MIRROR FOCUS

ಹಲಸು ಮೌಲ್ಯವರ್ಧನೆ | ಹಲಸು ಮೇಳದಲ್ಲಿ ರುಚರುಚಿಯಾದ ತಿಂಡಿ…! | ಅಡುಗೆ ಮನೆಗೆ ಯಾವಾಗ..?

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಈಗ ಹಲಸು ಮೇಳ-ಮಾವು ಮೇಳದ ಗೌಜಿ. ಕರಾವಳಿ ಜಿಲ್ಲೆ ಮಾತ್ರವಲ್ಲ ಇದೀಗ ರಾಜ್ಯದೆಲ್ಲಡೆ ಹಲಸು-ಮಾವು ಮೇಳ ನಡೆಯುತ್ತಿದೆ. ಕಳೆದ ಎರಡು ವಾರದಲ್ಲಿ ಮಂಗಳೂರು, ಬೆಂಗಳೂರು,ಮೈಸೂರಿನಲ್ಲಿ ಹಲಸು ಮೇಳ ನಡೆದಿದೆ, ಪುತ್ತೂರಿನಲ್ಲಿ ಈಗ ನಡೆಯುತ್ತಿದೆ. ಹಲಸು ಮೇಳದಲ್ಲಿ ಪ್ರತೀ ಸಲವೂ ರುಚಿ ರುಚಿಯಾದ ಖಾದ್ಯದ ಪರಿಚಯವಾಗುತ್ತದೆ. ಈ ಖಾದ್ಯಗಳು ಮನೆಮನಗೆ ತಲಪಿದಾದ ಹಸಲು ಮೌಲ್ಯವರ್ಧನೆಯ ಗುರಿ ಸಾಕಾರವಾಗುತ್ತದೆ.

Advertisement
ಹಲಸು ಮೇಳದಲ್ಲಿ ಮಾರಾಟಕ್ಕೆ ಬಂದಿರುವ ಹಲಸು
ಪುತ್ತೂರಿನಲ್ಲಿ ಹಲಸು ಮೇಳ

ಕಳೆದ  ಕೆಲವು ವರ್ಷಗಳಿಂದ ಕೇರಳದಲ್ಲಿ ಹಲಸು ಮೌಲ್ಯವರ್ಧನೆ ಬಗ್ಗೆ ಕೆಲಸವಾಗುತ್ತಲೇ ಇತ್ತು. ಸಣ್ಣ ಸಣ್ಣ ಹಳ್ಳಿಯಲ್ಲೂ ಹಲಸು ಮೌಲ್ಯವರ್ಧನೆ ನಡೆದಿದೆ, ನಡೆಯುತ್ತಿದೆ. ಇದರ ಒಂದು ಭಾಗವೇ ಹಲಸು ಮೇಳ. ಹಲಸು ಮೇಳದ ಮೂಲಕ ಹಲಸು ಉತ್ಪನ್ನಗಳ ಪರಿಚಯ ಆ ಮೂಲಕ ಹಲಸಿನ ಮಾನ. ಆ ಹಲಸು ಉತ್ಪನ್ನಗಳನ್ನು ಮನೆ ಮನೆಗೂ ತಲಪಿ ಅಡುಗೆ ಮನೆಯವರೆಗೂ ಮೌಲ್ಯವರ್ಧನೆಯಾಗಬೇಕು. ಈ ಕೆಲಸ ನಡೆಯುತ್ತಿದೆ. ಈ ಬಗ್ಗೆ ರಾಜ್ಯದಲ್ಲಿ ಕೂಡಾ ಕಳೆದ ಹಲವು ಸಮಯಗಳಿಂದ ಕೆಲಸ ನಡೆಯುತ್ತಿದೆ.  5-6 ವರ್ಷಗಳಿಂದ ಹಲಸು ಮೌಲ್ಯವರ್ಧನೆ ಬಗ್ಗೆ  ಅಡಿಕೆ ಪತ್ರಿಕೆ ಎಚ್ಚರಿಸುತ್ತಿದೆ, ಅಭಿಯಾನದ ಮಾದರಿಯಲ್ಲಿ ಕೆಲಸ ಮಾಡಿತ್ತು. ಇದೀಗ ರಾಜ್ಯದಲ್ಲೂ ಹಲಸು ಮೇಳವು ಸ್ಥಾನ ಪಡೆದುಕೊಂಡಿದೆ. ಜನಾಕರ್ಷಣೆಯ ಕೇಂದ್ರವೂ ಆಗಿದೆ.

ಕಳೆದ ಒಂದು ವಾರದಲ್ಲಿ ಹಲವು ಕಡೆ ಹಲಸು ಮೇಳವಾಗಿದೆ. ಬೆಂಗಳೂರಿನ ಲಾಲ್‌ಬಾಗ್‌ನಲ್ಲಿ ಮೇ 24 ರಂದು ಮಾವು ಹಾಗೂ ಹಲಸು ಮೇಳ ಆರಂಭವಾಗಿದೆ. ಇದು ಜೂನ್ 10ರವರೆಗೆ ನಡೆಯಲಿದೆ. ಮೇಳವನ್ನು ತೋಟಗಾರಿಕೆ ಇಲಾಖೆ ಸಹಯೋಗದಲ್ಲಿ ಕರ್ನಾಟಕ ರಾಜ್ಯ ಮಾವು ಅಭಿವೃದ್ಧಿ ಮತ್ತು ಮಾರುಕಟ್ಟೆ ನಿಗಮ ಆಯೋಜಿಸಿದೆ. ಇಲ್ಲಿ 74 ಮಳಿಗೆಗಳನ್ನು ಮಾವು ಬೆಳೆಗಾರರಿಗೆ, 9 ಮಳಿಗೆ ಹಲಸು ಬೆಳೆಗಾರರಿಗೆ ಮತ್ತು 14 ಮಳಿಗೆಗಳನ್ನು ಇತರೆ ಹಣ್ಣಿನ ಉತ್ಪನ್ನಗಳ ಮಾರಾಟಕ್ಕೆ ಒದಗಿಸಲಾಗಿದೆ.

ಮೈಸೂರಿನಲ್ಲಿ ಕೂಡಾ ಹಲಸು ಮಾವು ಮೇಳ ನಡೆಯುತ್ತದೆ. ಈ ಬಾರಿ ನಗರದ ಕುಪ್ಪಣ್ಣ ಪಾರ್ಕ್‍ನಲ್ಲಿ ಮೇ 24ರಿಂದ 26ರವರೆಗೆ ಮಾವು ಮೇಳ ಆಯೋಜಿಸಲಾಗಿದೆ. ಮೂರು ದಿನಗಳ ಕಾಲ ನಡೆಯುವ ಈ ಮೇಳದಲ್ಲಿ ಮಾವಿನ ಹಣ್ಣುಗಳೊಂದಿಗೆ ಹಲಸಿನ ಹಣ್ಣುಗಳ ಪ್ರದರ್ಶನ ಮತ್ತು ಮಾರಾಟವೂ ಇರಲಿದೆ.

Advertisement

ಮಂಗಳೂರು ಸಾವಯವ ಕೃಷಿಕ ಗ್ರಾಹಕ ಬಳಗ ಆಯೋಜಿಸಿರುವಂತ ಇದು ಏಳನೇ ವರ್ಷದ ಹಲಸಿನ ಹಬ್ಬ ನಡೆಯಿತು. ಸಾಕಷ್ಟು ಸಂಖ್ಯೆಯಲ್ಲಿ ಗ್ರಾಹಕರು ಆಗಮಿಸಿದರು. ಇದೀಗ ಪುತ್ತೂರಿನಲ್ಲೂ 7 ನೇ ವರ್ಷದ ಹಲಸು ಮೇಳ ನಡೆಯುತ್ತಿದೆ. ಪುತ್ತೂರಿನ ಜೈನ್ ಭವನದಲ್ಲಿ ಮೇ 24ರ ಶುಕ್ರವಾರ ಮೇಳಕ್ಕೆ ಚಾಲನೆ ನೀಡಲಾಗಿದೆ. ಮೇ 26ರ ಭಾನುವಾರದ ವರೆಗೆ ಹಲಸು ಮೇಳ ನಡೆಯಲಿದೆ. ಮೇಳದಲ್ಲಿ  ಹಲಸಿನ ಹಣ್ಣಿನ ವಿವಿಧ ಖಾದ್ಯಗಳಾದ ಉಂಡ್ಲಕಾಳು, ಚಿಪ್ಸ್, ಹಪ್ಪಳ, ದೋಸೆ, ಮಂಚೂರಿ, ಕಬಾಬ್, ಮುಳುಕ್ಕ, ಜ್ಯೂಸ್, ರೊಟ್ಟಿ, ಕೇಕ್, ಹಲ್ವಾ, ಸೇಮಿಗೆ, ಬನ್ಸ್ ಪಲಾವ್, ಪಾಯಸ, ಸೋಂಟೆ, ಕೊಟ್ಟಿಗೆ, ಗೆಣಸಲೆ, ಪೋಡಿ, ಮಾಂಬಳ, ಹಣ್ಣಿನ ಐಸ್ ಕ್ರೀಮ್ ಸಹಿತ ಹಲವು ಬಗೆಯ ಖಾದ್ಯಗಳು  ಹಲಸುಪ್ರಿಯರ ಗಮನ ಸೆಳೆದವು.

Advertisement

ಪುತ್ತೂರಿನ ಹಲಸು ಮೇಳದಲ್ಲಿ ಮಾತನಾಡಿದ ಕ್ಯಾಂಪ್ಕೋ ಅಧ್ಯಕ್ಷ ಕಿಶೋರ್‌ ಕುಮಾರ್‌ ಕೊಡ್ಗಿ , ಹಲಸು ಮೌಲ್ಯವರ್ಧನೆಯ ಬಗ್ಗೆ ಆರಂಭದಲ್ಲಿ ಅಡಿಕೆ ಪತ್ರಿಕೆ ಬಹಳಷ್ಟು ಕೆಲಸ ಮಾಡಿದೆ. ಹೀಗಾಗಿ ಈಗ ಮಾನ ಬರುತ್ತಿದೆ. ಹಲಸು ಮೇಳಗಳು ಕೇವಲ ವಾಣಿಜ್ಯ ಉದ್ದೇಶದಿಂದ ನಡೆದಲ್ಲಿ ಅದರ ಮಹತ್ವ ಕಳೆದುಕೊಳ್ಳುತ್ತದೆ. ಹಲಸು ಮೌಲ್ಯವರ್ಧನೆಯ ಜೊತೆಗೆ ಕೃಷಿಕರೂ ಕೂಡಾ ಉತ್ತಮ ತಳಿಯ ಆಯ್ಕೆ ಮಾಡಿ ಹಲಸು ಬೆಳೆಯುವುದು ಹಾಗೂ ಮಾರುಕಟ್ಟೆಗೆ ವ್ಯವಸ್ಥೆ ಮಾಡಿಕೊಳ್ಳಬೇಕು. ಇದಕ್ಕೆ ಮೇಳಗಳು ನೆರವಾಗಬೇಕು ಎಂದು ಅವರು ಹೇಳಿದರು.

ಪುತ್ತೂರು ಶಾಸಕ ಅಶೋಕ್‌ ಕುಮಾರ್‌ ರೈ ಅವರು ಮಾತನಾಡಿ, ಹಲಸು ಹಸಿದವರ ಹಣ್ಣು. ಹಲಸು ಮೌಲ್ಯವರ್ಧನೆಯಾದಾಗ ಕೃಷಿಯೂ ಬೆಳವಣಿಗೆ ಸಾಧ್ಯವಿದೆ. ಇದಕ್ಕಾಗಿ ನಿರಂತರ ಪ್ರಯತ್ನ ಅಗತ್ಯ ಎಂದು ಹೇಳಿದರು.


ಪುತ್ತೂರಿನ ಹಲಸು ಮೇಳದಲ್ಲಿ ಮಾಜಿ ಶಾಸಕಿ ಶಕುಂತಳಾ ಶೆಟ್ಟಿ

ಪ್ರತಿಕ್ರಿಯಿಸಲು....
ಈ ಕೆಳಗಿನ ಲಿಂಕ್‌ ಮೂಲಕ ನಿಮ್ಮ ಅಭಿಪ್ರಾಯ ವ್ಯಕ್ತಪಡಿಸಬಹುದು…

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಕ್ರಮ ಅಡಿಕೆ ಸಾಗಾಟ ಪತ್ತೆ | 466 ಚೀಲ ಅಡಿಕೆ ವಶಕ್ಕೆ ಪಡೆದ ಅಸ್ಸಾಂ ರೈಫಲ್ಸ್‌

ಮಿಜೋರಾಂನ ಚಾಂಫೈನಲ್ಲಿ ಅಸ್ಸಾಂ ರೈಫಲ್ಸ್ 466 ಚೀಲ ಅಡಿಕೆಯನ್ನು ವಶಕ್ಕೆ ಪಡೆದಿದೆ. ಈ…

3 hours ago

ಆ.15 ರಿಂದ ದೇವಸ್ಥಾನಗಳಲ್ಲಿ ಪ್ಲಾಸ್ಟಿಕ್ ನಿಷೇಧಿಸಿ ಸರ್ಕಾರ ಆದೇಶ

ಮುಜರಾಯಿ ಇಲಾಖೆಯ ವ್ಯಾಪ್ತಿಯಲ್ಲಿ ಇರುವ ದೇವಾಲಯಗಳಲ್ಲಿ ಕಡ್ಡಾಯವಾಗಿ ನೀರಿನ ಬಾಟಲ್ ಸೇರಿದಂತೆ ಪ್ಲಾಸ್ಟಿಕ್ …

5 hours ago

15 ದಿನಗಳಿಗೊಮ್ಮೆ ಶಾಲೆ, ಅಂಗನವಾಡಿಗಳ ನೀರಿನ ತಪಾಸಣೆ – ಜಿ. ಪಂ ಸಿಇಒ ಸೂಚನೆ

ಪ್ರತಿ 15 ದಿನಗಳಿಗೊಮ್ಮೆ ಶಾಲೆ ಮತ್ತು ಅಂಗನವಾಡಿಗಳ ಕುಡಿಯುವ ನೀರನ್ನು ಪರೀಕ್ಷೆಗೊಳಪಡಿಸಿ  ತಪಾಸಣೆ…

6 hours ago

ಹವಾಮಾನ ವರದಿ | 13-08-2025 | ಆ.21 ರವರೆಗೆ ಮಳೆ ವಿಸ್ತರಣೆ ಎಲ್ಲಿ ? ವಾಯುಭಾರ ಕುಸಿತದ ಕಾರಣದಿಂದ ಮಳೆ ಎಲ್ಲೆಲ್ಲಾ ಇದೆ..?

ಬಂಗಾಳಕೊಲ್ಲಿಯ ಆಂದ್ರಾ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಒಡಿಸ್ಸಾ ಕರಾವಳಿ ತನಕ ಸಾಗಿ,…

12 hours ago

ತೋಟಗಾರಿಕಾ ಬೆಳೆಗಳ ಅಭಿವೃದ್ಧಿಗೆ ಸಹಾಯಧನ |ವಿವಿಧ ಕಾರ್ಯಕ್ರಮಗಳ ಮೂಲಕ ರೈತರಿಗೆ ನೆರವು

ರಾಜ್ಯದಲ್ಲಿ ತೋಟಗಾರಿಕಾ ಬೆಳೆಗಳ ಅಭಿವೃದ್ಧಿಗೆ ಹಲವು ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದು, ತೋಟಗಾರಿಕಾ ಬೆಳೆಗಳಿಗೆ…

18 hours ago

ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮಳೆ | ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯದ ಕರಾವಳಿಯಲ್ಲಿ ವ್ಯಾಪಕ ಮಳೆಯಾಗಿದೆ. ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಕರಾವಳಿ ಹಾಗೂ ಉತ್ತರ…

19 hours ago