Advertisement
The Rural Mirror ವಾರದ ವಿಶೇಷ

ಶೀಘ್ರದಲ್ಲೇ ಬರಲಿದೆ ಮುಂಗಾರು….?

Share

” ನೆನೆವುದೆನ್ನ ಮನಂ ಮಲೆನಾಡ .. ಮಳೆನಾಡ ವೈಭವಂ “

Advertisement
Advertisement

ಇನ್ನೇನು ಮಳೆಗಾಲ ಬಂದೇ ಬಿಡ್ತು ಅನ್ನುವಷ್ಟು ಹತ್ತಿರದಲ್ಲಿದೆ ಮಾನ್ಸೂನ್. ಸಾಮಾನ್ಯವಾಗಿ ಜೂನ್ 6 ನೈರುತ್ಯ ಮುಂಗಾರು ಕರ್ನಾಟಕ ಕರಾವಳಿ ಪ್ರವೇಶಿಸುವ ವಾಡಿಕೆ ದಿನ. ಕಳೆದ 1976 ರಿಂದ ಅಂದರೆ ಕಳೆದ 46 ವರ್ಷಗಳಲ್ಲಿ ಮೇ ತಿಂಗಳಲ್ಲಿಯೇ ಮಳೆಗಾಲ ಆರಂಭವಾಗಿರುವುದು ಹತ್ತು ಬಾರಿ.. ಈ ಎಲ್ಲ ವರ್ಷಗಳಲ್ಲಿ ಅರಬ್ಬೀಸಮುದ್ರ ದಲ್ಲಿ ಕಂಡು ಬಂದ ಚಂಡಮಾರುತಗಳು ಮುಂಗಾರು ಮಾರುತದ ಮೇಲೆ ಪ್ರಭಾವ ಬೀರಿವೆ. ಈ ಬಾರಿ ಮೇ 09/10 ರ ಸುಮಾರಿಗೆ ಬಂಗಾಳಕೊಲ್ಲಿಯಲ್ಲಿ ಕಾಣಿಸಿಕೊಳ್ಳಬಹುದಾದ ಚಂಡಮಾರುತದ ಪ್ರಭಾವ ದಿಂದ 12 ಯಾ 13 ರ ಸುಮಾರಿಗೆ ಮುಂಗಾರು ಮಾರುತಗಳು ಅಂಡಮಾನ್ ಮತ್ತು ನಿಕೋಬಾರ್ ದ್ವೀಪ ಸಮೂಹವನ್ನು ಪ್ರವೇಶಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

ಸಾಮಾನ್ಯವಾಗಿ ಅಂಡಮಾನ್ ಪ್ರವೇಶಿಸಿದ ಮುಂಗಾರು ಇತ್ತ ಕೇರಳ ಪ್ರವೇಶಿಸಲು ಮತ್ತೆ ಹದಿನೈದು ದಿನಗಳ ಕಾಲ ಬೇಕಾಗುತ್ತದೆ. ಎಲ್ಲವೂ ಗಾಳಿಯ ಚಲನೆ, ಬಂಗಾಳಕೊಲ್ಲಿಯ ಚಂಡಮಾರುತ ಅರಬ್ಬೀಸಮುದ್ರ ಪ್ರವೇಶಿಸುವ ಸಾಧ್ಯತೆಯನ್ನು ಹೊಂದಿಕೊಂಡು ವ್ಯತ್ಯಯ ಆಗಬಹುದು. ಮುಂದಿನ ವಾರ ಸ್ಪಷ್ಟ ಚಿತ್ರಣ ಸಿಗಬಹುದು. ಕಳೆದ ಕೆಲದಿನಗಳಿಂದ ಉತ್ತರ ಭಾರತದಲ್ಲಿನ ತಾಪಮಾನ ಸಾಮಾನ್ಯಕ್ಕಿಂತ ಅಧಿಕವಾಗಿರುವುದು ಕೂಡಾ ತಮಿಳುನಾಡು, ಕೇರಳ, ಕರ್ನಾಟಕದ ಅನೇಕ ಕಡೆ ಮಳೆ ಸುರಿಯಲು ಕಾರಣವಾಗಿದೆ. ಮೇ ತಿಂಗಳ ಮಧ್ಯಭಾಗದ ನಂತರ ಉತ್ತರಭಾರತದಲ್ಲಿ ತಾಪಮಾನ ಗರಿಷ್ಟ ಪ್ರಮಾಣ ತಲುಪಿ ಮುಂಗಾರು ಭಾರತೀಯ ಉಪಖಂಡ ಪ್ರವೇಶಿಸಲು ಅನುಕೂಲಕರ ವಾತಾವರಣ ನಿರ್ಮಾಣವಾಗುವುದು ಸರ್ವೇಸಾಮಾನ್ಯ.

ಆದರೆ ಚಂಡಮಾರುತಗಳು ಮುಂಗಾರು ಪ್ರವೇಶದ ಲೆಕ್ಕಾಚಾರ ಅಡಿಮೇಲು ಮಾಡಿದ ಪ್ರಸಂಗಗಳು ಹಲವಾರು ಇವೆ. ಮುಂಗಾರು ಅವಧಿಪೂರ್ವ ಆರಂಭವಾಗಿ ದುರ್ಬಲವಾಗಿಯೇ ಸಾಗಿದ ಉದಾಹರಣೆಗಳೂ ಇವೆ. ಯಾವುದಕ್ಕೂ ಕೆಲ ದಿನ ಕಾದು ನೋಡೋಣ…ಅಂದ ಹಾಗೆ 1999 ರಲ್ಲಿ ಅತಿ ಬೇಗನೆ ಮೇ 20 ರಂದೇ ಮುಂಗಾರು ದ.ಕ ಪ್ರವೇಶಿಸಿತ್ತು. (1976 ರಿಂದ ಈಚೆಗೆ ಅವಧಿಪೂರ್ವ ಮಳೆಗಾಲ ಆರಂಭವಾದ ದಿನ ಹಾಗೂ ಆ ವರ್ಷ ಬಾಳಿಲದಲ್ಲಿ ದಾಖಲಾದ ಮಳೆಯ ವಿವರವನ್ನು ಕೋಷ್ಟಕದಲ್ಲಿ ಕಾಣಬಹುದು)

# ಪಿ ಜಿ ಎಸ್‌ ಎನ್‌ ಪ್ರಸಾದ್ , ಬಾಳಿಲ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಪಿ ಜಿ ಎಸ್‌ ಎನ್ ಪ್ರಸಾದ್‌, ಬಾಳಿಲ

ಕೃಷಿಕ, ಹವಾಮಾನ ಆಸಕ್ತ

Published by
ಪಿ ಜಿ ಎಸ್‌ ಎನ್ ಪ್ರಸಾದ್‌, ಬಾಳಿಲ

Recent Posts

ಅಂಕಗಳಾಚೆಗೂ ಒಂದು ಲೋಕವಿದೆ : ಇದು ಮಕ್ಕಳಿಗೆ ಬದುಕನ್ನು ಕಲಿಸುವ ಶಿಕ್ಷಣ

ಶಾಲೆಯ ಹಂತದಲ್ಲಿ ಮಕ್ಕಳಿಗೆ ಕಲಿಸಬೇಕಾದ ಶಿಕ್ಷಣ ಏನು..?.  ಈ ಪ್ರಶ್ನೆಗೆ ಹಲವರದು ಹಲವು…

6 hours ago

ಸರ್ಕಾರಿ ಶಾಲೆ ಮಕ್ಕಳಿಗೆ ಚೆಸ್ ಪಾಠ | ದ.ಕ ದಲ್ಲಿ “ಚೆಸ್ ಇನ್ ಸ್ಕೂಲ್” ಆರಂಭ | ಗ್ರಾಮೀಣ ಮಕ್ಕಳಿಗೆ ಬೌದ್ಧಿಕ ಅವಕಾಶ

ದಕ್ಷಿಣ ಕನ್ನಡ ಜಿಲ್ಲೆಯ ಸರ್ಕಾರಿ ಶಾಲಾ ಮಕ್ಕಳಿಗೆ ಚೆಸ್ ಆಟವನ್ನು ಪರಿಚಯಿಸುವ “ಚೆಸ್…

13 hours ago

ಕೊಳೆ ರೋಗ ನಿಯಂತ್ರಣಕ್ಕೂ ತೆರಿಗೆ…? ಮೈಲುತುತ್ತಿಗೆ ಸುಂಕ – ಅಡಿಕೆ ರೈತನಿಗೆ ಮತ್ತೊಂದು ಹೊರೆ..!

ಅಡಿಕೆ ಬೆಳೆಗಾರ ಇಂದು ಕೇವಲ ಬೆಳೆಗಾರನಲ್ಲ. ಅವನು ಹವಾಮಾನ ಬದಲಾವಣೆ, ರೋಗದ ಸಮಸ್ಯೆ,…

20 hours ago

ದೇಶದಲ್ಲಿ ರಬಿ ಋತು ಬಿತ್ತನೆ ದಾಖಲೆ ಹೆಚ್ಚಳ | 660.48 ಲಕ್ಷ ಹೆಕ್ಟೇರ್‌ಗೆ ಏರಿದ ಒಟ್ಟು ವಿಸ್ತೀರ್ಣ

ಕೇಂದ್ರ ಕೃಷಿ ಸಚಿವಾಲಯವು ಜನವರಿ 23, 2026ರವರೆಗಿನ ರಬಿ ಬೆಳೆ(ಚಳಿಗಾಲದ ಬಿತ್ತನೆ) ಬಿತ್ತನೆಯ…

20 hours ago

ಯೂರಿಯಾ ಮಾರಾಟ 3.8% ಏರಿಕೆ | ದೇಶೀಯ ಉತ್ಪಾದನೆ ಕುಸಿತ, ಆಮದು 85% ಹೆಚ್ಚಳ

ದೇಶದಲ್ಲಿನ ಕೃಷಿ ಬೆಳೆಗಳಿಗೆ ಅಗತ್ಯವಾದ ಪೋಷಕಾಂಶ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ರಸಗೊಬ್ಬರ ವಲಯವು ದೇಶೀಯ…

20 hours ago

ಶುದ್ಧ ಹಿಮಾಲಯವೂ ಸುರಕ್ಷಿತವಲ್ಲ..! ಮರುಭೂಮಿ ಧೂಳಿನೊಂದಿಗೆ ಹರಡುವ ರೋಗಕಾರಕಗಳು

ಹಿಮಾಲಯವನ್ನು ಶುದ್ಧ ಮತ್ತು ಸುರಕ್ಷಿತ ವಾತಾವರಣದ ಪ್ರತೀಕವೆಂದುಕೊಂಡಿದ್ದರೂ, ಜಾಗತಿಕ ಹವಾಮಾನ ಬದಲಾವಣೆ ಹಾಗೂ…

20 hours ago