ಸಾಗರ ಆರ್ಥಿಕತೆ ವಲಯದಲ್ಲಿ ಹೆಚ್ಚಿನ ಉದ್ಯೋಗಸೃಷ್ಟಿ ಮತ್ತು ಸುಸ್ಥಿರತೆ ಕಾಯ್ದುಕೊಳ್ಳುವುದು ಸರ್ಕಾರದ ಗುರಿಯಾಗಿದೆ. ಈ ನಿಟ್ಟಿನಲ್ಲಿ ಕಳೆದ ವರ್ಷ 100 ಶತಕೋಟಿ ಡಾಲರ್ ಬಂಡವಾಳ ಹೂಡಿಕೆ ಆಕರ್ಷಿಸಲಾಗಿದೆ ಎಂದು ಕೇಂದ್ರ ಹಡಗುಯಾನ ಮತ್ತು ಬಂದರು ಖಾತೆ ಸಚಿವ ಸರ್ಬಾನಂದ ಸೋನೊವಾಲ್ ಹೇಳಿದ್ದಾರೆ.
ಚೆನ್ನೈನಲ್ಲಿ, ಸಾಗರ ವ್ಯಾಪಾರ ಸಮಾವೇಶ 2024ರಲ್ಲಿ ಅವರು, ವಿಕಸಿತ ಭಾರತ ಗುರಿ ತಲುಪುವ ಅಮೃತಕಾಲದಲ್ಲಿ ದೇಶದ ಸಾಗರ ವಲಯ ಕೈಗಾರಿಕೆ ಮಹತ್ವದ ಪಾತ್ರ ವಹಿಸಲಿದೆ ಎಂದರು.ಜಿ-20 ನಿರ್ಣಯದ ಅನುಸಾರ ಭಾರತ -ಮಧ್ಯಪ್ರಾಚ್ಯ-ಯುರೋಪ್ ಸಾಗರ ಕಾರಿಡಾರ್ ನಿರ್ಮಿಸಲು ಸರ್ಕಾರ ಬದ್ಧವಾಗಿದೆ. ಅತ್ಯಾಧುನಿಕ ಮೂಲಸೌಕರ್ಯದ ಮೂಲಕ ಭಾರತವನ್ನು ಸಾಗರ ವ್ಯಾಪಾರದ ಪ್ರಮುಖ ತಾಣವನ್ನಾಗಿಸುವ ನಿಟ್ಟಿನಲ್ಲಿ ಸಾಗರ ಮಾಲಾ, ಸಾಗರ ಸೇತು, ಸಾಗರ ಸಮೃದ್ಧಿ ಸೇರಿದಂತೆ ಹಲವು ಯೋಜನೆಗಳನ್ನು ಜಾರಿಗೊಳಿಸಲಾಗುತ್ತಿದೆ ಎಂದು ತಿಳಿಸಿದರು. ದೇಶದ 9 ಬಂದರುಗಳನ್ನು ಜಾಗತಿಕ ಶ್ರೇಣಿಗೆ ಅನುಸಾರವಾಗಿ ಅಭಿವೃದ್ಧಿಪಡಿಸಲಾಗಿದ್ದು, ಹಡಗು ನಿರ್ಮಾಣ ಕೈಗಾರಿಕೆಯಲ್ಲಿ ಭಾರತ ಶೀಘ್ರವೇ ಅಗ್ರ 5 ರಾಷ್ಟ್ರಗಳ ಪಟ್ಟಿಯಲ್ಲಿ ಸೇರ್ಪಡೆಯಾಗುವ ವಿಶ್ವಾಸವಿದೆ. ಪರಿಸರಸ್ನೇಹಿ ಕ್ರಮದ ಅನುಸಾರ ದೇಶದ ಬಂದರುಗಳಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಗೊಳಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು. ದೇಶದ ಆರ್ಥಿಕತೆ ಬಲಪಡಿಸುವಲ್ಲಿ ಒಳನಾಡು ಜಲಮಾರ್ಗಗಳು ಮುಖ್ಯ ಪಾತ್ರ ವಹಿಸಲಿದ್ದು, ಇವುಗಳ ಅಭಿವೃದ್ಧಿಗೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು.
ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…
ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…
2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…
ನಾಗಾಲ್ಯಾಂಡ್ನಲ್ಲಿ ರಬ್ಬರ್ ಕೃಷಿ ಸುಮಾರು 29,794 ಹೆಕ್ಟೇರ್ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್ನಲ್ಲಿ ಸೂಕ್ತ…
ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…
ಸೆ.8ರಿಂದ ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮತ್ತೆ ಮಳೆ ಚಟುವಟಿಕೆ ಹೆಚ್ಚಾಗುವ ಸಾಧ್ಯತೆಯಿದೆ.…