Advertisement
ಸುದ್ದಿಗಳು

ಸರ್ಕಾರದಿಂದ ಕೃಷಿಯಲ್ಲಿ ಹಲವು ಮಹತ್ತರ ಬದಲಾವಣೆ | ಈ ಮೂಲಕ ರೈತರ ಆದಾಯ ವೃದ್ಧಿಗೆ ಕಟಿಬದ್ಧ| ಕೃಷಿ ಸಚಿವ ಬಿ ಸಿ ಪಾಟೀಲ್

Share

ಬಿಜೆಪಿ ಸರ್ಕಾರ ಕೃಷಿಯಲ್ಲಿ ಹಲವು ಮಹತ್ತರ ಬದಲಾವಣೆಗಳನ್ನು ತರುವ ಮೂಲಕ ರೈತರ ಆದಾಯ ವೃದ್ಧಿಗೆ ಕಠಿಬದ್ಧವಾಗಿ ನಡೆಯುತ್ತಿದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಪುನರುಚ್ಚರಿಸಿದರು. ಅವರಿಂದು ಕೃಷಿ ಇಲಾಖೆಯ ಆವರಣದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ” ಸಂಗಮ ಸಭಾಂಗಣ”ವನ್ನು ಉದ್ಘಾಟಿಸಿ ಮಾತನಾಡಿದರು‌.

ಈ ಬಾರಿ ಬಜೆಟ್‌ನಲ್ಲಿ ರೈತರಿಗೆ ಶೂನ್ಯಬಡ್ಡಿ ದರದಲ್ಲಿ ಸಾಲ ಅಲ್ಲದೇ ಸಾಲದ ಮೊತ್ತವನ್ನು ೫ಲಕ್ಷ ರೂ.ಗೆ ಸರ್ಕಾರ ಏರಿಸಿದೆ‌ಅಲ್ಲದೇ ಕೃಷಿಕರಿಗಾಗಿ ಹಲವು ಅಭಿವೃದ್ಧಿಪರ ಯೋಜನೆಗಳನ್ನು ರೂಪಿಸಿದೆ‌.ಜನಸ್ನೇಹಿ ಬಜೆಟ್ ರೂಪಿಸಿರುವ ಬಿಜೆಪಿ ಸರ್ಕಾರ ಕಿರುಧಾನ್ಯಗಳ ವಿಸ್ತೀರ್ಣ ಉತ್ಪಾದನೆ ಹೆಚ್ಚಿಸಲು ರೈತಸಿರಿ ಯೋಜನೆಯಡಿ ಕಿರುಧಾನ್ಯ ಬೆಳೆಗಾರರಿಗೆ 10 ಸಾವಿರ.ರೂ.ಗಳಪ್ರೋತ್ಸಾಹ ಧನವನ್ನು ನೀಡುತ್ತಿದೆ.ಸಿರಿಧಾನ್ಯಕ್ಕೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸಾಕಷ್ಟು ಉತ್ತೇಜನ ನೀಡುತ್ತಿವೆ.ಕೃಷಿ ಮತ್ತು ಪೂರಕ ಚಟುವಟಿಕೆಗಳ ವಲಯಕ್ಕೆ 2023-24 ನೇ‌ಸಾಲಿನಲ್ಲಿ ಒಟ್ಟಾರೆಯಾಗಿ ,39,031 ಕೋಟಿ ರೂ ಅನುದಾನ ಒದಗಿಸಲಾಗಿದೆ  ಎಂದರು.

ಇದೇ ತಿಂಗಳ‌ ಅಂದರೆ ಫೆ.27 ರಂದು ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ 13ನೇ ಕಂತನ್ನು ನರೇಂದ್ರ ಮೋದಿ ಅವರು ಶಿವಮೊಗ್ಗದಿಂದಲೇ ರೈತರ ಖಾತೆಗಳಿಗೆ ಜಮಾ ಮಾಡಲಿದ್ದಾರೆ ಎಂದು‌ ಸಂಸದ‌ ಬಿ.ವೈ.ರಾಘವೇಂದ್ರ ಮಾಹಿತಿ ನೀಡಿರುವುದಾಗಿ ಇದೇ ವೇಳೆ ಬಿಸಿಪಿ ತಿಳಿಸಿದರು. ಕೃಷಿ ಇಲಾಖೆ ರೈತಸ್ನೇಹಿಯಾಗಿದ್ದು, ರೈತರು ಸಂಬಂಧಪಟ್ಟ ತಮ್ಮ ವ್ಯಾಪ್ತಿಯಲ್ಲಿನ ಕಚೇರಿಗಳಿಗೆ ಭೇಟಿ ನೀಡಿ ಅಧಿಕಾರಿಗಳೊಂದಿಗೆ ಸಂಪರ್ಕ ಸಾಧಿಸಿ ಸಮಸ್ಯೆಗಳಿಗೆ ಪರಿಹಾರ ಪಡೆಯುತ್ತಿರಬೇಕು‌.ಅಲ್ಲದೇ ಕೃಷಿ ವಿಶ್ವವಿದ್ಯಾಲಯಗಳಿಗೂ ಭೇಟಿ ನೀಡಿ ಅಲ್ಲಿನ‌ಹೊಸತಳಿಗಳ ಬಗ್ಗೆ ಮಾಹಿತಿ ಪಡೆಯಬೇಕು ಎಂದು ಸಚಿವರು ಕರೆ ನೀಡಿದರು.

ಈ ಸಂದರ್ಭದಲ್ಲಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಶಿವಯೋಗಿ ಕಳಸದ, ಕೃಷಿ ಇಲಾಖೆಯ ಆಯುಕ್ತ ಶರತ್ ಪಿ, ನಿರ್ದೇಶಕ ಪುತ್ರನ್, ಅಧಿಕಾರಿಗಳಾದ ವೆಂಕಟರಮಣರೆಡ್ಡಿ ಸೇರಿದಂತೆ ಮತ್ತಿತ್ತರು ಉದ್ಘಾಟನಾ ಕಾರ್ಯಕ್ರಮ ವೇಳೆ ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅವೈಜ್ಞಾನಿಕ ಮಳೆ ವರದಿ ಶೈಕ್ಷಣಿಕ ವಲಯಕ್ಕೆ ತೊಂದರೆ – ಹವಾಮಾನ ಮುನ್ಸೂಚನೆ ಕುರಿತು ಎಸ್.ಎಲ್. ಭೋಜೆಗೌಡ ಕಳವಳ

ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…

15 hours ago

ಹವಾಮಾನ ವರದಿ | 26-07-2026 | ಕರ್ನಾಟಕದಲ್ಲಿ ಮತ್ತೆ ಮಳೆ ಚುರುಕು – ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ | ಕರಾವಳಿ–ಮಲೆನಾಡಿನಲ್ಲಿ 10 ದಿನ ಮಳೆಯ ಸಾಧ್ಯತೆ

ಪಶ್ಚಿಮ ಬಂಗಾಳ ಕರಾವಳಿಯಲ್ಲಿ ರೂಪುಗೊಳ್ಳಲಿರುವ ವಾಯುಭಾರ ಕುಸಿತದಿಂದ ಕರ್ನಾಟಕದಲ್ಲಿ ಮತ್ತೆ ಮುಂಗಾರು ಚುರುಕುಗೊಳ್ಳುವ…

16 hours ago

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ

ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…

2 days ago

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

2 days ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

2 days ago