The Rural Mirror ವಾರದ ವಿಶೇಷ

ಶೀಘ್ರದಲ್ಲೇ ಬರಲಿದೆ ಮುಂಗಾರು….?

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

” ನೆನೆವುದೆನ್ನ ಮನಂ ಮಲೆನಾಡ .. ಮಳೆನಾಡ ವೈಭವಂ “

Advertisement
Advertisement

ಇನ್ನೇನು ಮಳೆಗಾಲ ಬಂದೇ ಬಿಡ್ತು ಅನ್ನುವಷ್ಟು ಹತ್ತಿರದಲ್ಲಿದೆ ಮಾನ್ಸೂನ್. ಸಾಮಾನ್ಯವಾಗಿ ಜೂನ್ 6 ನೈರುತ್ಯ ಮುಂಗಾರು ಕರ್ನಾಟಕ ಕರಾವಳಿ ಪ್ರವೇಶಿಸುವ ವಾಡಿಕೆ ದಿನ. ಕಳೆದ 1976 ರಿಂದ ಅಂದರೆ ಕಳೆದ 46 ವರ್ಷಗಳಲ್ಲಿ ಮೇ ತಿಂಗಳಲ್ಲಿಯೇ ಮಳೆಗಾಲ ಆರಂಭವಾಗಿರುವುದು ಹತ್ತು ಬಾರಿ.. ಈ ಎಲ್ಲ ವರ್ಷಗಳಲ್ಲಿ ಅರಬ್ಬೀಸಮುದ್ರ ದಲ್ಲಿ ಕಂಡು ಬಂದ ಚಂಡಮಾರುತಗಳು ಮುಂಗಾರು ಮಾರುತದ ಮೇಲೆ ಪ್ರಭಾವ ಬೀರಿವೆ. ಈ ಬಾರಿ ಮೇ 09/10 ರ ಸುಮಾರಿಗೆ ಬಂಗಾಳಕೊಲ್ಲಿಯಲ್ಲಿ ಕಾಣಿಸಿಕೊಳ್ಳಬಹುದಾದ ಚಂಡಮಾರುತದ ಪ್ರಭಾವ ದಿಂದ 12 ಯಾ 13 ರ ಸುಮಾರಿಗೆ ಮುಂಗಾರು ಮಾರುತಗಳು ಅಂಡಮಾನ್ ಮತ್ತು ನಿಕೋಬಾರ್ ದ್ವೀಪ ಸಮೂಹವನ್ನು ಪ್ರವೇಶಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

ಸಾಮಾನ್ಯವಾಗಿ ಅಂಡಮಾನ್ ಪ್ರವೇಶಿಸಿದ ಮುಂಗಾರು ಇತ್ತ ಕೇರಳ ಪ್ರವೇಶಿಸಲು ಮತ್ತೆ ಹದಿನೈದು ದಿನಗಳ ಕಾಲ ಬೇಕಾಗುತ್ತದೆ. ಎಲ್ಲವೂ ಗಾಳಿಯ ಚಲನೆ, ಬಂಗಾಳಕೊಲ್ಲಿಯ ಚಂಡಮಾರುತ ಅರಬ್ಬೀಸಮುದ್ರ ಪ್ರವೇಶಿಸುವ ಸಾಧ್ಯತೆಯನ್ನು ಹೊಂದಿಕೊಂಡು ವ್ಯತ್ಯಯ ಆಗಬಹುದು. ಮುಂದಿನ ವಾರ ಸ್ಪಷ್ಟ ಚಿತ್ರಣ ಸಿಗಬಹುದು. ಕಳೆದ ಕೆಲದಿನಗಳಿಂದ ಉತ್ತರ ಭಾರತದಲ್ಲಿನ ತಾಪಮಾನ ಸಾಮಾನ್ಯಕ್ಕಿಂತ ಅಧಿಕವಾಗಿರುವುದು ಕೂಡಾ ತಮಿಳುನಾಡು, ಕೇರಳ, ಕರ್ನಾಟಕದ ಅನೇಕ ಕಡೆ ಮಳೆ ಸುರಿಯಲು ಕಾರಣವಾಗಿದೆ. ಮೇ ತಿಂಗಳ ಮಧ್ಯಭಾಗದ ನಂತರ ಉತ್ತರಭಾರತದಲ್ಲಿ ತಾಪಮಾನ ಗರಿಷ್ಟ ಪ್ರಮಾಣ ತಲುಪಿ ಮುಂಗಾರು ಭಾರತೀಯ ಉಪಖಂಡ ಪ್ರವೇಶಿಸಲು ಅನುಕೂಲಕರ ವಾತಾವರಣ ನಿರ್ಮಾಣವಾಗುವುದು ಸರ್ವೇಸಾಮಾನ್ಯ.

Advertisement

ಆದರೆ ಚಂಡಮಾರುತಗಳು ಮುಂಗಾರು ಪ್ರವೇಶದ ಲೆಕ್ಕಾಚಾರ ಅಡಿಮೇಲು ಮಾಡಿದ ಪ್ರಸಂಗಗಳು ಹಲವಾರು ಇವೆ. ಮುಂಗಾರು ಅವಧಿಪೂರ್ವ ಆರಂಭವಾಗಿ ದುರ್ಬಲವಾಗಿಯೇ ಸಾಗಿದ ಉದಾಹರಣೆಗಳೂ ಇವೆ. ಯಾವುದಕ್ಕೂ ಕೆಲ ದಿನ ಕಾದು ನೋಡೋಣ…ಅಂದ ಹಾಗೆ 1999 ರಲ್ಲಿ ಅತಿ ಬೇಗನೆ ಮೇ 20 ರಂದೇ ಮುಂಗಾರು ದ.ಕ ಪ್ರವೇಶಿಸಿತ್ತು. (1976 ರಿಂದ ಈಚೆಗೆ ಅವಧಿಪೂರ್ವ ಮಳೆಗಾಲ ಆರಂಭವಾದ ದಿನ ಹಾಗೂ ಆ ವರ್ಷ ಬಾಳಿಲದಲ್ಲಿ ದಾಖಲಾದ ಮಳೆಯ ವಿವರವನ್ನು ಕೋಷ್ಟಕದಲ್ಲಿ ಕಾಣಬಹುದು)

# ಪಿ ಜಿ ಎಸ್‌ ಎನ್‌ ಪ್ರಸಾದ್ , ಬಾಳಿಲ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಪಿ ಜಿ ಎಸ್‌ ಎನ್ ಪ್ರಸಾದ್‌, ಬಾಳಿಲ

ಕೃಷಿಕ, ಹವಾಮಾನ ಆಸಕ್ತ

Published by
ಪಿ ಜಿ ಎಸ್‌ ಎನ್ ಪ್ರಸಾದ್‌, ಬಾಳಿಲ

Recent Posts

ಹವಾಮಾನ ಬದಲಾವಣೆ | ತಾಪಮಾನವು ಬೆಳೆಗಳ ಉತ್ಪಾದಕತೆಯ ಮೇಲೆ ಪರಿಣಾಮ ಸಾಧ್ಯತೆ | ಅಡಿಕೆ ಬೆಳೆಗಾರರೂ ಗಮನಿಸಬೇಕಾದ ಅಂಶ ಇದು |

ಹವಾಮಾನ ಬದಲಾವಣೆಯು 2050 ರ ದಶಕದಲ್ಲಿ ಮಳೆಯಾಶ್ರಿತ ಅಕ್ಕಿ ಇಳುವರಿಯನ್ನು 20% ಮತ್ತು…

2 hours ago

ದೈವ ಶಾಪ ದೋಷ | ಗತ ಜನ್ಮದ ಕರ್ಮದ ಪ್ರಭಾವವನ್ನು ಜಯಿಸುವ ಮಾರ್ಗ

ವೈದಿಕ ಜ್ಯೋತಿಷ್ಯ ಶಾಸ್ತ್ರದಲ್ಲಿ ದೈವ ಶಾಪ ದೋಷ ಎಂಬುದು ಗತ ಜನ್ಮದ ಕರ್ಮದಿಂದ…

2 hours ago

ರಾಜ್ಯದ ವಿವಿಧೆಡೆ ಮಳೆ –  ಬಹುತೇಕ ಜಲಾಶಯಗಳು ಭರ್ತಿ

ರಾಜ್ಯದ ವಿವಿಧೆಡೆ ಮಳೆಯಾಗುತ್ತಿದ್ದು ನದಿಗಳು ತುಂಬಿ ಹರಿಯುತ್ತಿವೆ. ಬಹುತೇಕ ಜಲಾಶಯಗಳು ಭರ್ತಿಯಾಗಿವೆ.  ಕೊಡಗಿನ…

13 hours ago

ನಿರಂತರ 170 ಗಂಟೆಗಳ ಕಾಲ ಭರತನಾಟ್ಯ ಪ್ರದರ್ಶನ | ವಿಶ್ವ ದಾಖಲೆ ಸಾಧನೆ ಮಾಡಿದ ಮಂಗಳೂರಿನ ರೆಮೋನಾ ಪಿರೇರಾ

ನಿರಂತರ 170 ಗಂಟೆಗಳ ಕಾಲ ಭರತನಾಟ್ಯ ಪ್ರದರ್ಶನ ನೀಡಿದ ಮಂಗಳೂರಿನ ರೆಮೋನಾ ಪಿರೇರಾ,…

13 hours ago

ಕಳೆದ 11 ವರ್ಷಗಳಲ್ಲಿ ಕೃಷಿ ಕ್ಷೇತ್ರದಲ್ಲಿ ಅಗಾಧ ಬೆಳವಣಿಗೆ | ಲೋಕಸಭೆಯಲ್ಲಿ ಕೇಂದ್ರ ಕೃಷಿ  ಸಚಿವರ  ಹೇಳಿಕೆ

ಕಳೆದ 11 ವರ್ಷಗಳಲ್ಲಿ ಕೃಷಿ ಕ್ಷೇತ್ರದಲ್ಲಿ ಅಗಾಧ ಬೆಳವಣಿಗೆಯಾಗಿದ್ದು, ಕೃಷಿಕರ ಹಿತದೃಷ್ಟಿಯಿಂದ ಕೇಂದ್ರ…

13 hours ago

ಬಿಎಸ್ ಎನ್ ಎಲ್  ಪರಿಶೀಲನಾ ಸಭೆ | ʻಬಿಎಸ್ಎನ್ಎಲ್‌ʼ ಸೇವೆಗಳ ಸುಧಾರಣೆಗೆ ಕ್ರಮ

ಕೇಂದ್ರ ಸಂವಹನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ, ದೆಹಲಿಯಲ್ಲಿ ʻಭಾರತ್ ಸಂಚಾರ್ ನಿಗಮ್ ಲಿಮಿಟೆಡ್ʼನ-…

13 hours ago