ಸಾಗರ ಆರ್ಥಿಕತೆ ವಲಯದಲ್ಲಿ ಹೆಚ್ಚಿನ ಉದ್ಯೋಗಸೃಷ್ಟಿ ಮತ್ತು ಸುಸ್ಥಿರತೆ ಕಾಯ್ದುಕೊಳ್ಳುವುದು ಸರ್ಕಾರದ ಗುರಿಯಾಗಿದೆ. ಈ ನಿಟ್ಟಿನಲ್ಲಿ ಕಳೆದ ವರ್ಷ 100 ಶತಕೋಟಿ ಡಾಲರ್ ಬಂಡವಾಳ ಹೂಡಿಕೆ ಆಕರ್ಷಿಸಲಾಗಿದೆ ಎಂದು ಕೇಂದ್ರ ಹಡಗುಯಾನ ಮತ್ತು ಬಂದರು ಖಾತೆ ಸಚಿವ ಸರ್ಬಾನಂದ ಸೋನೊವಾಲ್ ಹೇಳಿದ್ದಾರೆ.
ಚೆನ್ನೈನಲ್ಲಿ, ಸಾಗರ ವ್ಯಾಪಾರ ಸಮಾವೇಶ 2024ರಲ್ಲಿ ಅವರು, ವಿಕಸಿತ ಭಾರತ ಗುರಿ ತಲುಪುವ ಅಮೃತಕಾಲದಲ್ಲಿ ದೇಶದ ಸಾಗರ ವಲಯ ಕೈಗಾರಿಕೆ ಮಹತ್ವದ ಪಾತ್ರ ವಹಿಸಲಿದೆ ಎಂದರು.ಜಿ-20 ನಿರ್ಣಯದ ಅನುಸಾರ ಭಾರತ -ಮಧ್ಯಪ್ರಾಚ್ಯ-ಯುರೋಪ್ ಸಾಗರ ಕಾರಿಡಾರ್ ನಿರ್ಮಿಸಲು ಸರ್ಕಾರ ಬದ್ಧವಾಗಿದೆ. ಅತ್ಯಾಧುನಿಕ ಮೂಲಸೌಕರ್ಯದ ಮೂಲಕ ಭಾರತವನ್ನು ಸಾಗರ ವ್ಯಾಪಾರದ ಪ್ರಮುಖ ತಾಣವನ್ನಾಗಿಸುವ ನಿಟ್ಟಿನಲ್ಲಿ ಸಾಗರ ಮಾಲಾ, ಸಾಗರ ಸೇತು, ಸಾಗರ ಸಮೃದ್ಧಿ ಸೇರಿದಂತೆ ಹಲವು ಯೋಜನೆಗಳನ್ನು ಜಾರಿಗೊಳಿಸಲಾಗುತ್ತಿದೆ ಎಂದು ತಿಳಿಸಿದರು. ದೇಶದ 9 ಬಂದರುಗಳನ್ನು ಜಾಗತಿಕ ಶ್ರೇಣಿಗೆ ಅನುಸಾರವಾಗಿ ಅಭಿವೃದ್ಧಿಪಡಿಸಲಾಗಿದ್ದು, ಹಡಗು ನಿರ್ಮಾಣ ಕೈಗಾರಿಕೆಯಲ್ಲಿ ಭಾರತ ಶೀಘ್ರವೇ ಅಗ್ರ 5 ರಾಷ್ಟ್ರಗಳ ಪಟ್ಟಿಯಲ್ಲಿ ಸೇರ್ಪಡೆಯಾಗುವ ವಿಶ್ವಾಸವಿದೆ. ಪರಿಸರಸ್ನೇಹಿ ಕ್ರಮದ ಅನುಸಾರ ದೇಶದ ಬಂದರುಗಳಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಗೊಳಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು. ದೇಶದ ಆರ್ಥಿಕತೆ ಬಲಪಡಿಸುವಲ್ಲಿ ಒಳನಾಡು ಜಲಮಾರ್ಗಗಳು ಮುಖ್ಯ ಪಾತ್ರ ವಹಿಸಲಿದ್ದು, ಇವುಗಳ ಅಭಿವೃದ್ಧಿಗೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು.
ನುಡಿದಂತೆ ನಡೆದಾತ ‘ರಾಜಾ ಹರಿಶ್ಚಂದ್ರ’. ಸತ್ಯಕ್ಕಾಗಿ ಸರ್ವಸ್ವವನ್ನೂ ತ್ಯಾಗ ಮಾಡಿದ ತ್ಯಾಗಿ. ಅನೃತವನ್ನಾಡದೆ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಸಾರ್ವಜನಿಕ ಹಿತದೃಷ್ಠಿಯಿಂದ ಆಗುಂಬೆ ಘಾಟಿಯ ಮೂಲಕ ನಾಳೆಯಿಂದ ಸೆಪ್ಟಂಬರ್ 30 ರವರೆಗೆ ಲಘು…
ಕೃಷಿ ಸಂಸ್ಕರಣಾ ಘಟಕ ಸ್ಥಾಪಿಸುವ ರೈತರಿಗೆ ಈ ವರ್ಷದಿಂದ ರಾಜ್ಯ ಸರ್ಕಾರ 9…
ಚಿಕ್ಕಮಗಳೂರು ಜಿಲ್ಲೆಯಲ್ಲಿ ಸಾಧಾರಣದಿಂದ ಹೆಚ್ಚು ಮಳೆಯಾಗುತ್ತಿದೆ. ಹೆಚ್ಚು ಮಳೆಯಿಂದಾಗಿ ಜಿಲ್ಲೆಯ ಮುಳ್ಳಯ್ಯನಗಿರಿ ರಸ್ತೆಯೆ…
ದಾವಣಗೆರೆ ಜಿಲ್ಲಾ ಪಂಚಾಯತ್, ತೋಟಗಾರಿಕೆ ಇಲಾಖೆ ಸಹಯೋಗದೊಂದಿಗೆ ಜೂನ್.16 ರಿಂದ 18 ವರೆಗೆ…