿಯೊಬ್ಬನೂ ಸೈನಿಕ | ದೇಶವಾಸಿಗಳಿಗೆ ಪ್ರಧಾನಿ ನರೇಂದ್ರ ಮೋದಿ ಕರೆ |

Share

ನವದೆಹಲಿ:ಕೊರೊನಾ ವೈರಸ್ ವಿರುದ್ಧದ ದೇಶದ ಹೋರಾಟದಲ್ಲಿ ಪ್ರತಿಯೊಬ್ಬ ನಾಗರಿಕನೂ ಸೈನಿಕನೇ ಆಗಿದ್ದಾನೆ. ಇದುವರೆಗೆ ದೇಶದ ಎಲ್ಲರೂ ಸಹಕರಿಸಿದ್ದಾರೆ. ಇದಕ್ಕಾಗಿ ದೇಶದ 130 ಕೋಟಿ ಜನರಿಗೆ ಕೃತಜ್ಞತೆ ಸಲ್ಲಿಸುತ್ತೇನೆ. ಮುಂದೆಯೂ  ತಮ್ಮ ಜಿಲ್ಲೆ, ತಾಲೂಕು, ಗ್ರಾಮಗಳಲ್ಲಿ ಕೊರೊನಾ ವೈರಸ್ ವಿರುದ್ಧದ  ಹೋರಾಟ ಮುಂದುವರಿಸೋಣ ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು 64ನೇ ಮನ್​ ಕಿ ಬಾತ್​ ಕಾರ್ಯಕ್ರಮದಲ್ಲಿ ಮಾತನಾಡಿದರು. ಕೊರೊನಾ ವಿರುದ್ಧ ದೇಶದ ಹೋರಾಟವು  ಭಾರತದಲ್ಲಿ ಸರಿಯಾದ ದಿಕ್ಕಿನಲ್ಲಿ ಸಾಗಿದೆ. ಬಡತನದ ವಿರುದ್ಧ ಹೋರಾಡುತ್ತಲೇ ನಾವು ಮಾರಕ ರೋಗದ ವಿರುದ್ಧವೂ ಹೋರಾಟ ನಡೆಸುತ್ತಿದ್ದೇವೆ ಎಂದ ಅವರು ದೇಶದಲ್ಲಿನ ಯಾವ ಜನರು ಸಹ ಹಸಿವಿನಿಂದ ಬಳಲಬಾರದು ಎಂದು ರೈತರು ಹೊಲಗಳಲ್ಲಿ ಹಗಲು-ರಾತ್ರಿ ಕಷ್ಟಪಡುತ್ತಿದ್ದಾರೆ, ರೈಲ್ವೆ, ವಿಮಾನ ಸಂಸ್ಥೆಗಳು ಔಷಧಗಳನ್ನು ದೇಶದ ಮೂಲೆ ಮೂಲೆಗೆ ತಲುಪಿಸುವ ಕೆಲಸ ಮಾಡುತ್ತಿವೆ ಇದು ನಮ್ಮೆಲ್ಲರಿಗಾಗಿ ಎಂದರು.

ಇಂದು ವಿವಿಧ ದೇಶಗಳ ರಾಜಕೀಯ ನಾಯಕರೊಡನೆ ಮಾತುಕತೆ ನಡೆಸುವಾಗ ಭಾರತಕ್ಕೆ ವಂದನೆ ಸಲ್ಲಿಸುತ್ತಾರೆ. ಭಾರತೀಯರಿಗೆ ಅಭಿನಂದನೆ ಸಲ್ಲಿಸುತ್ತಾರೆ ಆಗ ನಮಗೆ ಹೆಮ್ಮೆ ಆಗುತ್ತದೆ ಎಂದು ಮೋದಿ ಹೇಳಿದರು. ಇದು ದೇಶದ ಎಲ್ಲಾ ಜನರ ಪ್ರಯತ್ನದಿಂದ ಸಾಧ್ಯವಾಗಿದೆ ಎಂದರು.

ಲಾಕ್ಡೌನ್​ ಸಮಯದಲ್ಲಿ ಚಪ್ಪಾಳೆ ತಟ್ಟವಂತೆ ಹಾಗೂ ದೀಪ ಬೆಳಗುವಂತೆ   ಹೇಳಲಾಗಿತ್ತು, ಜನರು ಇದನ್ನು  ಪಾಲಿಸಿದ್ದರು.  ಈ ರೀತಿಯ ಆಂದೋಲನಗಳು ಪ್ರತಿಯೊಬ್ಬರಲ್ಲೂ ಸ್ಫೂರ್ತಿ ತುಂಬಿವೆ ಎಂದರು. ಕೊರೊನಾ ವಿರುದ್ಧ ಹೋರಾಡುತ್ತಿರುವ ಕೊರೊನಾ ವಾರಿಯರ್ಸ್ ರನ್ನುಕೇಂದ್ರ ಸರಕಾರದ ಪೋರ್ಟಲ್ ಮೂಲಕ ಸಂಪರ್ಕಿಸುವಂತೆ ಸೂಚಿಸಿದರು.  ಇತ್ತೀಚೆಗೆ ಆರಂಭಗೊಂಡ ಈ ಪೋರ್ಟಲ್ ನಲ್ಲಿ ಈಗಾಗಲೇ 1.25 ಕೋಟಿ ಜನರು ಸಂಪರ್ಕ ಹೊಂದಿದ್ದಾರೆ ಎಂದರು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಶಿರಾಡಿ ಘಾಟ್‌ನಲ್ಲಿ ಸೋಮವಾರ ಟ್ರಾಫಿಕ್‌ ಸಂಕಷ್ಟದ ಸಾಧ್ಯತೆ – ಮುಂಜಾಗ್ರತಾ ಕ್ರಮ ಅಗತ್ಯ

ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್‌ನಲ್ಲಿ…

7 hours ago

ಹವಾಮಾನ ವರದಿ |13-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಹಂತ ಹಂತವಾಗಿ ಚುರುಕಾಗಬಹುದೇ?

ಕರ್ನಾಟಕದಲ್ಲಿ ಸದ್ಯ ಮಳೆ ಕಡಿಮೆಯಾಗಿದ್ದು, ಬಿಸಿಲು ಹೆಚ್ಚಾಗಿರುವ ನಡುವೆಯೇ ಸೆ.14ರಿಂದ ದಕ್ಷಿಣ ಒಳನಾಡಿನಲ್ಲಿ…

16 hours ago

ರೈತರ ಆದಾಯ ಹೆಚ್ಚಿಸಲು ಬಹುಬೆಳೆ, ಪಶುಸಂಗೋಪನೆ, ಮೀನುಗಾರಿಕೆಗೆ ಒತ್ತು

ನೀರಿನ ಕೊರತೆ ಮತ್ತು ಹವಾಮಾನ ಬದಲಾವಣೆಯ ನಡುವೆ ಭತ್ತ–ಗೋಧಿಯಂತಹ ಹೆಚ್ಚಿನ ನೀರು ಮತ್ತು…

20 hours ago

ಹವಾಮಾನ ವರದಿ | 12.09.2026 | ಸೆ.15ರಿಂದ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು? ಕರಾವಳಿ–ಮಲೆನಾಡಿನಲ್ಲಿ ಸದ್ಯ ಬಿಸಿಲಿನ ವಾತಾವರಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…

2 days ago

ಹಸುವಿನ ಹಾಲಿಗೆ ಬದಲಾಗಿ ‘ಲ್ಯಾಬ್‌ ಹಾಲು’ – ಇನ್ನು ಕೇವಲ ವಿಜ್ಞಾನಕಲ್ಪನೆ ಅಲ್ಲ..! ಹೊಸ ಅಧ್ಯಯನದ ಲೆಕ್ಕಾಚಾರ

ಇಂಪೀರಿಯಲ್ ಕಾಲೇಜ್ ಲಂಡನ್‌ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…

2 days ago

ಅಡಿಕೆಗೆ ಉತ್ತಮ ಬೆಲೆ , ಆದರೂ ಬೆಳೆಗಾರರ ಚಿಂತೆ ಮುಂದುವರಿದಿದೆ – ಕಾರಣವೇನು?

ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…

2 days ago