Advertisement
ಸುದ್ದಿಗಳು

ಸಾಗರ ಆರ್ಥಿಕತೆ | ಉದ್ಯೋಗ ಸೃಷ್ಟಿ ಹೆಚ್ಚಳ  | ಚೆನ್ನೈನಲ್ಲಿ ನಡೆದ ಸಾಗರ ವ್ಯಾಪಾರ ಸಮಾವೇಶ |

Share

ಸಾಗರ ಆರ್ಥಿಕತೆ ವಲಯದಲ್ಲಿ ಹೆಚ್ಚಿನ ಉದ್ಯೋಗಸೃಷ್ಟಿ ಮತ್ತು ಸುಸ್ಥಿರತೆ ಕಾಯ್ದುಕೊಳ್ಳುವುದು ಸರ್ಕಾರದ ಗುರಿಯಾಗಿದೆ. ಈ ನಿಟ್ಟಿನಲ್ಲಿ ಕಳೆದ ವರ್ಷ 100 ಶತಕೋಟಿ ಡಾಲರ್ ಬಂಡವಾಳ ಹೂಡಿಕೆ ಆಕರ್ಷಿಸಲಾಗಿದೆ ಎಂದು ಕೇಂದ್ರ ಹಡಗುಯಾನ  ಮತ್ತು ಬಂದರು ಖಾತೆ ಸಚಿವ ಸರ್ಬಾನಂದ ಸೋನೊವಾಲ್ ಹೇಳಿದ್ದಾರೆ.

Advertisement

ಚೆನ್ನೈನಲ್ಲಿ, ಸಾಗರ ವ್ಯಾಪಾರ ಸಮಾವೇಶ 2024ರಲ್ಲಿ ಅವರು, ವಿಕಸಿತ ಭಾರತ ಗುರಿ ತಲುಪುವ ಅಮೃತಕಾಲದಲ್ಲಿ ದೇಶದ ಸಾಗರ ವಲಯ ಕೈಗಾರಿಕೆ ಮಹತ್ವದ ಪಾತ್ರ ವಹಿಸಲಿದೆ ಎಂದರು.ಜಿ-20 ನಿರ್ಣಯದ ಅನುಸಾರ ಭಾರತ -ಮಧ್ಯಪ್ರಾಚ್ಯ-ಯುರೋಪ್ ಸಾಗರ ಕಾರಿಡಾರ್ ನಿರ್ಮಿಸಲು ಸರ್ಕಾರ ಬದ್ಧವಾಗಿದೆ. ಅತ್ಯಾಧುನಿಕ ಮೂಲಸೌಕರ್ಯದ ಮೂಲಕ ಭಾರತವನ್ನು ಸಾಗರ ವ್ಯಾಪಾರದ ಪ್ರಮುಖ ತಾಣವನ್ನಾಗಿಸುವ ನಿಟ್ಟಿನಲ್ಲಿ ಸಾಗರ ಮಾಲಾ, ಸಾಗರ ಸೇತು, ಸಾಗರ ಸಮೃದ್ಧಿ ಸೇರಿದಂತೆ ಹಲವು ಯೋಜನೆಗಳನ್ನು ಜಾರಿಗೊಳಿಸಲಾಗುತ್ತಿದೆ ಎಂದು ತಿಳಿಸಿದರು. ದೇಶದ 9 ಬಂದರುಗಳನ್ನು ಜಾಗತಿಕ ಶ್ರೇಣಿಗೆ ಅನುಸಾರವಾಗಿ  ಅಭಿವೃದ್ಧಿಪಡಿಸಲಾಗಿದ್ದು, ಹಡಗು ನಿರ್ಮಾಣ ಕೈಗಾರಿಕೆಯಲ್ಲಿ ಭಾರತ ಶೀಘ್ರವೇ ಅಗ್ರ 5 ರಾಷ್ಟ್ರಗಳ ಪಟ್ಟಿಯಲ್ಲಿ ಸೇರ್ಪಡೆಯಾಗುವ ವಿಶ್ವಾಸವಿದೆ. ಪರಿಸರಸ್ನೇಹಿ ಕ್ರಮದ ಅನುಸಾರ ದೇಶದ ಬಂದರುಗಳಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಗೊಳಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು. ದೇಶದ ಆರ್ಥಿಕತೆ ಬಲಪಡಿಸುವಲ್ಲಿ ಒಳನಾಡು ಜಲಮಾರ್ಗಗಳು ಮುಖ್ಯ ಪಾತ್ರ ವಹಿಸಲಿದ್ದು, ಇವುಗಳ ಅಭಿವೃದ್ಧಿಗೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮಂಗಳೂರು ಅಡಿಕೆ ಮಾರುಕಟ್ಟೆ ‘ಸೈಕಲಾಜಿಕಲ್ ಬಫರ್’ ಹಂತಕ್ಕೆ…!

ಮಂಗಳೂರಿನ ಅಡಿಕೆ ಮಾರುಕಟ್ಟೆಯು ಪ್ರಸ್ತುತ ಕೇವಲ ಬೆಲೆ ಏರಿಳಿತದ ಕೇಂದ್ರವಾಗಿ ಉಳಿದಿಲ್ಲ; ಬದಲಾಗಿ…

9 hours ago

ಗೇರು ಹಣ್ಣಿನಿಂದ ಆದಾಯಕ್ಕೆ ಹೊಸ ದಾರಿ | ಮಾ.11 ರಂದು ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಉದ್ಯಮ–ವಿಜ್ಞಾನಿಗಳ ಸಂವಾದ

ಪುತ್ತೂರಿನ ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಮಾರ್ಚ್‌ 11ರಂದು ಗೋಡಂಬಿ ಹಣ್ಣಿನ ಮೌಲ್ಯವರ್ಧನೆ ಕುರಿತು…

24 hours ago

ಪರರನ್ನು ಮೆಟ್ಟಿಲಾಗಿಸಿದ ಸಾಧನೆ ಶಾಶ್ವತವಲ್ಲ: ಆತ್ಮವಂಚನೆಯ ಅಂಧಕಾರದತ್ತ ಕರೆದೊಯ್ಯುವ ಮಾರ್ಗ

ಇತರರ ಪರಿಶ್ರಮವನ್ನು ಮೆಟ್ಟಿಲಾಗಿಸಿಕೊಂಡ ಸಾಧನೆ ತಾತ್ಕಾಲಿಕವಾಗಿದ್ದು, ನಿಜವಾದ ಯಶಸ್ಸು ಸ್ವಪರಿಶ್ರಮ, ಸತ್ಯ ಮತ್ತು…

1 day ago

ಹಿರಿಯರ ಪರಿಶ್ರಮದ ಫಲ ಮಕ್ಕಳಿಗೆ ಪರವಾನಗಿ ಆಗಬಾರದು

ಇತ್ತೀಚೆಗೆ (13.02.2026) ಬೆಂಗಳೂರಿನ ಆರು ಮಂದಿ ಎಳೆಯ ಗೆಳೆಯರು (ಎಲ್ಲರೂ 16 ರಿಂದ …

1 day ago

ವಿಕಸಿತ ಭಾರತಕ್ಕೆ ಕೃತಕ ಬುದ್ಧಿಮತ್ತೆ ಅಡಿಪಾಯ : ಉತ್ಪಾದಕತೆ ಹೆಚ್ಚಳಕ್ಕೆ AI ಸಹಕಾರಿ

ಕೃತಕ ಬುದ್ಧಿಮತ್ತೆ (AI) ವಿಕಸಿತ ಭಾರತದ ನಿರ್ಮಾಣಕ್ಕೆ ಅಡಿಪಾಯವಾಗಿದ್ದು, ಉತ್ಪಾದಕತೆ, ಸ್ಪರ್ಧಾತ್ಮಕತೆ ಹಾಗೂ…

1 day ago

ಸಫಾರಿ ಆರಂಭಿಸಲು ಮತ್ತೆ ಅನುಮತಿ | ಸಮಯ ಕಡಿತ, GPS-ಡ್ಯಾಶ್ ಕ್ಯಾಮ್ ಕಡ್ಡಾಯ – ಸಚಿವ ಈಶ್ವರ್ ಖಂಡ್ರೆ

ಬಂಡಿಪುರ ಮತ್ತು ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಸಫಾರಿಯನ್ನು ಮತ್ತೆ ಆರಂಭಿಸಲು ಅನುಮತಿ…

1 day ago