ಶೀಘ್ರದಲ್ಲೇ ಬರಲಿದೆ ಮುಂಗಾರು….?

May 2, 2022
8:28 PM

” ನೆನೆವುದೆನ್ನ ಮನಂ ಮಲೆನಾಡ .. ಮಳೆನಾಡ ವೈಭವಂ “

Advertisement
Advertisement
Advertisement

ಇನ್ನೇನು ಮಳೆಗಾಲ ಬಂದೇ ಬಿಡ್ತು ಅನ್ನುವಷ್ಟು ಹತ್ತಿರದಲ್ಲಿದೆ ಮಾನ್ಸೂನ್. ಸಾಮಾನ್ಯವಾಗಿ ಜೂನ್ 6 ನೈರುತ್ಯ ಮುಂಗಾರು ಕರ್ನಾಟಕ ಕರಾವಳಿ ಪ್ರವೇಶಿಸುವ ವಾಡಿಕೆ ದಿನ. ಕಳೆದ 1976 ರಿಂದ ಅಂದರೆ ಕಳೆದ 46 ವರ್ಷಗಳಲ್ಲಿ ಮೇ ತಿಂಗಳಲ್ಲಿಯೇ ಮಳೆಗಾಲ ಆರಂಭವಾಗಿರುವುದು ಹತ್ತು ಬಾರಿ.. ಈ ಎಲ್ಲ ವರ್ಷಗಳಲ್ಲಿ ಅರಬ್ಬೀಸಮುದ್ರ ದಲ್ಲಿ ಕಂಡು ಬಂದ ಚಂಡಮಾರುತಗಳು ಮುಂಗಾರು ಮಾರುತದ ಮೇಲೆ ಪ್ರಭಾವ ಬೀರಿವೆ. ಈ ಬಾರಿ ಮೇ 09/10 ರ ಸುಮಾರಿಗೆ ಬಂಗಾಳಕೊಲ್ಲಿಯಲ್ಲಿ ಕಾಣಿಸಿಕೊಳ್ಳಬಹುದಾದ ಚಂಡಮಾರುತದ ಪ್ರಭಾವ ದಿಂದ 12 ಯಾ 13 ರ ಸುಮಾರಿಗೆ ಮುಂಗಾರು ಮಾರುತಗಳು ಅಂಡಮಾನ್ ಮತ್ತು ನಿಕೋಬಾರ್ ದ್ವೀಪ ಸಮೂಹವನ್ನು ಪ್ರವೇಶಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

Advertisement

ಸಾಮಾನ್ಯವಾಗಿ ಅಂಡಮಾನ್ ಪ್ರವೇಶಿಸಿದ ಮುಂಗಾರು ಇತ್ತ ಕೇರಳ ಪ್ರವೇಶಿಸಲು ಮತ್ತೆ ಹದಿನೈದು ದಿನಗಳ ಕಾಲ ಬೇಕಾಗುತ್ತದೆ. ಎಲ್ಲವೂ ಗಾಳಿಯ ಚಲನೆ, ಬಂಗಾಳಕೊಲ್ಲಿಯ ಚಂಡಮಾರುತ ಅರಬ್ಬೀಸಮುದ್ರ ಪ್ರವೇಶಿಸುವ ಸಾಧ್ಯತೆಯನ್ನು ಹೊಂದಿಕೊಂಡು ವ್ಯತ್ಯಯ ಆಗಬಹುದು. ಮುಂದಿನ ವಾರ ಸ್ಪಷ್ಟ ಚಿತ್ರಣ ಸಿಗಬಹುದು. ಕಳೆದ ಕೆಲದಿನಗಳಿಂದ ಉತ್ತರ ಭಾರತದಲ್ಲಿನ ತಾಪಮಾನ ಸಾಮಾನ್ಯಕ್ಕಿಂತ ಅಧಿಕವಾಗಿರುವುದು ಕೂಡಾ ತಮಿಳುನಾಡು, ಕೇರಳ, ಕರ್ನಾಟಕದ ಅನೇಕ ಕಡೆ ಮಳೆ ಸುರಿಯಲು ಕಾರಣವಾಗಿದೆ. ಮೇ ತಿಂಗಳ ಮಧ್ಯಭಾಗದ ನಂತರ ಉತ್ತರಭಾರತದಲ್ಲಿ ತಾಪಮಾನ ಗರಿಷ್ಟ ಪ್ರಮಾಣ ತಲುಪಿ ಮುಂಗಾರು ಭಾರತೀಯ ಉಪಖಂಡ ಪ್ರವೇಶಿಸಲು ಅನುಕೂಲಕರ ವಾತಾವರಣ ನಿರ್ಮಾಣವಾಗುವುದು ಸರ್ವೇಸಾಮಾನ್ಯ.

Advertisement

ಆದರೆ ಚಂಡಮಾರುತಗಳು ಮುಂಗಾರು ಪ್ರವೇಶದ ಲೆಕ್ಕಾಚಾರ ಅಡಿಮೇಲು ಮಾಡಿದ ಪ್ರಸಂಗಗಳು ಹಲವಾರು ಇವೆ. ಮುಂಗಾರು ಅವಧಿಪೂರ್ವ ಆರಂಭವಾಗಿ ದುರ್ಬಲವಾಗಿಯೇ ಸಾಗಿದ ಉದಾಹರಣೆಗಳೂ ಇವೆ. ಯಾವುದಕ್ಕೂ ಕೆಲ ದಿನ ಕಾದು ನೋಡೋಣ…ಅಂದ ಹಾಗೆ 1999 ರಲ್ಲಿ ಅತಿ ಬೇಗನೆ ಮೇ 20 ರಂದೇ ಮುಂಗಾರು ದ.ಕ ಪ್ರವೇಶಿಸಿತ್ತು. (1976 ರಿಂದ ಈಚೆಗೆ ಅವಧಿಪೂರ್ವ ಮಳೆಗಾಲ ಆರಂಭವಾದ ದಿನ ಹಾಗೂ ಆ ವರ್ಷ ಬಾಳಿಲದಲ್ಲಿ ದಾಖಲಾದ ಮಳೆಯ ವಿವರವನ್ನು ಕೋಷ್ಟಕದಲ್ಲಿ ಕಾಣಬಹುದು)

Advertisement

# ಪಿ ಜಿ ಎಸ್‌ ಎನ್‌ ಪ್ರಸಾದ್ , ಬಾಳಿಲ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement
ಪಿ ಜಿ ಎಸ್‌ ಎನ್ ಪ್ರಸಾದ್‌, ಬಾಳಿಲ

ಕೃಷಿಕ, ಹವಾಮಾನ ಆಸಕ್ತ

ಲೇಖಕರ ಪರಿಚಯ​

ಪಿ ಜಿ ಎಸ್‌ ಎನ್ ಪ್ರಸಾದ್‌, ಬಾಳಿಲ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

Karnataka Weather | 28-03-2024 | ಕೆಲವು ಕಡೆ ತುಂತುರು ಮಳೆ | ಮಾ.31 ನಂತರ ಕೆಲವು ಕಡೆ ಸಾಮಾನ್ಯ ಮಳೆ ನಿರೀಕ್ಷೆ |
March 28, 2024
1:19 PM
by: ಸಾಯಿಶೇಖರ್ ಕರಿಕಳ
ಬರ ಹಿನ್ನೆಲೆ | ಮೈಸೂರು ಜಿಲ್ಲೆಯಲ್ಲಿ ಪಂಪ್‌ಸೆಟ್ ಬಳಸಿ ಕೃಷಿಗೆ ನದಿ ನೀರು ಬಳಕೆ ನಿಷೇಧ |
March 27, 2024
10:01 PM
by: ದ ರೂರಲ್ ಮಿರರ್.ಕಾಂ
ಅಡಿಕೆ ಆಮದು ಪ್ರಕರಣಗಳಲ್ಲಿ ದೂರು ದಾಖಲಾಗುತ್ತಿಲ್ಲವೇಕೆ…? | ಆರೋಪಿಗಳು ಪತ್ತೆಯಾಗುತ್ತಿಲ್ಲವೇಕೆ…? |
March 27, 2024
9:32 PM
by: ದ ರೂರಲ್ ಮಿರರ್.ಕಾಂ
Karnataka Weather | 27-03-2024 | ರಾಜ್ಯದಲ್ಲಿ ಒಣ ಹವೆ | ಕೆಲವು ಕಡೆ ತುಂತುರು ಮಳೆ ಸಾಧ್ಯತೆ |
March 27, 2024
12:49 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror