Advertisement
ಸುದ್ದಿಗಳು

ಸ್ವಾತಂತ್ರ‍್ಯ ಹೋರಾಟದ ಮಜಲುಗಳ ಸ್ಮರಣೆ ರಾಷ್ಟ್ರ ನಿರ್ಮಾಣದ ಕಾರ್ಯ: ರಾಜೇಶ್ ಪದ್ಮಾರ್

Share

ಅನೇಕ ಯುವಕರಲ್ಲಿ ಸ್ವಾತಂತ್ರ‍್ಯದ ಕುರಿತಾದ ವಿಚಾರಗಳು ನಮಗೆ ಸಂಬಂಧಿಸಿದ್ದಲ್ಲ ಎಂಬ ಮನೋಭಾವವಿದೆ. ನಮ್ಮ ಪಠ್ಯಪುಸ್ತಕಗಳು ಸ್ವಾತಂತ್ರ‍್ಯದ ಕುರಿತಾಗಿ ಸರಿಯಾಗಿ ತಿಳಿಸುವಲ್ಲಿ ಎಡವಿರುವುದು ಇದಕ್ಕೆ ಪ್ರಮುಖ ಕಾರಣ. ಇಂದಿನ ಯುವಪೀಳಿಗೆಗೆ ರಾಷ್ಟ್ರದ ಕುರಿತಾದ ವಿಚಾರಗಳನ್ನು ಅವರ ಮಾನಸಿಕತೆಗೆ ತಕ್ಕಂತೆ ನೀಡಿವ ಕಾರ್ಯ ನಮಗಿರುವ ಬಹುದೊಡ್ಡ ಸವಾಲು. ಹಾಗೆಯೇ ಸಮಾಜವನ್ನು ಒಗ್ಗೂಡಿಸುವ ಆಲೋಚನೆಗಳು ಜೊತೆಯಾದಾಗ ದೊರೆತ ಸ್ವಾತಂತ್ರ‍್ಯವನ್ನು ಕಾಪಾಡುವುದಕ್ಕೆ ಸಾಧ್ಯವಾಗುತ್ತದೆ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಕರ್ನಾಟಕ ದಕ್ಷಿಣ ಪ್ರಾಂತದ ಸಹ ಪ್ರಚಾರ ಪ್ರಮುಖ್ ರಾಜೇಶ್ ಪದ್ಮಾರ್ ಹೇಳಿದರು.

Advertisement
Advertisement
Advertisement
Advertisement

ಅವರು ಪುತ್ತೂರು ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ ಮಂಥನ ಪುತ್ತೂರು – ವೈಚಾರಿಕ ವೇದಿಕೆ ಇದರ ಆಶ್ರಯದಲ್ಲಿ ಸ್ವಾತಂತ್ರ್ಯೋತ್ಸವದ 75ನೇ ವರ್ಷಾಚರಣೆ ಪ್ರಯುಕ್ತ ಆಯೋಜಿಸಲಾದ ‘ನನ್ನ ಭಾರತ- ಸಮರ್ಥ ಭಾರತ’ ಎಂಬ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಭಾನುವಾರ ಮಾತನಾಡಿದರು.
ಭಾರತ ಸ್ವಾತಂತ್ರ‍್ಯ ಹೋರಾಟವನ್ನು ಎದುರಿಸಿದ ರೀತಿ ಮತ್ತು ಜಗತ್ತಿನ ಇತರೆ ದೇಶಗಳು ಸ್ವಾತಂತ್ರ‍್ಯ ಹೋರಾಟವನ್ನು ಎದುರಿಸಿದ ರೀತಿ ವಿಭಿನ್ನವಾದದ್ದು. ನಮ್ಮ ರಾಷ್ಟ್ರದ ಹೋರಾಟ ಅಖಿಲ ಭಾರತ ಮಟ್ಟದಲ್ಲಿ ವ್ಯಾಪಿಸಿತ್ತು. ಭಾರತದ ಸ್ವಾತಂತ್ರ್ಯ ಹೋರಾಟ ಕ್ರಾಂತಿಕಾರಿ ಮಾರ್ಗ, ಅಹಿಂಸಾತ್ಮಕ ಮಾರ್ಗ, ಸಾಹಿತ್ಯದ ಮಾರ್ಗ, ಸಮಾಜ ಸುಧಾರಣೆ ಮತ್ತು ಮಹಿಮಾನ್ವಿತರ ಮಾರ್ಗದರ್ಶನ ಮುಂತಾದ ಬಹುಮುಖಗಳನ್ನು ಹೊಂದಿದೆ. ಭಾರತದ ಕ್ರಾಂತಿಕಾರಿ ಪರಂಪರೆ ಜಗತ್ತಿನ ಗಮನ ಸೆಳೆದಿದ್ದಲ್ಲದೆ ನಮ್ಮ ನಾಡಿನಲ್ಲಿ ಸ್ವಾತಂತ್ರ್ಯದ ನಂತರವು ಶೌರ್ಯ- ತ್ಯಾಗದ ಪರಂಪರೆ ಮುಂದುವರಿಸುವುದಕ್ಕೆ ಸಹಕರಿಸಿದೆ. ಅಹಿಂಸಾತ್ಮಕ ಹೋರಾಟದ ಮೂಲಕ ಜನರ ಮನಸನ್ನು ತಯಾರು ಮಾಡುವ ಕಾರ್ಯ ಅಂದು ಯಶಸ್ವಿಯಾಯಿತು. ಹಾಗೆಯೇ ಹೋರಾಟದ ಛಾಪನ್ನು ಅಕ್ಷರರೂಪಕ್ಕೆ ಇಳಿಸಿ ಸಾಹಿತ್ಯಾತ್ಮಕ ಹೋರಾಟ ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಕಾರ್ಯ ನಡೆಯಿತು. ಈ ಎಲ್ಲಾ ಮಾರ್ಗಕ್ಕೂ ಮಹಾನ್ ಸಂತರ ಮಾರ್ಗದರ್ಶನ ಕಾಲಕಾಲಕ್ಕೆ ಒದಗಿ ಬಂದಿದೆ ಎಂದರು.

Advertisement

ಭಾರತ ಸರ್ವರಂಗದಲ್ಲೂ ಅತ್ಯಂತ ಶ್ರೀಮಂತವಾದ ದೇಶ. ಸಾವಿರಾರು ವರ್ಷಗಳ ಸಂಘರ್ಷದ ಇತಿಹಾಸದ ನಂತರವೂ ಭಾರತ ತನ್ನ ಅಸ್ತಿತ್ವವನ್ನು ಉಳಿಸಿಕೊಂಡಿದೆ. ಅಂತಹ ಪವಿತ್ರವಾದ ನಾಡಿನ ಗತವೈಭವದ ಸ್ಮರಣೆಯನ್ನು ಇಂದಿನ ಯುವಪೀಳಿಗೆ ಮಾಡಬೇಕು. ಪ್ರತಿಯೊಂದು ಕಾಲಘಟ್ಟದಲ್ಲಿಯೂ ಎಲ್ಲಾ ರಾಷ್ಟ್ರಗಳಿಗೆ ಸಮಸ್ಯೆಗಳು ಎದುರಾಗುತ್ತವೆ. ಅಂತಹ ಸಂದರ್ಭದಲ್ಲಿ ವರ್ತಮಾನ ಸಮಾಜದಲ್ಲಿರುವ ತಲ್ಲಣಗಳ ಅರಿವು ಆ ನಾಡಿನ ಯುವಕರಲ್ಲಿರಬೇಕು. ಯುವಕರು ಈ ರಾಷ್ಟ್ರದ ಭವಿಷ್ಯದ ಕುರಿತು ಚಿಂತನ-ಮಂಥನ ಮಾಡಬೇಕು. ಯುವಕರು ಸ್ವಭೂಷ, ಸ್ವಭಾಷಾ, ಸ್ವದೇಶಿ ಹಾಗೂ ಸ್ವರಾಜ್ಯದ ಕುರಿತಾದ ಅಧ್ಯಯನದ ಮೂಲಕ ರಾಷ್ಟ್ರದಲ್ಲಿರುವ ಗೊಂದಲಗಳಿಗೆ ಪರಿಹಾರವನ್ನು ಸೂಚಿಸಬೇಕು ಎಂದು ತಿಳಿಸಿದರು.

Advertisement

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ  ಸುದ್ದಿ ನ್ಯೂಸ್‌ನ ಸಿ.ಇ.ಒ ಸಿಂಚನಾ ಊರುಬೈಲ್ ಮಾತನಾಡಿ, ಸಮರ್ಥ ಭಾರತದ ನಿರ್ಮಾಣ ಪ್ರಜಾಪ್ರಭುತ್ವದ ಮೂಲಕ ಸಾಧ್ಯ. ಸಮಾಜದಲ್ಲಿರುವ ಪಿಡುಗುಗಳನ್ನು ಹೋಗಲಾಡಿಸಿದರೆ ಸದೃಢ ಭಾರತದ ನಿರ್ಮಾಣವಾಗುತ್ತದೆ. ರಾಷ್ಟ್ರನಿರ್ಮಾಣದ ಕಾರ್ಯ ಸ್ವಗ್ರಾಮ ಸಬಲವಾಗುವುದರ ಮೂಲಕ ಆಗಬೇಕು. ಪ್ರಜಾಪ್ರಭುತ್ವ ನೀಡಿರುವ ಸ್ವಾತಂತ್ರ್ಯವನ್ನು ದುರುಪಯೋಗಗೊಳಿಸದೆ, ನಾಡಿನ ಪ್ರತಿಯೊಬ್ಬರು ತಮ್ಮ ಊರಿನ ಏಳಿಗೆಗಾಗಿ ಪಣತೊಡಬೇಕು ಎಂದು ಅಭಿಪ್ರಾಯಪಟ್ಟರು.

ವಿಶೇಷ ಉಪನ್ಯಾಸದ ನಂತರದಲ್ಲಿ ಸಂವಾದ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಆಯುರ್ವೇದ ವೈದ್ಯೆ ಡಾ.ಅನುಪಮಾ ರವಿ ಪ್ರಾರ್ಥಿಸಿದರು.ಮಂಥನ ಪುತ್ತೂರು – ವೈಚಾರಿಕ ವೇದಿಕೆಯ ಸಂಯೋಜಕರಾದ ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಪ್ರಾಂಶುಪಾಲೆ ಹರಿಣಿ ಪುತ್ತೂರಾಯ ಸ್ವಾಗತಿಸಿ, ಫಾದರ್ ಮುಲ್ಲರ್ ಕಾಲೇಜಿನ ಪ್ರಾಂಶುಪಾಲ ಡಾ. ಅಖಿಲೇಶ್ ಪಾಣಾಜೆ ವಂದಿಸಿದರು. ಬೆಟ್ಟಂಪಾಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದ ಮುಖ್ಯಸ್ಥ ಹರಿಪ್ರಸಾದ್ ಎಸ್ ಕಾರ್ಯಕ್ರಮವನ್ನು ನಿರೂಪಿಸಿದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ರಾಜ್ಯದ ಗ್ರಾಮ ಪಂಚಾಯತ್‌ ಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ʼದರ್ಶಿನಿʼ ವಿನೂತನ ಕಾರ್ಯಕ್ರಮಕ್ಕೆ  ಸರ್ಕಾರ ಚಾಲನೆ

ರಾಜ್ಯದ ಗ್ರಾಮ ಪಂಚಾಯತ್‌ ಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅರಿವು ಕೇಂದ್ರಗಳು ಜ್ಞಾನದ ಕೇಂದ್ರಗಳಾಗಿದ್ದು, ಸ್ಪರ್ಧಾತ್ಮಕ…

1 hour ago

‘ಜಲಾನಯನ ಯಾತ್ರೆ’ ಕುರುಡು ಮಲೆಯಲ್ಲಿ ಆರಂಭ

ಜಲಾನಯನ ಯಾತ್ರೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಯಾತ್ರೆ ಸಂಚರಿಸಲಿದ್ದು, ನೀರು ನಿರ್ವಹಣೆ ಬಗ್ಗೆ…

2 hours ago

ದೇಶದ 25 ಸಾವಿರ ಗ್ರಾಮಗಳಲ್ಲಿ ಸಂಪರ್ಕ ಕಲ್ಪಿಸುವ ಕ್ರಮ  | 900 ಕ್ಕೂ ಅಧಿಕ ಗ್ರಾಮಗಳಲ್ಲಿ ಮೊಬೈಲ್‌ ಟವರ್‌ ಅಳವಡಿಕೆ |

15 ರಾಜ್ಯಗಳಲ್ಲಿ 2 ಸಾವಿರದ 590 ಮೊಬೈಲ್ ಸಂಪರ್ಕರಹಿತ ಗ್ರಾಮಗಳನ್ನು ಗುರುತಿಸಲಾಗಿದೆ. ಈ…

2 hours ago

ಕಪ್ಪತ ಗುಡ್ಡ ರಕ್ಷಣೆ ಕುರಿತು ಜಾಗೃತಿ | ಗುಡ್ಡದ ತಪ್ಪಲಿನ ಗ್ರಾಮಗಳಲ್ಲಿ ಜನಜಾಗೃತಿ

ಗದಗ ಜಿಲ್ಲೆಯ ಮುಂಡರಗಿ ಮತ್ತು ಶಿರಹಟ್ಟಿ ತಾಲೂಕಿನ ಸುಮಾರು 33 ಸಾವಿರ ಹೆಕ್ಟೇರ್…

2 hours ago

ಅಡಿಕೆಯ ಹಳದಿ ಎಲೆ ರೋಗದ ಖಾಯಂ ನಿವಾರಣೆಗಾಗಿ ಯೋಜನೆ ಅನುಷ್ಟಾನಗೊಳ್ಳುತ್ತದೆ ಎಂಬ ಭರವಸೆ ಇರಲಿ

ಅಡಿಕೆಯಲ್ಲೂ ಟಿಶ್ಯೂ ಕಲ್ಚರ್ ತಂತ್ರಜ್ಞಾನದ ಅಳವಡಿಕೆ ಸಾಧ್ಯವೇ ಎಂಬ ಪ್ರಯತ್ನ ಸಾಕಷ್ಟು ಹಿಂದೆಯೇ…

9 hours ago

ಅಡಿಕೆ ಆಮದು ಮೇಲೆ ನಿಗಾ ವಹಿಸಲು ಸಚಿವರಿಗೆ ಮನವಿ ಮಾಡಿದ ಸಂಸದ ಕ್ಯಾ. ಬ್ರಿಜೇಶ್ ಚೌಟ

ಅಡಿಕೆ ಆಮದು ಆಗುತ್ತಿರುವ ಹಿನ್ನಲೆ ನಮ್ಮ ಸ್ಥಳೀಯ ಅಡಿಕೆ ಬೆಳೆಗಾರರು ನ್ಯಾಯಸಮ್ಮತವಲ್ಲದ ದರ…

9 hours ago