Advertisement
ಸುದ್ದಿಗಳು

ಸರ್ಕಾರದಿಂದ ಕೃಷಿಯಲ್ಲಿ ಹಲವು ಮಹತ್ತರ ಬದಲಾವಣೆ | ಈ ಮೂಲಕ ರೈತರ ಆದಾಯ ವೃದ್ಧಿಗೆ ಕಟಿಬದ್ಧ| ಕೃಷಿ ಸಚಿವ ಬಿ ಸಿ ಪಾಟೀಲ್

Share

ಬಿಜೆಪಿ ಸರ್ಕಾರ ಕೃಷಿಯಲ್ಲಿ ಹಲವು ಮಹತ್ತರ ಬದಲಾವಣೆಗಳನ್ನು ತರುವ ಮೂಲಕ ರೈತರ ಆದಾಯ ವೃದ್ಧಿಗೆ ಕಠಿಬದ್ಧವಾಗಿ ನಡೆಯುತ್ತಿದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಪುನರುಚ್ಚರಿಸಿದರು. ಅವರಿಂದು ಕೃಷಿ ಇಲಾಖೆಯ ಆವರಣದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ” ಸಂಗಮ ಸಭಾಂಗಣ”ವನ್ನು ಉದ್ಘಾಟಿಸಿ ಮಾತನಾಡಿದರು‌.

ಈ ಬಾರಿ ಬಜೆಟ್‌ನಲ್ಲಿ ರೈತರಿಗೆ ಶೂನ್ಯಬಡ್ಡಿ ದರದಲ್ಲಿ ಸಾಲ ಅಲ್ಲದೇ ಸಾಲದ ಮೊತ್ತವನ್ನು ೫ಲಕ್ಷ ರೂ.ಗೆ ಸರ್ಕಾರ ಏರಿಸಿದೆ‌ಅಲ್ಲದೇ ಕೃಷಿಕರಿಗಾಗಿ ಹಲವು ಅಭಿವೃದ್ಧಿಪರ ಯೋಜನೆಗಳನ್ನು ರೂಪಿಸಿದೆ‌.ಜನಸ್ನೇಹಿ ಬಜೆಟ್ ರೂಪಿಸಿರುವ ಬಿಜೆಪಿ ಸರ್ಕಾರ ಕಿರುಧಾನ್ಯಗಳ ವಿಸ್ತೀರ್ಣ ಉತ್ಪಾದನೆ ಹೆಚ್ಚಿಸಲು ರೈತಸಿರಿ ಯೋಜನೆಯಡಿ ಕಿರುಧಾನ್ಯ ಬೆಳೆಗಾರರಿಗೆ 10 ಸಾವಿರ.ರೂ.ಗಳಪ್ರೋತ್ಸಾಹ ಧನವನ್ನು ನೀಡುತ್ತಿದೆ.ಸಿರಿಧಾನ್ಯಕ್ಕೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸಾಕಷ್ಟು ಉತ್ತೇಜನ ನೀಡುತ್ತಿವೆ.ಕೃಷಿ ಮತ್ತು ಪೂರಕ ಚಟುವಟಿಕೆಗಳ ವಲಯಕ್ಕೆ 2023-24 ನೇ‌ಸಾಲಿನಲ್ಲಿ ಒಟ್ಟಾರೆಯಾಗಿ ,39,031 ಕೋಟಿ ರೂ ಅನುದಾನ ಒದಗಿಸಲಾಗಿದೆ  ಎಂದರು.

ಇದೇ ತಿಂಗಳ‌ ಅಂದರೆ ಫೆ.27 ರಂದು ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ 13ನೇ ಕಂತನ್ನು ನರೇಂದ್ರ ಮೋದಿ ಅವರು ಶಿವಮೊಗ್ಗದಿಂದಲೇ ರೈತರ ಖಾತೆಗಳಿಗೆ ಜಮಾ ಮಾಡಲಿದ್ದಾರೆ ಎಂದು‌ ಸಂಸದ‌ ಬಿ.ವೈ.ರಾಘವೇಂದ್ರ ಮಾಹಿತಿ ನೀಡಿರುವುದಾಗಿ ಇದೇ ವೇಳೆ ಬಿಸಿಪಿ ತಿಳಿಸಿದರು. ಕೃಷಿ ಇಲಾಖೆ ರೈತಸ್ನೇಹಿಯಾಗಿದ್ದು, ರೈತರು ಸಂಬಂಧಪಟ್ಟ ತಮ್ಮ ವ್ಯಾಪ್ತಿಯಲ್ಲಿನ ಕಚೇರಿಗಳಿಗೆ ಭೇಟಿ ನೀಡಿ ಅಧಿಕಾರಿಗಳೊಂದಿಗೆ ಸಂಪರ್ಕ ಸಾಧಿಸಿ ಸಮಸ್ಯೆಗಳಿಗೆ ಪರಿಹಾರ ಪಡೆಯುತ್ತಿರಬೇಕು‌.ಅಲ್ಲದೇ ಕೃಷಿ ವಿಶ್ವವಿದ್ಯಾಲಯಗಳಿಗೂ ಭೇಟಿ ನೀಡಿ ಅಲ್ಲಿನ‌ಹೊಸತಳಿಗಳ ಬಗ್ಗೆ ಮಾಹಿತಿ ಪಡೆಯಬೇಕು ಎಂದು ಸಚಿವರು ಕರೆ ನೀಡಿದರು.

ಈ ಸಂದರ್ಭದಲ್ಲಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಶಿವಯೋಗಿ ಕಳಸದ, ಕೃಷಿ ಇಲಾಖೆಯ ಆಯುಕ್ತ ಶರತ್ ಪಿ, ನಿರ್ದೇಶಕ ಪುತ್ರನ್, ಅಧಿಕಾರಿಗಳಾದ ವೆಂಕಟರಮಣರೆಡ್ಡಿ ಸೇರಿದಂತೆ ಮತ್ತಿತ್ತರು ಉದ್ಘಾಟನಾ ಕಾರ್ಯಕ್ರಮ ವೇಳೆ ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಬೇಸಿಗೆಯಲ್ಲಿ ನಿಮ್ಮ ಕಿಡ್ನಿಯನ್ನು ಕಾಪಾಡಿ..! ಮೂತ್ರಪಿಂಡದ ಕಲ್ಲು ಸಮಸ್ಯೆ ಏಕೆ ಹೆಚ್ಚುತ್ತಿದೆ?

ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…

2 days ago

ಮಳೆಗಾಲ ಆರಂಭ- ಜೂನ್‌ 1ರಿಂದ ರಸ್ತೆ, ಗುಡ್ಡ, ಮಣ್ಣು ಅಗೆತ ಕಾಮಗಾರಿಗೆ ನಿರ್ಬಂಧ – ನಗರಪಾಲಿಕೆ ಎಚ್ಚರಿಕೆ

ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್‌ 1ರಿಂದ ಸೆಪ್ಟೆಂಬರ್‌ 30ರವರೆಗೆ ರಸ್ತೆ, ಗುಡ್ಡ…

2 days ago

ಅಸ್ಸಾಂನಲ್ಲಿ ಭಾರೀ ಅಕ್ರಮ ಅಡಿಕೆ ವಶ : ಡಿಆರ್‌ಐ ದಾಳಿ, 60 ಸಾವಿರ ಕೆಜಿ ವಿದೇಶಿ ಅಡಿಕೆ ಜಪ್ತಿ

ಈಶಾನ್ಯ ಭಾರತದಲ್ಲಿ ಡಿಆರ್‌ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…

2 days ago

“ಒಂದು ದಿನ ಅಡಿಕೆ ಮಾರುಕಟ್ಟೆಗೆ ‘ಏಲಿಯನ್ಸ್’ ಬಂದರೆ?” ರೈತನ ಭವಿಷ್ಯದ ಬಗ್ಗೆ ಎಚ್ಚರಿಸುವ ಕಲ್ಪಿತ ಕಥೆ

ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…

3 days ago

“ಕಾಕ್ರೋಚ್‌ ಜನತಾ ಪಾರ್ಟಿ”ಗೆ ಹೊಸ ಎದುರಾಳಿ..! ವೈರಲ್‌ ಆಗುತ್ತಿದೆ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌”

“ಕಾಕ್‌ರೋಚ್‌ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌” ಎಂಬ ಹೊಸ…

4 days ago