Advertisement
The Rural Mirror ವಾರದ ವಿಶೇಷ

ಶೀಘ್ರದಲ್ಲೇ ಬರಲಿದೆ ಮುಂಗಾರು….?

Share

” ನೆನೆವುದೆನ್ನ ಮನಂ ಮಲೆನಾಡ .. ಮಳೆನಾಡ ವೈಭವಂ “

Advertisement

ಇನ್ನೇನು ಮಳೆಗಾಲ ಬಂದೇ ಬಿಡ್ತು ಅನ್ನುವಷ್ಟು ಹತ್ತಿರದಲ್ಲಿದೆ ಮಾನ್ಸೂನ್. ಸಾಮಾನ್ಯವಾಗಿ ಜೂನ್ 6 ನೈರುತ್ಯ ಮುಂಗಾರು ಕರ್ನಾಟಕ ಕರಾವಳಿ ಪ್ರವೇಶಿಸುವ ವಾಡಿಕೆ ದಿನ. ಕಳೆದ 1976 ರಿಂದ ಅಂದರೆ ಕಳೆದ 46 ವರ್ಷಗಳಲ್ಲಿ ಮೇ ತಿಂಗಳಲ್ಲಿಯೇ ಮಳೆಗಾಲ ಆರಂಭವಾಗಿರುವುದು ಹತ್ತು ಬಾರಿ.. ಈ ಎಲ್ಲ ವರ್ಷಗಳಲ್ಲಿ ಅರಬ್ಬೀಸಮುದ್ರ ದಲ್ಲಿ ಕಂಡು ಬಂದ ಚಂಡಮಾರುತಗಳು ಮುಂಗಾರು ಮಾರುತದ ಮೇಲೆ ಪ್ರಭಾವ ಬೀರಿವೆ. ಈ ಬಾರಿ ಮೇ 09/10 ರ ಸುಮಾರಿಗೆ ಬಂಗಾಳಕೊಲ್ಲಿಯಲ್ಲಿ ಕಾಣಿಸಿಕೊಳ್ಳಬಹುದಾದ ಚಂಡಮಾರುತದ ಪ್ರಭಾವ ದಿಂದ 12 ಯಾ 13 ರ ಸುಮಾರಿಗೆ ಮುಂಗಾರು ಮಾರುತಗಳು ಅಂಡಮಾನ್ ಮತ್ತು ನಿಕೋಬಾರ್ ದ್ವೀಪ ಸಮೂಹವನ್ನು ಪ್ರವೇಶಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

ಸಾಮಾನ್ಯವಾಗಿ ಅಂಡಮಾನ್ ಪ್ರವೇಶಿಸಿದ ಮುಂಗಾರು ಇತ್ತ ಕೇರಳ ಪ್ರವೇಶಿಸಲು ಮತ್ತೆ ಹದಿನೈದು ದಿನಗಳ ಕಾಲ ಬೇಕಾಗುತ್ತದೆ. ಎಲ್ಲವೂ ಗಾಳಿಯ ಚಲನೆ, ಬಂಗಾಳಕೊಲ್ಲಿಯ ಚಂಡಮಾರುತ ಅರಬ್ಬೀಸಮುದ್ರ ಪ್ರವೇಶಿಸುವ ಸಾಧ್ಯತೆಯನ್ನು ಹೊಂದಿಕೊಂಡು ವ್ಯತ್ಯಯ ಆಗಬಹುದು. ಮುಂದಿನ ವಾರ ಸ್ಪಷ್ಟ ಚಿತ್ರಣ ಸಿಗಬಹುದು. ಕಳೆದ ಕೆಲದಿನಗಳಿಂದ ಉತ್ತರ ಭಾರತದಲ್ಲಿನ ತಾಪಮಾನ ಸಾಮಾನ್ಯಕ್ಕಿಂತ ಅಧಿಕವಾಗಿರುವುದು ಕೂಡಾ ತಮಿಳುನಾಡು, ಕೇರಳ, ಕರ್ನಾಟಕದ ಅನೇಕ ಕಡೆ ಮಳೆ ಸುರಿಯಲು ಕಾರಣವಾಗಿದೆ. ಮೇ ತಿಂಗಳ ಮಧ್ಯಭಾಗದ ನಂತರ ಉತ್ತರಭಾರತದಲ್ಲಿ ತಾಪಮಾನ ಗರಿಷ್ಟ ಪ್ರಮಾಣ ತಲುಪಿ ಮುಂಗಾರು ಭಾರತೀಯ ಉಪಖಂಡ ಪ್ರವೇಶಿಸಲು ಅನುಕೂಲಕರ ವಾತಾವರಣ ನಿರ್ಮಾಣವಾಗುವುದು ಸರ್ವೇಸಾಮಾನ್ಯ.

ಆದರೆ ಚಂಡಮಾರುತಗಳು ಮುಂಗಾರು ಪ್ರವೇಶದ ಲೆಕ್ಕಾಚಾರ ಅಡಿಮೇಲು ಮಾಡಿದ ಪ್ರಸಂಗಗಳು ಹಲವಾರು ಇವೆ. ಮುಂಗಾರು ಅವಧಿಪೂರ್ವ ಆರಂಭವಾಗಿ ದುರ್ಬಲವಾಗಿಯೇ ಸಾಗಿದ ಉದಾಹರಣೆಗಳೂ ಇವೆ. ಯಾವುದಕ್ಕೂ ಕೆಲ ದಿನ ಕಾದು ನೋಡೋಣ…ಅಂದ ಹಾಗೆ 1999 ರಲ್ಲಿ ಅತಿ ಬೇಗನೆ ಮೇ 20 ರಂದೇ ಮುಂಗಾರು ದ.ಕ ಪ್ರವೇಶಿಸಿತ್ತು. (1976 ರಿಂದ ಈಚೆಗೆ ಅವಧಿಪೂರ್ವ ಮಳೆಗಾಲ ಆರಂಭವಾದ ದಿನ ಹಾಗೂ ಆ ವರ್ಷ ಬಾಳಿಲದಲ್ಲಿ ದಾಖಲಾದ ಮಳೆಯ ವಿವರವನ್ನು ಕೋಷ್ಟಕದಲ್ಲಿ ಕಾಣಬಹುದು)

# ಪಿ ಜಿ ಎಸ್‌ ಎನ್‌ ಪ್ರಸಾದ್ , ಬಾಳಿಲ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಪಿ ಜಿ ಎಸ್‌ ಎನ್ ಪ್ರಸಾದ್‌, ಬಾಳಿಲ

ಕೃಷಿಕ, ಹವಾಮಾನ ಆಸಕ್ತ

Published by
ಪಿ ಜಿ ಎಸ್‌ ಎನ್ ಪ್ರಸಾದ್‌, ಬಾಳಿಲ

Recent Posts

ಹವಾಮಾನ ವರದಿ | 26-04-2026 | ಸದ್ಯ ಸೆಖೆಯ ಉಗ್ರ ರೂಪ…! ಏಪ್ರಿಲ್ 28 ರಿಂದ ರಾಜ್ಯಾದ್ಯಂತ ಮಳೆ ಸಾಧ್ಯತೆ

ರಾಜ್ಯದಲ್ಲಿ ಭಾರಿ ಬಿಸಿಲು ಮುಂದುವರಿದಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯ ಲಕ್ಷಣಗಳಿವೆ. ಏಪ್ರಿಲ್…

5 hours ago

ಅಡಿಕೆ ಎಲೆಚುಕ್ಕೆರೋಗ – ಸಿಪಿಸಿಆರ್‌ಐ ನೇತೃತ್ವದಲ್ಲಿ ಸುಳ್ಯದ ಗುತ್ತಿಗಾರಿನಲ್ಲಿ ಸಂವಾದ

ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕೆ ಸಮೂಹ ಕ್ರಮಗಳು ಫಲ ನೀಡುತ್ತಿವೆ. ಗುತ್ತಿಗಾರಿನಲ್ಲಿ ಸಂವಾದ…

12 hours ago

2026 ಎಲ್ ನಿನೊ ಎಚ್ಚರಿಕೆ..! ಭಾರತ ಸೇರಿ ಏಷ್ಯಾದಲ್ಲಿ ಬರ-ಬಿಸಿಲಿನ ಡಬಲ್ ಶಾಕ್

2026ರಲ್ಲಿ ಎಲ್ ನಿನೊ ಪರಿಣಾಮದಿಂದ ಭಾರತ ಸೇರಿ ಏಷ್ಯಾದಲ್ಲಿ ಕಡಿಮೆ ಮಳೆ ಮತ್ತು…

22 hours ago

ಭಾರೀ ಬಿಸಿ ಹೊಡೆತ..! ಜಗತ್ತಿನ 1 ಬಿಲಿಯನ್ ಜನರ ಬದುಕಿಗೆ ಬಿಸಿ ಹೊಡೆತ

ಹೆಚ್ಚುತ್ತಿರುವ ಉಷ್ಣತೆ ಕೃಷಿ, ಜಾನುವಾರು ಮತ್ತು ಕಾರ್ಮಿಕರ ಮೇಲೆ ತೀವ್ರ ಪರಿಣಾಮ ಬೀರುತ್ತಿದ್ದು,…

22 hours ago

ಹವಾಮಾನ ವರದಿ | 25-04-2026 | ಕರಾವಳಿ, ಮಲೆನಾಡಿನಲ್ಲಿ ಗುಡುಗು ಮಳೆ – ಮಳೆ ಹೆಚ್ಚಳ ಯಾವಾಗಿನಿಂದ…?

ರಾಜ್ಯದಲ್ಲಿ ಏಪ್ರಿಲ್ 26ರಿಂದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಆರಂಭವಾಗುವ ಸಾಧ್ಯತೆ ಇದೆ.…

1 day ago

ಹವಾಮಾನ ವರದಿ | 24-04-2026 | ಕರಾವಳಿ–ಮಲೆನಾಡು–ಒಳನಾಡಿನಲ್ಲಿ ಮಳೆ ಸೂಚನೆ

ರಾಜ್ಯದಲ್ಲಿ ಬಿಸಿಲಿನ ನಡುವೆ ಏಪ್ರಿಲ್ 25-26ರಿಂದ ಮಳೆ ಆರಂಭವಾಗುವ ಸಾಧ್ಯತೆ ಇದೆ. ಕರಾವಳಿ,…

2 days ago